< صَمُوئِيلَ ٱلثَّانِي 19 >

فَأُخْبِرَ يُوآبُ: «هُوَذَا ٱلْمَلِكُ يَبْكِي وَيَنُوحُ عَلَى أَبْشَالُومَ». ١ 1
“ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.
فَصَارَتِ ٱلْغَلَبَةُ فِي ذَلِكَ ٱلْيَوْمِ مَنَاحَةً عِنْدَ جَمِيعِ ٱلشَّعْبِ، لِأَنَّ ٱلشَّعْبَ سَمِعُوا فِي ذَلِكَ ٱلْيَوْمِ مَنْ يَقُولُ إِنَّ ٱلْمَلِكَ قَدْ تَأَسَّفَ عَلَى ٱبْنِهِ. ٢ 2
“ಅರಸನು ತನ್ನ ಮಗನಿಗೋಸ್ಕರ ವ್ಯಥೆಪಡುತ್ತಿದ್ದಾನೆ,” ಎಂದು ಎಲ್ಲ ಜನರಿಗೂ ಗೊತ್ತಾಗಿದ್ದರಿಂದ ಆ ವಿಜಯದ ದಿನವು ಸಮಸ್ತ ಜನರಿಗೆ ಗೋಳಾಟವಾಗಿ ಮಾರ್ಪಟ್ಟಿತು.
وَتَسَلَّلَ ٱلشَّعْبُ فِي ذَلِكَ ٱلْيَوْمِ لِلدُّخُولِ إِلَى ٱلْمَدِينَةِ كَمَا يَتَسَلَّلُ ٱلْقَوْمُ ٱلْخَجِلُونَ عِنْدَمَا يَهْرُبُونَ فِي ٱلْقِتَالِ. ٣ 3
ಆದ್ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಬರುವ ಕಳ್ಳರ ಹಾಗೆ ಪಟ್ಟಣದೊಳಗೆ ಬಂದರು.
وَسَتَرَ ٱلْمَلِكُ وَجْهَهُ وَصَرَخَ ٱلْمَلكُ بِصَوْتٍ عَظِيمٍ: «يَا ٱبْنِي أَبْشَالُومُ، يَا أَبْشَالُومُ ٱبْنِي، يَا ٱبْنِي!». ٤ 4
ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು.
فَدَخَلَ يُوآبُ إِلَى ٱلْمَلِكِ إِلَى ٱلْبَيْتِ وَقَالَ: «قَدْ أَخْزَيْتَ ٱلْيَوْمَ وُجُوهَ جَمِيعِ عَبِيدِكَ، مُنْقِذِي نَفْسِكَ ٱلْيَوْمَ وَأَنْفُسِ بَنِيكَ وَبَنَاتِكَ وَأَنْفُسِ نِسَائِكَ وَأَنْفُسِ سَرَارِيِّكَ، ٥ 5
ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ.
بِمَحَبَّتِكَ لِمُبْغِضِيكَ وَبُغْضِكَ لِمُحِبِّيكَ، لِأَنَّكَ أَظْهَرْتَ ٱلْيَوْمَ أَنَّهُ لَيْسَ لَكَ رُؤَسَاءُ وَلَا عَبِيدٌ، لِأَنِّي عَلِمْتُ ٱلْيَوْمَ أَنَّهُ لَوْ كَانَ أَبْشَالُومُ حَيًّا وَكُلُّنَا ٱلْيَوْمَ مَوْتَى، لَحَسُنَ حِينَئِذٍ ٱلْأَمْرُ فِي عَيْنَيْكَ. ٦ 6
ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ.
فَٱلْآنَ قُمْ وَٱخْرُجْ وَطَيِّبْ قُلُوبَ عَبِيدِكَ، لِأَنِّي قَدْ أَقْسَمْتُ بِٱلرَّبِّ إِنَّهُ إِنْ لَمْ تَخْرُجْ لَا يَبِيتُ أَحَدٌ مَعَكَ هَذِهِ ٱللَّيْلَةَ، وَيَكُونُ ذَلِكَ أَشَرَّ عَلَيْكَ مِنْ كُلِّ شَرٍّ أَصَابَكَ مُنْذُ صِبَاكَ إِلَى ٱلْآنَ». ٧ 7
ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು.
