< أعمال 19 >

فَحَدَثَ فِيمَا كَانَ أَبُلُّوسُ فِي كُورِنْثُوسَ، أَنَّ بُولُسَ بَعْدَ مَا ٱجْتَازَ فِي ٱلنَّوَاحِي ٱلْعَالِيَةِ جَاءَ إِلَى أَفَسُسَ. فَإِذْ وَجَدَ تَلَامِيذَ ١ 1
ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;
قَالَ لَهُمْ: «هَلْ قَبِلْتُمُ ٱلرُّوحَ ٱلْقُدُسَ لَمَّا آمَنْتُمْ؟». قَالُوا لَهُ: «وَلَا سَمِعْنَا أَنَّهُ يُوجَدُ ٱلرُّوحُ ٱلْقُدُسُ». ٢ 2
“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.
فَقَالَ لَهُمْ: «فَبِمَاذَا ٱعْتَمَدْتُمْ؟». فَقَالُوا: «بِمَعْمُودِيَّةِ يُوحَنَّا». ٣ 3
ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.
فَقَالَ بُولُسُ: «إِنَّ يُوحَنَّا عَمَّدَ بِمَعْمُودِيَّةِ ٱلتَّوْبَةِ، قَائِلًا لِلشَّعْبِ أَنْ يُؤْمِنُوا بِالَّذِي يَأْتِي بَعْدَهُ، أَيْ بِٱلْمَسِيحِ يَسُوعَ». ٤ 4
ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
فَلَمَّا سَمِعُوا ٱعْتَمَدُوا بِٱسْمِ ٱلرَّبِّ يَسُوعَ. ٥ 5
ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
وَلَمَّا وَضَعَ بُولُسُ يَدَيْهِ عَلَيْهِمْ حَلَّ ٱلرُّوحُ ٱلْقُدُسُ عَلَيْهِمْ، فَطَفِقُوا يَتَكَلَّمُونَ بِلُغَاتٍ وَيَتَنَبَّأُونَ. ٦ 6
ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
وَكَانَ جَمِيعُ ٱلرِّجَالِ نَحْوَ ٱثْنَيْ عَشَرَ. ٧ 7
ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು.
ثُمَّ دَخَلَ ٱلْمَجْمَعَ، وَكَانَ يُجَاهِرُ مُدَّةَ ثَلَاثَةِ أَشْهُرٍ مُحَاجًّا وَمُقْنِعًا فِي مَا يَخْتَصُّ بِمَلَكُوتِ ٱللهِ. ٨ 8
ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
وَلَمَّا كَانَ قَوْمٌ يَتَقَسَّوْنَ وَلَا يَقْنَعُونَ، شَاتِمِينَ ٱلطَّرِيقَ أَمَامَ ٱلْجُمْهُورِ، ٱعْتَزَلَ عَنْهُمْ وَأَفْرَزَ ٱلتَّلَامِيذَ، مُحَاجًّا كُلَّ يَوْمٍ فِي مَدْرَسَةِ إِنْسَانٍ ٱسْمُهُ تِيرَانُّسُ. ٩ 9
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
وَكَانَ ذَلِكَ مُدَّةَ سَنَتَيْنِ، حَتَّى سَمِعَ كَلِمَةَ ٱلرَّبِّ يَسُوعَ جَمِيعُ ٱلسَّاكِنِينَ فِي أَسِيَّا، مِنْ يَهُودٍ وَيُونَانِيِّينَ. ١٠ 10
೧೦ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.
