< دَانِيآل 2 >

وَفِي ٱلسَّنَةِ ٱلثَّانِيَةِ مِنْ مُلْكِ نَبُوخَذْنَصَّرَ، حَلَمَ نَبُوخَذْنَصَّرُ أَحْلَامًا، فَٱنْزَعَجَتْ رُوحُهُ وَطَارَ عَنْهُ نَوْمُهُ. ١ 1
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.
فَأَمَرَ ٱلْمَلِكُ بِأَنْ يُسْتَدْعَى ٱلْمَجُوسُ وَٱلسَّحَرَةُ وَٱلْعَرَّافُونَ وَٱلْكَلْدَانِيُّونَ لِيُخْبِرُوا ٱلْمَلِكَ بِأَحْلَامِهِ. فَأَتَوْا وَوَقَفُوا أَمَامَ ٱلْمَلِكِ. ٢ 2
ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
فَقَالَ لَهُمُ ٱلْمَلِكُ: «قَدْ حَلَمْتُ حُلْمًا وَٱنْزَعَجَتْ رُوحِي لِمَعْرِفَةِ ٱلْحُلْمِ». ٣ 3
ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.
فَكَلَّمَ ٱلْكَلْدَانِيُّونَ ٱلْمَلِكَ بِٱلْأَرَامِيَّةِ: «عِشْ أَيُّهَا ٱلْمَلِكُ إِلَى ٱلْأَبَدِ. أَخْبِرْ عَبِيدَكَ بِٱلْحُلْمِ فَنُبَيِّنَ تَعْبِيرَهُ». ٤ 4
ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.
فَأَجَابَ ٱلْمَلِكُ وَقَالَ لِلْكَلْدَانِيِّينَ: «قَدْ خَرَجَ مِنِّي ٱلْقَوْلُ: إِنْ لَمْ تُنْبِئُونِي بِٱلْحُلْمِ وَبِتَعْبِيرِهِ، تُصَيَّرُونَ إِرْبًا إِرْبًا وَتُجْعَلُ بُيُوتُكُمْ مَزْبَلَةً. ٥ 5
ಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
وَإِنْ بَيَّنْتُمُ ٱلْحُلْمَ وَتَعْبِيرَهُ، تَنَالُونَ مِنْ قِبَلِي هَدَايَا وَحَلَاوِينَ وَإِكْرَامًا عَظِيمًا. فَبَيِّنُوا لِي ٱلْحُلْمَ وَتَعْبِيرَهُ». ٦ 6
ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.
فَأَجَابُوا ثَانِيَةً وَقَالُوا: «لِيُخْبِرِ ٱلْمَلِكُ عَبِيدَهُ بِٱلْحُلْمِ فَنُبَيِّنَ تَعْبِيرَهُ». ٧ 7
ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು.
أَجَابَ ٱلْمَلِكُ وَقَالَ: «إِنِّي أَعْلَمُ يَقِينًا أَنَّكُمْ تَكْتَسِبُونَ وَقْتًا، إِذْ رَأَيْتُمْ أَنَّ ٱلْقَوْلَ قَدْ خَرَجَ مِنِّي ٨ 8
ಆಗ ಅರಸನು ಉತ್ತರವಾಗಿ, “ನಾನು ಇದನ್ನು ದೃಢವಾಗಿ ನಿರ್ಧರಿಸಿದ್ದೇನೆಂದು ಹೇಳಿದ್ದರಿಂದ ನೀವು ಸಮಯ ಉಳಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಿದ್ದೀರೆಂದು ನನಗೆ ನಿಶ್ಚಯವಾಗಿದೆ.
