< اَلْخُرُوجُ 19 >
فِي ٱلشَّهْرِ ٱلثَّالِثِ بَعْدَ خُرُوجِ بَنِي إِسْرَائِيلَ مِنْ أَرْضِ مِصْرَ، فِي ذَلِكَ ٱلْيَوْمِ جَاءُوا إِلَى بَرِّيَّةِ سِينَاءَ. | ١ 1 |
೧ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.
ٱرْتَحَلُوا مِنْ رَفِيدِيمَ وَجَاءُوا إِلَى بَرِّيَّةِ سِينَاءَ فَنَزَلُوا فِي ٱلْبَرِّيَّةِ. هُنَاكَ نَزَلَ إِسْرَائِيلُ مُقَابِلَ ٱلْجَبَلِ. | ٢ 2 |
೨ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.
وَأَمَّا مُوسَى فَصَعِدَ إِلَى ٱللهِ. فَنَادَاهُ ٱلرَّبُّ مِنَ ٱلْجَبَلِ قَائِلًا: «هَكَذَا تَقُولُ لِبَيْتِ يَعْقُوبَ، وَتُخْبِرُ بَنِي إِسْرَائِيلَ: | ٣ 3 |
೩ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.
أَنْتُمْ رَأَيْتُمْ مَا صَنَعْتُ بِٱلْمِصْرِيِّينَ. وَأَنَا حَمَلْتُكُمْ عَلَى أَجْنِحَةِ ٱلنُّسُورِ وَجِئْتُ بِكُمْ إِلَيَّ. | ٤ 4 |
೪‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
فَٱلْآنَ إِنْ سَمِعْتُمْ لِصَوْتِي، وَحَفِظْتُمْ عَهْدِي تَكُونُونَ لِي خَاصَّةً مِنْ بَيْنِ جَمِيعِ ٱلشُّعُوبِ. فَإِنَّ لِي كُلَّ ٱلْأَرْضِ. | ٥ 5 |
೫ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
وَأَنْتُمْ تَكُونُونَ لِي مَمْلَكَةَ كَهَنَةٍ وَأُمَّةً مُقَدَّسَةً. هَذِهِ هِيَ ٱلْكَلِمَاتُ ٱلَّتِي تُكَلِّمُ بِهَا بَنِي إِسْرَائِيلَ». | ٦ 6 |
೬ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.
فَجَاءَ مُوسَى وَدَعَا شُيُوخَ ٱلشَّعْبِ وَوَضَعَ قُدَّامَهُمْ كُلَّ هَذِهِ ٱلْكَلِمَاتِ ٱلَّتِي أَوْصَاهُ بِهَا ٱلرَّبُّ. | ٧ 7 |
೭ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
فَأَجَابَ جَمِيعُ ٱلشَّعْبِ مَعًا وَقَالُوا: «كُلُّ مَا تَكَلَّمَ بِهِ ٱلرَّبُّ نَفْعَلُ». فَرَدَّ مُوسَى كَلَامَ ٱلشَّعْبِ إِلَى ٱلرَّبِّ. | ٨ 8 |
೮ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.
فَقَالَ ٱلرَّبُّ لِمُوسَى: «هَا أَنَا آتٍ إِلَيْكَ فِي ظَلَامِ ٱلسَّحَابِ لِكَيْ يَسْمَعَ ٱلشَّعْبُ حِينَمَا أَتَكَلَّمُ مَعَكَ، فَيُؤْمِنُوا بِكَ أَيْضًا إِلَى ٱلْأَبَدِ». وَأَخْبَرَ مُوسَى ٱلرَّبَّ بِكَلَامِ ٱلشَّعْبِ. | ٩ 9 |
೯ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
فَقَالَ ٱلرَّبُّ لِمُوسَى: «ٱذْهَبْ إِلَى ٱلشَّعْبِ وَقَدِّسْهُمُ ٱلْيَوْمَ وَغَدًا، وَلْيَغْسِلُوا ثِيَابَهُمْ، | ١٠ 10 |
೧೦ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,
وَيَكُونُوا مُسْتَعِدِّينَ لِلْيَوْمِ ٱلثَّالِثِ. لِأَنَّهُ فِي ٱلْيَوْمِ ٱلثَّالِثِ يَنْزِلُ ٱلرَّبُّ أَمَامَ عْيُونِ جَمِيعِ ٱلشَّعْبِ عَلَى جَبَلِ سِينَاءَ. | ١١ 11 |
೧೧ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
وَتُقِيمُ لِلشَّعْبِ حُدُودًا مِنْ كُلِّ نَاحِيَةٍ، قَائِلًا: ٱحْتَرِزُوا مِنْ أَنْ تَصْعَدُوا إِلَى ٱلْجَبَلِ أَوْ تَمَسُّوا طَرَفَهُ. كُلُّ مَنْ يَمَسُّ ٱلْجَبَلَ يُقْتَلُ قَتْلًا. | ١٢ 12 |
೧೨ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’
لَا تَمَسُّهُ يَدٌ بَلْ يُرْجَمُ رَجْمًا أَوْ يُرْمَى رَمْيًا. بَهِيمَةً كَانَ أَمْ إِنْسَانًا لَا يَعِيشُ. أَمَّا عِنْدَ صَوْتِ ٱلْبُوقِ فَهُمْ يَصْعَدُونَ إِلَى ٱلْجَبَلِ». | ١٣ 13 |
೧೩ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.