وَكَانَ ٱللهُ يَصْنَعُ عَلَى يَدَيْ بُولُسَ قُوَّاتٍ غَيْرَ ٱلْمُعْتَادَةِ، ١١ 11
೧೧ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,
حَتَّى كَانَ يُؤْتَى عَنْ جَسَدِهِ بِمَنَادِيلَ أَوْ مَآزِرَ إِلَى ٱلْمَرْضَى، فَتَزُولُ عَنْهُمُ ٱلْأَمْرَاضُ، وَتَخْرُجُ ٱلْأَرْوَاحُ ٱلشِّرِّيرَةُ مِنْهُمْ. ١٢ 12
೧೨ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
فَشَرَعَ قَوْمٌ مِنَ ٱلْيَهُودِ ٱلطَّوَّافِينَ ٱلْمُعَزِّمِينَ أَنْ يُسَمُّوا عَلَى ٱلَّذِينَ بِهِمِ ٱلْأَرْوَاحُ ٱلشِّرِّيرَةُ بِٱسْمِ ٱلرَّبِّ يَسُوعَ، قَائِلِينَ: «نُقْسِمُ عَلَيْكَ بِيَسُوعَ ٱلَّذِي يَكْرِزُ بِهِ بُولُسُ!». ١٣ 13
೧೩ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
وَكَانَ سَبْعَةُ بَنِينَ لِسَكَاوَا، رَجُلٍ يَهُودِيٍّ رَئِيسِ كَهَنَةٍ، ٱلَّذِينَ فَعَلُوا هَذَا. ١٤ 14
೧೪ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.
فَأَجَابَ ٱلرُّوحُ ٱلشِّرِّيرُ وَقَالَ: «أَمَّا يَسُوعُ فَأَنَا أَعْرِفُهُ، وَبُولُسُ أَنَا أَعْلَمُهُ، وَأَمَّا أَنْتُمْ فَمَنْ أَنْتُمْ؟» ١٥ 15
೧೫ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;
فَوَثَبَ عَلَيْهِمُ ٱلْإِنْسَانُ ٱلَّذِي كَانَ فِيهِ ٱلرُّوحُ ٱلشِّرِّيرُ، وَغَلَبَهُمْ وَقَوِيَ عَلَيْهِمْ، حَتَّى هَرَبُوا مِنْ ذَلِكَ ٱلْبَيْتِ عُرَاةً وَمُجَرَّحِينَ. ١٦ 16
೧೬ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
وَصَارَ هَذَا مَعْلُومًا عِنْدَ جَمِيعِ ٱلْيَهُودِ وَٱلْيُونَانِيِّينَ ٱلسَّاكِنِينَ فِي أَفَسُسَ. فَوَقَعَ خَوْفٌ عَلَى جَمِيعِهِمْ، وَكَانَ ٱسْمُ ٱلرَّبِّ يَسُوعَ يَتَعَظَّمُ. ١٧ 17
೧೭ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.
وَكَانَ كَثِيرُونَ مِنَ ٱلَّذِينَ آمَنُوا يَأْتُونَ مُقِرِّينَ وَمُخْبِرِينَ بِأَفْعَالِهِمْ، ١٨ 18
೧೮ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
وَكَانَ كَثِيرُونَ مِنَ ٱلَّذِينَ يَسْتَعْمِلُونَ ٱلسِّحْرَ يَجْمَعُونَ ٱلْكُتُبَ وَيُحَرِّقُونَهَا أَمَامَ ٱلْجَمِيعِ. وَحَسَبُوا أَثْمَانَهَا فَوَجَدُوهَا خَمْسِينَ أَلْفًا مِنَ ٱلْفِضَّةِ. ١٩ 19
೧೯ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.