بِأَنَّهُ إِنْ لَمْ تُنْبِئُونِي بِٱلْحُلْمِ فَقَضَاؤُكُمْ وَاحِدٌ. لِأَنَّكُمْ قَدِ ٱتَّفَقْتُمْ عَلَى كَلَامٍ كَذِبٍ وَفَاسِدٍ لِتَتَكَلَّمُوا بِهِ قُدَّامِي إِلَى أَنْ يَتَحَوَّلَ ٱلْوَقْتُ. فَأَخْبِرُونِي بِٱلْحُلْمِ، فَأَعْلَمَ أَنَّكُمْ تُبَيِّنُونَ لِي تَعْبِيرَهُ». ٩ 9
ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.
أَجَابَ ٱلْكَلْدَانِيُّونَ قُدَّامَ ٱلْمَلِكِ وَقَالُوا: «لَيْسَ عَلَى ٱلْأَرْضِ إِنْسَانٌ يَسْتَطِيعُ أَنْ يُبَيِّنَ أَمْرَ ٱلْمَلِكِ. لِذَلِكَ لَيْسَ مَلِكٌ عَظِيمٌ ذُو سُلْطَانٍ سَأَلَ أَمْرًا مِثْلَ هَذَا مِنْ مَجُوسِيٍّ أَوْ سَاحِرٍ أَوْ كَلْدَانِيٍّ. ١٠ 10
ಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
وَٱلْأَمْرُ ٱلَّذِي يَطْلُبُهُ ٱلْمَلِكُ عَسِرٌ، وَلَيْسَ آخَرُ يُبَيِّنُهُ قُدَّامَ ٱلْمَلِكِ غَيْرَ ٱلْآلِهَةِ ٱلَّذِينَ لَيْسَتْ سُكْنَاهُمْ مَعَ ٱلْبَشَرِ». ١١ 11
ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”
لِأَجْلِ ذَلِكَ غَضِبَ ٱلْمَلِكُ وَٱغْتَاظَ جِدًّا وَأَمَرَ بِإِبَادَةِ كُلِّ حُكَمَاءِ بَابِلَ. ١٢ 12
ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.
فَخَرَجَ ٱلْأَمْرُ، وَكَانَ ٱلْحُكَمَاءُ يُقْتَلُونَ. فَطَلَبُوا دَانِيآلَ وَأَصْحَابَهُ لِيَقْتُلُوهُمْ. ١٣ 13
ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
حِينَئِذٍ أَجَابَ دَانِيآلُ بِحِكْمَةٍ وَعَقْلٍ لِأَرْيُوخَ رَئِيسِ شُرَطِ ٱلْمَلِكِ ٱلَّذِي خَرَجَ لِيَقْتُلَ حُكَمَاءَ بَابِلَ، أَجَابَ وَقَالَ لِأَرْيُوخَ قَائِدِ ٱلْمَلِكِ: ١٤ 14
ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.
«لِمَاذَا ٱشْتَدَّ ٱلْأَمْرُ مِنْ قِبَلِ ٱلْمَلِكِ؟» حِينَئِذٍ أَخْبَرَ أَرْيُوخُ دَانِيآلَ بِٱلْأَمْرِ. ١٥ 15
ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕನಿಗೆ ಉತ್ತರವಾಗಿ, “ಅರಸನಿಂದ ಇಂಥ ಕಠಿಣವಾದ ಆಜ್ಞೆ ಏಕೆ?” ಎಂದು ಕೇಳಲು, ಅರ್ಯೋಕನು ದಾನಿಯೇಲನಿಗೆ ಆ ಸಂಗತಿಯ ಬಗ್ಗೆ ವಿವರಿಸಿದನು.
فَدَخَلَ دَانِيآلُ وَطَلَبَ مِنَ ٱلْمَلِكِ أَنْ يُعْطِيَهُ وَقْتًا فَيُبَيِّنُ لِلْمَلِكِ ٱلتَّعْبِيرَ. ١٦ 16
ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.
