< دَانِيآل 6 >

حَسُنَ عِنْدَ دَارِيُّوسَ أَنْ يُوَلِّيَ عَلَى ٱلْمَمْلَكَةِ مِئَةً وَعِشْرِينَ مَرْزُبَانًا يَكُونُونَ عَلَى ٱلْمَمْلَكَةِ كُلِّهَا. ١ 1
ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು.
وَعَلَى هَؤُلَاءِ ثَلَاثَةَ وُزَرَاءَ أَحَدُهُمْ دَانِيآلُ، لِتُؤَدِّيَ ٱلْمَرَازِبَةُ إِلَيْهِمِ ٱلْحِسَابَ فَلَا تُصِيبَ ٱلْمَلِكَ خَسَارَةٌ. ٢ 2
ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು.
فَفَاقَ دَانِيآلُ هَذَا عَلَى ٱلْوُزَرَاءِ وَٱلْمَرَازِبَةِ، لِأَنَّ فِيهِ رُوحًا فَاضِلَةً. وَفَكَّرَ ٱلْمَلِكُ فِي أَنْ يُوَلِّيَهُ عَلَى ٱلْمَمْلَكَةِ كُلِّهَا. ٣ 3
ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
ثُمَّ إِنَّ ٱلْوُزَرَاءَ وَٱلْمَرَازِبَةَ كَانُوا يَطْلُبُونَ عِلَّةً يَجِدُونَهَا عَلَى دَانِيآلَ مِنْ جِهَةِ ٱلْمَمْلَكَةِ، فَلَمْ يَقْدِرُوا أَنْ يَجِدُوا عِلَّةً وَلَا ذَنْبًا، لِأَنَّهُ كَانَ أَمِينًا وَلَمْ يُوجَدْ فِيهِ خَطَأٌ وَلَا ذَنْبٌ. ٤ 4
ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
فَقَالَ هَؤُلَاءِ ٱلرِّجَالُ: «لَا نَجِدُ عَلَى دَانِيآلَ هَذَا عِلَّةً إِلَّا أَنْ نَجِدَهَا مِنْ جِهَةِ شَرِيعَةِ إِلَهِهِ». ٥ 5
ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.
حِينَئِذٍ ٱجْتَمَعَ هَؤُلَاءِ ٱلْوُزَرَاءُ وَٱلْمَرَازِبَةُ عِنْدَ ٱلْمَلِكِ وَقَالُوا لَهُ هَكَذَا: «أَيُّهَا ٱلْمَلِكُ دَارِيُوسُ، عِشْ إِلَى ٱلْأَبَدِ! ٦ 6
ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
إِنَّ جَمِيعَ وُزَرَاءِ ٱلْمَمْلَكَةِ وَٱلشِّحَنِ وَٱلْمَرَازِبَةِ وَٱلْمُشِيرِينَ وَٱلْوُلَاةِ قَدْ تَشَاوَرُوا عَلَى أَنْ يَضَعُوا أَمْرًا مَلَكِيًّا وَيُشَدِّدُوا نَهْيًا، بِأَنَّ كُلَّ مَنْ يَطْلُبُ طِلْبَةً حَتَّى ثَلَاثِينَ يَوْمًا مِنْ إِلَهٍ أَوْ إِنْسَانٍ إِلَّا مِنْكَ أَيُّهَا ٱلْمَلِكُ، يُطْرَحُ فِي جُبِّ ٱلْأُسُودِ. ٧ 7
ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.
فَثَبِّتِ ٱلْآنَ ٱلنَّهْيَ أَيُّهَا ٱلْمَلِكُ، وَأَمْضِ ٱلْكِتَابَةَ لِكَيْ لَا تَتَغَيَّرَ كَشَرِيعَةِ مَادِي وَفَارِسَ ٱلَّتِي لَا تُنْسَخُ». ٨ 8
ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.
لِأَجْلِ ذَلِكَ أَمْضَى ٱلْمَلِكُ دَارِيُوسُ ٱلْكِتَابَةَ وَٱلنَّهْيَ. ٩ 9
ಆದಕಾರಣ ದಾರ್ಯಾವೆಷನು ಆ ಬರಹಕ್ಕೂ, ನಿರ್ಣಯಕ್ಕೂ ರುಜು ಹಾಕಿದನು.
