< أعمال 11 >

فَسَمِعَ ٱلرُّسُلُ وَٱلْإِخْوَةُ ٱلَّذِينَ كَانُوا فِي ٱلْيَهُودِيَّةِ أَنَّ ٱلْأُمَمَ أَيْضًا قَبِلُوا كَلِمَةَ ٱللهِ. ١ 1
ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
وَلَمَّا صَعِدَ بُطْرُسُ إِلَى أُورُشَلِيمَ، خَاصَمَهُ ٱلَّذِينَ مِنْ أَهْلِ ٱلْخِتَانِ، ٢ 2
ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು;
قَائِلِينَ: «إِنَّكَ دَخَلْتَ إِلَى رِجَالٍ ذَوِي غُلْفَةٍ وَأَكَلْتَ مَعَهُمْ». ٣ 3
“ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು.
فَٱبْتَدَأَ بُطْرُسُ يَشْرَحُ لَهُمْ بِٱلتَّتَابُعِ قَائِلًا: ٤ 4
ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,
«أَنَا كُنْتُ فِي مَدِينَةِ يَافَا أُصَلِّي، فَرَأَيْتُ فِي غَيْبَةٍ رُؤْيَا: إِنَاءً نَازِلًا مِثْلَ مُلَاءَةٍ عَظِيمَةٍ مُدَلَّاةٍ بِأَرْبَعَةِ أَطْرَافٍ مِنَ ٱلسَّمَاءِ، فَأَتَى إِلَيَّ. ٥ 5
ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
فَتَفَرَّسْتُ فِيهِ مُتَأَمِّلًا، فَرَأَيْتُ دَوَابَّ ٱلْأَرْضِ وَٱلْوُحُوشَ وَٱلزَّحَّافَاتِ وَطُيُورَ ٱلسَّمَاءِ. ٦ 6
ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.
وَسَمِعْتُ صَوْتًا قَائِلًا لِي: قُمْ يَا بُطْرُسُ، ٱذْبَحْ وَكُلْ. ٧ 7
ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
فَقُلْتُ: كَلَّا يَارَبُّ! لِأَنَّهُ لَمْ يَدْخُلْ فَمِي قَطُّ دَنِسٌ أَوْ نَجِسٌ. ٨ 8
ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.
فَأَجَابَنِي صَوْتٌ ثَانِيَةً مِنَ ٱلسَّمَاءِ: مَا طَهَّرَهُ ٱللهُ لَا تُنَجِّسْهُ أَنْتَ. ٩ 9
ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.
وَكَانَ هَذَا عَلَى ثَلَاثِ مَرَّاتٍ. ثُمَّ ٱنْتُشِلَ ٱلْجَمِيعُ إِلَى ٱلسَّمَاءِ أَيْضًا. ١٠ 10
೧೦ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
وَإِذَا ثَلَاثَةُ رِجَالٍ قَدْ وَقَفُوا لِلْوَقْتِ عِنْدَ ٱلْبَيْتِ ٱلَّذِي كُنْتُ فِيهِ، مُرْسَلِينَ إِلَيَّ مِنْ قَيْصَرِيَّةَ. ١١ 11
೧೧ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
فَقَالَ لِي ٱلرُّوحُ أَنْ أَذْهَبَ مَعَهُمْ غَيْرَ مُرْتَابٍ فِي شَيْءٍ. وَذَهَبَ مَعِي أَيْضًا هَؤُلَاءِ ٱلْإِخْوَةُ ٱلسِّتَّةُ. فَدَخَلْنَا بَيْتَ ٱلرَّجُلِ، ١٢ 12
೧೨ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
فَأَخْبَرَنَا كَيْفَ رَأَى ٱلْمَلَاكَ فِي بَيْتِهِ قَائِمًا وَقَائِلًا لَهُ: أَرْسِلْ إِلَى يَافَا رِجَالًا، وَٱسْتَدْعِ سِمْعَانَ ٱلْمُلَقَّبَ بُطْرُسَ، ١٣ 13
೧೩ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
وَهُوَ يُكَلِّمُكَ كَلَامًا بِهِ تَخْلُصُ أَنْتَ وَكُلُّ بَيْتِكَ. ١٤ 14
೧೪ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.
فَلَمَّا ٱبْتَدَأْتُ أَتَكَلَّمُ، حَلَّ ٱلرُّوحُ ٱلْقُدُسُ عَلَيْهِمْ كَمَا عَلَيْنَا أَيْضًا فِي ٱلْبَدَاءَةِ. ١٥ 15
೧೫ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.