حِينَئِذٍ مَضَى دَانِيآلُ إِلَى بَيْتِهِ، وَأَعْلَمَ حَنَنْيَا وَمِيشَائِيلَ وَعَزَرْيَا أَصْحَابَهُ بِٱلْأَمْرِ، ١٧ 17
ಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
لِيَطْلُبُوا ٱلْمَرَاحِمَ مِنْ قِبَلِ إِلَهِ ٱلسَّمَاوَاتِ مِنْ جِهَةِ هَذَا ٱلسِّرِّ، لِكَيْ لَا يَهْلِكَ دَانِيآلُ وَأَصْحَابُهُ مَعَ سَائِرِ حُكَمَاءِ بَابِلَ. ١٨ 18
ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.
حِينَئِذٍ لِدَانِيآلَ كُشِفَ ٱلسِّرُّ فِي رُؤْيَا ٱللَّيْلِ. فَبَارَكَ دَانِيآلُ إِلَهَ ٱلسَّمَاوَاتِ. ١٩ 19
ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,
أَجَابَ دَانِيآلُ وَقَالَ: «لِيَكُنِ ٱسْمُ ٱللهِ مُبَارَكًا مِنَ ٱلْأَزَلِ وَإِلَى ٱلْأَبَدِ، لِأَنَّ لَهُ ٱلْحِكْمَةَ وَٱلْجَبَرُوتَ. ٢٠ 20
ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.
وَهُوَ يُغَيِّرُ ٱلْأَوْقَاتَ وَٱلْأَزْمِنَةَ. يَعْزِلُ مُلُوكًا وَيُنَصِّبُ مُلُوكًا. يُعْطِي ٱلْحُكَمَاءَ حِكْمَةً، وَيُعَلِّمُ ٱلْعَارِفِينَ فَهْمًا. ٢١ 21
ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.
هُوَ يَكْشِفُ ٱلْعَمَائِقَ وَٱلْأَسْرَارَ. يَعْلَمُ مَا هُوَ فِي ٱلظُّلْمَةِ، وَعِنْدَهُ يَسْكُنُ ٱلنُّورُ. ٢٢ 22
ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.
إِيَّاكَ يَا إِلَهَ آبَائِي أَحْمَدُ، وَأُسَبِّحُ ٱلَّذِي أَعْطَانِي ٱلْحِكْمَةَ وَٱلْقُوَّةَ وَأَعْلَمَنِي ٱلْآنَ مَا طَلَبْنَاهُ مِنْكَ، لِأَنَّكَ أَعْلَمْتَنَا أَمْرَ ٱلْمَلِكِ». ٢٣ 23
ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”
فَمِنْ أَجْلِ ذَلِكَ دَخَلَ دَانِيآلُ إِلَى أَرْيُوخَ ٱلَّذِي عَيَّنَهُ ٱلْمَلِكُ لِإِبَادَةِ حُكَمَاءِ بَابِلَ، مَضَى وَقَالَ لَهُ هَكَذَا: «لَا تُبِدْ حُكَمَاءَ بَابِلَ. أَدْخِلْنِي إِلَى قُدَّامِ ٱلْمَلِكِ فَأُبَيِّنَ لِلْمَلِكِ ٱلتَّعْبِيرَ». ٢٤ 24
ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.
حِينَئِذٍ دَخَلَ أَرْيُوخُ بِدَانِيآلَ إِلَى قُدَّامِ ٱلْمَلِكِ مُسْرِعًا وَقَالَ لَهُ هَكَذَا: «قَدْ وَجَدْتُ رَجُلًا مِنْ بَنِي سَبْيِ يَهُوذَا ٱلَّذِي يُعَرِّفُ ٱلْمَلِكَ بِٱلتَّعْبِيرِ». ٢٥ 25
ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು.
أَجَابَ ٱلْمَلِكُ وَقَالَ لِدَانِيآلَ، ٱلَّذِي ٱسْمُهُ بَلْطَشَاصَّرُ: «هَلْ تَسْتَطِيعُ أَنْتَ عَلَى أَنْ تُعَرِّفَنِي بِٱلْحُلْمِ ٱلَّذِي رَأَيْتُ، وَبِتَعْبِيرِهِ؟» ٢٦ 26
ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.
