< أعمال 23 >

فَتَفَرَّسَ بُولُسُ فِي ٱلْمَجْمَعِ وَقَالَ: «أَيُّهَا ٱلرِّجَالُ ٱلْإِخْوَةُ، إِنِّي بِكُلِّ ضَمِيرٍ صَالِحٍ قَدْ عِشْتُ لِلهِ إِلَى هَذَا ٱلْيَوْمِ». ١ 1
ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.
فَأَمَرَ حَنَانِيَّا رَئِيسُ ٱلْكَهَنَةِ، ٱلْوَاقِفِينَ عِنْدَهُ أَنْ يَضْرِبُوهُ عَلَى فَمِهِ. ٢ 2
ಅದಕ್ಕೆ ಮಹಾಯಾಜಕ ಅನನೀಯನು ಪೌಲನ ಬಳಿ ನಿಂತಿದ್ದವರಿಗೆ ಅವನ ಬಾಯಮೇಲೆ ಹೊಡೆಯಬೇಕೆಂದು ಆಜ್ಞಾಪಿಸಿದನು.
حِينَئِذٍ قَالَ لَهُ بُولُسُ: «سَيَضْرِبُكَ ٱللهُ أَيُّهَا ٱلْحَائِطُ ٱلْمُبَيَّضُ! أَفَأَنْتَ جَالِسٌ تَحْكُمُ عَلَيَّ حَسَبَ ٱلنَّامُوسِ، وَأَنْتَ تَأْمُرُ بِضَرْبِي مُخَالِفًا لِلنَّامُوسِ؟». ٣ 3
ಆಗ ಪೌಲನು ಅವನಿಗೆ, “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವರು. ಮೋಶೆಯ ನಿಯಮದ ಪ್ರಕಾರ ನನ್ನ ನ್ಯಾಯವಿಚಾರಣೆ ಮಾಡಲು ನೀನು ಕುಳಿತುಕೊಂಡು, ನಿಯಮಕ್ಕೆ ವಿರುದ್ಧವಾಗಿ ನನ್ನನ್ನು ಹೊಡೆಯಬೇಕೆಂದು ಆಜ್ಞಾಪಿಸುತ್ತೀಯೋ?” ಎಂದನು.
فَقَالَ ٱلْوَاقِفُونَ: «أَتَشْتِمُ رَئِيسَ كَهَنَةِ ٱللهِ؟» ٤ 4
ಪೌಲನ ಹತ್ತಿರ ನಿಂತಿದ್ದವರು, “ದೇವರು ನೇಮಿಸಿದ ಮಹಾಯಾಜಕನನ್ನು ನಿಂದಿಸುತ್ತಿದ್ದೀಯಾ?” ಎಂದು ಹೇಳಲು,
فَقَالَ بُولُسُ: «لَمْ أَكُنْ أَعْرِفُ أَيُّهَا ٱلْإِخْوَةُ أَنَّهُ رَئِيسُ كَهَنَةٍ، لِأَنَّهُ مَكْتُوبٌ: رَئِيسُ شَعْبِكَ لَا تَقُلْ فِيهِ سُوءًا». ٥ 5
“ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು.
وَلَمَّا عَلِمَ بُولُسُ أَنَّ قِسْمًا مِنْهُمْ صَدُّوقِيُّونَ وَٱلْآخَرَ فَرِّيسِيُّونَ، صَرَخَ فِي ٱلْمَجْمَعِ: «أَيُّهَا ٱلرِّجَالُ ٱلْإِخْوَةُ، أَنَا فَرِّيسِيٌّ ٱبْنُ فَرِّيسِيٍّ. عَلَى رَجَاءِ قِيَامَةِ ٱلْأَمْوَاتِ أَنَا أُحَاكَمُ». ٦ 6
ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು.
وَلَمَّا قَالَ هَذَا حَدَثَتْ مُنَازَعَةٌ بَيْنَ ٱلْفَرِّيسِيِّينَ وَٱلصَّدُّوقِيِّينَ، وَٱنْشَقَّتِ ٱلْجَمَاعَةُ، ٧ 7
ಪೌಲನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದ ಉಂಟಾಯಿತು. ಇದರಿಂದ ಸಮೂಹವು ವಿಭಾಗವಾಯಿತು.
