< أعمال 1 >

اَلْكَلَامُ ٱلْأَوَّلُ أَنْشَأْتُهُ يَا ثَاوُفِيلُسُ، عَنْ جَمِيعِ مَا ٱبْتَدَأَ يَسُوعُ يَفْعَلُهُ وَيُعَلِّمُ بِهِ، ١ 1
ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
إِلَى ٱلْيَوْمِ ٱلَّذِي ٱرْتَفَعَ فِيهِ، بَعْدَ مَا أَوْصَى بِٱلرُّوحِ ٱلْقُدُسِ ٱلرُّسُلَ ٱلَّذِينَ ٱخْتَارَهُمْ. ٢ 2
ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
اَلَّذِينَ أَرَاهُمْ أَيْضًا نَفْسَهُ حَيًّا بِبَرَاهِينَ كَثِيرَةٍ، بَعْدَ مَا تَأَلَّمَ، وَهُوَ يَظْهَرُ لَهُمْ أَرْبَعِينَ يَوْمًا، وَيَتَكَلَّمُ عَنِ ٱلْأُمُورِ ٱلْمُخْتَصَّةِ بِمَلَكُوتِ ٱللهِ. ٣ 3
ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
وَفِيمَا هُوَ مُجْتَمِعٌ مَعَهُمْ أَوْصَاهُمْ أَنْ لَا يَبْرَحُوا مِنْ أُورُشَلِيمَ، بَلْ يَنْتَظِرُوا «مَوْعِدَ ٱلْآبِ ٱلَّذِي سَمِعْتُمُوهُ مِنِّي، ٤ 4
ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
لِأَنَّ يُوحَنَّا عَمَّدَ بِٱلْمَاءِ، وَأَمَّا أَنْتُمْ فَسَتَتَعَمَّدُونَ بِٱلرُّوحِ ٱلْقُدُسِ، لَيْسَ بَعْدَ هَذِهِ ٱلْأَيَّامِ بِكَثِيرٍ». ٥ 5
ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.
أَمَّا هُمُ ٱلْمُجْتَمِعُونَ فَسَأَلُوهُ قَائِلِينَ: «يَارَبُّ، هَلْ فِي هَذَا ٱلْوَقْتِ تَرُدُّ ٱلْمُلْكَ إِلَى إِسْرَائِيلَ؟». ٦ 6
ಕೂಡಿಬಂದವರು ಆತನನ್ನು, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು
فَقَالَ لَهُمْ: «لَيْسَ لَكُمْ أَنْ تَعْرِفُوا ٱلْأَزْمِنَةَ وَٱلْأَوْقَاتَ ٱلَّتِي جَعَلَهَا ٱلْآبُ فِي سُلْطَانِهِ، ٧ 7
ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
لَكِنَّكُمْ سَتَنَالُونَ قُوَّةً مَتَى حَلَّ ٱلرُّوحُ ٱلْقُدُسُ عَلَيْكُمْ، وَتَكُونُونَ لِي شُهُودًا فِي أُورُشَلِيمَ وَفِي كُلِّ ٱلْيَهُودِيَّةِ وَٱلسَّامِرَةِ وَإِلَى أَقْصَى ٱلْأَرْضِ». ٨ 8
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
وَلَمَّا قَالَ هَذَا ٱرْتَفَعَ وَهُمْ يَنْظُرُونَ. وَأَخَذَتْهُ سَحَابَةٌ عَنْ أَعْيُنِهِمْ. ٩ 9
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
وَفِيمَا كَانُوا يَشْخَصُونَ إِلَى ٱلسَّمَاءِ وَهُوَ مُنْطَلِقٌ، إِذَا رَجُلَانِ قَدْ وَقَفَا بِهِمْ بِلِبَاسٍ أَبْيَضَ، ١٠ 10
೧೦ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.
