< دَانِيآل 4 >

مِنْ نَبُوخَذْنَصَّرَ ٱلْمَلِكِ إِلَى كُلِّ ٱلشُّعُوبِ وَٱلْأُمَمِ وَٱلْأَلْسِنَةِ ٱلسَّاكِنِينَ فِي ٱلْأَرْضِ كُلِّهَا: لِيَكْثُرْ سَلَامُكُمْ. ١ 1
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.
اَلْآيَاتُ وَٱلْعَجَائِبُ ٱلَّتِي صَنَعَهَا مَعِي ٱللهُ ٱلْعَلِيُّ، حَسُنَ عِنْدِي أَنْ أُخْبِرَ بِهَا. ٢ 2
ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.
آيَاتُهُ مَا أَعْظَمَهَا، وَعَجَائِبُهُ مَا أَقْوَاهَا! مَلَكُوتُهُ مَلَكُوتٌ أَبَدِيٌّ وَسُلْطَانُهُ إِلَى دَوْرٍ فَدَوْرٍ. ٣ 3
ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು!
أَنَا نَبُوخَذْنَصَّرُ قَدْ كُنْتُ مُطْمَئِنًّا فِي بَيْتِي وَنَاضِرًا فِي قَصْرِي. ٤ 4
ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ.
رَأَيْتُ حُلْمًا فَرَوَّعَنِي، وَٱلْأَفْكَارُ عَلَى فِرَاشِي وَرُؤَى رَأْسِي أَفْزَعَتْنِي. ٥ 5
ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.
فَصَدَرَ مِنِّي أَمْرٌ بِإِحْضَارِ جَمِيعِ حُكَمَاءِ بَابِلَ قُدَّامِي لِيُعَرِّفُونِي بِتَعْبِيرِ ٱلْحُلْمِ. ٦ 6
ಆದ್ದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವುದಕ್ಕೋಸ್ಕರ ಬಾಬಿಲೋನಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
حِينَئِذٍ حَضَرَ ٱلْمَجُوسُ وَٱلسَّحَرَةُ وَٱلْكَلْدَانِيُّونَ وَٱلْمُنَجِّمُونَ، وَقَصَصْتُ ٱلْحُلْمَ عَلَيْهِمْ، فَلَمْ يُعَرِّفُونِي بِتَعْبِيرِهِ. ٧ 7
ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
أَخِيرًا دَخَلَ قُدَّامِي دَانِيآلُ ٱلَّذِي ٱسْمُهُ بَلْطَشَاصَّرُ كَٱسْمِ إِلَهِي، وَٱلَّذِي فِيهِ رُوحُ ٱلْآلِهَةِ ٱلْقُدُّوسِينَ، فَقَصَصْتُ ٱلْحُلْمَ قُدَّامَهُ: ٨ 8
ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.
«يَا بَلْطَشَاصَّرُ، كَبِيرُ ٱلْمَجُوسِ، مِنْ حَيْثُ إِنِّي أَعْلَمُ أَنَّ فِيكَ رُوحَ ٱلْآلِهَةِ ٱلْقُدُّوسِينَ، وَلَا يَعْسُرُ عَلَيْكَ سِرٌّ، فَأَخْبِرْنِي بِرُؤَى حُلْمِي ٱلَّذِي رَأَيْتُهُ وَبِتَعْبِيرِهِ. ٩ 9
“ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.
فَرُؤَى رَأْسِي عَلَى فِرَاشِي هِيَ: أَنِّي كُنْتُ أَرَى فَإِذَا بِشَجَرَةٍ فِي وَسَطِ ٱلْأَرْضِ وَطُولُهَا عَظِيمٌ. ١٠ 10
ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
فَكَبُرَتِ ٱلشَّجَرَةُ وَقَوِيَتْ، فَبَلَغَ عُلُوُّهَا إِلَى ٱلسَّمَاءِ وَمَنْظَرُهَا إِلَى أَقْصَى كُلِّ ٱلْأَرْضِ. ١١ 11
ಆ ಮರವು ವಿಶಾಲವಾಗಿಯೂ, ಬಲವಾಗಿಯೂ ಬೆಳೆಯಿತು ಹಾಗೂ ಅದು ಆಕಾಶವನ್ನು ಮುಟ್ಟುತ್ತಿತ್ತು. ಭೂಲೋಕದ ಕಟ್ಟಕಡೆಯವರೆಗೆ ಅದು ಕಾಣಿಸುತ್ತಿತ್ತು.
