< أَسْتِير 9 >

وَفِي ٱلشَّهْرِ ٱلثَّانِي عَشَرَ، أَيْ شَهْرِ أَذَارَ، فِي ٱلْيَوْمِ ٱلثَّالِثَ عَشَرَ مِنْهُ، حِينَ قَرُبَ كَلَامُ ٱلْمَلِكِ وَأَمْرُهُ مِنَ ٱلإِجْرَاءِ، فِي ٱلْيَوْمِ ٱلَّذِي ٱنْتَظَرَ فِيهِ أَعْدَاءُ ٱلْيَهُودِ أَنْ يَتَسَلَّطُوا عَلَيْهِمْ، فَتَحَوَّلَ ذَلِكَ، حَتَّى إِنَّ ٱلْيَهُودَ تَسَلَّطُوا عَلَى مُبْغِضِيهِمِ. ١ 1
ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.
ٱجْتَمَعَ ٱلْيَهُودُ فِي مُدُنِهِمْ فِي كُلِّ بِلَادِ ٱلْمَلِكِ أَحَشْوِيرُوشَ لِيَمُدُّوا أَيْدِيَهُمْ إِلَى طَالِبِي أَذِيَّتِهِمْ، فَلَمْ يَقِفْ أَحَدٌ قُدَّامَهُمْ لِأَنَّ رُعْبَهُمْ سَقَطَ عَلَى جَمِيعِ ٱلشُّعُوبِ. ٢ 2
ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.
وكُلُّ رُؤَسَاءِ ٱلْبُلْدَانِ وَٱلْمَرَازِبَةُ وَٱلْوُلَاةُ وَعُمَّالُ ٱلْمَلِكِ سَاعَدُوا ٱلْيَهُودَ، لِأَنَّ رُعْبَ مُرْدَخَايَ سَقَطَ عَلَيْهِمْ. ٣ 3
ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.
لِأَنَّ مُرْدَخَايَ كَانَ عَظِيمًا فِي بَيْتِ ٱلْمَلِكِ، وَسَارَ خَبَرُهُ فِي كُلِّ ٱلْبُلْدَانِ، لِأَنَّ ٱلرَّجُلَ مُرْدَخَايَ كَانَ يَتَزَايَدُ عَظَمَةً. ٤ 4
ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.
فَضَرَبَ ٱلْيَهُودُ جَمِيعَ أَعْدَائِهِمْ ضَرْبَةَ سَيْفٍ وَقَتْلٍ وَهَلَاكٍ، وَعَمِلُوا بِمُبْغِضِيهِمْ مَا أَرَادُوا. ٥ 5
ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.
وَقَتَلَ ٱلْيَهُودُ فِي شُوشَنَ ٱلْقَصْرِ وَأَهْلَكُوا خَمْسَ مِئَةِ رَجُلٍ. ٦ 6
ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನು ಕೊಂದುಬಿಟ್ಟರು.
وَفَرْشَنْدَاثَا وَدَلْفُونَ وَأَسْفَاثَا، ٧ 7
ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,
وَفُورَاثَا وَأَدَلْيَا وَأَرِيدَاثَا، ٨ 8
ಪೋರಾತ, ಆದಲ್ಯ, ಅರೀದಾತ,
وَفَرْمَشْتَا وَأَرِيسَايَ وَأَرِيدَايَ وَيِزَاثَا، ٩ 9
ಪರ್ಮಷ್ಟ, ಅರೀಸೈ, ಅರಿದೈ, ವೈಜಾತ ಎಂಬುವವರಿದ್ದರು.
عَشَرَةَ، بَنِي هَامَانَ بْنِ هَمَدَاثَا عَدُوِّ ٱلْيَهُودِ، قَتَلُوهُمْ وَلَكِنَّهُمْ لَمْ يَمُدُّوا أَيْدِيَهُمْ إِلَى ٱلنَّهْبِ. ١٠ 10
೧೦ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.
فِي ذَلِكَ ٱلْيَوْمِ أُتِيَ بِعَدَدِ ٱلْقَتْلَى فِي شُوشَنَ ٱلْقَصْرِ إِلَى بَيْنِ يَدَيِ ٱلْمَلِكِ. ١١ 11
೧೧ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.
فَقَالَ ٱلْمَلِكُ لِأَسْتِيرَ ٱلْمَلِكَةِ فِي شُوشَنَ ٱلْقَصْرِ: «قَدْ قَتَلَ ٱلْيَهُودُ وَأَهْلَكُوا خَمْسَ مِئَةِ رَجُلٍ، وَبَنِي هَامَانَ ٱلْعَشَرَةَ، فَمَاذَا عَمِلُوا فِي بَاقِي بُلْدَانِ ٱلْمَلِكِ؟ فَمَا هُوَ سُؤْلُكِ فَيُعْطَى لَكِ؟ وَمَا هِيَ طِلْبَتُكِ بَعْدُ فَتُقْضَى؟». ١٢ 12
೧೨ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.
