< صَمُوئِيلَ ٱلثَّانِي 24 >

وَعَادَ فَحَمِيَ غَضَبُ ٱلرَّبِّ عَلَى إِسْرَائِيلَ، فَأَهَاجَ عَلَيْهِمْ دَاوُدَ قَائِلًا: «ٱمْضِ وَأَحْصِ إِسْرَائِيلَ وَيَهُوذَا». ١ 1
ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
فَقَالَ ٱلْمَلِكُ لِيُوآبَ رَئِيسِ ٱلْجَيْشِ ٱلَّذِي عِنْدَهُ: «طُفْ فِي جَمِيعِ أَسْبَاطِ إِسْرَائِيلَ مِنْ دَانَ إِلَى بِئْرِ سَبْعٍ وَعُدُّوا ٱلشَّعْبَ، فَأَعْلَمَ عَدَدَ ٱلشَّعْبِ». ٢ 2
ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.
فَقَالَ يُوآبُ لِلْمَلِكِ: «لِيَزِدِ ٱلرَّبُّ إِلَهُكَ ٱلشَّعْبَ أَمْثَالَهُمْ مِئَةَ ضِعْفٍ، وَعَيْنَا سَيِّدِي ٱلْمَلِكِ نَاظِرَتَانِ. وَلَكِنْ لِمَاذَا يُسَرُّ سَيِّدِي ٱلْمَلِكُ بِهَذَا ٱلْأَمْرِ؟» ٣ 3
ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.
فَٱشْتَدَّ كَلَامُ ٱلْمَلِكِ عَلَى يُوآبَ وَعَلَى رُؤَسَاءِ ٱلْجَيْشِ، فَخَرَجَ يُوآبُ وَرُؤَسَاءُ ٱلْجَيْشِ مِنْ عِنْدِ ٱلْمَلِكِ لِيَعُدُّوا ٱلْشَّعْبَ،أَيْ إِسْرَائِيلَ. ٤ 4
ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
فَعَبَرُوا ٱلْأُرْدُنَّ وَنَزَلُوا فِي عَرُوعِيرَ عَنْ يَمِينِ ٱلْمَدِينَةِ ٱلَّتِي فِي وَسَطِ وَادِي جَادَ وَتُجَاهَ يَعْزِيرَ. ٥ 5
ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,
وَأَتَوْا إِلَى جِلْعَادَ وَإِلَى أَرْضِ تَحْتِيمَ إِلَى حُدْشِي، ثُمَّ أَتَوْا إِلَى دَانِ يَعَنَ، وَٱسْتَدَارُوا إِلَى صِيْدُونَ. ٦ 6
ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.
ثُمَّ أَتَوْا إِلَى حِصْنِ صُورٍ وَجَمِيعِ مُدُنِ ٱلْحِوِّيِّينَ وَٱلْكَنْعَانِيِّينَ، ثُمَّ خَرَجُوا إِلَى جَنُوبِيِّ يَهُوذَا، إِلَى بِئْرِ سَبْعٍ. ٧ 7
ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.
وَطَافُوا كُلَّ ٱلْأَرْضِ، وَجَاءُوا فِي نِهَايَةِ تِسْعَةِ أَشْهُرٍ وَعِشْرِينَ يَوْمًا إِلَى أُورُشَلِيمَ. ٨ 8
ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.
فَدَفَعَ يُوآبُ جُمْلَةَ عَدَدِ ٱلشَّعْبِ إِلَى ٱلْمَلِكِ، فَكَانَ إِسْرَائِيلُ ثَمَانَ مِئَةِ أَلْفِ رَجُلٍ ذِي بَأْسٍ مُسْتَلِّ ٱلسَّيْفِ، وَرِجَالُ يَهُوذَا خَمْسَ مِئَةِ أَلْفِ رَجُلٍ. ٩ 9
ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
وَضَرَبَ دَاوُدَ قَلْبُهُ بَعْدَمَا عَدَّ ٱلشَّعْبَ. فَقَالَ دَاوُدُ لِلرَّبِّ: «لَقَدْ أَخْطَأْتُ جِدًّا فِي مَا فَعَلْتُ، وَٱلْآنَ يَارَبُّ أَزِلْ إِثْمَ عَبْدِكَ لِأَنِّي ٱنْحَمَقْتُ جِدًّا». ١٠ 10
೧೦ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
وَلَمَّا قَامَ دَاوُدُ صَبَاحًا، كَانَ كَلَامُ ٱلرَّبِّ إِلَى جَادٍ ٱلنَّبِيِّ رَائِي دَاوُدَ قَائِلًا: ١١ 11
೧೧ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,
«اِذْهَبْ وَقُلْ لِدَاوُدَ: هَكَذَا قَالَ ٱلرَّبُّ: ثَلَاثَةً أَنَا عَارِضٌ عَلَيْكَ، فَٱخْتَرْ لِنَفْسِكَ وَاحِدًا مِنْهَا فَأَفْعَلَهُ بِكَ». ١٢ 12
೧೨“ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು.
فَأَتَى جَادُ إِلَى دَاوُدَ وَأَخبَرهُ وَقَالَ لَهُ: «أَتَأْتِي عَلَيْكَ سَبْعُ سِنِي جُوعٍ فِي أَرْضِكَ، أَمْ تَهْرُبُ ثَلَاثَةَ أَشْهُرٍ أَمَامَ أَعْدَائِكَ وَهُمْ يَتْبَعُونَكَ، أَمْ يَكُونُ ثَلَاثَةَ أَيَّامٍ وَبَأٌ فِي أَرْضِكَ؟ فَٱلْآنَ ٱعْرِفْ وَٱنْظُرْ مَاذَا أَرُدُّ جَوَابًا عَلَى مُرْسِلِي». ١٣ 13
೧೩ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.