أَوْرَاقُهَا جَمِيلَةٌ وَثَمَرُهَا كَثِيرٌ وَفِيهَا طَعَامٌ لِلْجَمِيعِ، وَتَحْتَهَا ٱسْتَظَلَّ حَيَوَانُ ٱلْبَرِّ، وَفِي أَغْصَانِهَا سَكَنَتْ طُيُورُ ٱلسَّمَاءِ، وَطَعِمَ مِنْهَا كُلُّ ٱلْبَشَرِ. ١٢ 12
ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.
كُنْتُ أَرَى فِي رُؤَى رَأْسِي عَلَى فِرَاشِي وَإِذَا بِسَاهِرٍ وَقُدُّوسٍ نَزَلَ مِنَ ٱلسَّمَاءِ، ١٣ 13
“ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
فَصَرَخَ بِشِدَّةٍ وَقَالَ هَكَذَا: ٱقْطَعُوا ٱلشَّجَرَةَ، وَٱقْضِبُوا أَغْصَانَهَا، وَٱنْثُرُوا أَوْرَاقَهَا، وَٱبْذُرُوا ثَمَرَهَا، لِيَهْرُبَ ٱلْحَيَوَانُ مِنْ تَحْتِهَا وَٱلطُّيُورُ مِنْ أَغْصَانِهَا. ١٤ 14
ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.
وَلَكِنِ ٱتْرُكُوا سَاقَ أَصْلِهَا فِي ٱلْأَرْضِ، وَبِقَيْدٍ مِنْ حَدِيدٍ وَنُحَاسٍ فِي عُشْبِ ٱلْحَقْلِ، وَلْيَبْتَلَّ بِنَدَى ٱلسَّمَاءِ، وَلْيَكُنْ نَصِيبُهُ مَعَ ٱلْحَيَوَانِ فِي عُشْبِ ٱلْحَقْلِ. ١٥ 15
ಆದರೆ ಅದರ ಬುಡವೂ, ಬೇರೂ, ಕಬ್ಬಿಣ, ಕಂಚಿನ ಕಟ್ಟುಳ್ಳದ್ದಾಗಿ ನೆಲದಲ್ಲಿ ಹೊಲದ ಹುಲ್ಲಿನಲ್ಲಿ ಇರಲಿ. “‘ಅವನು ಆಕಾಶದ ಮಂಜಿನಿಂದ ತೇವವಾಗಲಿ, ಭೂಮಿಯ ಗಿಡಗಳ ಮಧ್ಯದಲ್ಲಿರುವ ಮೃಗಗಳೊಂದಿಗೆ ಅವನು ವಾಸಿಸಲಿ.
لِيَتَغَيَّرْ قَلْبُهُ عَنِ ٱلْإِنْسَانِيَّةِ، وَلْيُعْطَ قَلْبَ حَيَوَانٍ، وَلْتَمْضِ عَلَيْهِ سَبْعَةُ أَزْمِنَةٍ. ١٦ 16
ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.
هَذَا ٱلْأَمْرُ بِقَضَاءِ ٱلسَّاهِرِينَ، وَٱلْحُكْمُ بِكَلِمَةِ ٱلْقُدُّوسِينَ، لِكَىْ تَعْلَمَ ٱلْأَحْيَاءُ أَنَّ ٱلْعَلِيَّ مُتَسَلِّطٌ فِي مَمْلَكَةِ ٱلنَّاسِ، فَيُعْطِيهَا مَنْ يَشَاءُ، وَيُنَصِّبَ عَلَيْهَا أَدْنَى ٱلنَّاسِ. ١٧ 17
“‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’
هَذَا ٱلْحُلْمُ رَأَيْتُهُ أَنَا نَبُوخَذْنَصَّرَ ٱلْمَلِكَ. أَمَّا أَنْتَ يَا بَلْطَشَاصَّرُ فَبَيِّنْ تَعْبِيرَهُ، لِأَنَّ كُلَّ حُكَمَاءِ مَمْلَكَتِي لَا يَسْتَطِيعُونَ أَنْ يُعَرِّفُونِي بِٱلتَّعْبِيرِ. أَمَّا أَنْتَ فَتَسْتَطِيعُ، لِأَنَّ فِيكَ رُوحَ ٱلْآلِهَةِ ٱلْقُدُّوسِينَ». ١٨ 18
“ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.
