< أعمال 8 >
وَكَانَ شَاوُلُ رَاضِيًا بِقَتْلِهِ. وَحَدَثَ فِي ذَلِكَ ٱلْيَوْمِ ٱضْطِهَادٌ عَظِيمٌ عَلَى ٱلْكَنِيسَةِ ٱلَّتِي فِي أُورُشَلِيمَ، فَتَشَتَّتَ ٱلْجَمِيعُ فِي كُوَرِ ٱلْيَهُودِيَّةِ وَٱلسَّامِرَةِ، مَا عَدَا ٱلرُّسُلَ. | ١ 1 |
೧ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
وَحَمَلَ رِجَالٌ أَتْقِيَاءُ ٱسْتِفَانُوسَ وَعَمِلُوا عَلَيْهِ مَنَاحَةً عَظِيمَةً. | ٢ 2 |
೨ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
وَأَمَّا شَاوُلُ فَكَانَ يَسْطُو عَلَى ٱلْكَنِيسَةِ، وَهُوَ يَدْخُلُ ٱلْبُيُوتَ وَيَجُرُّ رِجَالًا وَنِسَاءً وَيُسَلِّمُهُمْ إِلَى ٱلسِّجْنِ. | ٣ 3 |
೩ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.
فَٱلَّذِينَ تَشَتَّتُوا جَالُوا مُبَشِّرِينَ بِٱلْكَلِمَةِ. | ٤ 4 |
೪ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
فَٱنْحَدَرَ فِيلُبُّسُ إِلَى مَدِينَةٍ مِنَ ٱلسَّامِرَةِ وَكَانَ يَكْرِزُ لَهُمْ بِٱلْمَسِيحِ. | ٥ 5 |
೫ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.
وَكَانَ ٱلْجُمُوعُ يُصْغُونَ بِنَفْسٍ وَاحِدَةٍ إِلَى مَا يَقُولُهُ فِيلُبُّسُ عِنْدَ ٱسْتِمَاعِهِمْ وَنَظَرِهِمُ ٱلْآيَاتِ ٱلَّتِي صَنَعَهَا، | ٦ 6 |
೬ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
لِأَنَّ كَثِيرِينَ مِنَ ٱلَّذِينَ بِهِمْ أَرْوَاحٌ نَجِسَةٌ كَانَتْ تَخْرُجُ صَارِخَةً بِصَوْتٍ عَظِيمٍ. وَكَثِيرُونَ مِنَ ٱلْمَفْلُوجِينَ وَٱلْعُرْجِ شُفُوا. | ٧ 7 |
೭ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
فَكَانَ فَرَحٌ عَظِيمٌ فِي تِلْكَ ٱلْمَدِينَةِ. | ٨ 8 |
೮ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
وَكَانَ قَبْلًا فِي ٱلْمَدِينَةِ رَجُلٌ ٱسْمُهُ سِيمُونُ، يَسْتَعْمِلُ ٱلسِّحْرَ وَيُدْهِشُ شَعْبَ ٱلسَّامِرَةِ، قَائِلًا إِنَّهُ شَيْءٌ عَظِيمٌ! | ٩ 9 |
೯ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
وَكَانَ ٱلْجَمِيعُ يَتْبَعُونَهُ مِنَ ٱلصَّغِيرِ إِلَى ٱلْكَبِيرِ قَائِلِينَ: «هَذَا هُوَ قُوَّةُ ٱللهِ ٱلْعَظِيمَةُ». | ١٠ 10 |
೧೦ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.