فَقَالَ دَاوُدُ لِجَادٍ: «قَدْ ضَاقَ بِيَ ٱلْأَمْرُ جِدًّا. فَلْنَسْقُطْ فِي يَدِ ٱلرَّبِّ، لِأَنَّ مَرَاحِمَهُ كَثِيرَةٌ وَلَا أَسْقُطْ فِي يَدِ إِنْسَانٍ». ١٤ 14
೧೪ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.
فَجَعَلَ ٱلرَّبُّ وَبَأً فِي إِسْرَائِيلَ مِنَ ٱلصَّبَاحِ إِلَى ٱلْمِيعَادِ، فَمَاتَ مِنَ ٱلشَّعْبِ مِنْ دَانٍ إِلَى بِئْرِ سَبْعٍ سَبْعُونَ أَلْفَ رَجُلٍ. ١٥ 15
೧೫ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
وَبَسَطَ ٱلْمَلَاكُ يَدَهُ عَلَى أُورُشَلِيمَ لِيُهْلِكَهَا، فَنَدِمَ ٱلرَّبُّ عَنِ ٱلشَّرِّ، وَقَالَ لِلْمَلَاكِ ٱلْمُهْلِكِ ٱلشَّعْبَ: «كَفَى! ٱلْآنَ رُدَّ يَدَكَ». وَكَانَ مَلَاكُ ٱلرَّبِّ عِنْدَ بَيْدَرِ أَرُونَةَ ٱلْيَبُوسِيِّ. ١٦ 16
೧೬ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
فَكَلَّمَ دَاوُدُ ٱلرَّبَّ عِنْدَمَا رَأَى ٱلْمَلَاكَ ٱلضَّارِبَ ٱلشَّعْبَ وَقَالَ: «هَا أَنَا أَخْطَأْتُ، وَأَنَا أَذْنَبْتُ، وَأَمَّا هَؤُلَاءِ ٱلْخِرَافُ فَمَاذَا فَعَلُوا؟ فَلْتَكُنْ يَدُكَ عَلَيَّ وَعَلَى بَيْتِ أَبِي». ١٧ 17
೧೭ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.
فَجَاءَ جَادُ فِي ذَلِكَ ٱلْيَوْمِ إِلَى دَاوُدَ وَقَالَ لَهُ: «ٱصْعَدْ وَأَقِمْ لِلرَّبِّ مَذْبَحًا فِي بَيْدَرِ أَرُونَةَ ٱلْيَبُوسِيِّ». ١٨ 18
೧೮ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
فَصَعِدَ دَاوُدُ حَسَبَ كَلَامِ جَادَ كَمَا أَمَرَ ٱلرَّبُّ. ١٩ 19
೧೯ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
فَتَطَلَّعَ أَرُونَةُ وَرَأَى ٱلْمَلِكَ وَعَبِيدَهُ يُقْبِلُونَ إِلَيْهِ، فَخَرَجَ أَرُونَةُ وَسَجَدَ لِلْمَلِكِ عَلَى وَجْهِهِ إِلَى ٱلْأَرْضِ. ٢٠ 20
೨೦ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.
وَقَالَ أَرُونَةُ: «لِمَاذَا جَاءَ سَيِّدِي ٱلْمَلِكُ إِلَى عَبْدِهِ؟» فَقَالَ دَاوُدُ: «لِأَشْتَرِيَ مِنْكَ ٱلْبَيْدَرَ لِكَيْ أَبْنِيَ مَذْبَحًا لِلرَّبِّ فَتَكُفَّ ٱلضَّرْبَةُ عَنِ ٱلشَّعْبِ». ٢١ 21
೨೧ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.
فَقَالَ أَرُونَةُ لِدَاوُدَ: «فَلْيَأْخُذْهُ سَيِّدِي ٱلْمَلِكُ وَيُصْعِدْ مَا يَحْسُنُ فِي عَيْنَيْهِ. اُنْظُرْ. اَلْبَقَرُ لِلْمُحْرَقَةِ، وَٱلنَّوَارِجُ وَأَدَوَاتُ ٱلْبَقَرِ حَطَبًا». ٢٢ 22
೨೨ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
اَلْكُلُّ دَفَعَهُ أَرُونَةُ ٱلْمَالِكُ إِلَى ٱلْمَلِكِ. وَقَالَ أَرُونَةُ لِلْمَلِكِ: «ٱلرَّبُّ إِلَهُكَ يَرْضَى عَنْكَ». ٢٣ 23
೨೩ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.
فَقَالَ ٱلْمَلِكُ لِأَرُونَةَ: «لَا، بَلْ أَشْتَرِي مِنْكَ بِثَمَنٍ، وَلَا أُصْعِدُ لِلرَّبِّ إِلَهِي مُحْرَقَاتٍ مَجَّانِيَّةً». فَٱشْتَرَى دَاوُدُ ٱلْبَيْدَرَ وَٱلْبَقَرَ بِخَمْسِينَ شَاقِلًا مِنَ ٱلْفِضَّةِ. ٢٤ 24
೨೪ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
وَبَنَى دَاوُدُ هُنَاكَ مَذْبَحًا لِلرَّبِّ وَأَصْعَدَ مُحْرَقَاتٍ وَذَبَائِحَ سَلَامَةٍ، وَٱسْتَجَابَ ٱلرَّبُّ مِنْ أَجْلِ ٱلْأَرْضِ، فَكَفَّتِ ٱلضَّرْبَةُ عَنْ إِسْرَائِيلَ. ٢٥ 25
೨೫ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.

< صَمُوئِيلَ ٱلثَّانِي 24 >