حِينَئِذٍ تَحَيَّرَ دَانِيآلُ ٱلَّذِي ٱسْمُهُ بَلْطَشَاصَّرُ سَاعَةً وَاحِدَةً وَأَفْزَعَتْهُ أَفْكَارُهُ. أَجَابَ ٱلْمَلِكُ وَقَالَ: «يَا بَلْطَشَاصَّرُ، لَا يُفْزِعُكَ ٱلْحُلْمُ وَلَا تَعْبِيرُهُ». فَأَجَابَ بَلْطَشَاصَّرُ وَقَالَ: «يَا سَيِّدِي، ٱلْحُلْمُ لِمُبْغِضِيكَ وَتَعْبِيرُهُ لِأَعَادِيكَ. ١٩ 19
ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
اَلشَّجَرَةُ ٱلَّتِي رَأَيْتَهَا، ٱلَّتِي كَبُرَتْ وَقَوِيَتْ وَبَلَغَ عُلُوُّهَا إِلَى ٱلسَّمَاءِ، وَمَنْظَرُهَا إِلَى كُلِّ ٱلْأَرْضِ، ٢٠ 20
ನೀನು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟಿ, ಇಡೀ ಭೂಮಿಗೆ ಗೋಚರಿಸುತ್ತಿತ್ತು.
وَأَوْرَاقُهَا جَمِيلَةٌ وَثَمَرُهَا كَثِيرٌ وَفِيهَا طَعَامٌ لِلْجَمِيعِ، وَتَحْتَهَا سَكَنَ حَيَوَانُ ٱلْبَرِّ، وَفِي أَغْصَانِهَا سَكَنَتْ طُيُورُ ٱلسَّمَاءِ، ٢١ 21
ಅದರ ಎಲೆಗಳು ಅಂದವಾಗಿದ್ದು, ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರ ಇತ್ತು. ಅದರ ಕೆಳಗೆ ಕಾಡುಮೃಗಗಳು ವಾಸಮಾಡಿದ್ದವು. ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸ ಮಾಡಿದ್ದವು.
إِنَّمَا هِيَ أَنْتَ يَاأَيُّهَا ٱلْمَلِكُ، ٱلَّذِي كَبُرْتَ وَتَقَوَّيْتَ، وَعَظَمَتُكَ قَدْ زَادَتْ وَبَلَغَتْ إِلَى ٱلسَّمَاءِ، وَسُلْطَانُكَ إِلَى أَقْصَى ٱلْأَرْضِ. ٢٢ 22
ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.
