< صَمُوئِيلَ ٱلثَّانِي 24 >

وَعَادَ فَحَمِيَ غَضَبُ ٱلرَّبِّ عَلَى إِسْرَائِيلَ، فَأَهَاجَ عَلَيْهِمْ دَاوُدَ قَائِلًا: «ٱمْضِ وَأَحْصِ إِسْرَائِيلَ وَيَهُوذَا». ١ 1
ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.
فَقَالَ ٱلْمَلِكُ لِيُوآبَ رَئِيسِ ٱلْجَيْشِ ٱلَّذِي عِنْدَهُ: «طُفْ فِي جَمِيعِ أَسْبَاطِ إِسْرَائِيلَ مِنْ دَانَ إِلَى بِئْرِ سَبْعٍ وَعُدُّوا ٱلشَّعْبَ، فَأَعْلَمَ عَدَدَ ٱلشَّعْبِ». ٢ 2
ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.
فَقَالَ يُوآبُ لِلْمَلِكِ: «لِيَزِدِ ٱلرَّبُّ إِلَهُكَ ٱلشَّعْبَ أَمْثَالَهُمْ مِئَةَ ضِعْفٍ، وَعَيْنَا سَيِّدِي ٱلْمَلِكِ نَاظِرَتَانِ. وَلَكِنْ لِمَاذَا يُسَرُّ سَيِّدِي ٱلْمَلِكُ بِهَذَا ٱلْأَمْرِ؟» ٣ 3
ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.
فَٱشْتَدَّ كَلَامُ ٱلْمَلِكِ عَلَى يُوآبَ وَعَلَى رُؤَسَاءِ ٱلْجَيْشِ، فَخَرَجَ يُوآبُ وَرُؤَسَاءُ ٱلْجَيْشِ مِنْ عِنْدِ ٱلْمَلِكِ لِيَعُدُّوا ٱلْشَّعْبَ،أَيْ إِسْرَائِيلَ. ٤ 4
ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
فَعَبَرُوا ٱلْأُرْدُنَّ وَنَزَلُوا فِي عَرُوعِيرَ عَنْ يَمِينِ ٱلْمَدِينَةِ ٱلَّتِي فِي وَسَطِ وَادِي جَادَ وَتُجَاهَ يَعْزِيرَ. ٥ 5
ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.
وَأَتَوْا إِلَى جِلْعَادَ وَإِلَى أَرْضِ تَحْتِيمَ إِلَى حُدْشِي، ثُمَّ أَتَوْا إِلَى دَانِ يَعَنَ، وَٱسْتَدَارُوا إِلَى صِيْدُونَ. ٦ 6
ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.
ثُمَّ أَتَوْا إِلَى حِصْنِ صُورٍ وَجَمِيعِ مُدُنِ ٱلْحِوِّيِّينَ وَٱلْكَنْعَانِيِّينَ، ثُمَّ خَرَجُوا إِلَى جَنُوبِيِّ يَهُوذَا، إِلَى بِئْرِ سَبْعٍ. ٧ 7
ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.
وَطَافُوا كُلَّ ٱلْأَرْضِ، وَجَاءُوا فِي نِهَايَةِ تِسْعَةِ أَشْهُرٍ وَعِشْرِينَ يَوْمًا إِلَى أُورُشَلِيمَ. ٨ 8
ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
فَدَفَعَ يُوآبُ جُمْلَةَ عَدَدِ ٱلشَّعْبِ إِلَى ٱلْمَلِكِ، فَكَانَ إِسْرَائِيلُ ثَمَانَ مِئَةِ أَلْفِ رَجُلٍ ذِي بَأْسٍ مُسْتَلِّ ٱلسَّيْفِ، وَرِجَالُ يَهُوذَا خَمْسَ مِئَةِ أَلْفِ رَجُلٍ. ٩ 9
ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.
وَضَرَبَ دَاوُدَ قَلْبُهُ بَعْدَمَا عَدَّ ٱلشَّعْبَ. فَقَالَ دَاوُدُ لِلرَّبِّ: «لَقَدْ أَخْطَأْتُ جِدًّا فِي مَا فَعَلْتُ، وَٱلْآنَ يَارَبُّ أَزِلْ إِثْمَ عَبْدِكَ لِأَنِّي ٱنْحَمَقْتُ جِدًّا». ١٠ 10
ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.
وَلَمَّا قَامَ دَاوُدُ صَبَاحًا، كَانَ كَلَامُ ٱلرَّبِّ إِلَى جَادٍ ٱلنَّبِيِّ رَائِي دَاوُدَ قَائِلًا: ١١ 11
ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,
«اِذْهَبْ وَقُلْ لِدَاوُدَ: هَكَذَا قَالَ ٱلرَّبُّ: ثَلَاثَةً أَنَا عَارِضٌ عَلَيْكَ، فَٱخْتَرْ لِنَفْسِكَ وَاحِدًا مِنْهَا فَأَفْعَلَهُ بِكَ». ١٢ 12
“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.
فَأَتَى جَادُ إِلَى دَاوُدَ وَأَخبَرهُ وَقَالَ لَهُ: «أَتَأْتِي عَلَيْكَ سَبْعُ سِنِي جُوعٍ فِي أَرْضِكَ، أَمْ تَهْرُبُ ثَلَاثَةَ أَشْهُرٍ أَمَامَ أَعْدَائِكَ وَهُمْ يَتْبَعُونَكَ، أَمْ يَكُونُ ثَلَاثَةَ أَيَّامٍ وَبَأٌ فِي أَرْضِكَ؟ فَٱلْآنَ ٱعْرِفْ وَٱنْظُرْ مَاذَا أَرُدُّ جَوَابًا عَلَى مُرْسِلِي». ١٣ 13
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
فَقَالَ دَاوُدُ لِجَادٍ: «قَدْ ضَاقَ بِيَ ٱلْأَمْرُ جِدًّا. فَلْنَسْقُطْ فِي يَدِ ٱلرَّبِّ، لِأَنَّ مَرَاحِمَهُ كَثِيرَةٌ وَلَا أَسْقُطْ فِي يَدِ إِنْسَانٍ». ١٤ 14
ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.