فَلَمَّا عَلِمَ دَانِيآلُ بِإِمْضَاءِ ٱلْكِتَابَةِ ذَهَبَ إِلَى بَيْتِهِ، وَكُواهُ مَفْتُوحَةٌ فِي عُلِّيَّتِهِ نَحْوَ أُورُشَلِيمَ، فَجَثَا عَلَى رُكْبَتَيْهِ ثَلَاثَ مَرَّاتٍ فِي ٱلْيَوْمِ، وَصَلَّى وَحَمَدَ قُدَّامَ إِلَهِهِ كَمَا كَانَ يَفْعَلُ قَبْلَ ذَلِكَ. ١٠ 10
ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.
فَٱجْتَمَعَ حِينَئِذٍ هَؤُلَاءِ ٱلرِّجَالُ فَوَجَدُوا دَانِيآلَ يَطْلُبُ وَيَتَضَرَّعُ قُدَّامَ إِلَهِهِ. ١١ 11
ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು.
فَتَقَدَّمُوا وَتَكَلَّمُوا قُدَّامَ ٱلْمَلِكِ فِي نَهْيِ ٱلْمَلِكِ: «أَلَمْ تُمْضِ أَيُّهَا ٱلْمَلِكُ نَهْيًا بِأَنَّ كُلَّ إِنْسَانٍ يَطْلُبُ مِنْ إِلَهٍ أَوْ إِنْسَانٍ حَتَّى ثَلَاثِينَ يَوْمًا إِلَّا مِنْكَ أَيُّهَا ٱلْمَلِكُ يُطْرَحُ فِي جُبِّ ٱلْأُسُودِ؟» فَأَجَابَ ٱلْمَلِكُ وَقَالَ: «ٱلْأَمْرُ صَحِيحٌ كَشَرِيعَةِ مَادِي وَفَارِسَ ٱلَّتِي لَا تُنْسَخُ». ١٢ 12
ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.
حِينَئِذٍ أَجَابُوا وَقَالُوا قُدَّامَ ٱلْمَلِكِ: «إِنَّ دَانِيآلَ ٱلَّذِي مِنْ بَنِي سَبْيِ يَهُوذَا لَمْ يَجْعَلْ لَكَ أَيُّهَا ٱلْمَلِكُ ٱعْتِبَارًا وَلَا لِلنَّهْيِ ٱلَّذِي أَمْضَيْتَهُ، بَلْ ثَلَاثَ مَرَّاتٍ فِي ٱلْيَوْمِ يَطْلُبُ طِلْبَتَهُ». ١٣ 13
ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.
فَلَمَّا سَمِعَ ٱلْمَلِكُ هَذَا ٱلْكَلَامَ ٱغْتَاظَ عَلَى نَفْسِهِ جِدًّا، وَجَعَلَ قَلْبَهُ عَلَى دَانِيآلَ لِيُنَجِّيَهُ، وَٱجْتَهَدَ إِلَى غُرُوبِ ٱلشَّمْسِ لِيُنْقِذَهُ. ١٤ 14
ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.
فَٱجْتَمَعَ أُولَئِكَ ٱلرِّجَالُ إِلَى ٱلْمَلِكِ وَقَالُوا لِلْمَلِكِ: «ٱعْلَمْ أَيُّهَا ٱلْمَلِكُ أَنَّ شَرِيعَةَ مَادِي وَفَارِسَ هِيَ أَنَّ كُلَّ نَهْيٍ أَوْ أَمْرٍ يَضَعُهُ ٱلْمَلِكُ لَا يَتَغَيَّرُ». ١٥ 15
ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು.
حِينَئِذٍ أَمَرَ ٱلْمَلِكُ فَأَحْضَرُوا دَانِيآلَ وَطَرَحُوهُ فِي جُبِّ ٱلْأُسُودِ. أَجَابَ ٱلْمَلِكُ وَقَالَ لِدَانِيآلَ: «إِنَّ إِلَهَكَ ٱلَّذِي تَعْبُدُهُ دَائِمًا هُوَ يُنَجِّيكَ». ١٦ 16
ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.
وَأُتِيَ بِحَجَرٍ وَوُضِعَ عَلَى فَمِ ٱلْجُبِّ وَخَتَمَهُ ٱلْمَلِكُ بِخَاتِمِهِ وَخَاتِمِ عُظَمَائِهِ، لِئَلَّا يَتَغَيَّرَ ٱلْقَصْدُ فِي دَانِيآلَ. ١٧ 17
ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು.
حِينَئِذٍ مَضَى ٱلْمَلِكُ إِلَى قَصْرِهِ وَبَاتَ صَائِمًا، وَلَمْ يُؤْتَ قُدَّامَهُ بِسَرَارِيهِ وَطَارَ عَنْهُ نَوْمُهُ. ١٨ 18
ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.