فَقَامَ ٱلْمَلِكُ وَجَلَسَ فِي ٱلْبَابِ. فَأَخْبَرُوا جَمِيعَ ٱلشَّعْبِ قَائِلِينَ: «هُوَذَا ٱلْمَلِكُ جَالِسٌ فِي ٱلْبَابِ». فَأَتَى جَمِيعُ ٱلشَّعْبِ أَمَامَ ٱلْمَلِكِ. وَأَمَّا إِسْرَائِيلُ فَهَرَبُوا كُلُّ وَاحِدٍ إِلَى خَيْمَتِهِ. ٨ 8
ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು.
وَكَانَ جَمِيعُ ٱلشَّعْبِ فِي خِصَامٍ فِي جَمِيعِ أَسْبَاطِ إِسْرَائِيلَ قَائِلِينَ: «إِنَّ ٱلْمَلِكَ قَدْ أَنْقَذَنَا مِنْ يَدِ أَعْدَائِنَا وَهُوَ نَجَّانَا مِنْ يَدِ ٱلْفِلِسْطِينِيِّينَ، وَٱلْآنَ قَدْ هَرَبَ مِنَ ٱلْأَرْضِ لِأَجْلِ أَبْشَالُومَ ٩ 9
ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.
وَأَبْشَالُومُ ٱلَّذِي مَسَحْنَاهُ عَلَيْنَا قَدْ مَاتَ فِي ٱلْحَرْبِ. فَٱلْآنَ لِمَاذَا أَنْتُمْ سَاكِتُونَ عَنْ إِرْجَاعِ ٱلْمَلِكِ؟» ١٠ 10
ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.
وَأَرْسَلَ ٱلْمَلِكُ دَاوُدُ إِلَى صَادُوقَ وَأَبِيَاثَارَ ٱلْكَاهِنَيْنِ قَائِلًا: «كَلِّمَا شُيُوخَ يَهُوذَا قَائِلَيْنِ: لِمَاذَا تَكُونُونَ آخِرِينَ فِي إِرْجَاعِ ٱلْمَلِكِ إِلَى بَيْتِهِ، وَقَدْ أَتَى كَلَامُ جَمِيعِ إِسْرَائِيلَ إِلَى ٱلْمَلِكِ فِي بَيْتِهِ؟ ١١ 11
ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?
أَنْتُمْ إِخْوَتِي. أَنْتُمْ عَظْمِي وَلَحْمِي. فَلِمَاذَا تَكُونُونَ آخِرِينَ فِي إِرْجَاعِ ٱلْمَلِكِ؟ ١٢ 12
ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ.
وَتَقُولَانِ لِعَمَاسَا: أَمَا أَنْتَ عَظْمِي وَلَحْمِي؟ هَكَذَا يَفْعَلُ بِيَ ٱللهُ وَهَكَذَا يَزِيدُ، إِنْ كُنْتَ لَا تَصِيرُ رَئِيسَ جَيْشٍ عِنْدِي كُلَّ ٱلْأَيَّامِ بَدَلَ يُوآبَ». ١٣ 13
ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.
فَٱسْتَمَالَ بِقُلُوبِ جَمِيعِ رِجَالِ يَهُوذَا كَرَجُلٍ وَاحِدٍ، فَأَرْسَلُوا إِلَى ٱلْمَلِكِ قَائِلِينَ: «ٱرْجِعْ أَنْتَ وَجَمِيعُ عَبِيدِكَ». ١٤ 14
ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.
فَرَجَعَ ٱلْمَلِكُ وَأَتَى إِلَى ٱلْأُرْدُنِّ، وَأَتَى يَهُوذَا إِلَى ٱلْجِلْجَالِ سَائِرًا لِمُلَاقَاةِ ٱلْمَلِكِ لِيُعَبِّرَ ٱلْمَلِكَ ٱلْأُرْدُنَّ. ١٥ 15
ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು.