وَكَانُوا يَتْبَعُونَهُ لِكَوْنِهِمْ قَدِ ٱنْدَهَشُوا زَمَانًا طَوِيلًا بِسِحْرِهِ. | ١١ 11 |
೧೧ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
وَلَكِنْ لَمَّا صَدَّقُوا فِيلُبُّسَ وَهُوَ يُبَشِّرُ بِٱلْأُمُورِ ٱلْمُخْتَصَّةِ بِمَلَكُوتِ ٱللهِ وَبِٱسْمِ يَسُوعَ ٱلْمَسِيحِ، ٱعْتَمَدُوا رِجَالًا وَنِسَاءً. | ١٢ 12 |
೧೨ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
وَسِيمُونُ أَيْضًا نَفْسُهُ آمَنَ. وَلَمَّا ٱعْتَمَدَ كَانَ يُلَازِمُ فِيلُبُّسَ، وَإِذْ رَأَى آيَاتٍ وَقُوَّاتٍ عَظِيمَةً تُجْرَى ٱنْدَهَشَ. | ١٣ 13 |
೧೩ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
وَلَمَّا سَمِعَ ٱلرُّسُلُ ٱلَّذِينَ فِي أُورُشَلِيمَ أَنَّ ٱلسَّامِرَةَ قَدْ قَبِلَتْ كَلِمَةَ ٱللهِ، أَرْسَلُوا إِلَيْهِمْ بُطْرُسَ وَيُوحَنَّا، | ١٤ 14 |
೧೪ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
ٱللَّذَيْنِ لَمَّا نَزَلَا صَلَّيَا لِأَجْلِهِمْ لِكَيْ يَقْبَلُوا ٱلرُّوحَ ٱلْقُدُسَ، | ١٥ 15 |
೧೫ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
لِأَنَّهُ لَمْ يَكُنْ قَدْ حَلَّ بَعْدُ عَلَى أَحَدٍ مِنْهُمْ، غَيْرَ أَنَّهُمْ كَانُوا مُعْتَمِدِينَ بِٱسْمِ ٱلرَّبِّ يَسُوعَ. | ١٦ 16 |
೧೬ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
حِينَئِذٍ وَضَعَا ٱلْأَيَادِيَ عَلَيْهِمْ فَقَبِلُوا ٱلرُّوحَ ٱلْقُدُسَ. | ١٧ 17 |
೧೭ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
وَلَمَّا رَأَى سِيمُونُ أَنَّهُ بِوَضْعِ أَيْدِي ٱلرُّسُلِ يُعْطَى ٱلرُّوحُ ٱلْقُدُسُ قَدَّمَ لَهُمَا دَرَاهِمَ | ١٨ 18 |
೧೮ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
قَائِلًا: «أَعْطِيَانِي أَنَا أَيْضًا هَذَا ٱلسُّلْطَانَ، حَتَّى أَيُّ مَنْ وَضَعْتُ عَلَيْهِ يَدَيَّ يَقْبَلُ ٱلرُّوحَ ٱلْقُدُسَ». | ١٩ 19 |
೧೯“ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.
فَقَالَ لَهُ بُطْرُسُ: «لِتَكُنْ فِضَّتُكَ مَعَكَ لِلْهَلَاكِ، لِأَنَّكَ ظَنَنْتَ أَنْ تَقْتَنِيَ مَوْهِبَةَ ٱللهِ بِدَرَاهِمَ! | ٢٠ 20 |
೨೦ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
لَيْسَ لَكَ نَصِيبٌ وَلَا قُرْعَةٌ فِي هَذَا ٱلْأَمْرِ، لِأَنَّ قَلْبَكَ لَيْسَ مُسْتَقِيمًا أَمَامَ ٱللهِ. | ٢١ 21 |
೨೧ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
فَتُبْ مِنْ شَرِّكَ هَذَا، وَٱطْلُبْ إِلَى ٱللهِ عَسَى أَنْ يُغْفَرَ لَكَ فِكْرُ قَلْبِكَ، | ٢٢ 22 |
೨೨ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
لِأَنِّي أَرَاكَ فِي مَرَارَةِ ٱلْمُرِّ وَرِبَاطِ ٱلظُّلْمِ». | ٢٣ 23 |
೨೩ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು
فَأَجَابَ سِيمُونُ وَقَالَ: «ٱطْلُبَا أَنْتُمَا إِلَى ٱلرَّبِّ مِنْ أَجْلِي لِكَيْ لَا يَأْتِيَ عَلَيَّ شَيْءٌ مِمَّا ذَكَرْتُمَا». | ٢٤ 24 |
೨೪ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.
ثُمَّ إِنَّهُمَا بَعْدَ مَا شَهِدَا وَتَكَلَّمَا بِكَلِمَةِ ٱلرَّبِّ، رَجَعَا إِلَى أُورُشَلِيمَ وَبَشَّرَا قُرًى كَثِيرَةً لِلسَّامِرِيِّينَ. | ٢٥ 25 |
೨೫ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
ثُمَّ إِنَّ مَلَاكَ ٱلرَّبِّ كَلَّمَ فِيلُبُّسَ قَائِلًا: «قُمْ وَٱذْهَبْ نَحْوَ ٱلْجَنُوبِ، عَلَى ٱلطَّرِيقِ ٱلْمُنْحَدِرَةِ مِنْ أُورُشَلِيمَ إِلَى غَزَّةَ ٱلَّتِي هِيَ بَرِّيَّةٌ». | ٢٦ 26 |
೨೬ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
فَقَامَ وَذَهَبَ. وَإِذَا رَجُلٌ حَبَشِيٌّ خَصِيٌّ، وَزِيرٌ لِكَنْدَاكَةَ مَلِكَةِ ٱلْحَبَشَةِ، كَانَ عَلَى جَمِيعِ خَزَائِنِهَا. فَهَذَا كَانَ قَدْ جَاءَ إِلَى أُورُشَلِيمَ لِيَسْجُدَ. | ٢٧ 27 |
೨೭ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
وَكَانَ رَاجِعًا وَجَالِسًا عَلَى مَرْكَبَتِهِ وَهُوَ يَقْرَأُ ٱلنَّبِيَّ إِشَعْيَاءَ. | ٢٨ 28 |
೨೮ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
فَقَالَ ٱلرُّوحُ لِفِيلُبُّسَ: «تَقَدَّمْ وَرَافِقْ هَذِهِ ٱلْمَرْكَبَةَ». | ٢٩ 29 |
೨೯ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.
