< صَمُوئِيلَ ٱلثَّانِي 19 >

فَأُخْبِرَ يُوآبُ: «هُوَذَا ٱلْمَلِكُ يَبْكِي وَيَنُوحُ عَلَى أَبْشَالُومَ». ١ 1
ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.
فَصَارَتِ ٱلْغَلَبَةُ فِي ذَلِكَ ٱلْيَوْمِ مَنَاحَةً عِنْدَ جَمِيعِ ٱلشَّعْبِ، لِأَنَّ ٱلشَّعْبَ سَمِعُوا فِي ذَلِكَ ٱلْيَوْمِ مَنْ يَقُولُ إِنَّ ٱلْمَلِكَ قَدْ تَأَسَّفَ عَلَى ٱبْنِهِ. ٢ 2
ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
وَتَسَلَّلَ ٱلشَّعْبُ فِي ذَلِكَ ٱلْيَوْمِ لِلدُّخُولِ إِلَى ٱلْمَدِينَةِ كَمَا يَتَسَلَّلُ ٱلْقَوْمُ ٱلْخَجِلُونَ عِنْدَمَا يَهْرُبُونَ فِي ٱلْقِتَالِ. ٣ 3
ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.
وَسَتَرَ ٱلْمَلِكُ وَجْهَهُ وَصَرَخَ ٱلْمَلكُ بِصَوْتٍ عَظِيمٍ: «يَا ٱبْنِي أَبْشَالُومُ، يَا أَبْشَالُومُ ٱبْنِي، يَا ٱبْنِي!». ٤ 4
ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
فَدَخَلَ يُوآبُ إِلَى ٱلْمَلِكِ إِلَى ٱلْبَيْتِ وَقَالَ: «قَدْ أَخْزَيْتَ ٱلْيَوْمَ وُجُوهَ جَمِيعِ عَبِيدِكَ، مُنْقِذِي نَفْسِكَ ٱلْيَوْمَ وَأَنْفُسِ بَنِيكَ وَبَنَاتِكَ وَأَنْفُسِ نِسَائِكَ وَأَنْفُسِ سَرَارِيِّكَ، ٥ 5
ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.
بِمَحَبَّتِكَ لِمُبْغِضِيكَ وَبُغْضِكَ لِمُحِبِّيكَ، لِأَنَّكَ أَظْهَرْتَ ٱلْيَوْمَ أَنَّهُ لَيْسَ لَكَ رُؤَسَاءُ وَلَا عَبِيدٌ، لِأَنِّي عَلِمْتُ ٱلْيَوْمَ أَنَّهُ لَوْ كَانَ أَبْشَالُومُ حَيًّا وَكُلُّنَا ٱلْيَوْمَ مَوْتَى، لَحَسُنَ حِينَئِذٍ ٱلْأَمْرُ فِي عَيْنَيْكَ. ٦ 6
ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.
فَٱلْآنَ قُمْ وَٱخْرُجْ وَطَيِّبْ قُلُوبَ عَبِيدِكَ، لِأَنِّي قَدْ أَقْسَمْتُ بِٱلرَّبِّ إِنَّهُ إِنْ لَمْ تَخْرُجْ لَا يَبِيتُ أَحَدٌ مَعَكَ هَذِهِ ٱللَّيْلَةَ، وَيَكُونُ ذَلِكَ أَشَرَّ عَلَيْكَ مِنْ كُلِّ شَرٍّ أَصَابَكَ مُنْذُ صِبَاكَ إِلَى ٱلْآنَ». ٧ 7
ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.
