< أعمال 26 >

فَقَالَ أَغْرِيبَاسُ لِبُولُسَ: «مَأْذُونٌ لَكَ أَنْ تَتَكَلَّمَ لِأَجْلِ نَفْسِكَ». حِينَئِذٍ بَسَطَ بُولُسُ يَدَهُ وَجَعَلَ يَحْتَجُّ: ١ 1
ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;
«إِنِّي أَحْسِبُ نَفْسِي سَعِيدًا أَيُّهَا ٱلْمَلِكُ أَغْرِيبَاسُ، إِذْ أَنَا مُزْمِعٌ أَنْ أَحْتَجَّ ٱلْيَوْمَ لَدَيْكَ عَنْ كُلِّ مَا يُحَاكِمُنِي بِهِ ٱلْيَهُودُ. ٢ 2
“ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
لَا سِيَّمَا وَأَنْتَ عَالِمٌ بِجَمِيعِ ٱلْعَوَائِدِ وَٱلْمَسَائِلِ ٱلَّتِي بَيْنَ ٱلْيَهُودِ. لِذَلِكَ أَلْتَمِسُ مِنْكَ أَنْ تَسْمَعَنِي بِطُولِ ٱلْأَنَاةِ. ٣ 3
ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.
فَسِيرَتِي مُنْذُ حَدَاثَتِي ٱلَّتِي مِنَ ٱلْبُدَاءَةِ كَانَتْ بَيْنَ أُمَّتِي فِي أُورُشَلِيمَ يَعْرِفُهَا جَمِيعُ ٱلْيَهُودِ، ٤ 4
“ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.
عَالِمِينَ بِي مِنَ ٱلْأَوَّلِ، إِنْ أَرَادُوا أَنْ يَشْهَدُوا، أَنِّي حَسَبَ مَذْهَبِ عِبَادَتِنَا ٱلْأَضْيَقِ عِشْتُ فَرِّيسِيًّا. ٥ 5
ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
وَٱلْآنَ أَنَا وَاقِفٌ أُحَاكَمُ عَلَى رَجَاءِ ٱلْوَعْدِ ٱلَّذِي صَارَ مِنَ ٱللهِ لِآبَائِنَا، ٦ 6
ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
ٱلَّذِي أَسْبَاطُنَا ٱلِٱثْنَا عَشَرَ يَرْجُونَ نَوَالَهُ، عَابِدِينَ بِٱلْجَهْدِ لَيْلًا وَنَهَارًا. فَمِنْ أَجْلِ هَذَا ٱلرَّجَاءِ أَنَا أُحَاكَمُ مِنَ ٱلْيَهُودِ أَيُّهَا ٱلْمَلِكُ أَغْرِيبَاسُ. ٧ 7
ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
لِمَاذَا يُعَدُّ عِنْدَكُمْ أَمْرًا لَا يُصَدَّقُ إِنْ أَقَامَ ٱللهُ أَمْوَاتًا؟ ٨ 8
ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?
فَأَنَا ٱرْتَأَيْتُ فِي نَفْسِي أَنَّهُ يَنْبَغِي أَنْ أَصْنَعَ أُمُورًا كَثِيرَةً مُضَادَّةً لِٱسْمِ يَسُوعَ ٱلنَّاصِرِيِّ. ٩ 9
ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
وَفَعَلْتُ ذَلِكَ أَيْضًا فِي أُورُشَلِيمَ، فَحَبَسْتُ فِي سُجُونٍ كَثِيرِينَ مِنَ ٱلْقِدِّيسِينَ، آخِذًا ٱلسُّلْطَانَ مِنْ قِبَلِ رُؤَسَاءِ ٱلْكَهَنَةِ. وَلَمَّا كَانُوا يُقْتَلُونَ أَلْقَيْتُ قُرْعَةً بِذَلِكَ. ١٠ 10
೧೦ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.
