< عَامُوس 2 >

هَكَذَا قَالَ ٱلرَّبُّ: «مِنْ أَجْلِ ذُنُوبِ مُوآبَ ٱلثَّلَاثَةِ وَٱلْأَرْبَعَةِ لَا أَرْجِعُ عَنْهُ، لِأَنَّهُمْ أَحْرَقُوا عِظَامَ مَلِكِ أَدُومَ كِلْسًا. ١ 1
ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.
فَأُرْسِلُ نَارًا عَلَى مُوآبَ فَتَأْكُلُ قُصُورَ قَرْيُوتَ، وَيَمُوتُ مُوآبُ بِضَجِيجٍ، بِجَلَبَةٍ، بِصَوْتِ ٱلْبُوقِ. ٢ 2
ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಕೆರೀಯೋತಿನ ಕೋಟೆಗಳನ್ನು ದಹಿಸಿಬಿಡುವುದು. ಮೋವಾಬು ಆರ್ಭಟದ ಮತ್ತು ತುತೂರಿಯ ಧ್ವನಿಯ ಸಂಗಡ ಗಲಿಬಿಲಿಯಲ್ಲಿ ಸಾಯುವುದು.
وَأَقْطَعُ ٱلْقَاضِيَ مِنْ وَسَطِهَا، وَأَقْتُلُ جَمِيعَ رُؤَسَائِهَا مَعَهُ، قَالَ ٱلرَّبُّ». ٣ 3
ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
هَكَذَا قَالَ ٱلرَّبُّ: «مِنْ أَجْلِ ذُنُوبِ يَهُوذَا ٱلثَّلَاثَةِ وَٱلْأَرْبَعَةِ لَا أَرْجِعُ عَنْهُ، لِأَنَّهُمْ رَفَضُوا نَامُوسَ ٱللهِ وَلَمْ يَحْفَظُوا فَرَائِضَهُ، وَأَضَلَّتْهُمْ أَكَاذِيبُهُمُ ٱلَّتِي سَارَ آبَاؤُهُمْ وَرَاءَهَا. ٤ 4
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.
فَأُرْسِلُ نَارًا عَلَى يَهُوذَا فَتَأْكُلُ قُصُورَ أُورُشَلِيمَ». ٥ 5
ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”
هَكَذَا قَالَ ٱلرَّبُّ: «مِنْ أَجْلِ ذُنُوبِ إِسْرَائِيلَ ٱلثَّلَاثَةِ وَٱلْأَرْبَعَةِ لَا أَرْجِعُ عَنْهُ، لِأَنَّهُمْ بَاعُوا ٱلْبَارَّ بِٱلْفِضَّةِ، وَٱلْبَائِسَ لِأَجْلِ نَعْلَيْنِ. ٦ 6
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.
ٱلَّذِينَ يَتَهَمَّمُونَ تُرَابَ ٱلْأَرْضِ عَلَى رُؤُوسِ ٱلْمَسَاكِينِ، وَيَصُدُّونَ سَبِيلَ ٱلْبَائِسِينَ، وَيَذْهَبُ رَجُلٌ وَأَبُوهُ إِلَى صَبِيَّةٍ وَاحِدَةٍ حَتَّى يُدَنِّسُوا ٱسْمَ قُدْسِي. ٧ 7
ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ.
وَيَتَمَدَّدُونَ عَلَى ثِيَابٍ مَرْهُونَةٍ بِجَانِبِ كُلِّ مَذْبَحٍ، وَيَشْرَبُونَ خَمْرَ ٱلْمُغَرَّمِينَ فِي بَيْتِ آلِهَتِهِمْ. ٨ 8
ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.
«وَأَنَا قَدْ أَبَدْتُ مِنْ أَمَامِهِمِ ٱلْأَمُورِيَّ ٱلَّذِي قَامَتُهُ مِثْلُ قَامَةِ ٱلْأَرْزِ، وَهُوَ قَوِيٌّ كَٱلْبَلُّوطِ. أَبَدْتُ ثَمَرَهُ مِنْ فَوْقُ، وَأُصُولَهُ مِنْ تَحْتُ. ٩ 9
“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.
وَأَنَا أَصْعَدْتُكُمْ مِنْ أَرْضِ مِصْرَ وَسِرْتُ بِكُمْ فِي ٱلْبَرِّيَّةِ أَرْبَعِينَ سَنَةً لِتَرِثُوا أَرْضَ ٱلْأَمُورِيِّ. ١٠ 10
ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.
وَأَقَمْتُ مِنْ بَنِيكُمْ أَنْبِيَاءَ، وَمِنْ فِتْيَانِكُمْ نَذِيرِينَ. أَلَيْسَ هَكَذَا يَا بَنِي إِسْرَائِيلَ، يَقُولُ ٱلرَّبُّ؟ ١١ 11
“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.
لَكِنَّكُمْ سَقَيْتُمُ ٱلنَّذِيرِينَ خَمْرًا، وَأَوْصَيْتُمُ ٱلْأَنْبِيَاءَ قَائِلِينَ: لَا تَتَنَبَّأُوا. ١٢ 12
“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.
«هَأَنَذَا أَضْغَطُ مَا تَحْتَكُمْ كَمَا تَضْغَطُ ٱلْعَجَلَةُ ٱلْمَلْآنَةُ حِزَمًا. ١٣ 13
“ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
وَيَبِيدُ ٱلْمَنَاصُ عَنِ ٱلسَّرِيعِ، وَٱلْقَوِيُّ لَا يُشَدِّدُ قُوَّتَهُ، وَٱلْبَطَلُ لَا يُنَجِّي نَفْسَهُ، ١٤ 14
ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
وَمَاسِكُ ٱلْقَوْسِ لَا يَثْبُتُ، وَسَرِيعُ ٱلرِّجْلَيْنِ لَا يَنْجُو، وَرَاكِبُ ٱلْخَيْلِ لَا يُنَجِّي نَفْسَهُ. ١٥ 15
ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
وَٱلْقَوِيُّ ٱلْقَلْبِ بَيْنَ ٱلْأَبْطَالِ يَهْرُبُ عُرْيَانًا فِي ذَلِكَ ٱلْيَوْمِ، يَقُولُ ٱلرَّبُّ». ١٦ 16
ಶೂರರಲ್ಲಿ ಧೈರ್ಯ ಹೃದಯವುಳ್ಳವನು, ಆ ದಿನದಲ್ಲಿ ಬೆತ್ತಲೆಯಾಗಿ ಓಡಿಹೋಗುವನು,” ಎಂದು ಯೆಹೋವ ದೇವರು ಹೇಳುತ್ತಾರೆ.

< عَامُوس 2 >