< حِزْقِيَال 14 >

فَجَاءَ إِلَيَّ رِجَالٌ مِنْ شُيُوخِ إِسْرَائِيلَ وَجَلَسُوا أَمَامِي. ١ 1
ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
فَصَارَتْ إِلَيَّ كَلِمَةُ ٱلرَّبِّ قَائِلَةً: ٢ 2
ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
«يَا ٱبْنَ آدَمَ، هَؤُلَاءِ ٱلرِّجَالُ قَدْ أَصْعَدُوا أَصْنَامَهُمْ إِلَى قُلُوبِهِمْ، وَوَضَعُوا مَعْثَرَةَ إِثْمِهِمْ تِلْقَاءَ أَوْجُهِهِمْ. فَهَلْ أُسْأَلُ مِنْهُمْ سُؤَالًا؟ ٣ 3
“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?
لِأَجْلِ ذَلِكَ كَلِّمْهُمْ وَقُلْ لَهُمْ: هَكَذَا قَالَ ٱلسَّيِّدُ ٱلرَّبُّ: كُلُّ إِنْسَانٍ مِنْ بَيْتِ إِسْرَائِيلَ ٱلَّذِي يُصْعِدُ أَصْنَامَهُ إِلَى قَلْبِهِ، وَيَضَعُ مَعْثَرَةَ إِثْمِهِ تِلْقَاءَ وَجْهِهِ، ثُمَّ يَأْتِي إِلَى ٱلنَّبِيِّ، فَإِنِّي أَنَا ٱلرَّبُّ أُجِيبُهُ حَسَبَ كَثْرَةِ أَصْنَامِهِ، ٤ 4
ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.
لِكَيْ آخُذَ بَيْتَ إِسْرَائِيلَ بِقُلُوبِهِمْ، لِأَنَّهُمْ كُلَّهُمْ قَدِ ٱرْتَدُّوا عَنِّي بِأَصْنَامِهِمْ. ٥ 5
ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’
لِذَلِكَ قُلْ لِبَيْتِ إِسْرَائِيلَ: هَكَذَا قَالَ ٱلسَّيِّدُ ٱلرَّبُّ: تُوبُوا وَٱرْجِعُوا عَنْ أَصْنَامِكُمْ، وَعَنْ كُلِّ رَجَاسَاتِكُمُ ٱصْرِفُوا وُجُوهَكُمْ. ٦ 6
“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.
لِأَنَّ كُلَّ إِنْسَانٍ مِنْ بَيْتِ إِسْرَائِيلَ أَوْ مِنَ ٱلْغُرَبَاءِ ٱلْمُتَغَرِّبِينَ فِي إِسْرَائِيلَ، إِذَا ٱرْتَدَّ عَنِّي وَأَصْعَدَ أَصْنَامَهُ إِلَى قَلْبِهِ، وَوَضَعَ مَعْثَرَةَ إِثْمِهِ تِلْقَاءَ وَجْهِهِ، ثُمَّ جَاءَ إِلَى ٱلنَّبِيِّ لِيَسْأَلَهُ عَنِّي، فَإِنِّي أَنَا ٱلرَّبُّ أُجِيبُهُ بِنَفْسِي. ٧ 7
“‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.
وَأَجْعَلُ وَجْهِي ضِدَّ ذَلِكَ ٱلْإِنْسَانِ وَأَجْعَلُهُ آيَةً وَمَثَلًا، وَأَسْتَأْصِلُهُ مِنْ وَسْطِ شَعْبِي، فَتَعْلَمُونَ أَنِّي أَنَا ٱلرَّبُّ. ٨ 8
ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.
فَإِذَا ضَلَّ ٱلنَّبِيُّ وَتَكَلَّمَ كَلَامًا، فَأَنَا ٱلرَّبَّ قَدْ أَضْلَلْتُ ذَلِكَ ٱلنَّبِيَّ، وَسَأَمُدُّ يَدِي عَلَيْهِ وَأُبِيدُهُ مِنْ وَسْطِ شَعْبِي إِسْرَائِيلَ. ٩ 9
“‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.
وَيَحْمِلُونَ إِثْمَهُمْ. كَإِثْمِ ٱلسَّائِلِ يَكُونُ إِثْمُ ٱلنَّبِيِّ. ١٠ 10
ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು.
لِكَيْ لَا يَعُودَ يَضِلُّ عَنِّي بَيْتُ إِسْرَائِيلَ، وَلِكَيْ لَا يَعُودُوا يَتَنَجَّسُونَ بِكُلِّ مَعَاصِيهِمْ، بَلْ لِيَكُونُوا لِي شَعْبًا وَأَنَا أَكُونُ لَهُمْ إِلَهًا، يَقُولُ ٱلسَّيِّدُ ٱلرَّبُّ». ١١ 11
ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
وَكَانَتْ إِلَيَّ كَلِمَةُ ٱلرَّبِّ قَائِلَةً: ١٢ 12
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
«يَا ٱبْنَ آدَمَ، إِنْ أَخْطَأَتْ إِلَيَّ أَرْضٌ وَخَانَتْ خِيَانَةً، فَمَدَدْتُ يَدِي عَلَيْهَا وَكَسَرْتُ لَهَا قِوَامَ ٱلْخُبْزِ، وَأَرْسَلْتُ عَلَيْهَا ٱلْجُوعَ، وَقَطَعْتُ مِنْهَا ٱلْإِنْسَانَ وَٱلْحَيَوَانَ، ١٣ 13
“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.