فَتَذَكَّرْتُ كَلَامَ ٱلرَّبِّ كَيْفَ قَالَ: إِنَّ يُوحَنَّا عَمَّدَ بِمَاءٍ وَأَمَّا أَنْتُمْ فَسَتُعَمَّدُونَ بِٱلرُّوحِ ٱلْقُدُسِ. ١٦ 16
೧೬ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
فَإِنْ كَانَ ٱللهُ قَدْ أَعْطَاهُمُ ٱلْمَوْهِبَةَ كَمَا لَنَا أَيْضًا بِٱلسَّوِيَّةِ مُؤْمِنِينَ بِٱلرَّبِّ يَسُوعَ ٱلْمَسِيحِ، فَمَنْ أَنَا؟ أَقَادِرٌ أَنْ أَمْنَعَ ٱللهَ؟». ١٧ 17
೧೭ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
فَلَمَّا سَمِعُوا ذَلِكَ سَكَتُوا، وَكَانُوا يُمَجِّدُونَ ٱللهَ قَائِلِينَ: «إِذًا أَعْطَى ٱللهُ ٱلْأُمَمَ أَيْضًا ٱلتَّوْبَةَ لِلْحَيَاةِ!». ١٨ 18
೧೮ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
أَمَّا ٱلَّذِينَ تَشَتَّتُوا مِنْ جَرَّاءِ ٱلضِّيقِ ٱلَّذِي حَصَلَ بِسَبَبِ ٱسْتِفَانُوسَ فَٱجْتَازُوا إِلَى فِينِيقِيَةَ وَقُبْرُسَ وَأَنْطَاكِيَةَ، وَهُمْ لَا يُكَلِّمُونَ أَحَدًا بِٱلْكَلِمَةِ إِلَّا ٱلْيَهُودَ فَقَطْ. ١٩ 19
೧೯ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
وَلَكِنْ كَانَ مِنْهُمْ قَوْمٌ، وَهُمْ رِجَالٌ قُبْرُسِيُّونَ وَقَيْرَوَانِيُّونَ، ٱلَّذِينَ لَمَّا دَخَلُوا أَنْطَاكِيَةَ كَانُوا يُخَاطِبُونَ ٱلْيُونَانِيِّينَ مُبَشِّرِينَ بِٱلرَّبِّ يَسُوعَ. ٢٠ 20
೨೦ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
وَكَانَتْ يَدُ ٱلرَّبِّ مَعَهُمْ، فَآمَنَ عَدَدٌ كَثِيرٌ وَرَجَعُوا إِلَى ٱلرَّبِّ. ٢١ 21
೨೧ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.
فَسُمِعَ ٱلْخَبَرُ عَنْهُمْ فِي آذَانِ ٱلْكَنِيسَةِ ٱلَّتِي فِي أُورُشَلِيمَ، فَأَرْسَلُوا بَرْنَابَا لِكَيْ يَجْتَازَ إِلَى أَنْطَاكِيَةَ. ٢٢ 22
೨೨ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
ٱلَّذِي لَمَّا أَتَى وَرَأَى نِعْمَةَ ٱللهِ فَرِحَ، وَوَعَظَ ٱلْجَمِيعَ أَنْ يَثْبُتُوا فِي ٱلرَّبِّ بِعَزْمِ ٱلْقَلْبِ، ٢٣ 23
೨೩ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
لِأَنَّهُ كَانَ رَجُلًا صَالِحًا وَمُمْتَلِئًا مِنَ ٱلرُّوحِ ٱلْقُدُسِ وَٱلْإِيمَانِ. فَٱنْضَمَّ إِلَى ٱلرَّبِّ جَمْعٌ غَفِيرٌ. ٢٤ 24
೨೪ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
ثُمَّ خَرَجَ بَرْنَابَا إِلَى طَرْسُوسَ لِيَطْلُبَ شَاوُلَ. وَلَمَّا وَجَدَهُ جَاءَ بِهِ إِلَى أَنْطَاكِيَةَ. ٢٥ 25
೨೫ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.
فَحَدَثَ أَنَّهُمَا ٱجْتَمَعَا فِي ٱلْكَنِيسَةِ سَنَةً كَامِلَةً وَعَلَّمَا جَمْعًا غَفِيرًا. وَدُعِيَ ٱلتَّلَامِيذُ «مَسِيحِيِّينَ» فِي أَنْطَاكِيَةَ أَوَّلًا. ٢٦ 26
೨೬ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
وَفِي تِلْكَ ٱلْأَيَّامِ ٱنْحَدَرَ أَنْبِيَاءُ مِنْ أُورُشَلِيمَ إِلَى أَنْطَاكِيَةَ. ٢٧ 27
೨೭ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
وَقَامَ وَاحِدٌ مِنْهُمُ ٱسْمُهُ أَغَابُوسُ، وَأَشَارَ بِٱلرُّوحِ أَنَّ جُوعًا عَظِيمًا كَانَ عَتِيدًا أَنْ يَصِيرَ عَلَى جَمِيعِ ٱلْمَسْكُونَةِ، ٱلَّذِي صَارَ أَيْضًا فِي أَيَّامِ كُلُودِيُوسَ قَيْصَرَ. ٢٨ 28
೨೮ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
فَحَتَمَ ٱلتَّلَامِيذُ حَسْبَمَا تَيَسَّرَ لِكُلٍّ مِنْهُمْ أَنْ يُرْسِلَ كُلُّ وَاحِدٍ شَيْئًا، خِدْمَةً إِلَى ٱلْإِخْوَةِ ٱلسَّاكِنِينَ فِي ٱلْيَهُودِيَّةِ. ٢٩ 29
೨೯ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
فَفَعَلُوا ذَلِكَ مُرْسِلِينَ إِلَى ٱلْمَشَايِخِ بِيَدِ بَرْنَابَا وَشَاوُلَ. ٣٠ 30
೩೦ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.

< أعمال 11 >