فَبَادَرَ إِلَيْهِ فِيلُبُّسُ، وَسَمِعَهُ يَقْرَأُ ٱلنَّبِيَّ إِشَعْيَاءَ، فَقَالَ: «أَلَعَلَّكَ تَفْهَمُ مَا أَنْتَ تَقْرَأُ؟». | ٣٠ 30 |
೩೦ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
فَقَالَ: «كَيْفَ يُمْكِنُنِي إِنْ لَمْ يُرْشِدْنِي أَحَدٌ؟». وَطَلَبَ إِلَى فِيلُبُّسَ أَنْ يَصْعَدَ وَيَجْلِسَ مَعَهُ. | ٣١ 31 |
೩೧ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
وَأَمَّا فَصْلُ ٱلْكِتَابِ ٱلَّذِي كَانَ يَقْرَأُهُ فَكَانَ هَذَا: «مِثْلَ شَاةٍ سِيقَ إِلَى ٱلذَّبْحِ، وَمِثْلَ خَرُوفٍ صَامِتٍ أَمَامَ ٱلَّذِي يَجُزُّهُ هَكَذَا لَمْ يَفْتَحْ فَاهُ. | ٣٢ 32 |
೩೨ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
فِي تَوَاضُعِهِ ٱنْتُزِعَ قَضَاؤُهُ، وَجِيلُهُ مَنْ يُخْبِرُ بِهِ؟ لِأَنَّ حَيَاتَهُ تُنْتَزَعُ مِنَ ٱلْأَرْضِ». | ٣٣ 33 |
೩೩ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.
فَأَجَابَ ٱلْخَصِيُّ فِيلُبُّسَ وَقَالَ: «أَطْلُبُ إِلَيْكَ: عَنْ مَنْ يَقُولُ ٱلنَّبِيُّ هَذَا؟ عَنْ نَفْسِهِ أَمْ عَنْ وَاحِدٍ آخَرَ؟». | ٣٤ 34 |
೩೪ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
فَفَتَحَ فِيلُبُّسُ فَاهُ وٱبْتَدَأَ مِنْ هَذَا ٱلْكِتَابِ فَبَشِّرَهُ بِيَسُوعَ. | ٣٥ 35 |
೩೫ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
وَفِيمَا هُمَا سَائِرَانِ فِي ٱلطَّرِيقِ أَقْبَلَا عَلَى مَاءٍ، فَقَالَ ٱلْخَصِيُّ: «هُوَذَا مَاءٌ. مَاذَا يَمْنَعُ أَنْ أَعْتَمِدَ؟». | ٣٦ 36 |
೩೬ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
فَقَالَ فِيلُبُّسُ: «إِنْ كُنْتَ تُؤْمِنُ مِنْ كُلِّ قَلْبِكَ يَجُوزُ». فَأَجَابَ وَقَالَ: «أَنَا أُومِنُ أَنَّ يَسُوعَ ٱلْمَسِيحَ هُوَ ٱبْنُ ٱللهِ». | ٣٧ 37 |
೩೭ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
فَأَمَرَ أَنْ تَقِفَ ٱلْمَرْكَبَةُ، فَنَزَلَا كِلَاهُمَا إِلَى ٱلْمَاءِ، فِيلُبُّسُ وَٱلْخَصِيُّ، فَعَمَّدَهُ. | ٣٨ 38 |
೩೮ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
وَلَمَّا صَعِدَا مِنَ ٱلْمَاءِ، خَطِفَ رُوحُ ٱلرَّبِّ فِيلُبُّسَ، فَلَمْ يُبْصِرْهُ ٱلْخَصِيُّ أَيْضًا، وَذَهَبَ فِي طَرِيقِهِ فَرِحًا. | ٣٩ 39 |
೩೯ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
وَأَمَّا فِيلُبُّسُ فَوُجِدَ فِي أَشْدُودَ. وَبَيْنَمَا هُوَ مُجْتَازٌ، كَانَ يُبَشِّرُ جَمِيعَ ٱلْمُدُنِ حَتَّى جَاءَ إِلَى قَيْصَرِيَّةَ. | ٤٠ 40 |
೪೦ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.