وَفِي كُلِّ ٱلْمَجَامِعِ كُنْتُ أُعَاقِبُهُمْ مِرَارًا كَثِيرَةً، وَأَضْطَرُّهُمْ إِلَى ٱلتَّجْدِيفِ. وَإِذْ أَفْرَطَ حَنَقِي عَلَيْهِمْ كُنْتُ أَطْرُدُهُمْ إِلَى ٱلْمُدُنِ ٱلَّتِي فِي ٱلْخَارِجِ. ١١ 11
೧೧ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
«وَلَمَّا كُنْتُ ذَاهِبًا فِي ذَلِكَ إِلَى دِمَشْقَ، بِسُلْطَانٍ وَوَصِيَّةٍ مِنْ رُؤَسَاءِ ٱلْكَهَنَةِ، ١٢ 12
೧೨ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,
رَأَيْتُ فِي نِصْفِ ٱلنَّهَارِ فِي ٱلطَّرِيقِ، أَيُّهَا ٱلْمَلِكُ، نُورًا مِنَ ٱلسَّمَاءِ أَفْضَلَ مِنْ لَمَعَانِ ٱلشَّمْسِ، قَدْ أَبْرَقَ حَوْلِي وَحَوْلَ ٱلذَّاهِبِينَ مَعِي. ١٣ 13
೧೩ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.
فَلَمَّا سَقَطْنَا جَمِيعُنَا عَلَى ٱلْأَرْضِ، سَمِعْتُ صَوْتًا يُكَلِّمُنِي وَيَقُولُ بِٱللُّغَةِ ٱلْعِبْرَانِيَّةِ: شَاوُلُ، شَاوُلُ! لِمَاذَا تَضْطَهِدُنِي؟ صَعْبٌ عَلَيْكَ أَنْ تَرْفُسَ مَنَاخِسَ. ١٤ 14
೧೪ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.
فَقُلْتُ أَنَا: مَنْ أَنْتَ يَا سَيِّدُ؟ فَقَالَ: أَنَا يَسُوعُ ٱلَّذِي أَنْتَ تَضْطَهِدُهُ. ١٥ 15
೧೫ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು.
وَلَكِنْ قُمْ وَقِفْ عَلَى رِجْلَيْكَ لِأَنِّي لِهَذَا ظَهَرْتُ لَكَ، لِأَنْتَخِبَكَ خَادِمًا وَشَاهِدًا بِمَا رَأَيْتَ وَبِمَا سَأَظْهَرُ لَكَ بِهِ، ١٦ 16
೧೬ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.
مُنْقِذًا إِيَّاكَ مِنَ ٱلشَّعْبِ وَمِنَ ٱلْأُمَمِ ٱلَّذِينَ أَنَا ٱلْآنَ أُرْسِلُكَ إِلَيْهِمْ، ١٧ 17
೧೭ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು.
لِتَفْتَحَ عُيُونَهُمْ كَيْ يَرْجِعُوا مِنْ ظُلُمَاتٍ إِلَى نُورٍ، وَمِنْ سُلْطَانِ ٱلشَّيْطَانِ إِلَى ٱللهِ، حَتَّى يَنَالُوا بِٱلْإِيمَانِ بِي غُفْرَانَ ٱلْخَطَايَا وَنَصِيبًا مَعَ ٱلْمُقَدَّسِينَ. ١٨ 18
೧೮ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.
«مِنْ ثَمَّ أَيُّهَا ٱلْمَلِكُ أَغْرِيبَاسُ لَمْ أَكُنْ مُعَانِدًا لِلرُّؤْيَا ٱلسَّمَاوِيَّةِ، ١٩ 19
೧೯ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,
بَلْ أَخْبَرْتُ أَوَّلًا ٱلَّذِينَ فِي دِمَشْقَ، وَفِي أُورُشَلِيمَ حَتَّى جَمِيعِ كُورَةِ ٱلْيَهُودِيَّةِ، ثُمَّ ٱلْأُمَمَ، أَنْ يَتُوبُوا وَيَرْجِعُوا إِلَى ٱللهِ عَامِلِينَ أَعْمَالًا تَلِيقُ بِٱلتَّوْبَةِ. ٢٠ 20
೨೦ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
مِنْ أَجْلِ ذَلِكَ أَمْسَكَنِي ٱلْيَهُودُ فِي ٱلْهَيْكَلِ وَشَرَعُوا فِي قَتْلِي. ٢١ 21
೨೧ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು.