فَبَادَرَ شِمْعِي بْنُ جِيْرَا ٱلْبَنْيَامِينِيُّ ٱلَّذِي مِنْ بَحُورِيمَ وَنَزَلَ مَعَ رِجَالِ يَهُوذَا لِلِقَاءِ ٱلْمَلِكِ دَاوُدَ، ١٦ 16
ಬಹುರೀಮಿನವನೂ ಬೆನ್ಯಾಮೀನ್ಯನೂ ಗೇರನ ಮಗ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸ ದಾವೀದನನ್ನು ಎದುರುಗೊಳ್ಳುವುದಕ್ಕೆ ಬಂದನು.
وَمَعَهُ أَلْفُ رَجُلٍ مِنْ بَنْيَامِينَ، وَصِيبَا غُلَامُ بَيْتِ شَاوُلَ وَبَنُوهُ ٱلْخَمْسَةَ عَشَرَ وَعَبِيدُهُ ٱلْعِشْرُونَ مَعَهُ، فَخَاضُوا ٱلْأُرْدُنَّ أَمَامَ ٱلْمَلِكِ. ١٧ 17
ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು.
وَعَبَرَ ٱلْقَارِبُ لِتَعْبِيرِ بَيْتِ ٱلْمَلِكِ وَلِعَمَلِ مَا يَحْسُنُ فِي عَيْنَيْهِ. وَسَقَطَ شِمْعِي بْنُ جِيْرَا أَمَامَ ٱلْمَلِكِ عِنْدَمَا عَبَرَ ٱلْأُرْدُنَّ، ١٨ 18
ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,
وَقَالَ لِلْمَلِكِ: «لَا يَحْسِبْ لِي سَيِّدِي إِثْمًا، وَلَا تَذْكُرْ مَا ٱفْتَرَى بِهِ عَبْدُكَ يَوْمَ خُرُوجِ سَيِّدِي ٱلْمَلِكِ مِنْ أُورُشَلِيمَ، حَتَّى يَضَعَ ٱلْمَلِكُ ذَلِكَ فِي قَلْبِهِ، ١٩ 19
“ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
لِأَنَّ عَبْدَكَ يَعْلَمُ أَنِّي قَدْ أَخْطَأْتُ، وَهَأَنَذَا قَدْ جِئْتُ ٱلْيَوْمَ أَوَّلَ كُلِّ بَيْتِ يُوسُفَ، وَنَزَلْتُ لِلِقَاءِ سَيِّدِي ٱلْمَلِكِ». ٢٠ 20
ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.
فَأَجَابَ أَبِيشَايُ ٱبْنُ صَرُويَةَ وَقَالَ: «أَلَا يُقْتَلُ شِمْعِي لِأَجْلِ هَذَا، لِأَنَّهُ سَبَّ مَسِيحَ ٱلرَّبِّ؟» ٢١ 21
ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.
فَقَالَ دَاوُدُ: «مَا لِي وَلَكُمْ يَا بَنِي صَرُويَةَ حَتَّى تَكُونُوا لِيَ ٱلْيَوْمَ مُقَاوِمِينَ؟ آلْيَوْمَ يُقْتَلُ أَحَدٌ فِي إِسْرَائِيلَ؟ أَفَمَا عَلِمْتُ أَنِّي ٱلْيَوْمَ مَلِكٌ عَلَى إِسْرَائِيلَ؟» ٢٢ 22
ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.
ثُمَّ قَالَ ٱلْمَلِكُ لِشِمْعِي: «لَا تَمُوتُ». وَحَلَفَ لَهُ ٱلْمَلِكُ. ٢٣ 23
ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು.
وَنَزَلَ مَفِيبُوشَثُ ٱبْنُ شَاوُلَ لِلِقَاءِ ٱلْمَلِكِ، وَلَمْ يَعْتَنِ بِرِجْلَيْهِ، وَلَا ٱعْتَنَى بِلِحْيَتِهِ، وَلَا غَسَلَ ثِيَابَهُ، مِنَ ٱلْيَوْمِ ٱلَّذِي ذَهَبَ فِيهِ ٱلْمَلِكُ إِلَى ٱلْيَوْمِ ٱلَّذِي أَتَى فِيهِ بِسَلَامٍ. ٢٤ 24
ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
فَلَمَّا جَاءَ إِلَى أُورُشَلِيمَ لِلِقَاءِ ٱلْمَلِكِ، قَالَ لَهُ ٱلْمَلِكُ: «لِمَاذَا لَمْ تَذْهَبْ مَعِي يَامَفِيبُوشَثُ؟» ٢٥ 25
ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು.
