< اَلْجَامِعَةِ 9 >

لِأَنَّ هَذَا كُلَّهُ جَعَلْتُهُ فِي قَلْبِي، وَٱمْتَحَنْتُ هَذَا كُلَّهُ: أَنَّ ٱلصِّدِّيقِينَ وَٱلْحُكَمَاءَ وَأَعْمَالَهُمْ فِي يَدِ ٱللهِ. ٱلْإِنْسَانُ لَا يَعْلَمُ حُبًّا وَلَا بُغْضًا. ٱلْكُلُّ أَمَامَهُمُ. ١ 1
ನಾನು ಇವೆಲ್ಲವುಗಳ ಮೇಲೆ ಅಭ್ಯಾಸ ಮಾಡಿ ಈ ತೀರ್ಮಾನಕ್ಕೆ ಬಂದೆನು. ಅದೇನೆಂದರೆ, ನೀತಿವಂತರ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಆದರೆ ಅವರಿಗೆ ಪ್ರೀತಿ ಕಾದಿದೆಯೋ ಅಥವಾ ದ್ವೇಷ ಕಾದಿದೆಯೋ ಎಂದು ಯಾರಿಗೂ ಗೊತ್ತಿಲ್ಲ.
ٱلْكُلُّ عَلَى مَا لِلْكُلِّ. حَادِثَةٌ وَاحِدَةٌ لِلصِّدِّيقِ وَلِلشِّرِّيرِ، لِلصَّالِحِ وَلِلطَّاهِرِ وَلِلنَّجِسِ، لِلذَّابِحِ وَلِلَّذِي لَا يَذْبَحُ، كَٱلصَّالِحِ ٱلْخَاطِئُ. ٱلْحَالِفُ كَٱلَّذِي يَخَافُ ٱلْحَلْفَ. ٢ 2
ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು.
هَذَا أَشَرُّ كُلِّ مَا عُمِلَ تَحْتَ ٱلشَّمْسِ: أَنَّ حَادِثَةً وَاحِدَةً لِلْجَمِيعِ. وَأَيْضًا قَلْبُ بَنِي ٱلْبَشَرِ مَلآنُ مِنَ ٱلشَّرِّ، وَٱلْحَمَاقَةُ فِي قَلْبِهِمْ وَهُمْ أَحْيَاءٌ، وَبَعْدَ ذَلِكَ يَذْهَبُونَ إِلَى ٱلْأَمْوَاتِ. ٣ 3
ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.
لِأَنَّهُ مَنْ يُسْتَثْنَى؟ لِكُلِّ ٱلْأَحْيَاءِ يُوجَدُ رَجَاءٌ، فَإِنَّ ٱلْكَلْبَ ٱلْحَيَّ خَيْرٌ مِنَ ٱلْأَسَدِ ٱلْمَيْتِ. ٤ 4
ಜೀವಂತರ ಗುಂಪಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವುದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಉತ್ತಮ.
لِأَنَّ ٱلْأَحْيَاءَ يَعْلَمُونَ أَنَّهُمْ سَيَمُوتُونَ، أَمَّا ٱلْمَوْتَى فَلَا يَعْلَمُونَ شَيْئًا، وَلَيْسَ لَهُمْ أَجْرٌ بَعْدُ لِأَنَّ ذِكْرَهُمْ نُسِيَ. ٥ 5
ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.
وَمَحَبَّتُهُمْ وَبُغْضَتُهُمْ وَحَسَدُهُمْ هَلَكَتْ مُنْذُ زَمَانٍ، وَلَا نَصِيبَ لَهُمْ بَعْدُ إِلَى ٱلْأَبَدِ، فِي كُلِّ مَا عُمِلَ تَحْتَ ٱلشَّمْسِ. ٦ 6
ಅವರ ಪ್ರೀತಿಯೂ ಅವರ ದ್ವೇಷವೂ ಅವರ ಅಸೂಯೆ ಕೂಡ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಸೂರ್ಯನ ಕೆಳಗೆ ನಡೆಯುವ ಯಾವ ಸಂಗತಿಗಳಲ್ಲಿಯೂ ಸತ್ತವರಿಗೆ ಇನ್ನೆಂದಿಗೂ ಪಾಲು ಇಲ್ಲ.