لِأَنَّ ٱلصَّدُّوقِيِّينَ يَقُولُونَ: إِنَّهُ لَيْسَ قِيَامَةٌ وَلَا مَلَاكٌ وَلَا رُوحٌ، وَأَمَّا ٱلْفَرِّيسِيُّونَ فَيُقِرُّونَ بِكُلِّ ذَلِكَ. ٨ 8
ಏಕೆಂದರೆ ಸದ್ದುಕಾಯರು ಪುನರುತ್ಥಾನ ಇಲ್ಲವೆಂದೂ ದೇವದೂತರಾಗಲಿ, ಆತ್ಮಗಳಾಗಲಿ ಇಲ್ಲವೆಂದೂ ಹೇಳುತ್ತಿದ್ದರು. ಫರಿಸಾಯರು ಇವೆರಡನ್ನೂ ಒಪ್ಪಿಕೊಳ್ಳುತ್ತಿದ್ದರು.
فَحَدَثَ صِيَاحٌ عَظِيمٌ، وَنَهَضَ كَتَبَةُ قِسْمِ ٱلْفَرِّيسِيِّينَ وَطَفِقُوا يُخَاصِمُونَ قَائِلِينَ: «لَسْنَا نَجِدُ شَيْئًا رَدِيًّا فِي هَذَا ٱلْإِنْسَانِ! وَإِنْ كَانَ رُوحٌ أَوْ مَلَاكٌ قَدْ كَلَّمَهُ فَلَا نُحَارِبَنَّ ٱللهَ». ٩ 9
ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.
وَلَمَّا حَدَثَتْ مُنَازَعَةٌ كَثِيرَةٌ ٱخْتَشَى ٱلْأَمِيرُ أَنْ يَفْسَخُوا بُولُسَ، فَأَمَرَ ٱلْعَسْكَرَ أَنْ يَنْزِلُوا وَيَخْتَطِفُوهُ مِنْ وَسْطِهِمْ وَيَأْتُوا بِهِ إِلَى ٱلْمُعَسْكَرِ. ١٠ 10
ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.
وَفِي ٱللَّيْلَةِ ٱلتَّالِيَةِ وَقَفَ بِهِ ٱلرَّبُّ وَقَالَ: «ثِقْ يَا بُولُسُ! لِأَنَّكَ كَمَا شَهِدْتَ بِمَا لِي فِي أُورُشَلِيمَ، هَكَذَا يَنْبَغِي أَنْ تَشْهَدَ فِي رُومِيَةَ أَيْضًا». ١١ 11
ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.
وَلَمَّا صَارَ ٱلنَّهَارُ صَنَعَ بَعْضُ ٱلْيَهُودِ ٱتِّفَاقًا، وَحَرَمُوا أَنْفُسَهُمْ قَائِلِينَ: إِنَّهُمْ لَا يَأْكُلُونَ وَلَا يَشْرَبُونَ حَتَّى يَقْتُلُوا بُولُسَ. ١٢ 12
ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.
وَكَانَ ٱلَّذِينَ صَنَعُوا هَذَا ٱلتَّحَالُفَ أَكْثَرَ مِنْ أَرْبَعِينَ. ١٣ 13
ಈ ಒಳಸಂಚಿನಲ್ಲಿ ನಾಲ್ವತ್ತಕ್ಕಿಂತಲೂ ಹೆಚ್ಚು ಜನ ಪುರುಷರಿದ್ದರು.
فَتَقَدَّمُوا إِلَى رُؤَسَاءِ ٱلْكَهَنَةِ وَٱلشُّيُوخِ وَقَالُوا: «قَدْ حَرَمْنَا أَنْفُسَنَا حِرْمًا أَنْ لَا نَذُوقَ شَيْئًا حَتَّى نَقْتُلَ بُولُسَ. ١٤ 14
ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ.
وَٱلْآنَ أَعْلِمُوا ٱلْأَمِيرَ أَنْتُمْ مَعَ ٱلْمَجْمَعِ لِكَيْ يُنْزِلَهُ إِلَيْكُمْ غَدًا، كَأَنَّكُمْ مُزْمِعُونَ أَنْ تَفْحَصُوا بِأَكْثَرِ تَدْقِيقٍ عَمَّا لَهُ. وَنَحْنُ، قَبْلَ أَنْ يَقْتَرِبَ، مُسْتَعِدُّونَ لِقَتْلِهِ». ١٥ 15
ಆದ್ದರಿಂದ ಈಗ ವಿಚಾರಣೆಯ ಬಗ್ಗೆ ಹೆಚ್ಚಿನ ನಿರ್ದಿಷ್ಟವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂಬ ನೆಪದಿಂದ ಪೌಲನನ್ನು ನಿಮ್ಮ ಮುಂದೆ ತರುವಂತೆ ನೀವೂ ನ್ಯಾಯಸಭೆಯೂ ಸಹಸ್ರಾಧಿಪತಿಯನ್ನು ಬೇಡಿಕೊಳ್ಳಿರಿ. ಇಲ್ಲಿಗೆ ಬರುವ ಮೊದಲೇ ಪೌಲನನ್ನು ನಾವು ಕೊಂದುಬಿಡುತ್ತೇವೆ,” ಎಂದರು.