وَحَيْثُ رَأَى ٱلْمَلِكُ سَاهِرًا وَقُدُّوسًا نَزَلَ مِنَ ٱلسَّمَاءِ وَقَالَ: ٱقْطَعُوا ٱلشَّجَرَةَ وَأَهْلِكُوهَا، وَلَكِنِ ٱتْرُكُوا سَاقَ أَصْلِهَا فِي ٱلْأَرْضِ، وَبِقَيْدٍ مِنْ حَدِيدٍ وَنُحَاسٍ فِي عُشْبِ ٱلْحَقْلِ، وَلْيَبْتَلَّ بِنَدَى ٱلسَّمَاءِ، وَلْيَكُنْ نَصِيبُهُ مَعَ حَيَوَانِ ٱلْبَرِّ، حَتَّى تَمْضِيَ عَلَيْهِ سَبْعَةُ أَزْمِنَةٍ. ٢٣ 23
“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’
فَهَذَا هُوَ ٱلتَّعْبِيرُ أَيُّهَا ٱلْمَلِكُ، وَهَذَا هُوَ قَضَاءُ ٱلْعَلِيِّ ٱلَّذِي يَأْتِي عَلَى سَيِّدِي ٱلْمَلِكِ: ٢٤ 24
“ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ:
يَطْرُدُونَكَ مِنْ بَيْنِ ٱلنَّاسِ، وَتَكُونُ سُكْنَاكَ مَعَ حَيَوَانِ ٱلْبَرِّ وَيُطْعِمُونَكَ ٱلْعُشْبَ كَٱلثِّيرَانِ، وَيَبُلُّونَكَ بِنَدَى ٱلسَّمَاءِ، فَتَمْضِي عَلَيْكَ سَبْعَةُ أَزْمِنَةٍ حَتَّى تَعْلَمَ أَنَّ ٱلْعَلِيَّ مُتَسَلِّطٌ فِي مَمْلَكَةِ ٱلنَّاسِ وَيُعْطِيهَا مَنْ يَشَاءُ. ٢٥ 25
ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.
وَحَيْثُ أَمَرُوا بِتَرْكِ سَاقِ أُصُولِ ٱلشَّجَرَةِ، فَإِنَّ مَمْلَكَتَكَ تَثْبُتُ لَكَ عِنْدَمَا تَعْلَمُ أَنَّ ٱلسَّمَاءَ سُلْطَانٌ. ٢٦ 26
ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು.
لِذَلِكَ أَيُّهَا ٱلْمَلِكُ، فَلْتَكُنْ مَشُورَتِي مَقْبُولَةً لَدَيْكَ، وَفَارِقْ خَطَايَاكَ بِٱلْبِرِّ وَآثَامَكَ بِٱلرَّحْمَةِ لِلْمَسَاكِينِ، لَعَلَّهُ يُطَالُ ٱطْمِئْنَانُكَ». ٢٧ 27
ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”
كُلُّ هَذَا جَاءَ عَلَى نَبُوخَذْنَصَّرَ ٱلْمَلِكِ. ٢٨ 28
ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭವಿಸಿತು.
عِنْدَ نِهَايَةِ ٱثْنَيْ عَشَرَ شَهْرًا كَانَ يَتَمَشَّى عَلَى قَصْرِ مَمْلَكَةِ بَابِلَ. ٢٩ 29
ಹನ್ನೆರಡು ತಿಂಗಳಾದ ಮೇಲೆ ಅರಸನು ಬಾಬಿಲೋನಿನ ರಾಜ್ಯದ ಅರಮನೆಯ ಮೇಲ್ಗಡೆ ತಿರುಗಾಡಿದನು.
وَأَجَابَ ٱلْمَلِكُ فَقَالَ: «أَلَيْسَتْ هَذِهِ بَابِلَ ٱلْعَظِيمَةَ ٱلَّتِي بَنَيْتُهَا لِبَيْتِ ٱلْمُلْكِ بِقُوَّةِ ٱقْتِدَارِي، وَلِجَلَالِ مَجْدِي؟» ٣٠ 30
ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.
وَٱلْكَلِمَةُ بَعْدُ بِفَمِ ٱلْمَلِكِ، وَقَعَ صَوْتٌ مِنَ ٱلسَّمَاءِ قَائِلًا: «لَكَ يَقُولُونَ يَا نَبُوخَذْنَصَّرُ ٱلْمَلِكُ: إِنَّ ٱلْمُلْكَ قَدْ زَالَ عَنْكَ. ٣١ 31
ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು.
وَيَطْرُدُونَكَ مِنْ بَيْنِ ٱلنَّاسِ، وَتَكُونُ سُكْنَاكَ مَعَ حَيَوَانِ ٱلْبَرِّ، وَيُطْعِمُونَكَ ٱلْعُشْبَ كَٱلثِّيرَانِ، فَتَمْضِي عَلَيْكَ سَبْعَةُ أَزْمِنَةٍ حَتَّى تَعْلَمَ أَنَّ ٱلْعَلِيَّ مُتَسَلِّطٌ فِي مَمْلَكَةِ ٱلنَّاسِ وَأَنَّهُ يُعْطِيهَا مَنْ يَشَاءُ». ٣٢ 32
ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.