فَقَالَتْ أَسْتِيرُ: «إِنْ حَسُنَ عِنْدَ ٱلْمَلِكِ فَلْيُعْطَ غَدًا أَيْضًا لِلْيَهُودِ ٱلَّذِينَ فِي شُوشَنَ أَنْ يَعْمَلُوا كَمَا فِي هَذَا ٱلْيَوْمِ، وَيَصْلِبُوا بَنِي هَامَانَ ٱلْعَشَرَةَ عَلَى ٱلْخَشَبَةِ». ١٣ 13
೧೩ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.
فَأَمَرَ ٱلْمَلِكُ أَنْ يَعْمَلُوا هَكَذَا، وَأُعْطِيَ ٱلْأَمْرُ فِي شُوشَنَ. فَصَلَبُوا بَنِي هَامَانَ ٱلْعَشَرَةَ. ١٤ 14
೧೪ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
ثُمَّ ٱجْتَمَعَ ٱلْيَهُودُ ٱلَّذِينَ فِي شُوشَنَ، فِي ٱلْيَوْمِ ٱلرَّابِعِ عَشَرَ أَيْضًا مِنْ شَهْرِ أَذَارَ، وَقَتَلُوا فِي شُوشَنَ ثَلَاثَ مِئَةِ رَجُلٍ، وَلَكِنَّهُمْ لَمْ يَمُدُّوا أَيْدِيَهُمْ إِلَى ٱلنَّهْبِ. ١٥ 15
೧೫ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.
وَبَاقِي ٱلْيَهُودِ ٱلَّذِينَ فِي بُلْدَانِ ٱلْمَلِكِ ٱجْتَمَعُوا وَوَقَفُوا لِأَجْلِ أَنْفُسِهِمْ وَٱسْتَرَاحُوا مِنْ أَعْدَائِهِمْ، وَقَتَلُوا مِنْ مُبْغِضِيهِمْ خَمْسَةً وَسَبْعِينَ أَلْفًا، وَلَكِنَّهُمْ لَمْ يَمُدُّوا أَيْدِيَهُمْ إِلَى ٱلنَّهْبِ. ١٦ 16
೧೬ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.
فِي ٱلْيَوْمِ ٱلثَّالِثِ عَشَرَ مِنْ شَهْرِ أَذَارَ. وَٱسْتَرَاحُوا فِي ٱلْيَوْمِ ٱلرَّابِعِ عَشَرَ مِنْهُ وَجَعَلُوهُ يَوْمَ شُرْبٍ وَفَرَحٍ. ١٧ 17
೧೭ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.
وَٱلْيَهُودُ ٱلَّذِينَ فِي شُوشَنَ ٱجْتَمَعُوا فِي ٱلثَّالِثِ عَشَرَ وَٱلرَّابِعِ عَشَرَ مِنْهُ، وَٱسْتَرَاحُوا فِي ٱلْخَامِسِ عَشَرَ وَجَعَلُوهُ يَوْمَ شُرْبٍ وَفَرَحٍ. ١٨ 18
೧೮ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.
لِذَلِكَ يَهُودُ ٱلْأَعْرَاءِ ٱلسَّاكِنُونَ فِي مُدُنِ ٱلْأَعْرَاءِ جَعَلُوا ٱلْيَوْمَ ٱلرَّابِعَ عَشَرَ مِنْ شَهْرِ أَذَارَ لِلْفَرَحِ وَٱلشُّرْبِ، وَيَوْمًا طَيِّبًا وَلِإِرْسَالِ أَنْصِبَةٍ مِنْ كُلِّ وَاحِدٍ إِلَى صَاحِبِهِ. ١٩ 19
೧೯ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
وَكَتَبَ مُرْدَخَايُ هَذِهِ ٱلْأُمُورَ وَأَرْسَلَ رَسَائِلَ إِلَى جَمِيعِ ٱلْيَهُودِ ٱلَّذِينَ فِي كُلِّ بُلْدَانِ ٱلْمَلِكِ أَحَشْوِيرُوشَ ٱلْقَرِيبِينَ وَٱلْبَعِيدِينَ، ٢٠ 20
೨೦ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:
لِيُوجِبَ عَلَيْهِمْ أَنْ يُعَيِّدُوا فِي ٱلْيَوْمِ ٱلرَّابِعِ عَشَرَ مِنْ شَهْرِ أَذَارَ، وَٱلْيَوْمِ ٱلْخَامِسِ عَشَرَ مِنْهُ فِي كُلِّ سَنَةٍ، ٢١ 21
೨೧ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.
حَسَبَ ٱلْأَيَّامِ ٱلَّتِي ٱسْتَرَاحَ فِيهَا ٱلْيَهُودُ مِنْ أَعْدَائِهِمْ وَٱلشَّهْرِ ٱلَّذِي تَحَوَّلَ عِنْدَهُمْ مِنْ حُزْنٍ إِلَى فَرَحٍ وَمِنْ نَوْحٍ إِلَى يَوْمٍ طَيِّبٍ، لِيَجْعَلُوهَا أَيَّامَ شُرْبٍ وَفَرَحٍ وَإِرْسَالِ أَنْصِبَةٍ مِنْ كُلِّ وَاحِدٍ إِلَى صَاحِبِهِ وَعَطَايَا لِلْفُقَرَاءِ. ٢٢ 22
೨೨ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
فَقَبِلَ ٱلْيَهُودُ مَا ٱبْتَدَأُوا يَعْمَلُونَهُ وَمَا كَتَبَهُ مُرْدَخَايُ إِلَيْهِمْ. ٢٣ 23
೨೩ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು.