فَقَامَ ٱلْمَلِكُ وَجَلَسَ فِي ٱلْبَابِ. فَأَخْبَرُوا جَمِيعَ ٱلشَّعْبِ قَائِلِينَ: «هُوَذَا ٱلْمَلِكُ جَالِسٌ فِي ٱلْبَابِ». فَأَتَى جَمِيعُ ٱلشَّعْبِ أَمَامَ ٱلْمَلِكِ. وَأَمَّا إِسْرَائِيلُ فَهَرَبُوا كُلُّ وَاحِدٍ إِلَى خَيْمَتِهِ. ٨ 8
ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
وَكَانَ جَمِيعُ ٱلشَّعْبِ فِي خِصَامٍ فِي جَمِيعِ أَسْبَاطِ إِسْرَائِيلَ قَائِلِينَ: «إِنَّ ٱلْمَلِكَ قَدْ أَنْقَذَنَا مِنْ يَدِ أَعْدَائِنَا وَهُوَ نَجَّانَا مِنْ يَدِ ٱلْفِلِسْطِينِيِّينَ، وَٱلْآنَ قَدْ هَرَبَ مِنَ ٱلْأَرْضِ لِأَجْلِ أَبْشَالُومَ ٩ 9
ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
وَأَبْشَالُومُ ٱلَّذِي مَسَحْنَاهُ عَلَيْنَا قَدْ مَاتَ فِي ٱلْحَرْبِ. فَٱلْآنَ لِمَاذَا أَنْتُمْ سَاكِتُونَ عَنْ إِرْجَاعِ ٱلْمَلِكِ؟» ١٠ 10
೧೦ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.
وَأَرْسَلَ ٱلْمَلِكُ دَاوُدُ إِلَى صَادُوقَ وَأَبِيَاثَارَ ٱلْكَاهِنَيْنِ قَائِلًا: «كَلِّمَا شُيُوخَ يَهُوذَا قَائِلَيْنِ: لِمَاذَا تَكُونُونَ آخِرِينَ فِي إِرْجَاعِ ٱلْمَلِكِ إِلَى بَيْتِهِ، وَقَدْ أَتَى كَلَامُ جَمِيعِ إِسْرَائِيلَ إِلَى ٱلْمَلِكِ فِي بَيْتِهِ؟ ١١ 11
೧೧ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
أَنْتُمْ إِخْوَتِي. أَنْتُمْ عَظْمِي وَلَحْمِي. فَلِمَاذَا تَكُونُونَ آخِرِينَ فِي إِرْجَاعِ ٱلْمَلِكِ؟ ١٢ 12
೧೨ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.
وَتَقُولَانِ لِعَمَاسَا: أَمَا أَنْتَ عَظْمِي وَلَحْمِي؟ هَكَذَا يَفْعَلُ بِيَ ٱللهُ وَهَكَذَا يَزِيدُ، إِنْ كُنْتَ لَا تَصِيرُ رَئِيسَ جَيْشٍ عِنْدِي كُلَّ ٱلْأَيَّامِ بَدَلَ يُوآبَ». ١٣ 13
೧೩ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
فَٱسْتَمَالَ بِقُلُوبِ جَمِيعِ رِجَالِ يَهُوذَا كَرَجُلٍ وَاحِدٍ، فَأَرْسَلُوا إِلَى ٱلْمَلِكِ قَائِلِينَ: «ٱرْجِعْ أَنْتَ وَجَمِيعُ عَبِيدِكَ». ١٤ 14
೧೪ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
فَرَجَعَ ٱلْمَلِكُ وَأَتَى إِلَى ٱلْأُرْدُنِّ، وَأَتَى يَهُوذَا إِلَى ٱلْجِلْجَالِ سَائِرًا لِمُلَاقَاةِ ٱلْمَلِكِ لِيُعَبِّرَ ٱلْمَلِكَ ٱلْأُرْدُنَّ. ١٥ 15
೧೫ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
فَبَادَرَ شِمْعِي بْنُ جِيْرَا ٱلْبَنْيَامِينِيُّ ٱلَّذِي مِنْ بَحُورِيمَ وَنَزَلَ مَعَ رِجَالِ يَهُوذَا لِلِقَاءِ ٱلْمَلِكِ دَاوُدَ، ١٦ 16
೧೬ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