أَجَابَ دَانِيآلُ قُدَّامَ ٱلْمَلِكِ وَقَالَ: «ٱلسِّرُّ ٱلَّذِي طَلَبَهُ ٱلْمَلِكُ لَا تَقْدِرُ ٱلْحُكَمَاءُ وَلَا ٱلسَّحَرَةُ وَلَا ٱلْمَجُوسُ وَلَا ٱلْمُنَجِّمُونَ عَلَى أَنْ يُبَيِّنُوهُ لِلْمَلِكِ. ٢٧ 27
ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
لَكِنْ يُوجَدُ إِلَهٌ فِي ٱلسَّمَاوَاتِ كَاشِفُ ٱلْأَسْرَارِ، وَقَدْ عَرَّفَ ٱلْمَلِكَ نَبُوخَذْنَصَّرَ مَا يَكُونُ فِي ٱلْأَيَّامِ ٱلْأَخِيرَةِ. حُلْمُكَ وَرُؤْيَا رَأْسِكَ عَلَى فِرَاشِكَ هُوَ هَذَا: ٢٨ 28
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.
أَنْتَ يَا أَيُّهَا ٱلْمَلِكُ أَفْكَارُكَ عَلَى فِرَاشِكَ صَعِدَتْ إِلَى مَا يَكُونُ مِنْ بَعْدِ هَذَا، وَكَاشِفُ ٱلْأَسْرَارِ يُعَرِّفُكَ بِمَا يَكُونُ. ٢٩ 29
“ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.
أَمَّا أَنَا فَلَمْ يُكْشَفْ لِي هَذَا ٱلسِّرُّ لِحِكْمَةٍ فِيَّ أَكْثَرَ مِنْ كُلِّ ٱلْأَحْيَاءِ، وَلَكِنْ لِكَيْ يُعَرَّفَ ٱلْمَلِكُ بِٱلتَّعْبِيرِ، وَلِكَيْ تَعْلَمَ أَفْكَارَ قَلْبِكَ. ٣٠ 30
ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.
«أَنْتَ أَيُّهَا ٱلْمَلِكُ كُنْتَ تَنْظُرُ وَإِذَا بِتِمْثَالٍ عَظِيمٍ. هَذَا ٱلتِّمْثَالُ ٱلْعَظِيمُ ٱلْبَهِيُّ جِدًّا وَقَفَ قُبَالَتَكَ، وَمَنْظَرُهُ هَائِلٌ. ٣١ 31
“ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.
رَأْسُ هَذَا ٱلتِّمْثَالِ مِنْ ذَهَبٍ جَيِّدٍ. صَدْرُهُ وَذِرَاعَاهُ مِنْ فِضَّةٍ. بَطْنُهُ وَفَخْذَاهُ مِنْ نُحَاسٍ. ٣٢ 32
ಈ ಪ್ರತಿಮೆಯ ತಲೆಯು ಅಪ್ಪಟ ಬಂಗಾರದಿಂದಲೂ, ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ, ಅದರ ಹೊಟ್ಟೆಯು ಮತ್ತು ತೊಡೆಗಳು ಕಂಚಿನಿಂದಲೂ,
سَاقَاهُ مِنْ حَدِيدٍ. قَدَمَاهُ بَعْضُهُمَا مِنْ حَدِيدٍ وَٱلْبَعْضُ مِنْ خَزَفٍ. ٣٣ 33
ಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು.
كُنْتَ تَنْظُرُ إِلَى أَنْ قُطِعَ حَجَرٌ بِغَيْرِ يَدَيْنِ، فَضَرَبَ ٱلتِّمْثَالَ عَلَى قَدَمَيْهِ ٱللَّتَيْنِ مِنْ حَدِيدٍ وَخَزَفٍ فَسَحَقَهُمَا. ٣٤ 34
ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.
