< دَانِيآل 5 >

بَيْلْشَاصَّرُ ٱلْمَلِكُ صَنَعَ وَلِيمَةً عَظِيمَةً لِعُظَمَائِهِ ٱلْأَلْفِ، وَشَرِبَ خَمْرًا قُدَّامَ ٱلْأَلْفِ. ١ 1
ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.
وَإِذْ كَانَ بَيْلْشَاصَّرُ يَذُوقُ ٱلْخَمْرَ، أَمَرَ بِإِحْضَارِ آنِيَةِ ٱلذَّهَبِ وَٱلْفِضَّةِ ٱلَّتِي أَخْرَجَهَا نَبُوخَذْنَصَّرُ أَبُوهُ مِنَ ٱلْهَيْكَلِ ٱلَّذِي فِي أُورُشَلِيمَ، لِيَشْرَبَ بِهَا ٱلْمَلِكُ وَعُظَمَاؤُهُ وَزَوْجَاتُهُ وَسَرَارِيهِ. ٢ 2
ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.
حِينَئِذٍ أَحْضَرُوا آنِيَةَ ٱلذَّهَبِ ٱلَّتِي أُخْرِجَتْ مِنْ هَيْكَلِ بَيْتِ ٱللهِ ٱلَّذِي فِي أُورُشَلِيمَ، وَشَرِبَ بِهَا ٱلْمَلِكُ وَعُظَمَاؤُهُ وَزَوْجَاتُهُ وَسَرَارِيهِ. ٣ 3
ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
كَانُوا يَشْرَبُونَ ٱلْخَمْرَ وَيُسَبِّحُونَ آلِهَةَ ٱلذَّهَبِ وَٱلْفِضَّةِ وَٱلنُّحَاسِ وَٱلْحَدِيدِ وَٱلْخَشَبِ وَٱلْحَجَرِ. ٤ 4
ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.
فِي تِلْكَ ٱلسَّاعَةِ ظَهَرَتْ أَصَابِعُ يَدِ إِنْسَانٍ، وَكَتَبَتْ بِإِزَاءِ ٱلنِّبْرَاسِ عَلَى مُكَلَّسِ حَائِطِ قَصْرِ ٱلْمَلِكِ، وَٱلْمَلِكُ يَنْظُرُ طَرَفَ ٱلْيَدِ ٱلْكَاتِبَةِ. ٥ 5
ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
حِينَئِذٍ تَغَيَّرَتْ هَيْئَةُ ٱلْمَلِكِ وَأَفْزَعَتْهُ أَفْكَارُهُ، وَٱنْحَلَّتْ خَرَزُ حَقْوَيْهِ، وَٱصْطَكَّتْ رُكْبَتَاهُ. ٦ 6
ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
فَصَرَخَ ٱلْمَلِكُ بِشِدَّةٍ لِإِدْخَالِ ٱلسَّحَرَةِ وَٱلْكَلْدَانِيِّينَ وَٱلْمُنَجِّمِينَ، فَأَجَابَ ٱلْمَلِكُ وَقَالَ لِحُكَمَاءِ بَابِلَ: «أَيُّ رَجُلٍ يَقْرَأُ هَذِهِ ٱلْكِتَابَةَ وَيُبَيِّنُ لِي تَفْسِيرَهَا فَإِنَّهُ يُلَبَّسُ ٱلْأُرْجُوَانَ وَقِلَادَةً مِنْ ذَهَبٍ فِي عُنُقِهِ، وَيَتَسَلَّطُ ثَالِثًا فِي ٱلْمَمْلَكَةِ». ٧ 7
ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.
ثُمَّ دَخَلَ كُلُّ حُكَمَاءِ ٱلْمَلِكِ، فَلَمْ يَسْتَطِيعُوا أَنْ يَقْرَأُوا ٱلْكِتَابَةَ، وَلَا أَنْ يُعَرِّفُوا ٱلْمَلِكَ بِتَفْسِيرِهَا. ٨ 8
ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.
فَفَزَعَ ٱلْمَلِكُ بَيْلْشَاصَّرُ جِدًّا وَتَغَيَّرَتْ فِيهِ هَيْئَتُهُ، وَٱضْطَرَبَ عُظَمَاؤُهُ. ٩ 9
ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು.
أَمَّا ٱلْمَلِكَةُ فَلِسَبَبِ كَلَامِ ٱلْمَلِكِ وَعُظَمَائِهِ دَخَلَتْ بَيْتَ ٱلْوَلِيمَةِ، فَأَجَابَتِ ٱلْمَلِكَةُ وَقَالَتْ: «أَيُّهَا ٱلْمَلِكُ، عِشْ إِلَى ٱلْأَبَدِ! لَا تُفَزِّعْكَ أَفْكَارُكَ وَلَا تَتَغَيَّرُ هَيْئَتُكَ. ١٠ 10
ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!