اِذْهَبْ كُلْ خُبْزَكَ بِفَرَحٍ، وَٱشْرَبْ خَمْرَكَ بِقَلْبٍ طَيِّبٍ، لِأَنَّ ٱللهَ مُنْذُ زَمَانٍ قَدْ رَضِيَ عَمَلَكَ. ٧ 7
ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.
لِتَكُنْ ثِيَابُكَ فِي كُلِّ حِينٍ بَيْضَاءَ، وَلَا يُعْوِزْ رَأْسَكَ ٱلدُّهْنُ. ٨ 8
ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ, ನಿನ್ನ ತಲೆಗೆ ಯಾವಾಗಲೂ ಎಣ್ಣೆ ಹಚ್ಚಿರಲಿ.
اِلْتَذَّ عَيْشًا مَعَ ٱلْمَرْأَةِ ٱلَّتِي أَحْبَبْتَهَا كُلَّ أَيَّامِ حَيَاةِ بَاطِلِكَ ٱلَّتِي أَعْطَاكَ إِيَّاهَا تَحْتَ ٱلشَّمْسِ، كُلَّ أَيَّامِ بَاطِلِكَ، لِأَنَّ ذَلِكَ نَصِيبُكَ فِي ٱلْحَيَاةِ وَفِي تَعَبِكَ ٱلَّذِي تَتْعَبُهُ تَحْتَ ٱلشَّمْسِ. ٩ 9
ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.
كُلُّ مَا تَجِدُهُ يَدُكَ لِتَفْعَلَهُ فَٱفْعَلْهُ بِقُوَّتِكَ، لِأَنَّهُ لَيْسَ مِنْ عَمَلٍ وَلَا ٱخْتِرَاعٍ وَلَا مَعْرِفَةٍ وَلَا حِكْمَةٍ فِي ٱلْهَاوِيَةِ ٱلَّتِي أَنْتَ ذَاهِبٌ إِلَيْهَا. (Sheol h7585) ١٠ 10
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ. (Sheol h7585)
فَعُدْتُ وَرَأَيْتُ تَحْتَ ٱلشَّمْسِ: أَنَّ ٱلسَّعْيَ لَيْسَ لِلْخَفِيفِ، وَلَا ٱلْحَرْبَ لِلْأَقْوِيَاءِ، وَلَا ٱلْخُبْزَ لِلْحُكَمَاءِ، وَلَا ٱلْغِنَى لِلْفُهَمَاءِ، وَلَا ٱلنِّعْمَةَ لِذَوِي ٱلْمَعْرِفَةِ، لِأَنَهُ ٱلْوَقْتُ وَٱلْعَرَضُ يُلَاقِيَانِهِمْ كَافَّةً. ١١ 11
ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.
لِأَنَّ ٱلْإِنْسَانَ أَيْضًا لَا يَعْرِفُ وَقْتَهُ. كَٱلْأَسْمَاكِ ٱلَّتِي تُؤْخَذُ بِشَبَكَةٍ مُهْلِكَةٍ، وَكَالْعَصَافِيرِ ٱلَّتِي تُؤْخَذُ بِٱلشَّرَكِ، كَذَلِكَ تُقْتَنَصُ بَنُو ٱلْبَشَرِ فِي وَقْتِ شَرٍّ، إِذْ يَقَعُ عَلَيْهِمْ بَغْتَةً. ١٢ 12
ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.