ثُمَّ قَامَ ٱلْمَلِكُ بَاكِرًا عِنْدَ ٱلْفَجْرِ وَذَهَبَ مُسْرِعًا إِلَى جُبِّ ٱلْأُسُودِ. ١٩ 19
ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
فَلَمَّا ٱقْتَرَبَ إِلَى ٱلْجُبِّ نَادَى دَانِيآلَ بِصَوْتٍ أَسِيفٍ. أَجَابَ ٱلْمَلِكُ وَقَالَ لِدَانِيآلَ: «يَا دَانِيآلُ عَبْدَ ٱللهِ ٱلْحَيِّ، هَلْ إِلَهُكَ ٱلَّذِي تَعْبُدُهُ دَائِمًا قَدِرَ عَلَى أَنْ يُنَجِّيَكَ مِنَ ٱلْأُسُودِ؟» ٢٠ 20
ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.
فَتَكَلَّمَ دَانِيآلُ مَعَ ٱلْمَلِكِ: «يَا أَيُّهَا ٱلْمَلِكُ، عِشْ إِلَى ٱلْأَبَدِ! ٢١ 21
ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
إِلَهِي أَرْسَلَ مَلَاكَهُ وَسَدَّ أَفْوَاهَ ٱلْأُسُودِ فَلَمْ تَضُرَّنِي، لِأَنِّي وُجِدْتُ بَرِيئًا قُدَّامَهُ، وَقُدَّامَكَ أَيْضًا أَيُّهَا ٱلْمَلِكُ، لَمْ أَفْعَلْ ذَنْبًا». ٢٢ 22
ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.
حِينَئِذٍ فَرِحَ ٱلْمَلِكُ بِهِ، وَأَمَرَ بِأَنْ يُصْعَدَ دَانِيآلُ مِنَ ٱلْجُبِّ. فَأُصْعِدَ دَانِيآلُ مِنَ ٱلْجُبِّ وَلَمْ يُوجَدْ فِيهِ ضَرَرٌ، لِأَنَّهُ آمَنَ بِإِلَهِهِ. ٢٣ 23
ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.
فَأَمَرَ ٱلْمَلِكُ فَأَحْضَرُوا أُولَئِكَ ٱلرِّجَالَ ٱلَّذِينَ ٱشْتَكَوْا عَلَى دَانِيآلَ وَطَرَحُوهُمْ فِي جُبِّ ٱلْأُسُودِ هُمْ وَأَوْلَادَهُمْ وَنِسَاءَهُمْ. وَلَمْ يَصِلُوا إِلَى أَسْفَلِ ٱلْجُبِّ حَتَّى بَطَشَتْ بِهِمِ ٱلْأُسُودُ وَسَحَقَتْ كُلَّ عِظَامِهِمْ. ٢٤ 24
ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.
ثُمَّ كَتَبَ ٱلْمَلِكُ دَارِيُّوسُ إِلَى كُلِّ ٱلشُّعُوبِ وَٱلْأُمَمِ وَٱلْأَلْسِنَةِ ٱلسَّاكِنِينَ فِي ٱلْأَرْضِ كُلِّهَا: «لِيَكْثُرْ سَلَامُكُمْ. ٢٥ 25
ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.
مِنْ قِبَلِي صَدَرَ أَمْرٌ بِأَنَّهُ فِي كُلِّ سُلْطَانِ مَمْلَكَتِي يَرْتَعِدُونَ وَيَخَافُونَ قُدَّامَ إِلَهِ دَانِيآلَ، لِأَنَّهُ هُوَ ٱلْإِلَهُ ٱلْحَيُّ ٱلْقَيُّومُ إِلَى ٱلْأَبَدِ، وَمَلَكُوتُهُ لَنْ يَزُولَ وَسُلْطَانُهُ إِلَى ٱلْمُنْتَهَى. ٢٦ 26
“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ.
هُوَ يُنَجِّي وَيُنْقِذُ وَيَعْمَلُ ٱلْآيَاتِ وَٱلْعَجَائِبَ فِي ٱلسَّمَاوَاتِ وَفِي ٱلْأَرْضِ. هُوَ ٱلَّذِي نَجَّى دَانِيآلَ مِنْ يَدِ ٱلْأُسُودِ». ٢٧ 27
ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು,
فَنَجَحَ دَانِيآلُ هَذَا فِي مُلْكِ دَارِيُّوسَ وَفِي مُلْكِ كُورَشَ ٱلْفَارِسِيِّ. ٢٨ 28
ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.

< دَانِيآل 6 >