يُوجَدُ فِي مَمْلَكَتِكَ رَجُلٌ فِيهِ رُوحُ ٱلْآلِهَةِ ٱلْقُدُّوسِينَ، وَفِي أَيَّامِ أَبِيكَ وُجِدَتْ فِيهِ نَيِّرَةٌ وَفِطْنَةٌ وَحِكْمَةٌ كَحِكْمَةِ ٱلْآلِهَةِ، وَٱلْمَلِكُ نَبُوخَذْنَصَّرُ أَبُوكَ جَعَلَهُ كَبِيرَ ٱلْمَجُوسِ وَٱلسَّحَرَةِ وَٱلْكَلْدَانِيِّينَ وَٱلْمُنَجِّمِينَ. أَبُوكَ ٱلْمَلِكُ. ١١ 11
ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
مِنْ حَيْثُ إِنَّ رُوحًا فَاضِلَةً وَمَعْرِفَةً وَفِطْنَةً وَتَعْبِيرَ ٱلْأَحْلَامِ وَتَبْيِينَ أَلْغَازٍ وَحَلَّ عُقَدٍ وُجِدَتْ فِي دَانِيآلَ هَذَا، ٱلَّذِي سَمَّاهُ ٱلْمَلِكُ بَلْطَشَاصَّرَ. فَلْيُدْعَ ٱلْآنَ دَانِيآلُ فَيُبَيِّنَ ٱلتَّفْسِيرَ». ١٢ 12
ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.
حِينَئِذٍ أُدْخِلَ دَانِيآلُ إِلَى قُدَّامِ ٱلْمَلِكِ. فَأَجَابَ ٱلْمَلِكُ وَقَالَ لِدَانِيآلَ: «أَأَنْتَ هُوَ دَانِيآلُ مِنْ بَنِي سَبْيِ يَهُوذَا، ٱلَّذِي جَلَبَهُ أَبِي ٱلْمَلِكُ مِنْ يَهُوذَا؟ ١٣ 13
ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
قَدْ سَمِعْتُ عَنْكَ أَنَّ فِيكَ رُوحَ ٱلْآلِهَةِ، وَأَنَّ فِيكَ نَيِّرَةٌ وَفِطْنَةٌ وَحِكْمَةٌ فَاضِلَةٌ. ١٤ 14
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
وَٱلْآنَ أُدْخِلَ قُدَّامِي ٱلْحُكَمَاءُ وَٱلسَّحَرَةُ لِيَقْرَأُوا هَذِهِ ٱلْكِتَابَةَ وَيُعَرِّفُونِي بِتَفْسِيرِهَا، فَلَمْ يَسْتَطِيعُوا أَنْ يُبَيِّنُوا تَفْسِيرَ ٱلْكَلَامِ. ١٥ 15
ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
وَأَنَا قَدْ سَمِعْتُ عَنْكَ أَنَّكَ تَسْتَطِيعُ أَنْ تُفَسِّرَ تَفْسِيرًا وَتَحُلَّ عُقَدًا. فَإِنِ ٱسْتَطَعْتَ ٱلْآنَ أَنْ تَقْرَأَ ٱلْكِتَابَةَ وَتُعَرِّفَنِي بِتَفْسِيرِهَا فَتُلَبَّسُ ٱلْأُرْجُوَانَ وَقِلَادَةً مِنْ ذَهَبٍ فِي عُنُقِكَ وَتَتَسَلَّطُ ثَالِثًا فِي ٱلْمَمْلَكَةِ». ١٦ 16
ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.
فَأَجَابَ دَانِيآلُ وَقَالَ قُدَّامَ ٱلْمَلِكِ: «لِتَكُنْ عَطَايَاكَ لِنَفْسِكَ وَهَبْ هِبَاتِكَ لِغَيْرِي. لَكِنِّي أَقْرَأُ ٱلْكِتَابَةَ لِلْمَلِكِ وَأُعَرِّفُهُ بِٱلتَّفْسِيرِ. ١٧ 17
ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.
أَنْتَ أَيُّهَا ٱلْمَلِكُ، فَٱللهُ ٱلْعَلِيُّ أَعْطَى أَبَاكَ نَبُوخَذْنَصَّرَ مَلَكُوتًا وَعَظَمَةً وَجَلَالًا وَبَهَاءً. ١٨ 18
“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.
وَلِلْعَظَمَةِ ٱلَّتِي أَعْطَاهُ إِيَّاهَا كَانَتْ تَرْتَعِدُ وَتَفْزَعُ قُدَّامَهُ جَمِيعُ ٱلشُّعُوبِ وَٱلْأُمَمِ وَٱلْأَلْسِنَةِ. فَأَيًّا شَاءَ قَتَلَ، وَأَيًّا شَاءَ ٱسْتَحْيَا، وَأَيًّا شَاءَ رَفَعَ، وَأَيًّا شَاءَ وَضَعَ. ١٩ 19
ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.