فَقَالَ: «يَا سَيِّدِي ٱلْمَلِكُ إِنَّ عَبْدِي قَدْ خَدَعَنِي، لِأَنَّ عَبْدَكَ قَالَ: أَشُدُّ لِنَفْسِيَ ٱلْحِمَارَ فَأَرْكَبُ عَلَيْهِ وَأَذْهَبُ مَعَ ٱلْمَلِكِ، لِأَنَّ عَبْدَكَ أَعْرَجُ. ٢٦ 26
ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
وَوَشَى بِعَبْدِكَ إِلَى سَيِّدِي ٱلْمَلِكِ، وَسَيِّدِي ٱلْمَلِكُ كَمَلَاكِ ٱللهِ. فَٱفْعَلْ مَا يَحْسُنُ فِي عَيْنَيْكَ. ٢٧ 27
ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.
لِأَنَّ كُلَّ بَيْتِ أَبِي لَمْ يَكُنْ إِلَا أُنَاسًا مَوْتَى لِسَيِّدِي ٱلْمَلِكِ، وَقَدْ جَعَلْتَ عَبْدَكَ بَيْنَ ٱلْآكِلِينَ عَلَى مَائِدَتِكَ. فَأَيُّ حَقٍّ لِي بَعْدُ حَتَّى أَصْرُخَ أَيْضًا إِلَى ٱلْمَلِكِ؟» ٢٨ 28
ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.
فَقَالَ لَهُ ٱلْمَلِكُ: «لِمَاذَا تَتَكَلَّمُ بَعْدُ بِأُمُورِكَ؟ قَدْ قُلْتُ إِنَّكَ أَنْتَ وَصِيبَا تَقْسِمَانِ ٱلْحَقْلَ». ٢٩ 29
ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.
فَقَالَ مَفِيبُوشَثُ لِلْمَلِكِ: «فَلْيَأْخُذِ ٱلْكُلَّ أَيْضًا بَعْدَ أَنْ جَاءَ سَيِّدِي ٱلْمَلِكُ بِسَلَامٍ إِلَى بَيْتِهِ». ٣٠ 30
ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು.
وَنَزَلَ بَرْزِلَّايُ ٱلْجِلْعَادِيُّ مِنْ رُوجَلِيمَ وَعَبَرَ ٱلْأُرْدُنَّ مَعَ ٱلْمَلِكِ لِيُشَيِّعَهُ عِنْدَ ٱلْأُرْدُنِّ. ٣١ 31
ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು.
وَكَانَ بَرْزِلَّايُ قَدْ شَاخَ جِدًّا. كَانَ ٱبْنَ ثَمَانِينَ سَنَةً. وَهُوَ عَالَ ٱلْمَلِكَ عِنْدَ إِقَامَتِهِ فِي مَحَنَايِمَ لِأَنَّهُ كَانَ رَجُلًا عَظِيمًا جِدًّا. ٣٢ 32
ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.
فَقَالَ ٱلْمَلِكُ لِبَرْزِلَّايَ: «ٱعْبُرْ أَنْتَ مَعِي وَأَنَا أَعُولُكَ مَعِي فِي أُورُشَلِيمَ». ٣٣ 33
ಆದ್ದರಿಂದ ಅರಸನು ಬರ್ಜಿಲ್ಲೈಗೆ, “ನೀನು ನನ್ನ ಸಂಗಡ ಬಾ, ಯೆರೂಸಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು,” ಎಂದನು.
فَقَالَ بَرْزِلَّايُ لِلْمَلِكِ: «كَمْ أَيَّامُ سِنِي حَيَاتِي حَتَّى أَصْعَدَ مَعَ ٱلْمَلِكِ إِلَى أُورُشَلِيمَ؟ ٣٤ 34
ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
أَنَا ٱلْيَوْمَ ٱبْنُ ثَمَانِينَ سَنَةً. هَلْ أُمَيِّزُ بَيْنَ ٱلطَّيِّبِ وَٱلرَّدِيءِ؟ وَهَلْ يَسْتَطْعِمُ عَبْدُكَ بِمَا آكُلُ وَمَا أَشْرَبُ؟ وَهَلْ أَسْمَعُ أَيْضًا أَصْوَاتَ ٱلْمُغَنِّينَ وَٱلْمُغَنِّيَاتِ؟ فَلِمَاذَا يَكُونُ عَبْدُكَ أَيْضًا ثِقْلًا عَلَى سَيِّدِي ٱلْمَلِكِ؟ ٣٥ 35
ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು?