فَٱنْحَدَرَ مُوسَى مِنَ ٱلْجَبَلِ إِلَى ٱلشَّعْبِ، وَقَدَّسَ ٱلشَّعْبَ وَغَسَلُوا ثِيَابَهُمْ. | ١٤ 14 |
೧೪ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
وَقَالَ لِلشَّعْبِ: «كُونُوا مُسْتَعِدِّينَ لِلْيَوْمِ ٱلثَّالِثِ. لَا تَقْرُبُوا ٱمْرَأَةً». | ١٥ 15 |
೧೫ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.
وَحَدَثَ فِي ٱلْيَوْمِ ٱلثَّالِثِ لَمَّا كَانَ ٱلصَّبَاحُ أَنَّهُ صَارَتْ رُعُودٌ وَبُرُوقٌ وَسَحَابٌ ثَقِيلٌ عَلَى ٱلْجَبَلِ، وَصَوْتُ بُوقٍ شَدِيدٌ جِدًّا. فَٱرْتَعَدَ كُلُّ ٱلشَّعْبِ ٱلَّذِي فِي ٱلْمَحَلَّةِ. | ١٦ 16 |
೧೬ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
وَأَخْرَجَ مُوسَى ٱلشَّعْبَ مِنَ ٱلْمَحَلَّةِ لِمُلَاقَاةِ ٱللهِ، فَوَقَفُوا فِي أَسْفَلِ ٱلْجَبَلِ. | ١٧ 17 |
೧೭ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.
وَكَانَ جَبَلُ سِينَاءَ كُلُّهُ يُدَخِّنُ مِنْ أَجْلِ أَنَّ ٱلرَّبَّ نَزَلَ عَلَيْهِ بِٱلنَّارِ، وَصَعِدَ دُخَانُهُ كَدُخَانِ ٱلْأَتُونِ، وَٱرْتَجَفَ كُلُّ ٱلْجَبَلِ جِدًّا. | ١٨ 18 |
೧೮ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
فَكَانَ صَوْتُ ٱلْبُوقِ يَزْدَادُ ٱشْتِدَادًا جِدًّا، وَمُوسَى يَتَكَلَّمُ وَٱللهُ يُجِيبُهُ بِصَوْتٍ. | ١٩ 19 |
೧೯ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
وَنَزَلَ ٱلرَّبُّ عَلَى جَبَلِ سِينَاءَ، إِلَى رَأْسِ ٱلْجَبَلِ، وَدَعَا ٱللهُ مُوسَى إِلَى رَأْسِ ٱلْجَبَلِ. فَصَعِدَ مُوسَى. | ٢٠ 20 |
೨೦ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
فَقَالَ ٱلرَّبُّ لِمُوسَى: «ٱنْحَدِرْ حَذِّرِ ٱلشَّعْبَ لِئَلَّا يَقْتَحِمُوا إِلَى ٱلرَّبِّ لِيَنْظُرُوا، فَيَسْقُطَ مِنْهُمْ كَثِيرُونَ. | ٢١ 21 |
೨೧ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
وَلْيَتَقَدَّسْ أَيْضًا ٱلْكَهَنَةُ ٱلَّذِينَ يَقْتَرِبُونَ إِلَى ٱلرَّبِّ لِئَلَّا يَبْطِشَ بِهِمِ ٱلرَّبُّ». | ٢٢ 22 |
೨೨ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.
فَقَالَ مُوسَى لِلرَّبِّ: «لَا يَقْدِرُ ٱلشَّعْبُ أَنْ يَصْعَدَ إِلَى جَبَلِ سِينَاءَ، لِأَنَّكَ أَنْتَ حَذَّرْتَنَا قَائِلًا: أَقِمْ حُدُودًا لِلْجَبَلِ وَقَدِّسْهُ». | ٢٣ 23 |
೨೩ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
فَقَالَ لَهُ ٱلرَّبُّ: «ٱذْهَبِ ٱنْحَدِرْ ثُمَّ ٱصْعَدْ أَنْتَ وَهَارُونُ مَعَكَ. وَأَمَّا ٱلْكَهَنَةُ وَٱلشَّعْبُ فَلَا يَقْتَحِمُوا لِيَصْعَدُوا إِلَى ٱلرَّبِّ لِئَلَّا يَبْطِشَ بِهِمْ». | ٢٤ 24 |
೨೪ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.
فَٱنْحَدَرَ مُوسَى إِلَى ٱلشَّعْبِ وَقَالَ لَهُمْ. | ٢٥ 25 |
೨೫ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.