وَقَالَا: «أَيُّهَا ٱلرِّجَالُ ٱلْجَلِيلِيُّونَ، مَا بَالُكُمْ وَاقِفِينَ تَنْظُرُونَ إِلَى ٱلسَّمَاءِ؟ إِنَّ يَسُوعَ هَذَا ٱلَّذِي ٱرْتَفَعَ عَنْكُمْ إِلَى ٱلسَّمَاءِ سَيَأْتِي هَكَذَا كَمَا رَأَيْتُمُوهُ مُنْطَلِقًا إِلَى ٱلسَّمَاءِ». ١١ 11
೧೧“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
حِينَئِذٍ رَجَعُوا إِلَى أُورُشَلِيمَ مِنَ ٱلْجَبَلِ ٱلَّذِي يُدْعَى جَبَلَ ٱلزَّيْتُونِ، ٱلَّذِي هُوَ بِٱلْقُرْبِ مِنْ أُورُشَلِيمَ عَلَى سَفَرِ سَبْتٍ. ١٢ 12
೧೨ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
وَلَمَّا دَخَلُوا صَعِدُوا إِلَى ٱلْعِلِّيَّةِ ٱلَّتِي كَانُوا يُقِيمُونَ فِيهَا: بُطْرُسُ وَيَعْقُوبُ وَيُوحَنَّا وَأَنْدَرَاوُسُ وَفِيلُبُّسُ وَتُومَا وَبَرْثُولَمَاوُسُ وَمَتَّى وَيَعْقُوبُ بْنُ حَلْفَى وَسِمْعَانُ ٱلْغَيُورُ وَيَهُوذَا أَخُو يَعْقُوبَ. ١٣ 13
೧೩ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
هَؤُلَاءِ كُلُّهُمْ كَانُوا يُواظِبُونَ بِنَفْسٍ وَاحِدَةٍ عَلَى ٱلصَّلَاةِ وَٱلطِّلْبَةِ، مَعَ ٱلنِّسَاءِ، وَمَرْيَمَ أُمِّ يَسُوعَ، وَمَعَ إِخْوَتِهِ. ١٤ 14
೧೪ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
وَفِي تِلْكَ ٱلْأَيَّامِ قَامَ بُطْرُسُ فِي وَسْطِ ٱلتَّلَامِيذِ، وَكَانَ عِدَّةُ أَسْمَاءٍ مَعًا نَحْوَ مِئَةٍ وَعِشْرِينَ. فَقَالَ: ١٥ 15
೧೫ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,
«أَيُّهَا ٱلرِّجَالُ ٱلْإِخْوَةُ، كَانَ يَنْبَغِي أَنْ يَتِمَّ هَذَا ٱلْمَكْتُوبُ ٱلَّذِي سَبَقَ ٱلرُّوحُ ٱلْقُدُسُ فَقَالَهُ بِفَمِ دَاوُدَ، عَنْ يَهُوذَا ٱلَّذِي صَارَ دَلِيلًا لِلَّذِينَ قَبَضُوا عَلَى يَسُوعَ، ١٦ 16
೧೬“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
إِذْ كَانَ مَعْدُودًا بَيْنَنَا وَصَارَ لَهُ نَصِيبٌ فِي هَذِهِ ٱلْخِدْمَةِ. ١٧ 17
೧೭ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”
فَإِنَّ هَذَا ٱقْتَنَى حَقْلًا مِنْ أُجْرَةِ ٱلظُّلْمِ، وَإِذْ سَقَطَ عَلَى وَجْهِهِ ٱنْشَقَّ مِنَ ٱلْوَسْطِ، فَٱنْسَكَبَتْ أَحْشَاؤُهُ كُلُّهَا. ١٨ 18
೧೮(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
وَصَارَ ذَلِكَ مَعْلُومًا عِنْدَ جَمِيعِ سُكَّانِ أُورُشَلِيمَ، حَتَّى دُعِيَ ذَلِكَ ٱلْحَقْلُ فِي لُغَتِهِمْ «حَقَلْ دَمَا» أَيْ: حَقْلَ دَمٍ. ١٩ 19
೧೯ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
لِأَنَّهُ مَكْتُوبٌ فِي سِفْرِ ٱلْمَزَامِيرِ: لِتَصِرْ دَارُهُ خَرَابًا وَلَا يَكُنْ فِيهَا سَاكِنٌ. وَلْيَأْخُذْ وَظِيفَتَهُ آخَرُ. ٢٠ 20
೨೦ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
فَيَنْبَغِي أَنَّ ٱلرِّجَالَ ٱلَّذِينَ ٱجْتَمَعُوا مَعَنَا كُلَّ ٱلزَّمَانِ ٱلَّذِي فِيهِ دَخَلَ إِلَيْنَا ٱلرَّبُّ يَسُوعُ وَخَرَجَ، ٢١ 21
೨೧ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
مُنْذُ مَعْمُودِيَّةِ يُوحَنَّا إِلَى ٱلْيَوْمِ ٱلَّذِي ٱرْتَفَعَ فِيهِ عَنَّا، يَصِيرُ وَاحِدٌ مِنْهُمْ شَاهِدًا مَعَنَا بِقِيَامَتِهِ». ٢٢ 22
೨೨
فَأَقَامُوا ٱثْنَيْنِ: يُوسُفَ ٱلَّذِي يُدْعَى بَارْسَابَا ٱلْمُلَقَّبَ يُوسْتُسَ، وَمَتِّيَاسَ. ٢٣ 23
೨೩ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
وَصَلَّوْا قَائِلِينَ: «أَيُّهَا ٱلرَّبُّ ٱلْعَارِفُ قُلُوبَ ٱلْجَمِيعِ، عَيِّنْ أَنْتَ مِنْ هَذَيْنِ ٱلِٱثْنَيْنِ أَيًّا ٱخْتَرْتَهُ، ٢٤ 24
೨೪“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
لِيَأْخُذَ قُرْعَةَ هَذِهِ ٱلْخِدْمَةِ وَٱلرِّسَالَةِ ٱلَّتِي تَعَدَّاهَا يَهُوذَا لِيَذْهَبَ إِلَى مَكَانِهِ». ٢٥ 25
೨೫
ثُمَّ أَلْقَوْا قُرْعَتَهُمْ، فَوَقَعَتِ ٱلْقُرْعَةُ عَلَى مَتِّيَاسَ، فَحُسِبَ مَعَ ٱلْأَحَدَ عَشَرَ رَسُولًا. ٢٦ 26
೨೬ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

< أعمال 1 >