فَلَمَّا ٱرْتَفَعَ قَلْبُهُ وَقَسَتْ رُوحُهُ تَجَبُّرًا، ٱنْحَطَّ عَنْ كُرْسِيِّ مُلْكِهِ، وَنَزَعُوا عَنْهُ جَلَالَهُ، ٢٠ 20
ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.
وَطُرِدَ مِنْ بَيْنِ ٱلنَّاسِ، وَتَسَاوَى قَلْبُهُ بِٱلْحَيَوَانِ، وَكَانَتْ سُكْنَاهُ مَعَ ٱلْحَمِيرِ ٱلْوَحْشِيَّةِ، فَأَطْعَمُوهُ ٱلْعُشْبَ كَٱلثِّيرَانِ، وَٱبْتَلَّ جِسْمُهُ بِنَدَى ٱلسَّمَاءِ، حَتَّى عَلِمَ أَنَّ ٱللهَ ٱلْعَلِيَّ سُلْطَانٌ فِي مَمْلَكَةِ ٱلنَّاسِ، وَأَنَّهُ يُقِيمُ عَلَيْهَا مَنْ يَشَاءُ. ٢١ 21
ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.
وَأَنْتَ يَا بَيْلْشَاصَّرُ ٱبْنَهُ لَمْ تَضَعْ قَلْبَكَ، مَعَ أَنَّكَ عَرَفْتَ كُلَّ هَذَا، ٢٢ 22
“ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ
بَلْ تَعَظَّمْتَ عَلَى رَبِّ ٱلسَّمَاءِ، فَأَحْضَرُوا قُدَّامَكَ آنِيَةَ بَيْتِهِ، وَأَنْتَ وَعُظَمَاؤُكَ وَزَوْجَاتُكَ وَسَرَارِيكَ شَرِبْتُمْ بِهَا ٱلْخَمْرَ، وَسَبَّحْتَ آلِهَةَ ٱلْفِضَّةِ وَٱلذَّهَبِ وَٱلنِّحَاسِ وَٱلْحَدِيدِ وَٱلْخَشَبِ وَٱلْحَجَرِ ٱلَّتِي لَا تُبْصِرُ وَلَا تَسْمَعُ وَلَا تَعْرِفُ. أَمَّا ٱللهُ ٱلَّذِي بِيَدِهِ نَسَمَتُكَ، وَلَهُ كُلُّ طُرُقِكَ فَلَمْ تُمَجِّدْهُ. ٢٣ 23
ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.
حِينَئِذٍ أُرْسِلَ مِنْ قِبَلِهِ طَرَفُ ٱلْيَدِ، فَكُتِبَتْ هَذِهِ ٱلْكِتَابَةُ. ٢٤ 24
ಅದಕ್ಕಾಗಿಯೇ ಆತನು ಕಳುಹಿಸಿದ ಕೈಯ ಭಾಗವು ಬಂದು ಆ ಬರಹವನ್ನು ಬರೆದಿದೆ.
وَهَذِهِ هِيَ ٱلْكِتَابَةُ ٱلَّتِي سُطِّرَتْ: مَنَا مَنَا تَقَيْلُ وَفَرْسِينُ. ٢٥ 25
“ಆ ಬರಹವು ಏನೆಂದರೆ: ಮೆನೇ ಮೆನೇ, ತೆಕೇಲ್, ಉಫರ್ಸಿನ್.
وَهَذَا تَفْسِيرُ ٱلْكَلَامِ: مَنَا، أَحْصَى ٱللهُ مَلَكُوتَكَ وَأَنْهَاهُ. ٢٦ 26
“ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.
تَقَيْلُ، وُزِنْتَ بِٱلْمَوَازِينِ فَوُجِدْتَ نَاقِصًا. ٢٧ 27
“ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.
فَرْسِ، قُسِمَتْ مَمْلَكَتُكَ وَأُعْطِيَتْ لِمَادِي وَفَارِسَ». ٢٨ 28
“ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.
حِينَئِذٍ أَمَرَ بَيْلْشَاصَّرُ أَنْ يُلْبِسُوا دَانِيآلَ ٱلْأَرْجُوانَ وَقِلَادَةً مِنْ ذَهَبٍ فِي عُنُقِهِ، وَيُنَادُوا عَلَيْهِ أَنَّهُ يَكُونُ مُتَسَلِّطًا ثَالِثًا فِي ٱلْمَمْلَكَةِ. ٢٩ 29
ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.
فِي تِلْكَ ٱللَّيْلَةِ قُتِلَ بَيْلْشَاصَّرُ مَلِكُ ٱلْكَلْدَانِيِّينَ، ٣٠ 30
ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.
فَأَخَذَ ٱلْمَمْلَكَةَ دَارِيُّوسُ ٱلْمَادِيُّ وَهُوَ ٱبْنُ ٱثْنَتَيْنِ وَسِتِّينَ سَنَةً. ٣١ 31
ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.

< دَانِيآل 5 >