وَكَانَ فِيهَا هَؤُلَاءِ ٱلرِّجَالُ ٱلثَّلَاثَةُ: نُوحٌ وَدَانِيآلُ وَأَيُّوبُ، فَإِنَّهُمْ إِنَّمَا يُخَلِّصُونَ أَنْفُسَهُمْ بِبِرِّهِمْ، يَقُولُ ٱلسَّيِّدُ ٱلرَّبُّ. ١٤ 14
ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
إِنْ عَبَّرْتُ فِي ٱلْأَرْضِ وُحُوشًا رَدِيئَةً فَأَثْكَلُوهَا وَصَارَتْ خَرَابًا بِلَا عَابِرٍ بِسَبَبِ ٱلْوُحُوشِ، ١٥ 15
“ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,
وَفِي وَسْطِهَا هَؤُلَاءِ ٱلرِّجَالُ ٱلثَّلَاثَةُ، فَحَيٌّ أَنَا، يَقُولُ ٱلسَّيِّدُ ٱلرَّبُّ، إِنَّهُمْ لَا يُخَلِّصُونَ بَنِينَ وَلَا بَنَاتٍ. هُمْ وَحْدَهُمْ يَخْلُصُونَ وَٱلْأَرْضُ تَصِيرُ خَرِبَةً. ١٦ 16
ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
أَوْ إِنْ جَلَبْتُ سَيْفًا عَلَى تِلْكَ ٱلْأَرْضِ وَقُلْتُ: يَا سَيْفُ ٱعْبُرْ فِي ٱلْأَرْضِ، وَقَطَعْتُ مِنْهَا ٱلْإِنْسَانَ وَٱلْحَيَوَانَ، ١٧ 17
“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,
وَفِي وَسْطِهَا هَؤُلَاءِ ٱلرِّجَالُ ٱلثَّلَاثَةُ، فَحَيٌّ أَنَا، يَقُولُ ٱلسَّيِّدُ ٱلرَّبُّ، إِنَّهُمْ لَا يُخَلِّصُونَ بَنِينَ وَلَا بَنَاتٍ، بَلْ هُمْ وَحْدَهُمْ يَخْلُصُونَ. ١٨ 18
ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
أَوْ إِنْ أَرْسَلْتُ وَبَأً عَلَى تِلْكَ ٱلْأَرْضِ، وَسَكَبْتُ غَضَبِي عَلَيْهَا بِٱلدَّمِ لِأَقْطَعَ مِنْهَا ٱلْإِنْسَانَ وَٱلْحَيَوَانَ، ١٩ 19
“ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,
وَفِي وَسْطِهَا نُوحٌ وَدَانِيآلُ وَأَيُّوبُ، فَحَيٌّ أَنَا، يَقُولُ ٱلسَّيِّدُ ٱلرَّبُّ، إِنَّهُمْ لَا يُخَلِّصُونَ ٱبْنًا وَلَا ٱبْنَةً. إِنَّمَا يُخَلِّصُونَ أَنْفُسَهُمْ بِبِرِّهِمْ. ٢٠ 20
ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
«لِأَنَّهُ هَكَذَا قَالَ ٱلسَّيِّدُ ٱلرَّبُّ: كَمْ بِٱلْحَرِيِّ إِنْ أَرْسَلْتُ أَحْكَامِي ٱلرَّدِيئَةَ عَلَى أُورُشَلِيمَ: سَيْفًا وَجُوعًا وَوَحْشًا رَدِيئًا وَوَبَأً، لِأَقْطَعَ مِنْهَا ٱلْإِنْسَانَ وَٱلْحَيَوَانَ! ٢١ 21
“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?
فَهُوَذَا بَقِيَّةٌ فِيهَا نَاجِيَةٌ تُخْرَجُ بَنُونَ وَبَنَاتٌ. هُوَذَا يَخْرُجُونَ إِلَيْكُمْ فَتَنْظُرُونَ طَرِيقَهُمْ وَأَعْمَالَهُمْ، وَتَتَعَزَّوْنَ عَنِ ٱلشَّرِّ ٱلَّذِي جَلَبْتُهُ عَلَى أُورُشَلِيمَ عَنْ كُلِّ مَا جَلَبْتُهُ عَلَيْهَا. ٢٢ 22
ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.
وَيُعَزُّونَكُمْ إِذْ تَرَوْنَ طَرِيقَهُمْ وَأَعْمَالَهُمْ، فَتَعْلَمُونَ أَنِّي لَمْ أَصْنَعْ بِلَا سَبَبٍ كُلَّ مَا صَنَعْتُهُ فِيهَا، يَقُولُ ٱلسَّيِّدُ ٱلرَّبُّ». ٢٣ 23
ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

< حِزْقِيَال 14 >