< حِزْقِيَال 14 >

فَجَاءَ إِلَيَّ رِجَالٌ مِنْ شُيُوخِ إِسْرَائِيلَ وَجَلَسُوا أَمَامِي. ١ 1
ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,
فَصَارَتْ إِلَيَّ كَلِمَةُ ٱلرَّبِّ قَائِلَةً: ٢ 2
ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,
«يَا ٱبْنَ آدَمَ، هَؤُلَاءِ ٱلرِّجَالُ قَدْ أَصْعَدُوا أَصْنَامَهُمْ إِلَى قُلُوبِهِمْ، وَوَضَعُوا مَعْثَرَةَ إِثْمِهِمْ تِلْقَاءَ أَوْجُهِهِمْ. فَهَلْ أُسْأَلُ مِنْهُمْ سُؤَالًا؟ ٣ 3
“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
لِأَجْلِ ذَلِكَ كَلِّمْهُمْ وَقُلْ لَهُمْ: هَكَذَا قَالَ ٱلسَّيِّدُ ٱلرَّبُّ: كُلُّ إِنْسَانٍ مِنْ بَيْتِ إِسْرَائِيلَ ٱلَّذِي يُصْعِدُ أَصْنَامَهُ إِلَى قَلْبِهِ، وَيَضَعُ مَعْثَرَةَ إِثْمِهِ تِلْقَاءَ وَجْهِهِ، ثُمَّ يَأْتِي إِلَى ٱلنَّبِيِّ، فَإِنِّي أَنَا ٱلرَّبُّ أُجِيبُهُ حَسَبَ كَثْرَةِ أَصْنَامِهِ، ٤ 4
ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.
لِكَيْ آخُذَ بَيْتَ إِسْرَائِيلَ بِقُلُوبِهِمْ، لِأَنَّهُمْ كُلَّهُمْ قَدِ ٱرْتَدُّوا عَنِّي بِأَصْنَامِهِمْ. ٥ 5
ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
لِذَلِكَ قُلْ لِبَيْتِ إِسْرَائِيلَ: هَكَذَا قَالَ ٱلسَّيِّدُ ٱلرَّبُّ: تُوبُوا وَٱرْجِعُوا عَنْ أَصْنَامِكُمْ، وَعَنْ كُلِّ رَجَاسَاتِكُمُ ٱصْرِفُوا وُجُوهَكُمْ. ٦ 6
ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
لِأَنَّ كُلَّ إِنْسَانٍ مِنْ بَيْتِ إِسْرَائِيلَ أَوْ مِنَ ٱلْغُرَبَاءِ ٱلْمُتَغَرِّبِينَ فِي إِسْرَائِيلَ، إِذَا ٱرْتَدَّ عَنِّي وَأَصْعَدَ أَصْنَامَهُ إِلَى قَلْبِهِ، وَوَضَعَ مَعْثَرَةَ إِثْمِهِ تِلْقَاءَ وَجْهِهِ، ثُمَّ جَاءَ إِلَى ٱلنَّبِيِّ لِيَسْأَلَهُ عَنِّي، فَإِنِّي أَنَا ٱلرَّبُّ أُجِيبُهُ بِنَفْسِي. ٧ 7
“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
وَأَجْعَلُ وَجْهِي ضِدَّ ذَلِكَ ٱلْإِنْسَانِ وَأَجْعَلُهُ آيَةً وَمَثَلًا، وَأَسْتَأْصِلُهُ مِنْ وَسْطِ شَعْبِي، فَتَعْلَمُونَ أَنِّي أَنَا ٱلرَّبُّ. ٨ 8
ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
فَإِذَا ضَلَّ ٱلنَّبِيُّ وَتَكَلَّمَ كَلَامًا، فَأَنَا ٱلرَّبَّ قَدْ أَضْلَلْتُ ذَلِكَ ٱلنَّبِيَّ، وَسَأَمُدُّ يَدِي عَلَيْهِ وَأُبِيدُهُ مِنْ وَسْطِ شَعْبِي إِسْرَائِيلَ. ٩ 9
“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
وَيَحْمِلُونَ إِثْمَهُمْ. كَإِثْمِ ٱلسَّائِلِ يَكُونُ إِثْمُ ٱلنَّبِيِّ. ١٠ 10
೧೦ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.
لِكَيْ لَا يَعُودَ يَضِلُّ عَنِّي بَيْتُ إِسْرَائِيلَ، وَلِكَيْ لَا يَعُودُوا يَتَنَجَّسُونَ بِكُلِّ مَعَاصِيهِمْ، بَلْ لِيَكُونُوا لِي شَعْبًا وَأَنَا أَكُونُ لَهُمْ إِلَهًا، يَقُولُ ٱلسَّيِّدُ ٱلرَّبُّ». ١١ 11
೧೧ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.
وَكَانَتْ إِلَيَّ كَلِمَةُ ٱلرَّبِّ قَائِلَةً: ١٢ 12
೧೨ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
«يَا ٱبْنَ آدَمَ، إِنْ أَخْطَأَتْ إِلَيَّ أَرْضٌ وَخَانَتْ خِيَانَةً، فَمَدَدْتُ يَدِي عَلَيْهَا وَكَسَرْتُ لَهَا قِوَامَ ٱلْخُبْزِ، وَأَرْسَلْتُ عَلَيْهَا ٱلْجُوعَ، وَقَطَعْتُ مِنْهَا ٱلْإِنْسَانَ وَٱلْحَيَوَانَ، ١٣ 13
೧೩“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.
