< اَلْجَامِعَةِ 10 >

اَلذُّبَابُ ٱلْمَيِّتُ يُنَتِّنُ وَيُخَمِّرُ طِيبَ ٱلْعَطَّارِ. جَهَالَةٌ قَلِيلَةٌ أَثْقَلُ مِنَ ٱلْحِكْمَةِ وَمِنَ ٱلْكَرَامَةِ. ١ 1
ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.
قَلْبُ ٱلْحَكِيمِ عَنْ يَمِينِهِ، وَقَلْبُ ٱلْجَاهِلِ عَنْ يَسَارِهِ. ٢ 2
ಜ್ಞಾನಿಯ ಹೃದಯವು ಬಲಗಡೆ ಸಾಗಿದರೆ, ಮೂರ್ಖನ ಹೃದಯವು ಎಡಗಡೆ ಸಾಗುವುದು.
أَيْضًا إِذَا مَشَى ٱلْجَاهِلُ فِي ٱلطَّرِيقِ يَنْقُصُ فَهْمُهُ، وَيَقُولُ لِكُلِّ وَاحِدٍ: إِنَّهُ جَاهِلٌ. ٣ 3
ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ.
إِنْ صَعِدَتْ عَلَيْكَ رُوحُ ٱلْمُتَسَلِّطِ، فَلَا تَتْرُكْ مَكَانَكَ، لِأَنَّ ٱلْهُدُوءَ يُسَكِّنُ خَطَايَا عَظِيمَةً. ٤ 4
ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.
يُوجَدُ شَرٌّ رَأَيْتُهُ تَحْتَ ٱلشَّمْسِ، كَسَهْوٍ صَادِرٍ مِنْ قِبَلِ ٱلْمُتَسَلِّطِ: ٥ 5
ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.
ٱلْجَهَالَةُ جُعِلَتْ فِي مَعَالِيَ كَثِيرَةٍ، وَٱلْأَغْنِيَاءُ يَجْلِسُونَ فِي ٱلسَّافِلِ. ٦ 6
ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು.
قَدْ رَأَيْتُ عَبِيدًا عَلَى ٱلْخَيْلِ، وَرُؤَسَاءَ مَاشِينَ عَلَى ٱلْأَرْضِ كَٱلْعَبِيدِ. ٧ 7
ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ.
مَنْ يَحْفُرْ هُوَّةً يَقَعْ فِيهَا، وَمَنْ يَنْقُضْ جِدَارًا تَلْدَغْهُ حَيَّةٌ. ٨ 8
ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.
مَنْ يَقْلَعْ حِجَارَةً يُوجَعْ بِهَا. مَنْ يُشَقِّقُ حَطَبًا يَكُونُ فِي خَطَرٍ مِنْهُ. ٩ 9
ಗಣಿಯಿಂದ ಬಂಡೆಗಳನ್ನು ಸೀಳುವವನು ಗಾಯಗೊಳ್ಳುವನು. ಮರಕಡಿಯುವವನು ಅದರಿಂದಲೇ ಅಪಾಯಕ್ಕೊಳಗಾಗುವನು.
إِنْ كَلَّ ٱلْحَدِيدُ وَلَمْ يُسَنِّنْ هُوَ حَدَّهُ، فَلْيَزِدِ ٱلْقُوَّةَ. أَمَّا ٱلْحِكْمَةُ فَنَافِعَةٌ لِلْإِنْجَاحِ. ١٠ 10
ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.
إِنْ لَدَغَتِ ٱلْحَيَّةُ بِلَا رُقْيَةٍ، فَلَا مَنْفَعَةَ لِلرَّاقِي. ١١ 11
ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಏನು ಪ್ರಯೋಜನ?
كَلِمَاتُ فَمِ ٱلْحَكِيمِ نِعْمَةٌ، وَشَفَتَا ٱلْجَاهِلِ تَبْتَلِعَانِهِ. ١٢ 12
ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.
اِبْتِدَاءُ كَلَامِ فَمِهِ جَهَالَةٌ، وَآخِرُ فَمِهِ جُنُونٌ رَدِيءٌ. ١٣ 13
ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.
وَٱلْجَاهِلُ يُكَثِّرُ ٱلْكَلَامَ. لَا يَعْلَمُ إِنْسَانٌ مَا يَكُونُ. وَمَاذَا يَصِيرُ بَعْدَهُ مَنْ يُخْبِرُهُ؟ ١٤ 14
ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.
تَعَبُ ٱلْجُهَلَاءِ يُعْيِيهِمْ، لِأَنَّهُ لَا يَعْلَمُ كَيْفَ يَذْهَبُ إِلَى ٱلْمَدِينَةِ ١٥ 15
ಮೂಢರ ಕಷ್ಟವು ಅವರನ್ನು ದಣಿಸುತ್ತದೆ. ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು.
وَيْلٌ لَكِ أَيَّتُهَا ٱلْأَرْضُ إِذَا كَانَ مَلِكُكِ وَلَدًا، وَرُؤَسَاؤُكِ يَأْكُلُونَ فِي ٱلصَّبَاحِ. ١٦ 16
ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!
طُوبَى لَكِ أَيَّتُهَا ٱلْأَرْضُ إِذَا كَانَ مَلِكُكِ ٱبْنَ شُرَفَاءَ، وَرُؤَسَاؤُكِ يَأْكُلُونَ فِي ٱلْوَقْتِ لِلْقُوَّةِ لَا لِلسُّكْرِ. ١٧ 17
ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ, ರಾಜಕುಮಾರರು ಕುಡುಕರಾಗುವುದಕ್ಕೆ ಬದಲು, ಸರಿಯಾದ ಸಮಯದಲ್ಲಿ ಶಕ್ತಿಗಾಗಿ ಊಟ ಮಾಡಿದರೆ ಅದು ದೇಶಕ್ಕೆ ಆಶೀರ್ವಾದ.
بِٱلْكَسَلِ ٱلْكَثِيرِ يَهْبِطُ ٱلسَّقْفُ، وَبِتَدَلِّي ٱلْيَدَيْنِ يَكِفُ ٱلْبَيْتُ. ١٨ 18
ಸೋಮಾರಿತನದಿಂದ ಮನೆ ಕುಸಿಯುತ್ತದೆ. ಜೋಲುಗೈಯಿಂದ ಮನೆ ಸೋರುತ್ತದೆ.
لِلْضَّحِكِ يَعْمَلُونَ وَلِيمَةً، وَٱلْخَمْرُ تُفَرِّحُ ٱلْعَيْشَ. أَمَّا ٱلْفِضَّةُ فَتُحَصِّلُ ٱلْكُلَّ. ١٩ 19
ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.
لَا تَسُبَّ ٱلْمَلِكَ وَلَا فِي فِكْرِكَ، وَلَا تَسُبَّ ٱلْغَنِيَّ فِي مَضْجَعِكَ، لِأَنَّ طَيْرَ ٱلسَّمَاءِ يَنْقُلُ ٱلصَّوْتَ، وَذُو ٱلْجَنَاحِ يُخْبِرُ بِٱلْأَمْرِ. ٢٠ 20
ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.

< اَلْجَامِعَةِ 10 >