< اَلْخُرُوجُ 13 >

وَكَلَّمَ ٱلرَّبُّ مُوسَى قَائِلًا: ١ 1
ಯೆಹೋವನು ಮೋಶೆಯ ಸಂಗಡ ಮಾತನಾಡಿ,
«قَدِّسْ لِي كُلَّ بِكْرٍ، كُلَّ فَاتِحِ رَحِمٍ مِنْ بَنِي إِسْرَائِيلَ، مِنَ ٱلنَّاسِ وَمِنَ ٱلْبَهَائِمِ. إِنَّهُ لِي». ٢ 2
“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
وَقَالَ مُوسَى لِلشَّعْبِ: «ٱذْكُرُوا هَذَا ٱلْيَوْمَ ٱلَّذِي فِيهِ خَرَجْتُمْ مِنْ مِصْرَ مِنْ بَيْتِ ٱلْعُبُودِيَّةِ، فَإِنَّهُ بِيَدٍ قَوِيَّةٍ أَخْرَجَكُمُ ٱلرَّبُّ مِنْ هُنَا. وَلَا يُؤْكَلُ خَمِيرٌ. ٣ 3
ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
اَلْيَوْمَ أَنْتُمْ خَارِجُونَ فِي شَهْرِ أَبِيبَ. ٤ 4
ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.
وَيَكُونُ مَتَى أَدْخَلَكَ ٱلرَّبُّ أَرْضَ ٱلْكَنْعَانِيِّينَ وَٱلْحِثِّيِّينَ وَٱلْأَمُورِيِّينَ وَٱلْحِوِّيِّينَ وَٱلْيَبُوسِيِّينَ ٱلَّتِي حَلَفَ لِآبَائِكَ أَنْ يُعْطِيَكَ، أَرْضًا تَفِيضُ لَبَنًا وَعَسَلًا، أَنَّكَ تَصْنَعُ هَذِهِ ٱلْخِدْمَةَ فِي هَذَا ٱلشَّهْرِ. ٥ 5
ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.
سَبْعَةَ أَيَّامٍ تَأْكُلُ فَطِيرًا، وَفِي ٱلْيَوْمِ ٱلسَّابِعِ عِيدٌ لِلرَّبِّ. ٦ 6
ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
فَطِيرٌ يُؤْكَلُ ٱلسَّبْعَةَ ٱلْأَيَّامِ، وَلَا يُرَى عِنْدَكَ مُخْتَمِرٌ، وَلَا يُرَى عِنْدَكَ خَمِيرٌ فِي جَمِيعِ تُخُومِكَ. ٧ 7
ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.
«وَتُخْبِرُ ٱبْنَكَ فِي ذَلِكَ ٱلْيَوْمِ قَائِلًا: مِنْ أَجْلِ مَا صَنَعَ إِلَيَّ ٱلرَّبُّ حِينَ أَخْرَجَنِي مِنْ مِصْرَ. ٨ 8
ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.
وَيَكُونُ لَكَ عَلَامَةً عَلَى يَدِكَ، وَتَذْكَارًا بَيْنَ عَيْنَيْكَ، لِكَيْ تَكُونَ شَرِيعَةُ ٱلرَّبِّ فِي فَمِكَ. لِأَنَّهُ بِيَدٍ قَوِيَّةٍ أَخْرَجَكَ ٱلرَّبُّ مِنْ مِصْرَ. ٩ 9
ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
فَتَحْفَظُ هَذِهِ ٱلْفَرِيضَةَ فِي وَقْتِهَا مِنْ سَنَةٍ إِلَى سَنَةٍ. ١٠ 10
೧೦ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.
«وَيَكُونُ مَتَى أَدْخَلَكَ ٱلرَّبُّ أَرْضَ ٱلْكَنْعَانِيِّينَ كَمَا حَلَفَ لَكَ وَلِآبَائِكَ، وَأَعْطَاكَ إِيَّاهَا، ١١ 11
೧೧“ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,
أَنَّكَ تُقَدِّمُ لِلرَّبِّ كُلَّ فَاتِحِ رَحِمٍ، وَكُلَّ بِكْرٍ مِنْ نِتَاجِ ٱلْبَهَائِمِ ٱلَّتِي تَكُونُ لَكَ. ٱلذُّكُورُ لِلرَّبِّ. ١٢ 12
೧೨ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
وَلَكِنَّ كُلَّ بِكْرِ حِمَارٍ تَفْدِيهِ بِشَاةٍ. وَإِنْ لَمْ تَفْدِهِ فَتَكْسِرُ عُنُقَهُ. وَكُلُّ بِكْرِ إِنْسَانٍ مِنْ أَوْلَادِكَ تَفْدِيهِ. ١٣ 13
೧೩ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.