فَإِذْ حَصَلْتُ عَلَى مَعُونَةٍ مِنَ ٱللهِ، بَقِيتُ إِلَى هَذَا ٱلْيَوْمِ، شَاهِدًا لِلصَّغِيرِ وَٱلْكَبِيرِ. وَأَنَا لَا أَقُولُ شَيْئًا غَيْرَ مَا تَكَلَّمَ ٱلْأَنْبِيَاءُ وَمُوسَى أَنَّهُ عَتِيدٌ أَنْ يَكُونَ: ٢٢ 22
೨೨ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
إِنْ يُؤَلَّمِ ٱلْمَسِيحُ، يَكُنْ هُوَ أَوَّلَ قِيَامَةِ ٱلْأَمْوَاتِ، مُزْمِعًا أَنْ يُنَادِيَ بِنُورٍ لِلشَّعْبِ وَلِلْأُمَمِ». ٢٣ 23
೨೩ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.
وَبَيْنَمَا هُوَ يَحْتَجُّ بِهَذَا، قَالَ فَسْتُوسُ بِصَوْتٍ عَظِيمٍ: «أَنْتَ تَهْذِي يَا بُولُسُ! ٱلْكُتُبُ ٱلْكَثِيرَةُ تُحَوِّلُكَ إِلَى ٱلْهَذَيَانِ!». ٢٤ 24
೨೪ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.
فَقَالَ: «لَسْتُ أَهْذِي أَيُّهَا ٱلْعَزِيزُ فَسْتُوسُ، بَلْ أَنْطِقُ بِكَلِمَاتِ ٱلصِّدْقِ وَٱلصَّحْوِ. ٢٥ 25
೨೫ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.
لِأَنَّهُ مِنْ جِهَةِ هَذِهِ ٱلْأُمُورِ، عَالِمٌ ٱلْمَلِكُ ٱلَّذِي أُكَلِّمُهُ جِهَارًا، إِذْ أَنَا لَسْتُ أُصَدِّقُ أَنْ يَخْفَى عَلَيْهِ شَيْءٌ مِنْ ذَلِكَ، لِأَنَّ هَذَا لَمْ يُفْعَلْ فِي زَاوِيَةٍ. ٢٦ 26
೨೬ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.
أَتُؤْمِنُ أَيُّهَا ٱلْمَلِكُ أَغْرِيبَاسُ بِٱلْأَنْبِيَاءِ؟ أَنَا أَعْلَمُ أَنَّكَ تُؤْمِنُ». ٢٧ 27
೨೭ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.
فَقَالَ أَغْرِيبَاسُ لِبُولُسَ: «بِقَلِيلٍ تُقْنِعُنِي أَنْ أَصِيرَ مَسِيحِيًّا!». ٢٨ 28
೨೮ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು
فَقَالَ بُولُسُ: «كُنْتُ أُصَلِّي إِلَى ٱللهِ أَنَّهُ بِقَلِيلٍ وَبِكَثِيرٍ، لَيْسَ أَنْتَ فَقَطْ، بَلْ أَيْضًا جَمِيعُ ٱلَّذِينَ يَسْمَعُونَنِي ٱلْيَوْمَ، يَصِيرُونَ هَكَذَا كَمَا أَنَا، مَا خَلَا هَذِهِ ٱلْقُيُودَ». ٢٩ 29
೨೯ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.
فَلَمَّا قَالَ هَذَا قَامَ ٱلْمَلِكُ وَٱلْوَالِي وَبَرْنِيكِي وَٱلْجَالِسُونَ مَعَهُمْ، ٣٠ 30
೩೦ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;
وَٱنْصَرَفُوا وَهُمْ يُكَلِّمُونَ بَعْضُهُمْ بَعْضًا قَائِلِينَ: «إِنَّ هَذَا ٱلْإِنْسَانَ لَيْسَ يَفْعَلُ شَيْئًا يَسْتَحِقُّ ٱلْمَوْتَ أَوِ ٱلْقُيُودَ». ٣١ 31
೩೧“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
وَقَالَ أَغْرِيبَاسُ لِفَسْتُوسَ: «كَانَ يُمْكِنُ أَنْ يُطْلَقَ هَذَا ٱلْإِنْسَانُ لَوْ لَمْ يَكُنْ قَدْ رَفَعَ دَعْوَاهُ إِلَى قَيْصَرَ». ٣٢ 32
೩೨ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.

< أعمال 26 >