هَذِهِ ٱلْحِكْمَةُ رَأَيْتُهَا أَيْضًا تَحْتَ ٱلشَّمْسِ، وَهِيَ عَظِيمَةٌ عِنْدِي: ١٣ 13
ಸೂರ್ಯನ ಕೆಳಗೆ ನಾನು ಜ್ಞಾನವನ್ನು ಈ ವಿಧವಾಗಿ ನೋಡಿದ್ದೇನೆ. ಇದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.
مَدِينَةٌ صَغِيرَةٌ فِيهَا أُنَاسٌ قَلِيلُونَ، فَجَاءَ عَلَيْهَا مَلِكٌ عَظِيمٌ وَحَاصَرَهَا وَبَنَى عَلَيْهَا أَبْرَاجًا عَظِيمَةً. ١٤ 14
ಒಂದು ಕಾಲದಲ್ಲಿ ಒಂದು ಸಣ್ಣ ನಗರವಿತ್ತು, ಅದರಲ್ಲಿ ಕೆಲವೇ ಜನರಿದ್ದರು. ಆಗ ಅಲ್ಲಿ ಒಬ್ಬ ಮಹಾ ಅರಸನು ಬಂದು ಅದನ್ನು ಮುತ್ತಿಗೆ ಹಾಕಿ, ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.
وَوُجِدَ فِيهَا رَجُلٌ مِسْكِينٌ حَكِيمٌ، فَنَجَّى هُوَ ٱلْمَدِينَةَ بِحِكْمَتِهِ. وَمَا أَحَدٌ ذَكَرَ ذَلِكَ ٱلرَّجُلَ ٱلْمِسْكِينَ! ١٥ 15
ಆಗ ಅದರಲ್ಲಿ ಒಬ್ಬ ಜ್ಞಾನಿಯಾದ ಬಡ ಮನುಷ್ಯನು ಬಂದು, ತನ್ನ ಜ್ಞಾನದಿಂದ ಆ ಪಟ್ಟಣವನ್ನು ರಕ್ಷಿಸಿದನು. ಆದರೂ ಆ ಬಡ ಮನುಷ್ಯನನ್ನು ಯಾರೂ ಜ್ಞಾಪಕ ಮಾಡಿಕೊಳ್ಳಲಿಲ್ಲ.
فَقُلْتُ: «ٱلْحِكْمَةُ خَيْرٌ مِنَ ٱلْقُوَّةِ». أَمَّا حِكْمَةُ ٱلْمِسْكِينِ فَمُحْتَقَرَةٌ، وَكَلَامُهُ لَا يُسْمَعُ. ١٦ 16
ಇದನ್ನು ನೋಡಿ ನಾನು, “ಬಲಕ್ಕಿಂತ ಜ್ಞಾನವು ಉತ್ತಮ; ಆದರೆ ಜನರು ಬಡವನ ಜ್ಞಾನವನ್ನು ತಿರಸ್ಕಾರ ಮಾಡುತ್ತಾರೆ, ಅವನ ಮಾತುಗಳನ್ನು ಯಾರೂ ಲಕ್ಷಿಸುವುದಿಲ್ಲ,” ಎಂದುಕೊಂಡೆನು.
كَلِمَاتُ ٱلْحُكَمَاءِ تُسْمَعُ فِي ٱلْهُدُوءِ، أَكْثَرَ مِنْ صُرَاخِ ٱلْمُتَسَلِّطِ بَيْنَ ٱلْجُهَّالِ. ١٧ 17
ಹುಚ್ಚರನ್ನು ಆಳುವವನ ಕೂಗಾಟಕ್ಕಿಂತಲೂ ಜ್ಞಾನಿಯ ಸಮಾಧಾನದ ಮಾತಿಗೆ ಮಹತ್ವ ಇದೆ.
اَلْحِكْمَةُ خَيْرٌ مِنْ أَدَوَاتِ ٱلْحَرْبِ. أَمَّا خَاطِئٌ وَاحِدٌ فَيُفْسِدُ خَيْرًا جَزِيلًا. ١٨ 18
ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.

< اَلْجَامِعَةِ 9 >