فِي تِلْكَ ٱلسَّاعَةِ تَمَّ ٱلْأَمْرُ عَلَى نَبُوخَذْنَصَّرَ، فَطُرِدَ مِنْ بَيْنِ ٱلنَّاسِ، وَأَكَلَ ٱلْعُشْبَ كَٱلثِّيرَانِ، وَٱبْتَلَّ جِسْمُهُ بِنَدَى ٱلسَّمَاءِ حَتَّى طَالَ شَعْرُهُ مِثْلَ ٱلنُّسُورِ، وَأَظْفَارُهُ مِثْلَ ٱلطُّيُورِ. ٣٣ 33
ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
وَعِنْدَ ٱنْتِهَاءِ ٱلْأَيَّامِ، أَنَا نَبُوخَذْنَصَّرُ، رَفَعْتُ عَيْنَيَّ إِلَى ٱلسَّمَاءِ، فَرَجَعَ إِلَيَّ عَقْلِي، وَبَارَكْتُ ٱلْعَلِيَّ وَسَبَّحْتُ وَحَمَدْتُ ٱلْحَيَّ إِلَى ٱلْأَبَدِ، ٱلَّذِي سُلْطَانُهُ سُلْطَانٌ أَبَدِيٌّ، وَمَلَكُوتُهُ إِلَى دَوْرٍ فَدَوْرٍ. ٣٤ 34
ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು.
وَحُسِبَتْ جَمِيعُ سُكَّانِ ٱلْأَرْضِ كَلَا شَيْءَ، وَهُوَ يَفْعَلُ كَمَا يَشَاءُ فِي جُنْدِ ٱلسَّمَاءِ وَسُكَّانِ ٱلْأَرْضِ، وَلَا يُوجَدُ مَنْ يَمْنَعُ يَدَهُ أَوْ يَقُولُ لَهُ: «مَاذَا تَفْعَلُ؟». ٣٥ 35
ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ
فِي ذَلِكَ ٱلْوَقْتِ رَجَعَ إِلَيَّ عَقْلِي، وَعَادَ إِلَيَّ جَلَالُ مَمْلَكَتِي وَمَجْدِي وَبَهَائِي، وَطَلَبَنِي مُشِيرِيَّ وَعُظَمَائِي، وَتَثَبَّتُّ عَلَى مَمْلَكَتِي وَٱزْدَادَتْ لِي عَظَمَةٌ كَثِيرَةٌ. ٣٦ 36
ಇದೇ ಸಮಯದಲ್ಲಿ ನನ್ನ ಬುದ್ಧಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ, ನನ್ನ ತೇಜಸ್ಸೂ ತಿರುಗಿ ಬಂದವು. ನನ್ನ ಆಲೋಚನಾಗಾರರೂ, ನನ್ನ ಪ್ರಭುಗಳೂ ನನ್ನನ್ನು ಹುಡುಕಿ ಬಂದರು. ನಾನು ನನ್ನ ರಾಜ್ಯದಲ್ಲಿ ಪುನಃ ನೆಲೆಗೊಂಡೆನು. ಮೊದಲಿಗಿಂತಲೂ ನನಗೆ ಹೆಚ್ಚಿನ ಪ್ರತಿಭೆ ದೊರೆಯಿತು.
فَٱلْآنَ، أَنَا نَبُوخَذْنَصَّرُ، أُسَبِّحُ وَأُعَظِّمُ وَأَحْمَدُ مَلِكَ ٱلسَّمَاءِ، ٱلَّذِي كُلُّ أَعْمَالِهِ حَقٌّ وَطُرُقِهِ عَدْلٌ، وَمَنْ يَسْلُكُ بِٱلْكِبْرِيَاءِ فَهُوَ قَادِرٌ عَلَى أَنْ يُذِلَّهُ. ٣٧ 37
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.

< دَانِيآل 4 >