وَمَعَهُ أَلْفُ رَجُلٍ مِنْ بَنْيَامِينَ، وَصِيبَا غُلَامُ بَيْتِ شَاوُلَ وَبَنُوهُ ٱلْخَمْسَةَ عَشَرَ وَعَبِيدُهُ ٱلْعِشْرُونَ مَعَهُ، فَخَاضُوا ٱلْأُرْدُنَّ أَمَامَ ٱلْمَلِكِ. ١٧ 17
೧೭ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
وَعَبَرَ ٱلْقَارِبُ لِتَعْبِيرِ بَيْتِ ٱلْمَلِكِ وَلِعَمَلِ مَا يَحْسُنُ فِي عَيْنَيْهِ. وَسَقَطَ شِمْعِي بْنُ جِيْرَا أَمَامَ ٱلْمَلِكِ عِنْدَمَا عَبَرَ ٱلْأُرْدُنَّ، ١٨ 18
೧೮ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,
وَقَالَ لِلْمَلِكِ: «لَا يَحْسِبْ لِي سَيِّدِي إِثْمًا، وَلَا تَذْكُرْ مَا ٱفْتَرَى بِهِ عَبْدُكَ يَوْمَ خُرُوجِ سَيِّدِي ٱلْمَلِكِ مِنْ أُورُشَلِيمَ، حَتَّى يَضَعَ ٱلْمَلِكُ ذَلِكَ فِي قَلْبِهِ، ١٩ 19
೧೯“ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
لِأَنَّ عَبْدَكَ يَعْلَمُ أَنِّي قَدْ أَخْطَأْتُ، وَهَأَنَذَا قَدْ جِئْتُ ٱلْيَوْمَ أَوَّلَ كُلِّ بَيْتِ يُوسُفَ، وَنَزَلْتُ لِلِقَاءِ سَيِّدِي ٱلْمَلِكِ». ٢٠ 20
೨೦ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
فَأَجَابَ أَبِيشَايُ ٱبْنُ صَرُويَةَ وَقَالَ: «أَلَا يُقْتَلُ شِمْعِي لِأَجْلِ هَذَا، لِأَنَّهُ سَبَّ مَسِيحَ ٱلرَّبِّ؟» ٢١ 21
೨೧ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
فَقَالَ دَاوُدُ: «مَا لِي وَلَكُمْ يَا بَنِي صَرُويَةَ حَتَّى تَكُونُوا لِيَ ٱلْيَوْمَ مُقَاوِمِينَ؟ آلْيَوْمَ يُقْتَلُ أَحَدٌ فِي إِسْرَائِيلَ؟ أَفَمَا عَلِمْتُ أَنِّي ٱلْيَوْمَ مَلِكٌ عَلَى إِسْرَائِيلَ؟» ٢٢ 22
೨೨ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.
ثُمَّ قَالَ ٱلْمَلِكُ لِشِمْعِي: «لَا تَمُوتُ». وَحَلَفَ لَهُ ٱلْمَلِكُ. ٢٣ 23
೨೩ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
وَنَزَلَ مَفِيبُوشَثُ ٱبْنُ شَاوُلَ لِلِقَاءِ ٱلْمَلِكِ، وَلَمْ يَعْتَنِ بِرِجْلَيْهِ، وَلَا ٱعْتَنَى بِلِحْيَتِهِ، وَلَا غَسَلَ ثِيَابَهُ، مِنَ ٱلْيَوْمِ ٱلَّذِي ذَهَبَ فِيهِ ٱلْمَلِكُ إِلَى ٱلْيَوْمِ ٱلَّذِي أَتَى فِيهِ بِسَلَامٍ. ٢٤ 24
೨೪ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
فَلَمَّا جَاءَ إِلَى أُورُشَلِيمَ لِلِقَاءِ ٱلْمَلِكِ، قَالَ لَهُ ٱلْمَلِكُ: «لِمَاذَا لَمْ تَذْهَبْ مَعِي يَامَفِيبُوشَثُ؟» ٢٥ 25
೨೫ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
فَقَالَ: «يَا سَيِّدِي ٱلْمَلِكُ إِنَّ عَبْدِي قَدْ خَدَعَنِي، لِأَنَّ عَبْدَكَ قَالَ: أَشُدُّ لِنَفْسِيَ ٱلْحِمَارَ فَأَرْكَبُ عَلَيْهِ وَأَذْهَبُ مَعَ ٱلْمَلِكِ، لِأَنَّ عَبْدَكَ أَعْرَجُ. ٢٦ 26
೨೬ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.