وَلِأَنَّ هَامَانَ بْنَ هَمَدَاثَا ٱلْأَجَاجِيَّ عَدُوَّ ٱلْيَهُودِ جَمِيعًا تَفَكَّرَ عَلَى ٱلْيَهُودِ لِيُبِيدَهُمْ وَأَلْقَى فُورًا، أَيْ قُرْعَةً، لِإِفْنَائِهِمْ وَإِبَادَتِهِمْ. ٢٤ 24
೨೪ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ.
وَعِنْدَ دُخُولِهَا إِلَى أَمَامِ ٱلْمَلِكِ أَمَرَ بِكِتَابَةٍ أَنْ يُرَدَّ تَدْبِيرُهُ ٱلرَّدِيءُ ٱلَّذِي دَبَّرَهُ ضِدَّ ٱلْيَهُودِ عَلَى رَأْسِهِ، وَأَنْ يَصْلِبُوهُ هُوَ وَبَنِيهِ عَلَى ٱلْخَشَبَةِ. ٢٥ 25
೨೫ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.
لِذَلِكَ دَعُوا تِلْكَ ٱلْأَيَّامِ «فُورِيمَ» عَلَى ٱسْمِ ٱلْفُورِ. لِذَلِكَ مِنْ أَجْلِ جَمِيعِ كَلِمَاتِ هَذِهِ ٱلرِّسَالَةِ وَمَا رَأَوْهُ مِنْ ذَلِكَ وَمَا أَصَابَهُمْ، ٢٦ 26
೨೬ಆ “ಪೂರ್” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು.
أَوْجَبَ ٱلْيَهُودُ وَقَبِلُوا عَلَى أَنْفُسِهِمْ وَعَلَى نَسْلِهِمْ وَعَلَى جَمِيعِ ٱلَّذِينَ يَلْتَصِقُونَ بِهِمْ حَتَّى لَا يَزُولَ، أَنْ يُعَيِّدُوا هَذَيْنِ ٱلْيَوْمَيْنِ حَسَبَ كِتَابَتِهِمَا وَحَسَبَ أَوْقَاتِهِمَا كُلَّ سَنَةٍ، ٢٧ 27
೨೭ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,
وَأَنْ يُذْكَرَ هَذَانِ ٱلْيَوْمَانِ وَيُحْفَظَا فِي دَوْرٍ فَدَوْرٍ وَعَشِيرَةٍ فَعَشِيرَةٍ وَبِلَادٍ فَبِلَادٍ وَمَدِينَةٍ فَمَدِينَةٍ. وَيَوْمَا ٱلْفُورِ هَذَانِ لَا يَزُولَانِ مِنْ وَسَطِ ٱلْيَهُودِ، وَذِكْرُهُمَا لَا يَفْنَى مِنْ نَسْلِهِمْ. ٢٨ 28
೨೮ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.
وَكَتَبَتْ أَسْتِيرُ ٱلْمَلِكَةُ بِنْتُ أَبِيحَائِلَ وَمُرْدَخَايُ ٱلْيَهُودِيُّ بِكُلِّ سُلْطَانٍ بِإِيجَابِ رِسَالَةِ ٱلْفُورِيمِ هَذِهِ ثَانِيَةً، ٢٩ 29
೨೯ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.
وَأَرْسَلَ ٱلْكِتَابَاتِ إِلَى جَمِيعِ ٱلْيَهُودِ، إِلَى كُوَرِ مَمْلَكَةِ أَحَشْوِيرُوشَ ٱلْمِئَةِ وَٱلسَّبْعِ وَٱلْعِشْرِينَ بِكَلَامِ سَلَامٍ وَأَمَانَةٍ، ٣٠ 30
೩೦ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.
لِإِيجَابِ يَوْمَيِ ٱلْفُورِيمِ هَذَيْنِ فِي أَوْقَاتِهِمَا، كَمَا أَوْجَبَ عَلَيْهِمْ مُرْدَخَايُ ٱلْيَهُودِيُّ وَأَسْتِيرُ ٱلْمَلِكَةُ، وَكَمَا أَوْجَبُوا عَلَى أَنْفُسِهِمْ وَعَلَى نَسْلِهِمْ أُمُورَ ٱلْأَصْوَامِ وَصُرَاخِهِمْ. ٣١ 31
೩೧ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು.
وَأَمْرُ أَسْتِيرَ أَوْجَبَ أُمُورَ ٱلْفُورِيمِ هَذِهِ، فَكُتِبَتْ فِي ٱلسِّفْرِ. ٣٢ 32
೩೨ಎಸ್ತೇರಳ ಆ ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಪಟ್ಟಿತು.

< أَسْتِير 9 >