< عَامُوس 7 >

هَكَذَا أَرَانِي ٱلسَّيِّدُ ٱلرَّبُّ وَإِذَا هُوَ يَصْنَعُ جَرَادًا فِي أَوَّلِ طُلُوعِ خِلْفِ ٱلْعُشْبِ. وَإِذَا خِلْفُ عُشْبٍ بَعْدَ جِزَازِ ٱلْمَلِكِ. ١ 1
ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು.
وَحَدَثَ لَمَّا فَرَغَ مِنْ أَكْلِ عُشْبِ ٱلْأَرْضِ أَنِّي قُلْتُ: «أَيُّهَا ٱلسَّيِّدُ ٱلرَّبُّ، ٱصْفَحْ! كَيْفَ يَقُومُ يَعْقُوبُ؟ فَإِنَّهُ صَغِيرٌ!». ٢ 2
ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.
فَنَدِمَ ٱلرَّبُّ عَلَى هَذَا. «لَا يَكُونُ» قَالَ ٱلرَّبُّ. ٣ 3
ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.
هَكَذَا أَرَانِي ٱلسَّيِّدُ ٱلرَّبُّ، وَإِذَا ٱلسَّيِّدُ ٱلرَّبُّ قَدْ دَعَا لِلْمُحَاكَمَةِ بِٱلنَّارِ، فَأَكَلَتِ ٱلْغَمْرَ ٱلْعَظِيمَ وَأَكَلَتِ ٱلْحَقْلَ. ٤ 4
ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
فَقُلْتُ: «أَيُّهَا ٱلسَّيِّدُ ٱلرَّبُّ، كُفَّ! كَيْفَ يَقُومُ يَعْقُوبُ؟ فَإِنَّهُ صَغِيرٌ!». ٥ 5
ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.
فَنَدِمَ ٱلرَّبُّ عَلَى هَذَا.«فَهُوَ أَيْضًا لَا يَكُونُ» قَالَ ٱلسَّيِّدُ ٱلرَّبُّ. ٦ 6
ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.
هَكَذَا أَرَانِي وَإِذَا ٱلرَّبُّ وَاقِفٌ عَلَى حَائِطٍ قَائِمٍ وَفِي يَدِهِ زِيجٌ. ٧ 7
ಆತನು ನನಗೆ ಹೀಗೆ ತೋರಿಸಿದನು. ಯೆಹೋವ ದೇವರು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದರು. ಆತನ ಕೈಯಲ್ಲಿ ನೂಲುಗುಂಡು ಇತ್ತು.
فَقَالَ لِي ٱلرَّبُّ: «مَا أَنْتَ رَاءٍ يَا عَامُوسُ؟» فَقُلْتُ: «زِيجًا». فَقَالَ ٱلسَّيِّدُ: «هَأَنَذَا وَاضِعٌ زِيجًا فِي وَسَطِ شَعْبِي إِسْرَائِيلَ. لَا أَعُودُ أَصْفَحُ لَهُ بَعْدُ. ٨ 8
ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು. ಆಗ ನಾನು, “ನೂಲುಗುಂಡು,” ಎಂದೆನು. ನಂತರ ಯೆಹೋವ ದೇವರು ಹೇಳಿದ್ದೇನೆಂದರೆ, “ನೋಡು, ನಾನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಮೇಲೆ ಅವರನ್ನು ದಾಟಿ ಹೋಗುವುದಿಲ್ಲ.
فَتُقْفِرُ مُرْتَفَعَاتُ إِسْحَاقَ وَتَخْرَبُ مَقَادِسُ إِسْرَائِيلَ، وَأَقُومُ عَلَى بَيْتِ يَرُبْعَامَ بِٱلسَّيْفِ». ٩ 9
“ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”
فَأَرْسَلَ أَمَصْيَا كَاهِنُ بَيْتِ إِيلَ إِلَى يَرُبْعَامَ مَلِكِ إِسْرَائِيلَ قَائِلًا: «قَدْ فَتَنَ عَلَيْكَ عَامُوسُ فِي وَسَطِ بَيْتِ إِسْرَائِيلَ. لَا تَقْدِرُ ٱلْأَرْضُ أَنْ تُطِيقَ كُلَّ أَقْوَالِهِ. ١٠ 10
ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
لِأَنَّهُ هَكَذَا قَالَ عَامُوسُ: يَمُوتُ يَرُبْعَامُ بِٱلسَّيْفِ، وَيُسْبَى إِسْرَائِيلُ عَنْ أَرْضِهِ». ١١ 11
ಆಮೋಸನು ಹೇಳಿದ್ದೇನೆಂದರೆ: “ಯಾರೊಬ್ಬಾಮನು ಖಡ್ಗದಿಂದ ಸಾಯುವನೆಂದೂ ಇಸ್ರಾಯೇಲರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಕರೆದೊಯ್ಯುವರು.”
فَقَالَ أَمَصْيَا لِعَامُوسَ: «أَيُّهَا ٱلرَّائِي، ٱذْهَبِ ٱهْرُبْ إِلَى أَرْضِ يَهُوذَا وَكُلْ هُنَاكَ خُبْزًا وَهُنَاكَ تَنَبَّأْ. ١٢ 12
ಅನಂತರ ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ: “ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿ ದುಡಿದು ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.
وَأَمَّا بَيْتُ إِيلَ فَلَا تَعُدْ تَتَنَبَّأُ فِيهَا بَعْدُ، لِأَنَّهَا مَقْدِسُ ٱلْمَلِكِ وَبَيْتُ ٱلْمُلْكِ». ١٣ 13
ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ. ಏಕೆಂದರೆ ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ, ರಾಜ್ಯದ ಆಲಯವಾಗಿಯೂ ಇದೆ,” ಎಂದನು.
فَأَجَابَ عَامُوسُ وَقَالَ لِأَمَصْيَا: «لَسْتُ أَنَا نَبِيًّا وَلَا أَنَا ٱبْنُ نَبِيٍّ، بَلْ أَنَا رَاعٍ وَجَانِي جُمَّيْزٍ. ١٤ 14
ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.
فَأَخَذَنِي ٱلرَّبُّ مِنْ وَرَاءِ ٱلضَّأْنِ وَقَالَ لِي ٱلرَّبُّ: ٱذْهَبْ تَنَبَّأْ لِشَعْبِي إِسْرَائِيلَ. ١٥ 15
ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”
«فَٱلْآنَ ٱسْمَعْ قَوْلَ ٱلرَّبِّ: أَنْتَ تَقُولُ: لَا تَتَنَبَّأْ عَلَى إِسْرَائِيلَ وَلَا تَتَكَلَّمْ عَلَى بَيْتِ إِسْحَاقَ. ١٦ 16
ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.
لِذَلِكَ هَكَذَا قَالَ ٱلرَّبُّ: ٱمْرَأَتُكَ تَزْنِي فِي ٱلْمَدِينَةِ، وَبَنُوكَ وَبَنَاتُكَ يَسْقُطُونَ بِٱلسَّيْفِ، وَأَرْضُكَ تُقْسَمُ بِٱلْحَبْلِ، وَأَنْتَ تَمُوتُ فِي أَرْضٍ نَجِسَةٍ، وَإِسْرَائِيلُ يُسْبَى سَبْيًا عَنْ أَرْضِهِ». ١٧ 17
ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’”

< عَامُوس 7 >