وَلَكِنَّ ٱبْنَ أُخْتِ بُولُسَ سَمِعَ بِٱلْكَمِينِ، فَجَاءَ وَدَخَلَ ٱلْمُعَسْكَرَ وَأَخْبَرَ بُولُسَ. ١٦ 16
ಈ ಒಳಸಂಚು ಪೌಲನ ಸಹೋದರಿಯ ಮಗನಿಗೆ ತಿಳಿಯಲು ಅವನು ಸೈನಿಕ ಪಾಳ್ಯದೊಳಗೆ ಹೋಗಿ ಪೌಲನಿಗೆ ತಿಳಿಸಿದನು.
فَٱسْتَدْعَى بُولُسُ وَاحِدًا مِنْ قُوَّادِ ٱلْمِئَاتِ وَقَالَ: «ٱذْهَبْ بِهَذَا ٱلشَّابِّ إِلَى ٱلْأَمِيرِ، لِأَنَّ عِنْدَهُ شَيْئًا يُخْبِرُهُ بِهِ». ١٧ 17
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.
فَأَخَذَهُ وَأَحْضَرَهُ إِلَى ٱلْأَمِيرِ وَقَالَ: «ٱسْتَدْعَانِي ٱلْأَسِيرُ بُولُسُ، وَطَلَبَ أَنْ أُحْضِرَ هَذَا ٱلشَّابَّ إِلَيْكَ، وَهُوَ عِنْدَهُ شَيْءٌ لِيَقُولَهُ لَكَ». ١٨ 18
ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು.
فَأَخَذَ ٱلْأَمِيرُ بِيَدِهِ وَتَنَحَّى بِهِ مُنْفَرِدًا، وَٱسْتَخْبَرَهُ: «مَا هُوَ ٱلَّذِي عِنْدَكَ لِتُخْبِرَنِي بِهِ؟». ١٩ 19
ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು.
فَقَالَ: «إِنَّ ٱلْيَهُودَ تَعَاهَدُوا أَنْ يَطْلُبُوا مِنْكَ أَنْ تُنْزِلَ بُولُسَ غَدًا إِلَى ٱلْمَجْمَعِ، كَأَنَّهُمْ مُزْمِعُونَ أَنْ يَسْتَخْبِرُوا عَنْهُ بِأَكْثَرِ تَدْقِيقٍ. ٢٠ 20
ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ.
فَلَا تَنْقَدْ إِلَيْهِمْ، لِأَنَّ أَكْثَرَ مِنْ أَرْبَعِينَ رَجُلًا مِنْهُمْ كَامِنُونَ لَهُ، قَدْ حَرَمُوا أَنْفُسَهُمْ أَنْ لَا يَأْكُلُوا وَلَا يَشْرَبُوا حَتَّى يَقْتُلُوهُ. وَهُمُ ٱلْآنَ مُسْتَعِدُّونَ مُنْتَظِرُونَ ٱلْوَعْدَ مِنْكَ». ٢١ 21
ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.
فَأَطْلَقَ ٱلْأَمِيرُ ٱلشَّابَّ مُوصِيًا إِيَّاهُ أَنْ: «لَا تَقُلْ لِأَحَدٍ إِنَّكَ أَعْلَمْتَنِي بِهَذَا». ٢٢ 22
“ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು.
ثُمَّ دَعَا ٱثْنَيْنِ مِنْ قُوَّادِ ٱلْمِئَاتِ وَقَالَ: «أَعِدَّا مِئَتَيْ عَسْكَرِيٍّ لِيَذْهَبُوا إِلَى قَيْصَرِيَّةَ، وَسَبْعِينَ فَارِسًا وَمِئَتَيْ رَامِحٍ، مِنَ ٱلسَّاعَةِ ٱلثَّالِثَةِ مِنَ ٱللَّيْلِ. ٢٣ 23
ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.
وَأَنْ يُقَدِّمَا دَوَابَّ لِيُرْكِبَا بُولُسَ وَيُوصِلَاهُ سَالِمًا إِلَى فِيلِكْسَ ٱلْوَالِي». ٢٤ 24
ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು.
وَكَتَبَ رِسَالَةً حَاوِيَةً هَذِهِ ٱلصُّورَةَ: ٢٥ 25
ಅವರಿಗೆ ಒಂದು ಪತ್ರವನ್ನು ಹೀಗೆ ಬರೆದುಕೊಟ್ಟನು:
«كُلُودِيُوسُ لِيسِيَاسُ، يُهْدِي سَلَامًا إِلَى ٱلْعَزِيزِ فِيلِكْسَ ٱلْوَالِي: ٢٦ 26
ಮಹಾಪ್ರಭುಗಳಾದ ರಾಜ್ಯಪಾಲ ಫೇಲಿಕ್ಸ್, ಅವರಿಗೆ ಕ್ಲೌದ್ಯ ಲೂಸ್ಯನು, ಮಾಡುವ ವಂದನೆಗಳು.