وَوَشَى بِعَبْدِكَ إِلَى سَيِّدِي ٱلْمَلِكِ، وَسَيِّدِي ٱلْمَلِكُ كَمَلَاكِ ٱللهِ. فَٱفْعَلْ مَا يَحْسُنُ فِي عَيْنَيْكَ. ٢٧ 27
೨೭ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
لِأَنَّ كُلَّ بَيْتِ أَبِي لَمْ يَكُنْ إِلَا أُنَاسًا مَوْتَى لِسَيِّدِي ٱلْمَلِكِ، وَقَدْ جَعَلْتَ عَبْدَكَ بَيْنَ ٱلْآكِلِينَ عَلَى مَائِدَتِكَ. فَأَيُّ حَقٍّ لِي بَعْدُ حَتَّى أَصْرُخَ أَيْضًا إِلَى ٱلْمَلِكِ؟» ٢٨ 28
೨೮ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
فَقَالَ لَهُ ٱلْمَلِكُ: «لِمَاذَا تَتَكَلَّمُ بَعْدُ بِأُمُورِكَ؟ قَدْ قُلْتُ إِنَّكَ أَنْتَ وَصِيبَا تَقْسِمَانِ ٱلْحَقْلَ». ٢٩ 29
೨೯ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
فَقَالَ مَفِيبُوشَثُ لِلْمَلِكِ: «فَلْيَأْخُذِ ٱلْكُلَّ أَيْضًا بَعْدَ أَنْ جَاءَ سَيِّدِي ٱلْمَلِكُ بِسَلَامٍ إِلَى بَيْتِهِ». ٣٠ 30
೩೦ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.
وَنَزَلَ بَرْزِلَّايُ ٱلْجِلْعَادِيُّ مِنْ رُوجَلِيمَ وَعَبَرَ ٱلْأُرْدُنَّ مَعَ ٱلْمَلِكِ لِيُشَيِّعَهُ عِنْدَ ٱلْأُرْدُنِّ. ٣١ 31
೩೧ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
وَكَانَ بَرْزِلَّايُ قَدْ شَاخَ جِدًّا. كَانَ ٱبْنَ ثَمَانِينَ سَنَةً. وَهُوَ عَالَ ٱلْمَلِكَ عِنْدَ إِقَامَتِهِ فِي مَحَنَايِمَ لِأَنَّهُ كَانَ رَجُلًا عَظِيمًا جِدًّا. ٣٢ 32
೩೨ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
فَقَالَ ٱلْمَلِكُ لِبَرْزِلَّايَ: «ٱعْبُرْ أَنْتَ مَعِي وَأَنَا أَعُولُكَ مَعِي فِي أُورُشَلِيمَ». ٣٣ 33
೩೩ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು.
فَقَالَ بَرْزِلَّايُ لِلْمَلِكِ: «كَمْ أَيَّامُ سِنِي حَيَاتِي حَتَّى أَصْعَدَ مَعَ ٱلْمَلِكِ إِلَى أُورُشَلِيمَ؟ ٣٤ 34
೩೪ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
أَنَا ٱلْيَوْمَ ٱبْنُ ثَمَانِينَ سَنَةً. هَلْ أُمَيِّزُ بَيْنَ ٱلطَّيِّبِ وَٱلرَّدِيءِ؟ وَهَلْ يَسْتَطْعِمُ عَبْدُكَ بِمَا آكُلُ وَمَا أَشْرَبُ؟ وَهَلْ أَسْمَعُ أَيْضًا أَصْوَاتَ ٱلْمُغَنِّينَ وَٱلْمُغَنِّيَاتِ؟ فَلِمَاذَا يَكُونُ عَبْدُكَ أَيْضًا ثِقْلًا عَلَى سَيِّدِي ٱلْمَلِكِ؟ ٣٥ 35
೩೫ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?