فَٱنْسَحَقَ حِينَئِذٍ ٱلْحَدِيدُ وَٱلْخَزَفُ وَٱلنُّحَاسُ وَٱلْفِضَّةُ وَٱلذَّهَبُ مَعًا، وَصَارَتْ كَعُصَافَةِ ٱلْبَيْدَرِ فِي ٱلصَّيْفِ، فَحَمَلَتْهَا ٱلرِّيحُ فَلَمْ يُوجَدْ لَهَا مَكَانٌ. أَمَّا ٱلْحَجَرُ ٱلَّذِي ضَرَبَ ٱلتِّمْثَالَ فَصَارَ جَبَلًا كَبِيرًا وَمَلَأَ ٱلْأَرْضَ كُلَّهَا. ٣٥ 35
ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
هَذَا هُوَ ٱلْحُلْمُ. فَنُخْبِرُ بِتَعْبِيرِهِ قُدَّامَ ٱلْمَلِكِ. ٣٦ 36
“ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.
«أَنْتَ أَيُّهَا ٱلْمَلِكُ مَلِكُ مُلُوكٍ، لِأَنَّ إِلَهَ ٱلسَّمَاوَاتِ أَعْطَاكَ مَمْلَكَةً وَٱقْتِدَارًا وَسُلْطَانًا وَفَخْرًا. ٣٧ 37
ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.
وَحَيْثُمَا يَسْكُنُ بَنُو ٱلْبَشَرِ وَوُحُوشُ ٱلْبَرِّ وَطُيُورُ ٱلسَّمَاءِ دَفَعَهَا لِيَدِكَ وَسَلَّطَكَ عَلَيْهَا جَمِيعِهَا. فَأَنْتَ هَذَا ٱلرَّأْسُ مِنْ ذَهَبٍ. ٣٨ 38
ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.
وَبَعْدَكَ تَقُومُ مَمْلَكَةٌ أُخْرَى أَصْغَرُ مِنْكَ وَمَمْلَكَةٌ ثَالِثَةٌ أُخْرَى مِنْ نُحَاسٍ فَتَتَسَلَّطُ عَلَى كُلِّ ٱلْأَرْضِ. ٣٩ 39
“ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.
وَتَكُونُ مَمْلَكَةٌ رَابِعَةٌ صَلْبَةٌ كَٱلْحَدِيدِ، لِأَنَّ ٱلْحَدِيدَ يَدُقُّ وَيَسْحَقُ كُلَّ شَيْءٍ. وَكَالْحَدِيدِ ٱلَّذِي يُكَسِّرُ تَسْحَقُ وَتُكَسِّرُ كُلَّ هَؤُلَاءِ. ٤٠ 40
ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.
وَبِمَا رَأَيْتَ ٱلْقَدَمَيْنِ وَٱلْأَصَابِعَ بَعْضُهَا مِنْ خَزَفٍ وَٱلْبَعْضُ مِنْ حَدِيدٍ، فَٱلْمَمْلَكَةُ تَكُونُ مُنْقَسِمَةً، وَيَكُونُ فِيهَا قُوَّةُ ٱلْحَدِيدِ مِنْ حَيْثُ إِنَّكَ رَأَيْتَ ٱلْحَدِيدَ مُخْتَلِطًا بِخَزَفِ ٱلطِّينِ. ٤١ 41
ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.
وَأَصَابِعُ ٱلْقَدَمَيْنِ بَعْضُهَا مِنْ حَدِيدٍ وَٱلْبَعْضُ مِنْ خَزَفٍ، فَبَعْضُ ٱلْمَمْلَكَةِ يَكُونُ قَوِيًّا وَٱلْبَعْضُ قَصِمًا. ٤٢ 42
ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ, ಅರ್ಧ ಮಣ್ಣಿನಿಂದಲೂ ಮಾಡಿದ ಹಾಗೆ, ರಾಜ್ಯವು ಅರ್ಧ ಮುರಿದದ್ದಾಗಿಯೂ, ಅರ್ಧ ಬಲವಾದದ್ದಾಗಿಯೂ ಇರುವುದು.