هَذَا ٱلرَّجُلُ لَمَّا أَمْسَكَهُ ٱلْيَهُودُ وَكَانُوا مُزْمِعِينَ أَنْ يَقْتُلُوهُ، أَقْبَلْتُ مَعَ ٱلْعَسْكَرِ وَأَنْقَذْتُهُ، إِذْ أُخْبِرْتُ أَنَّهُ رُومَانِيٌّ. ٢٧ 27
ಈ ಪೌಲನನ್ನು ಯೆಹೂದ್ಯರು ಬಂಧಿಸಿ, ಇವನನ್ನು ಕೊಲ್ಲಬೇಕೆಂದಿದ್ದರು. ಆದರೆ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಬಿಡಿಸಿದೆನು. ಇವನು ರೋಮ್ ಪೌರ ಎಂದು ನನಗೆ ಗೊತ್ತಾಯಿತು.
وَكُنْتُ أُرِيدُ أَنْ أَعْلَمَ ٱلْعِلَّةَ ٱلَّتِي لِأَجْلِهَا كَانُوا يَشْتَكُونَ عَلَيْهِ، فَأَنْزَلْتُهُ إِلَى مَجْمَعِهِمْ، ٢٨ 28
ಅವರು ಏಕೆ ಪೌಲನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಪೇಕ್ಷಿಸಿ ಇವನನ್ನು ಅವರ ನ್ಯಾಯಸಭೆಯ ಮುಂದೆ ಕರೆದುಕೊಂಡು ಹೋದೆನು.
فَوَجَدْتُهُ مَشْكُوًّا عَلَيْهِ مِنْ جِهَةِ مَسَائِلِ نَامُوسِهِمْ. وَلَكِنَّ شَكْوَى تَسْتَحِقُّ ٱلْمَوْتَ أَوِ ٱلْقُيُودَ لَمْ تَكُنْ عَلَيْهِ. ٢٩ 29
ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.
ثُمَّ لَمَّا أُعْلِمْتُ بِمَكِيدَةٍ عَتِيدَةٍ أَنْ تَصِيرَ عَلَى ٱلرَّجُلِ مِنَ ٱلْيَهُودِ، أَرْسَلْتُهُ لِلْوَقْتِ إِلَيْكَ، آمِرًا ٱلْمُشْتَكِينَ أَيْضًا أَنْ يَقُولُوا لَدَيْكَ مَا عَلَيْهِ. كُنْ مُعَافًى». ٣٠ 30
ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.
فَٱلْعَسْكَرُ أَخَذُوا بُولُسَ كَمَا أُمِرُوا، وَذَهَبُوا بِهِ لَيْلًا إِلَى أَنْتِيبَاتْرِيسَ. ٣١ 31
ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು.
وَفِي ٱلْغَدِ تَرَكُوا ٱلْفُرْسَانَ يَذْهَبُونَ مَعَهُ وَرَجَعُوا إِلَى ٱلْمُعَسْكَرِ. ٣٢ 32
ಮರುದಿನ ಪೌಲನೊಂದಿಗೆ ಮುಂದೆ ಹೋಗಲು ಕುದುರೆಸವಾರರನ್ನು ಬಿಟ್ಟು, ಸೈನಿಕರು ಅವರ ಪಾಳ್ಯಕ್ಕೆ ಹಿಂದಿರುಗಿದರು.
وَأُولَئِكَ لَمَّا دَخَلُوا قَيْصَرِيَّةَ وَدَفَعُوا ٱلرِّسَالَةَ إِلَى ٱلْوَالِي، أَحْضَرُوا بُولُسَ أَيْضًا إِلَيْهِ. ٣٣ 33
ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು.
فَلَمَّا قَرَأَ ٱلْوَالِي ٱلرِّسَالَةَ، وَسَأَلَ مِنْ أَيَّةِ وِلَايَةٍ هُوَ، وَوَجَدَ أَنَّهُ مِنْ كِيلِيكِيَّةَ، ٣٤ 34
ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು,
قَالَ: «سَأَسْمَعُكَ مَتَى حَضَرَ ٱلْمُشْتَكُونَ عَلَيْكَ أَيْضًا». وَأَمَرَ أَنْ يُحْرَسَ فِي قَصْرِ هِيرُودُسَ. ٣٥ 35
“ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.

< أعمال 23 >