< اَلْخُرُوجُ 1 >

وَهَذِهِ أَسْمَاءُ بَنِي إِسْرَائِيلَ ٱلَّذِينَ جَاءُوا إِلَى مِصْرَ. مَعَ يَعْقُوبَ جَاءَ كُلُّ إِنْسَانٍ وَبَيْتُهُ: ١ 1
ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:
رَأُوبَيْنُ وَشِمْعُونُ وَلَاوِي وَيَهُوذَا ٢ 2
ರೂಬೇನ್, ಸಿಮೆಯೋನ್, ಲೇವಿ, ಯೆಹೂದ,
وَيَسَّاكَرُ وَزَبُولُونُ وَبَنْيَامِينُ ٣ 3
ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್,
وَدَانُ وَنَفْتَالِي وَجَادُ وَأَشِيرُ. ٤ 4
ದಾನ್, ಗಾದ್, ನಫ್ತಾಲಿ ಮತ್ತು ಆಶೇರ್.
وَكَانَتْ جَمِيعُ نُفُوسِ ٱلْخَارِجِينَ مِنْ صُلْبِ يَعْقُوبَ سَبْعِينَ نَفْسًا. وَلَكِنْ يُوسُفُ كَانَ فِي مِصْرَ. ٥ 5
ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.
وَمَاتَ يُوسُفُ وَكُلُّ إِخْوَتِهِ وَجَمِيعُ ذَلِكَ ٱلْجِيلِ. ٦ 6
ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.
وَأَمَّا بَنُو إِسْرَائِيلَ فَأَثْمَرُوا وَتَوَالَدُوا وَنَمَوْا وَكَثُرُوا كَثِيرًا جِدًّا، وَٱمْتَلَأَتِ ٱلْأَرْضُ مِنْهُمْ. ٧ 7
ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.
ثُمَّ قَامَ مَلِكٌ جَدِيدٌ عَلَى مِصْرَ لَمْ يَكُنْ يَعْرِفُ يُوسُفَ. ٨ 8
ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
فَقَالَ لِشَعْبِهِ: «هُوَذَا بَنُو إِسْرَائِيلَ شَعْبٌ أَكْثَرُ وَأَعْظَمُ مِنَّا. ٩ 9
ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ.
هَلُمَّ نَحْتَالُ لَهُمْ لِئَلَّا يَنْمُوا، فَيَكُونَ إِذَا حَدَثَتْ حَرْبٌ أَنَّهُمْ يَنْضَمُّونَ إِلَى أَعْدَائِنَا وَيُحَارِبُونَنَا وَيَصْعَدُونَ مِنَ ٱلْأَرْضِ». ١٠ 10
೧೦ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ
فَجَعَلُوا عَلَيْهِمْ رُؤَسَاءَ تَسْخِيرٍ لِكَيْ يُذِلُّوهُمْ بِأَثْقَالِهِمْ، فَبَنَوْا لِفِرْعَوْنَ مَدِينَتَيْ مَخَازِنَ: فِيثُومَ، وَرَعَمْسِيسَ. ١١ 11
೧೧ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.
وَلَكِنْ بِحَسْبِمَا أَذَلُّوهُمْ هَكَذَا نَمَوْا وَٱمْتَدُّوا. فَٱخْتَشَوْا مِنْ بَنِي إِسْرَائِيلَ. ١٢ 12
೧೨ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.
فَٱسْتَعْبَدَ ٱلْمِصْرِيُّونَ بَنِي إِسْرَائِيلَ بِعُنْفٍ، ١٣ 13
೧೩ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.
وَمَرَّرُوا حَيَاتَهُمْ بِعُبُودِيَّةٍ قَاسِيَةٍ فِي ٱلطِّينِ وَٱللِّبْنِ وَفِي كُلِّ عَمَلٍ فِي ٱلْحَقْلِ. كُلِّ عَمَلِهِمِ ٱلَّذِي عَمِلُوهُ بِوَاسِطَتِهِمْ عُنْفًا. ١٤ 14
೧೪ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.
وَكَلَّمَ مَلِكُ مِصْرَ قَابِلَتَيِ ٱلْعِبْرَانِيَّاتِ ٱللَّتَيْنِ ٱسْمُ إِحْدَاهُمَا شِفْرَةُ وَٱسْمُ ٱلْأُخْرَى فُوعَةُ، ١٥ 15
೧೫ಇದಲ್ಲದೆ ಐಗುಪ್ತ ದೇಶದ ಅರಸನು “ಶಿಪ್ರಾ” ಮತ್ತು “ಪೂಗಾ” ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು.
وَقَالَ: «حِينَمَا تُوَلِّدَانِ ٱلْعِبْرَانِيَّاتِ وَتَنْظُرَانِهِنَّ عَلَى ٱلْكَرَاسِيِّ، إِنْ كَانَ ٱبْنًا فَٱقْتُلَاهُ، وَإِنْ كَانَ بِنْتًا فَتَحْيَا». ١٦ 16
೧೬ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.
وَلَكِنَّ ٱلْقَابِلَتَيْنِ خَافَتَا ٱللهَ وَلَمْ تَفْعَلَا كَمَا كَلَّمَهُمَا مَلِكُ مِصْرَ، بَلِ ٱسْتَحْيَتَا ٱلْأَوْلَادَ. ١٧ 17
೧೭ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
فَدَعَا مَلِكُ مِصْرَ ٱلْقَابِلَتَيْنِ وَقَالَ لَهُمَا: «لِمَاذَا فَعَلْتُمَا هَذَا ٱلْأَمْرَ وَٱسْتَحْيَيْتُمَا ٱلْأَوْلَادَ؟» ١٨ 18
೧೮ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.
فَقَالَتِ ٱلْقَابِلَتَانِ لِفِرْعَوْنَ: «إِنَّ ٱلنِّسَاءَ ٱلْعِبْرَانِيَّاتِ لَسْنَ كَٱلْمِصْرِيَّاتِ، فَإِنَّهُنَّ قَوِيَّاتٌ يَلِدْنَ قَبْلَ أَنْ تَأْتِيَهُنَّ ٱلْقَابِلَةُ». ١٩ 19
೧೯ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು.
فَأَحْسَنَ ٱللهُ إِلَى ٱلْقَابِلَتَيْنِ، وَنَمَا ٱلشَّعْبُ وَكَثُرَ جِدًّا. ٢٠ 20
೨೦ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.
وَكَانَ إِذْ خَافَتِ ٱلْقَابِلَتَانِ ٱللهَ أَنَّهُ صَنَعَ لَهُمَا بُيُوتًا. ٢١ 21
೨೧ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.
ثُمَّ أَمَرَ فِرْعَوْنُ جَمِيعَ شَعْبِهِ قَائِلًا: «كُلُّ ٱبْنٍ يُولَدُ تَطْرَحُونَهُ فِي ٱلنَّهْرِ، لَكِنَّ كُلَّ بِنْتٍ تَسْتَحْيُونَهَا». ٢٢ 22
೨೨ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.

< اَلْخُرُوجُ 1 >