يَعْبُرُ عَبْدُكَ قَلِيلًا ٱلْأُرْدُنَّ مَعَ ٱلْمَلِكِ. وَلِمَاذَا يُكَافِئُنِي ٱلْمَلِكُ بِهَذِهِ ٱلْمُكَافَأَةِ؟ ٣٦ 36
೩೬ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
دَعْ عَبْدَكَ يَرْجِعُ فَأَمُوتَ فِي مَدِينَتِي عِنْدَ قَبْرِ أَبِي وَأُمِّي. وَهُوَذَا عَبْدُكَ كِمْهَامُ يَعْبُرُ مَعَ سَيِّدِي ٱلْمَلِكِ، فَٱفْعَلْ لَهُ مَا يَحْسُنُ فِي عَيْنَيْكَ». ٣٧ 37
೩೭ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
فَأَجَابَ ٱلْمَلِكُ: «إِنَّ كِمْهَامَ يَعْبُرُ مَعِي فَأَفْعَلُ لَهُ مَا يَحْسُنُ فِي عَيْنَيْكَ، وَكُلُّ مَا تَتَمَنَّاهُ مِنِّي أَفْعَلُهُ لَكَ». ٣٨ 38
೩೮ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
فَعَبَرَ جَمِيعُ ٱلشَّعْبِ ٱلْأُرْدُنَّ، وَٱلْمَلِكُ عَبَرَ. وَقَبَّلَ ٱلْمَلِكُ بَرْزِلَّايَ وَبَارَكَهُ، فَرَجَعَ إِلَى مَكَانِهِ. ٣٩ 39
೩೯ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
وَعَبَرَ ٱلْمَلِكُ إِلَى ٱلْجِلْجَالِ، وَعَبَرَ كِمْهَامُ مَعَهُ، وَكُلُّ شَعْبِ يَهُوذَا عَبَّرُوا ٱلْمَلِكَ، وَكَذَلِكَ نِصْفُ شَعْبِ إِسْرَائِيلَ. ٤٠ 40
೪೦ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
وَإِذَا بِجَمِيعِ رِجَالِ إِسْرَائِيلَ جَاءُونَ إِلَى ٱلْمَلِكِ، وَقَالُوا لِلْمَلِكِ: «لِمَاذَا سَرِقَكَ إِخْوَتُنَا رِجَالُ يَهُوذَا وَعَبَرُوا ٱلْأُرْدُنَّ بِٱلْمَلِكِ وَبَيْتِهِ وَكُلِّ رِجَالِ دَاوُدَ مَعَهُ؟». ٤١ 41
೪೧ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
فَأَجَابَ كُلُّ رِجَالِ يَهُوذَا رِجَالَ إِسْرَائِيلَ: «لِأَنَّ ٱلْمَلِكَ قَرِيبٌ إِلَيَّ، وَلِمَاذَا تَغْتَاظُ مِنْ هَذَا ٱلْأَمْرِ؟ هَلْ أَكَلْنَا شَيْئًا مِنَ ٱلْمَلِكِ أَوْ وَهَبَنَا هِبَةً؟» ٤٢ 42
೪೨ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.
فَأَجَابَ رِجَالُ إِسْرَائِيلَ رِجَالَ يَهُوذَا وَقَالُوا: «لِي عَشْرَةُ أَسْهُمٍ فِي ٱلْمَلِكِ، وَأَنَا أَحَقُّ مِنْكَ بِدَاوُدَ، فَلِمَاذَا ٱسْتَخْفَفْتَ بِي وَلَمْ يَكُنْ كَلَامِي أَوَّلًا فِي إِرْجَاعِ مَلِكِي؟» وَكَانَ كَلَامُ رِجَالِ يَهُوذَا أَقْسَى مِنْ كَلَامِ رِجَالِ إِسْرَائِيلَ. ٤٣ 43
೪೩ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

< صَمُوئِيلَ ٱلثَّانِي 19 >