< اَلْجَامِعَةِ 9 >

لِأَنَّ هَذَا كُلَّهُ جَعَلْتُهُ فِي قَلْبِي، وَٱمْتَحَنْتُ هَذَا كُلَّهُ: أَنَّ ٱلصِّدِّيقِينَ وَٱلْحُكَمَاءَ وَأَعْمَالَهُمْ فِي يَدِ ٱللهِ. ٱلْإِنْسَانُ لَا يَعْلَمُ حُبًّا وَلَا بُغْضًا. ٱلْكُلُّ أَمَامَهُمُ. ١ 1
ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
ٱلْكُلُّ عَلَى مَا لِلْكُلِّ. حَادِثَةٌ وَاحِدَةٌ لِلصِّدِّيقِ وَلِلشِّرِّيرِ، لِلصَّالِحِ وَلِلطَّاهِرِ وَلِلنَّجِسِ، لِلذَّابِحِ وَلِلَّذِي لَا يَذْبَحُ، كَٱلصَّالِحِ ٱلْخَاطِئُ. ٱلْحَالِفُ كَٱلَّذِي يَخَافُ ٱلْحَلْفَ. ٢ 2
ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.
هَذَا أَشَرُّ كُلِّ مَا عُمِلَ تَحْتَ ٱلشَّمْسِ: أَنَّ حَادِثَةً وَاحِدَةً لِلْجَمِيعِ. وَأَيْضًا قَلْبُ بَنِي ٱلْبَشَرِ مَلآنُ مِنَ ٱلشَّرِّ، وَٱلْحَمَاقَةُ فِي قَلْبِهِمْ وَهُمْ أَحْيَاءٌ، وَبَعْدَ ذَلِكَ يَذْهَبُونَ إِلَى ٱلْأَمْوَاتِ. ٣ 3
ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
لِأَنَّهُ مَنْ يُسْتَثْنَى؟ لِكُلِّ ٱلْأَحْيَاءِ يُوجَدُ رَجَاءٌ، فَإِنَّ ٱلْكَلْبَ ٱلْحَيَّ خَيْرٌ مِنَ ٱلْأَسَدِ ٱلْمَيْتِ. ٤ 4
ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
لِأَنَّ ٱلْأَحْيَاءَ يَعْلَمُونَ أَنَّهُمْ سَيَمُوتُونَ، أَمَّا ٱلْمَوْتَى فَلَا يَعْلَمُونَ شَيْئًا، وَلَيْسَ لَهُمْ أَجْرٌ بَعْدُ لِأَنَّ ذِكْرَهُمْ نُسِيَ. ٥ 5
ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
وَمَحَبَّتُهُمْ وَبُغْضَتُهُمْ وَحَسَدُهُمْ هَلَكَتْ مُنْذُ زَمَانٍ، وَلَا نَصِيبَ لَهُمْ بَعْدُ إِلَى ٱلْأَبَدِ، فِي كُلِّ مَا عُمِلَ تَحْتَ ٱلشَّمْسِ. ٦ 6
ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.
اِذْهَبْ كُلْ خُبْزَكَ بِفَرَحٍ، وَٱشْرَبْ خَمْرَكَ بِقَلْبٍ طَيِّبٍ، لِأَنَّ ٱللهَ مُنْذُ زَمَانٍ قَدْ رَضِيَ عَمَلَكَ. ٧ 7
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
لِتَكُنْ ثِيَابُكَ فِي كُلِّ حِينٍ بَيْضَاءَ، وَلَا يُعْوِزْ رَأْسَكَ ٱلدُّهْنُ. ٨ 8
ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.