وَبِمَا رَأَيْتَ ٱلْحَدِيدَ مُخْتَلِطًا بِخَزَفِ ٱلطِّينِ، فَإِنَّهُمْ يَخْتَلِطُونَ بِنَسْلِ ٱلنَّاسِ، وَلَكِنْ لَا يَتَلَاصَقُ هَذَا بِذَاكَ، كَمَا أَنَّ ٱلْحَدِيدَ لَا يَخْتَلِطُ بِٱلْخَزَفِ. ٤٣ 43
ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಮಿಶ್ರವಾಗಿರುವುದನ್ನು ನೋಡಿದ ಹಾಗೆ, ಜನರು ಮಿಶ್ರವಾಗಿರುವರು ಮತ್ತು ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ, ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವುದಿಲ್ಲ.
وَفِي أَيَّامِ هَؤُلَاءِ ٱلْمُلُوكِ، يُقِيمُ إِلَهُ ٱلسَّمَاوَاتِ مَمْلَكَةً لَنْ تَنْقَرِضَ أَبَدًا، وَمَلِكُهَا لَا يُتْرَكُ لِشَعْبٍ آخَرَ، وَتَسْحَقُ وَتُفْنِي كُلَّ هَذِهِ ٱلْمَمَالِكِ، وَهِيَ تَثْبُتُ إِلَى ٱلْأَبَدِ. ٤٤ 44
“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.
لِأَنَّكَ رَأَيْتَ أَنَّهُ قَدْ قُطِعَ حَجَرٌ مِنْ جَبَلٍ لَا بِيَدَيْنِ، فَسَحَقَ ٱلْحَدِيدَ وَٱلنُّحَاسَ وَٱلْخَزَفَ وَٱلْفِضَّةَ وَٱلذَّهَبَ. ٱللهُ ٱلْعَظِيمُ قَدْ عَرَّفَ ٱلْمَلِكَ مَا سَيَأْتِي بَعْدَ هَذَا. اَلْحُلْمُ حَقٌّ وَتَعْبِيرُهُ يَقِينٌ». ٤٥ 45
ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.
حِينَئِذٍ خَرَّ نَبُوخَذْنَصَّرُ عَلَى وَجْهِهِ وَسَجَدَ لِدَانِيآلَ، وَأَمَرَ بِأَنْ يُقَدِّمُوا لَهُ تَقْدِمَةً وَرَوَائِحَ سُرُورٍ. ٤٦ 46
ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು.
فَأَجَابَ ٱلْمَلِكُ دَانِيآلَ وَقَالَ: «حَقًّا إِنَّ إِلَهَكُمْ إِلَهُ ٱلْآلِهَةِ وَرَبُّ ٱلْمُلُوكِ وَكَاشِفُ ٱلْأَسْرَارِ، إِذِ ٱسْتَطَعْتَ عَلَى كَشْفِ هَذَا ٱلسِّرِّ». ٤٧ 47
ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.
حِينَئِذٍ عَظَّمَ ٱلْمَلِكُ دَانِيآلَ وَأَعْطَاهُ عَطَايَا كَثِيرَةً، وَسَلَّطَهُ عَلَى كُلِّ وِلَايَةِ بَابِلَ وَجَعَلَهُ رَئِيسَ ٱلشِّحَنِ عَلَى جَمِيعِ حُكَمَاءِ بَابِلَ. ٤٨ 48
ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.
فَطَلَبَ دَانِيآلُ مِنَ ٱلْمَلِكِ، فَوَلَّى شَدْرَخَ وَمِيشَخَ وَعَبْدَنَغُوَ عَلَى أَعْمَالِ وِلَايَةِ بَابِلَ. أَمَّا دَانِيآلُ فَكَانَ فِي بَابِ ٱلْمَلِكِ. ٤٩ 49
ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.

< دَانِيآل 2 >