فَجَعَلَ ٱلرَّبُّ وَبَأً فِي إِسْرَائِيلَ مِنَ ٱلصَّبَاحِ إِلَى ٱلْمِيعَادِ، فَمَاتَ مِنَ ٱلشَّعْبِ مِنْ دَانٍ إِلَى بِئْرِ سَبْعٍ سَبْعُونَ أَلْفَ رَجُلٍ. ١٥ 15
ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
وَبَسَطَ ٱلْمَلَاكُ يَدَهُ عَلَى أُورُشَلِيمَ لِيُهْلِكَهَا، فَنَدِمَ ٱلرَّبُّ عَنِ ٱلشَّرِّ، وَقَالَ لِلْمَلَاكِ ٱلْمُهْلِكِ ٱلشَّعْبَ: «كَفَى! ٱلْآنَ رُدَّ يَدَكَ». وَكَانَ مَلَاكُ ٱلرَّبِّ عِنْدَ بَيْدَرِ أَرُونَةَ ٱلْيَبُوسِيِّ. ١٦ 16
ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.
فَكَلَّمَ دَاوُدُ ٱلرَّبَّ عِنْدَمَا رَأَى ٱلْمَلَاكَ ٱلضَّارِبَ ٱلشَّعْبَ وَقَالَ: «هَا أَنَا أَخْطَأْتُ، وَأَنَا أَذْنَبْتُ، وَأَمَّا هَؤُلَاءِ ٱلْخِرَافُ فَمَاذَا فَعَلُوا؟ فَلْتَكُنْ يَدُكَ عَلَيَّ وَعَلَى بَيْتِ أَبِي». ١٧ 17
ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
فَجَاءَ جَادُ فِي ذَلِكَ ٱلْيَوْمِ إِلَى دَاوُدَ وَقَالَ لَهُ: «ٱصْعَدْ وَأَقِمْ لِلرَّبِّ مَذْبَحًا فِي بَيْدَرِ أَرُونَةَ ٱلْيَبُوسِيِّ». ١٨ 18
ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.
فَصَعِدَ دَاوُدُ حَسَبَ كَلَامِ جَادَ كَمَا أَمَرَ ٱلرَّبُّ. ١٩ 19
ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು.
فَتَطَلَّعَ أَرُونَةُ وَرَأَى ٱلْمَلِكَ وَعَبِيدَهُ يُقْبِلُونَ إِلَيْهِ، فَخَرَجَ أَرُونَةُ وَسَجَدَ لِلْمَلِكِ عَلَى وَجْهِهِ إِلَى ٱلْأَرْضِ. ٢٠ 20
ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.
وَقَالَ أَرُونَةُ: «لِمَاذَا جَاءَ سَيِّدِي ٱلْمَلِكُ إِلَى عَبْدِهِ؟» فَقَالَ دَاوُدُ: «لِأَشْتَرِيَ مِنْكَ ٱلْبَيْدَرَ لِكَيْ أَبْنِيَ مَذْبَحًا لِلرَّبِّ فَتَكُفَّ ٱلضَّرْبَةُ عَنِ ٱلشَّعْبِ». ٢١ 21
ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.
فَقَالَ أَرُونَةُ لِدَاوُدَ: «فَلْيَأْخُذْهُ سَيِّدِي ٱلْمَلِكُ وَيُصْعِدْ مَا يَحْسُنُ فِي عَيْنَيْهِ. اُنْظُرْ. اَلْبَقَرُ لِلْمُحْرَقَةِ، وَٱلنَّوَارِجُ وَأَدَوَاتُ ٱلْبَقَرِ حَطَبًا». ٢٢ 22
ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.
اَلْكُلُّ دَفَعَهُ أَرُونَةُ ٱلْمَالِكُ إِلَى ٱلْمَلِكِ. وَقَالَ أَرُونَةُ لِلْمَلِكِ: «ٱلرَّبُّ إِلَهُكَ يَرْضَى عَنْكَ». ٢٣ 23
ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.
فَقَالَ ٱلْمَلِكُ لِأَرُونَةَ: «لَا، بَلْ أَشْتَرِي مِنْكَ بِثَمَنٍ، وَلَا أُصْعِدُ لِلرَّبِّ إِلَهِي مُحْرَقَاتٍ مَجَّانِيَّةً». فَٱشْتَرَى دَاوُدُ ٱلْبَيْدَرَ وَٱلْبَقَرَ بِخَمْسِينَ شَاقِلًا مِنَ ٱلْفِضَّةِ. ٢٤ 24
ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.
وَبَنَى دَاوُدُ هُنَاكَ مَذْبَحًا لِلرَّبِّ وَأَصْعَدَ مُحْرَقَاتٍ وَذَبَائِحَ سَلَامَةٍ، وَٱسْتَجَابَ ٱلرَّبُّ مِنْ أَجْلِ ٱلْأَرْضِ، فَكَفَّتِ ٱلضَّرْبَةُ عَنْ إِسْرَائِيلَ. ٢٥ 25
ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.

< صَمُوئِيلَ ٱلثَّانِي 24 >