اِلْتَذَّ عَيْشًا مَعَ ٱلْمَرْأَةِ ٱلَّتِي أَحْبَبْتَهَا كُلَّ أَيَّامِ حَيَاةِ بَاطِلِكَ ٱلَّتِي أَعْطَاكَ إِيَّاهَا تَحْتَ ٱلشَّمْسِ، كُلَّ أَيَّامِ بَاطِلِكَ، لِأَنَّ ذَلِكَ نَصِيبُكَ فِي ٱلْحَيَاةِ وَفِي تَعَبِكَ ٱلَّذِي تَتْعَبُهُ تَحْتَ ٱلشَّمْسِ. ٩ 9
ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
كُلُّ مَا تَجِدُهُ يَدُكَ لِتَفْعَلَهُ فَٱفْعَلْهُ بِقُوَّتِكَ، لِأَنَّهُ لَيْسَ مِنْ عَمَلٍ وَلَا ٱخْتِرَاعٍ وَلَا مَعْرِفَةٍ وَلَا حِكْمَةٍ فِي ٱلْهَاوِيَةِ ٱلَّتِي أَنْتَ ذَاهِبٌ إِلَيْهَا. (Sheol h7585) ١٠ 10
೧೦ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ. (Sheol h7585)
فَعُدْتُ وَرَأَيْتُ تَحْتَ ٱلشَّمْسِ: أَنَّ ٱلسَّعْيَ لَيْسَ لِلْخَفِيفِ، وَلَا ٱلْحَرْبَ لِلْأَقْوِيَاءِ، وَلَا ٱلْخُبْزَ لِلْحُكَمَاءِ، وَلَا ٱلْغِنَى لِلْفُهَمَاءِ، وَلَا ٱلنِّعْمَةَ لِذَوِي ٱلْمَعْرِفَةِ، لِأَنَهُ ٱلْوَقْتُ وَٱلْعَرَضُ يُلَاقِيَانِهِمْ كَافَّةً. ١١ 11
೧೧ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
لِأَنَّ ٱلْإِنْسَانَ أَيْضًا لَا يَعْرِفُ وَقْتَهُ. كَٱلْأَسْمَاكِ ٱلَّتِي تُؤْخَذُ بِشَبَكَةٍ مُهْلِكَةٍ، وَكَالْعَصَافِيرِ ٱلَّتِي تُؤْخَذُ بِٱلشَّرَكِ، كَذَلِكَ تُقْتَنَصُ بَنُو ٱلْبَشَرِ فِي وَقْتِ شَرٍّ، إِذْ يَقَعُ عَلَيْهِمْ بَغْتَةً. ١٢ 12
೧೨ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.
هَذِهِ ٱلْحِكْمَةُ رَأَيْتُهَا أَيْضًا تَحْتَ ٱلشَّمْسِ، وَهِيَ عَظِيمَةٌ عِنْدِي: ١٣ 13
೧೩ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.
مَدِينَةٌ صَغِيرَةٌ فِيهَا أُنَاسٌ قَلِيلُونَ، فَجَاءَ عَلَيْهَا مَلِكٌ عَظِيمٌ وَحَاصَرَهَا وَبَنَى عَلَيْهَا أَبْرَاجًا عَظِيمَةً. ١٤ 14
೧೪ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.
وَوُجِدَ فِيهَا رَجُلٌ مِسْكِينٌ حَكِيمٌ، فَنَجَّى هُوَ ٱلْمَدِينَةَ بِحِكْمَتِهِ. وَمَا أَحَدٌ ذَكَرَ ذَلِكَ ٱلرَّجُلَ ٱلْمِسْكِينَ! ١٥ 15
೧೫ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.
فَقُلْتُ: «ٱلْحِكْمَةُ خَيْرٌ مِنَ ٱلْقُوَّةِ». أَمَّا حِكْمَةُ ٱلْمِسْكِينِ فَمُحْتَقَرَةٌ، وَكَلَامُهُ لَا يُسْمَعُ. ١٦ 16
೧೬ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
كَلِمَاتُ ٱلْحُكَمَاءِ تُسْمَعُ فِي ٱلْهُدُوءِ، أَكْثَرَ مِنْ صُرَاخِ ٱلْمُتَسَلِّطِ بَيْنَ ٱلْجُهَّالِ. ١٧ 17
೧೭ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.
اَلْحِكْمَةُ خَيْرٌ مِنْ أَدَوَاتِ ٱلْحَرْبِ. أَمَّا خَاطِئٌ وَاحِدٌ فَيُفْسِدُ خَيْرًا جَزِيلًا. ١٨ 18
೧೮ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.

< اَلْجَامِعَةِ 9 >