وَكَانَ فِيهَا هَؤُلَاءِ ٱلرِّجَالُ ٱلثَّلَاثَةُ: نُوحٌ وَدَانِيآلُ وَأَيُّوبُ، فَإِنَّهُمْ إِنَّمَا يُخَلِّصُونَ أَنْفُسَهُمْ بِبِرِّهِمْ، يَقُولُ ٱلسَّيِّدُ ٱلرَّبُّ. ١٤ 14
೧೪ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.
إِنْ عَبَّرْتُ فِي ٱلْأَرْضِ وُحُوشًا رَدِيئَةً فَأَثْكَلُوهَا وَصَارَتْ خَرَابًا بِلَا عَابِرٍ بِسَبَبِ ٱلْوُحُوشِ، ١٥ 15
೧೫“ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,
وَفِي وَسْطِهَا هَؤُلَاءِ ٱلرِّجَالُ ٱلثَّلَاثَةُ، فَحَيٌّ أَنَا، يَقُولُ ٱلسَّيِّدُ ٱلرَّبُّ، إِنَّهُمْ لَا يُخَلِّصُونَ بَنِينَ وَلَا بَنَاتٍ. هُمْ وَحْدَهُمْ يَخْلُصُونَ وَٱلْأَرْضُ تَصِيرُ خَرِبَةً. ١٦ 16
೧೬ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ.
أَوْ إِنْ جَلَبْتُ سَيْفًا عَلَى تِلْكَ ٱلْأَرْضِ وَقُلْتُ: يَا سَيْفُ ٱعْبُرْ فِي ٱلْأَرْضِ، وَقَطَعْتُ مِنْهَا ٱلْإِنْسَانَ وَٱلْحَيَوَانَ، ١٧ 17
೧೭“ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
وَفِي وَسْطِهَا هَؤُلَاءِ ٱلرِّجَالُ ٱلثَّلَاثَةُ، فَحَيٌّ أَنَا، يَقُولُ ٱلسَّيِّدُ ٱلرَّبُّ، إِنَّهُمْ لَا يُخَلِّصُونَ بَنِينَ وَلَا بَنَاتٍ، بَلْ هُمْ وَحْدَهُمْ يَخْلُصُونَ. ١٨ 18
೧೮ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
أَوْ إِنْ أَرْسَلْتُ وَبَأً عَلَى تِلْكَ ٱلْأَرْضِ، وَسَكَبْتُ غَضَبِي عَلَيْهَا بِٱلدَّمِ لِأَقْطَعَ مِنْهَا ٱلْإِنْسَانَ وَٱلْحَيَوَانَ، ١٩ 19
೧೯“ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,
وَفِي وَسْطِهَا نُوحٌ وَدَانِيآلُ وَأَيُّوبُ، فَحَيٌّ أَنَا، يَقُولُ ٱلسَّيِّدُ ٱلرَّبُّ، إِنَّهُمْ لَا يُخَلِّصُونَ ٱبْنًا وَلَا ٱبْنَةً. إِنَّمَا يُخَلِّصُونَ أَنْفُسَهُمْ بِبِرِّهِمْ. ٢٠ 20
೨೦ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
«لِأَنَّهُ هَكَذَا قَالَ ٱلسَّيِّدُ ٱلرَّبُّ: كَمْ بِٱلْحَرِيِّ إِنْ أَرْسَلْتُ أَحْكَامِي ٱلرَّدِيئَةَ عَلَى أُورُشَلِيمَ: سَيْفًا وَجُوعًا وَوَحْشًا رَدِيئًا وَوَبَأً، لِأَقْطَعَ مِنْهَا ٱلْإِنْسَانَ وَٱلْحَيَوَانَ! ٢١ 21
೨೧ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
فَهُوَذَا بَقِيَّةٌ فِيهَا نَاجِيَةٌ تُخْرَجُ بَنُونَ وَبَنَاتٌ. هُوَذَا يَخْرُجُونَ إِلَيْكُمْ فَتَنْظُرُونَ طَرِيقَهُمْ وَأَعْمَالَهُمْ، وَتَتَعَزَّوْنَ عَنِ ٱلشَّرِّ ٱلَّذِي جَلَبْتُهُ عَلَى أُورُشَلِيمَ عَنْ كُلِّ مَا جَلَبْتُهُ عَلَيْهَا. ٢٢ 22
೨೨ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.
وَيُعَزُّونَكُمْ إِذْ تَرَوْنَ طَرِيقَهُمْ وَأَعْمَالَهُمْ، فَتَعْلَمُونَ أَنِّي لَمْ أَصْنَعْ بِلَا سَبَبٍ كُلَّ مَا صَنَعْتُهُ فِيهَا، يَقُولُ ٱلسَّيِّدُ ٱلرَّبُّ». ٢٣ 23
೨೩ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.

< حِزْقِيَال 14 >