هَكَذَا كَانَتْ كَلِمَةُ ٱلرَّبِّ تَنْمُو وَتَقْوَى بِشِدَّةٍ. ٢٠ 20
೨೦ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
وَلَمَّا كَمِلَتْ هَذِهِ ٱلْأُمُورُ، وَضَعَ بُولُسُ فِي نَفْسِهِ أَنَّهُ بَعْدَمَا يَجْتَازُ فِي مَكِدُونِيَّةَ وَأَخَائِيَةَ يَذْهَبُ إِلَى أُورُشَلِيمَ، قَائِلًا: «إِنِّي بَعْدَ مَا أَصِيرُ هُنَاكَ يَنْبَغِي أَنْ أَرَى رُومِيَةَ أَيْضًا». ٢١ 21
೨೧ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
فَأَرْسَلَ إِلَى مَكِدُونِيَّةَ ٱثْنَيْنِ مِنَ ٱلَّذِينَ كَانُوا يَخْدِمُونَهُ: تِيمُوثَاوُسَ وَأَرَسْطُوسَ، وَلَبِثَ هُوَ زَمَانًا فِي أَسِيَّا. ٢٢ 22
೨೨ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
وَحَدَثَ فِي ذَلِكَ ٱلْوَقْتِ شَغَبٌ لَيْسَ بِقَلِيلٍ بِسَبَبِ هَذَا ٱلطَّرِيقِ، ٢٣ 23
೨೩ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
لِأَنَّ إِنْسَانًا ٱسْمُهُ دِيمِتْرِيُوسُ، صَائِغٌ صَانِعُ هَيَاكِلِ فِضَّةٍ لِأَرْطَامِيسَ، كَانَ يُكَسِّبُ ٱلصُّنَّاعَ مَكْسَبًا لَيْسَ بِقَلِيلٍ. ٢٤ 24
೨೪ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
فَجَمَعَهُمْ وَٱلْفَعَلَةَ فِي مِثْلِ ذَلِكَ ٱلْعَمَلِ وَقَالَ: «أَيُّهَا ٱلرِّجَالُ أَنْتُمْ تَعْلَمُونَ أَنَّ سِعَتَنَا إِنَّمَا هِيَ مِنْ هَذِهِ ٱلصِّنَاعَةِ. ٢٥ 25
೨೫ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.
وَأَنْتُمْ تَنْظُرُونَ وَتَسْمَعُونَ أَنَّهُ لَيْسَ مِنْ أَفَسُسَ فَقَطْ، بَلْ مِنْ جَمِيعِ أَسِيَّا تَقْرِيبًا، ٱسْتَمَالَ وَأَزَاغَ بُولُسُ هَذَا جَمْعًا كَثِيرًا قَائِلًا: إِنَّ ٱلَّتِي تُصْنَعُ بِٱلْأَيَادِي لَيْسَتْ آلِهَةً. ٢٦ 26
೨೬ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
فَلَيْسَ نَصِيبُنَا هَذَا وَحْدَهُ فِي خَطَرٍ مِنْ أَنْ يَحْصُلَ فِي إِهَانَةٍ، بَلْ أَيْضًا هَيْكَلُ أَرْطَامِيسَ، ٱلْإِلَهَةِ ٱلْعَظِيمَةِ، أَنْ يُحْسَبَ لَا شَيْءَ، وَأَنْ سَوْفَ تُهْدَمُ عَظَمَتُهَا، هِيَ ٱلَّتِي يَعْبُدُهَا جَمِيعُ أَسِيَّا وَٱلْمَسْكُونَةِ». ٢٧ 27
೨೭ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು.
فَلَمَّا سَمِعُوا ٱمْتَلَأُوا غَضَبًا، وَطَفِقُوا يَصْرُخُونَ قَائِلِينَ: «عَظِيمَةٌ هِيَ أَرْطَامِيسُ ٱلْأَفَسُسِيِّينَ!». ٢٨ 28
೨೮ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.
فَٱمْتَلَأَتِ ٱلْمَدِينَةُ كُلُّهَا ٱضْطِرَابًا، وَٱنْدَفَعُوا بِنَفْسٍ وَاحِدَةٍ إِلَى ٱلْمَشْهَدِ خَاطِفِينَ مَعَهُمْ غَايُوسَ وَأَرِسْتَرْخُسَ ٱلْمَكِدُونِيَّيْنِ، رَفِيقَيْ بُولُسَ فِي ٱلسَّفَرِ. ٢٩ 29
೨೯ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
وَلَمَّا كَانَ بُولُسُ يُرِيدُ أَنْ يَدْخُلَ بَيْنَ ٱلشَّعْبِ، لَمْ يَدَعْهُ ٱلتَّلَامِيذُ. ٣٠ 30
೩೦ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
وَأُنَاسٌ مِنْ وُجُوهِ أَسِيَّا، كَانُوا أَصْدِقَاءَهُ، أَرْسَلُوا يَطْلُبُونَ إِلَيْهِ أَنْ لَا يُسَلِّمَ نَفْسَهُ إِلَى ٱلْمَشْهَدِ. ٣١ 31
೩೧ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
وَكَانَ ٱلْبَعْضُ يَصْرُخُونَ بِشَيْءٍ وَٱلْبَعْضُ بِشَيْءٍ آخَرَ، لِأَنَّ ٱلْمَحْفِلَ كَانَ مُضْطَرِبًا، وَأَكْثَرُهُمْ لَا يَدْرُونَ لِأَيِّ شَيْءٍ كَانُوا قَدِ ٱجْتَمَعُوا! ٣٢ 32
೩೨ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.