يَعْبُرُ عَبْدُكَ قَلِيلًا ٱلْأُرْدُنَّ مَعَ ٱلْمَلِكِ. وَلِمَاذَا يُكَافِئُنِي ٱلْمَلِكُ بِهَذِهِ ٱلْمُكَافَأَةِ؟ ٣٦ 36
ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು?
دَعْ عَبْدَكَ يَرْجِعُ فَأَمُوتَ فِي مَدِينَتِي عِنْدَ قَبْرِ أَبِي وَأُمِّي. وَهُوَذَا عَبْدُكَ كِمْهَامُ يَعْبُرُ مَعَ سَيِّدِي ٱلْمَلِكِ، فَٱفْعَلْ لَهُ مَا يَحْسُنُ فِي عَيْنَيْكَ». ٣٧ 37
ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು.
فَأَجَابَ ٱلْمَلِكُ: «إِنَّ كِمْهَامَ يَعْبُرُ مَعِي فَأَفْعَلُ لَهُ مَا يَحْسُنُ فِي عَيْنَيْكَ، وَكُلُّ مَا تَتَمَنَّاهُ مِنِّي أَفْعَلُهُ لَكَ». ٣٨ 38
ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು.
فَعَبَرَ جَمِيعُ ٱلشَّعْبِ ٱلْأُرْدُنَّ، وَٱلْمَلِكُ عَبَرَ. وَقَبَّلَ ٱلْمَلِكُ بَرْزِلَّايَ وَبَارَكَهُ، فَرَجَعَ إِلَى مَكَانِهِ. ٣٩ 39
ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.
وَعَبَرَ ٱلْمَلِكُ إِلَى ٱلْجِلْجَالِ، وَعَبَرَ كِمْهَامُ مَعَهُ، وَكُلُّ شَعْبِ يَهُوذَا عَبَّرُوا ٱلْمَلِكَ، وَكَذَلِكَ نِصْفُ شَعْبِ إِسْرَائِيلَ. ٤٠ 40
ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು.
وَإِذَا بِجَمِيعِ رِجَالِ إِسْرَائِيلَ جَاءُونَ إِلَى ٱلْمَلِكِ، وَقَالُوا لِلْمَلِكِ: «لِمَاذَا سَرِقَكَ إِخْوَتُنَا رِجَالُ يَهُوذَا وَعَبَرُوا ٱلْأُرْدُنَّ بِٱلْمَلِكِ وَبَيْتِهِ وَكُلِّ رِجَالِ دَاوُدَ مَعَهُ؟». ٤١ 41
ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.
فَأَجَابَ كُلُّ رِجَالِ يَهُوذَا رِجَالَ إِسْرَائِيلَ: «لِأَنَّ ٱلْمَلِكَ قَرِيبٌ إِلَيَّ، وَلِمَاذَا تَغْتَاظُ مِنْ هَذَا ٱلْأَمْرِ؟ هَلْ أَكَلْنَا شَيْئًا مِنَ ٱلْمَلِكِ أَوْ وَهَبَنَا هِبَةً؟» ٤٢ 42
ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು.
فَأَجَابَ رِجَالُ إِسْرَائِيلَ رِجَالَ يَهُوذَا وَقَالُوا: «لِي عَشْرَةُ أَسْهُمٍ فِي ٱلْمَلِكِ، وَأَنَا أَحَقُّ مِنْكَ بِدَاوُدَ، فَلِمَاذَا ٱسْتَخْفَفْتَ بِي وَلَمْ يَكُنْ كَلَامِي أَوَّلًا فِي إِرْجَاعِ مَلِكِي؟» وَكَانَ كَلَامُ رِجَالِ يَهُوذَا أَقْسَى مِنْ كَلَامِ رِجَالِ إِسْرَائِيلَ. ٤٣ 43
ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

< صَمُوئِيلَ ٱلثَّانِي 19 >