«وَيَكُونُ مَتَى سَأَلَكَ ٱبْنُكَ غَدًا قَائِلًا: مَا هَذَا؟ تَقُولُ لَهُ: بِيَدٍ قَوِيَّةٍ أَخْرَجَنَا ٱلرَّبُّ مِنْ مِصْرَ مِنْ بَيْتِ ٱلْعُبُودِيَّةِ. ١٤ 14
೧೪ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
وَكَانَ لَمَّا تَقَسَّى فِرْعَوْنُ عَنْ إِطْلَاقِنَا أَنَّ ٱلرَّبَّ قَتَلَ كُلَّ بِكْرٍ فِي أَرْضِ مِصْرَ، مِنْ بِكْرِ ٱلنَّاسِ إِلَى بِكْرِ ٱلْبَهَائِمِ. لِذَلِكَ أَنَا أَذْبَحُ لِلرَّبِّ ٱلذُّكُورَ مِنْ كُلِّ فَاتِحِ رَحِمٍ، وَأَفْدِي كُلَّ بِكْرٍ مِنْ أَوْلَادِي. ١٥ 15
೧೫ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
فَيَكُونُ عَلَامَةً عَلَى يَدِكَ، وَعِصَابَةً بَيْنَ عَيْنَيْكَ. لِأَنَّهُ بِيَدٍ قَوِيَّةٍ أَخْرَجَنَا ٱلرَّبُّ مِنْ مِصْرَ». ١٦ 16
೧೬ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.
وَكَانَ لَمَّا أَطْلَقَ فِرْعَوْنُ ٱلشَّعْبَ أَنَّ ٱللهَ لَمْ يَهْدِهِمْ فِي طَرِيقِ أَرْضِ ٱلْفِلِسْطِينِيِّينَ مَعَ أَنَّهَا قَرِيبَةٌ، لِأَنَّ ٱللهَ قَالَ: «لِئَلَّا يَنْدَمَ ٱلشَّعْبُ إِذَا رَأَوْا حَرْبًا وَيَرْجِعُوا إِلَى مِصْرَ». ١٧ 17
೧೭ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
فَأَدَارَ ٱللهُ ٱلشَّعْبَ فِي طَرِيقِ بَرِّيَّةِ بَحْرِ سُوفٍ. وَصَعِدَ بَنُو إِسْرَائِيلَ مُتَجَهِّزِينَ مِنْ أَرْضِ مِصْرَ. ١٨ 18
೧೮ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.
وَأَخَذَ مُوسَى عِظَامَ يُوسُفَ مَعَهُ، لِأَنَّهُ كَانَ قَدِ ٱسْتَحْلَفَ بَنِي إِسْرَائِيلَ بِحَلْفٍ قَائِلًا: «إِنَّ ٱللهَ سَيَفْتَقِدُكُمْ فَتُصْعِدُونَ عِظَامِي مِنْ هُنَا مَعَكُمْ». ١٩ 19
೧೯ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.
وَٱرْتَحَلُوا مِنْ سُكُّوتَ وَنَزَلُوا فِي إِيثَامَ فِي طَرَفِ ٱلْبَرِّيَّةِ. ٢٠ 20
೨೦ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
وَكَانَ ٱلرَّبُّ يَسِيرُ أَمَامَهُمْ نَهَارًا فِي عَمُودِ سَحَابٍ لِيَهْدِيَهُمْ فِي ٱلطَّرِيقِ، وَلَيْلًا فِي عَمُودِ نَارٍ لِيُضِيءَ لَهُمْ. لِكَيْ يَمْشُوا نَهَارًا وَلَيْلًا. ٢١ 21
೨೧ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
لَمْ يَبْرَحْ عَمُودُ ٱلسَّحَابِ نَهَارًا وَعَمُودُ ٱلنَّارِ لَيْلًا مِنْ أَمَامِ ٱلشَّعْبِ. ٢٢ 22
೨೨ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.

< اَلْخُرُوجُ 13 >