فَٱجْتَذَبُوا إِسْكَنْدَرَ مِنَ ٱلْجَمْعِ، وَكَانَ ٱلْيَهُودُ يَدْفَعُونَهُ. فَأَشَارَ إِسْكَنْدَرُ بِيَدِهِ يُرِيدُ أَنْ يَحْتَجَّ لِلشَّعْبِ. ٣٣ 33
೩೩ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.
فَلَمَّا عَرَفُوا أَنَّهُ يَهُودِيٌّ، صَارَ صَوْتٌ وَاحِدٌ مِنَ ٱلْجَمِيعِ صَارِخِينَ نَحْوَ مُدَّةِ سَاعَتَيْنِ: «عَظِيمَةٌ هِيَ أَرْطَامِيسُ ٱلْأَفَسُسِيِّينَ!». ٣٤ 34
೩೪ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.
ثُمَّ سَكَّنَ ٱلْكَاتِبُ ٱلْجَمْعَ وَقَالَ: «أَيُّهَا ٱلرِّجَالُ ٱلْأَفَسُسِيُّونَ، مَنْ هُوَ ٱلْإِنْسَانُ ٱلَّذِي لَا يَعْلَمُ أَنَّ مَدِينَةَ ٱلْأَفَسُسِيِّينَ مُتَعَبِّدَةٌ لِأَرْطَامِيسَ ٱلْإِلَهَةِ ٱلْعَظِيمَةِ وَٱلتِّمْثَالِ ٱلَّذِي هَبَطَ مِنْ زَفْسَ؟ ٣٥ 35
೩೫ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?
فَإِذْ كَانَتْ هَذِهِ ٱلْأَشْيَاءُ لَا تُقَاوَمُ، يَنْبَغِي أَنْ تَكُونُوا هَادِئِينَ وَلَا تَفْعَلُوا شَيْئًا ٱقْتِحَامًا. ٣٦ 36
೩೬ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.
لِأَنَّكُمْ أَتَيْتُمْ بِهَذَيْنِ ٱلرَّجُلَيْنِ، وَهُمَا لَيْسَا سَارِقَيْ هَيَاكِلَ، وَلَا مُجَدِّفَيْنِ عَلَى إِلَهَتِكُمْ. ٣٧ 37
೩೭ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
فَإِنْ كَانَ دِيمِتْرِيُوسُ وَٱلصُّنَّاعُ ٱلَّذِينَ مَعَهُ لَهُمْ دَعْوَى عَلَى أَحَدٍ، فَإِنَّهُ تُقَامُ أَيَّامٌ لِلْقَضَاءِ، وَيُوجَدُ وُلَاةٌ، فَلْيُرَافِعُوا بَعْضُهُمْ بَعْضًا. ٣٨ 38
೩೮ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.
وَإِنْ كُنْتُمْ تَطْلُبُونَ شَيْئًا مِنْ جِهَةِ أُمُورٍ أُخَرَ، فَإِنَّهُ يُقْضَى فِي مَحْفِلٍ شَرْعِيٍّ. ٣٩ 39
೩೯ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
لِأَنَّنَا فِي خَطَرٍ أَنْ نُحَاكَمَ مِنْ أَجْلِ فِتْنَةِ هَذَا ٱلْيَوْمِ. وَلَيْسَ عِلَّةٌ يُمْكِنُنَا مِنْ أَجْلِهَا أَنْ نُقَدِّمَ حِسَابًا عَنْ هَذَا ٱلتَّجَمُّعِ». ٤٠ 40
೪೦ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.
وَلَمَّا قَالَ هَذَا صَرَفَ ٱلْمَحْفِلَ. ٤١ 41
೪೧ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.

< أعمال 19 >