< حِزْقِيَال 17 >

وَكَانَ إِلَيَّ كَلَامُ ٱلرَّبِّ قَائِلًا: ١ 1
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
«يَا ٱبْنَ آدَمَ، حَاجِ أُحْجِيَّةً وَمَثِّلْ مَثَلًا لِبَيْتِ إِسْرَائِيلَ، ٢ 2
“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.
وَقُلْ: هَكَذَا قَالَ ٱلسَّيِّدُ ٱلرَّبُّ: نَسْرٌ عَظِيمٌ كَبِيرُ ٱلْجَنَاحَيْنِ، طَوِيلُ ٱلْقَوَادِمِ، وَاسِعُ ٱلْمَنَاكِبِ، ذُو تَهَاوِيلَ، جَاءَ إِلَى لُبْنَانَ وَأَخَذَ فَرْعَ ٱلْأَرْزِ. ٣ 3
ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು,
قَصَفَ رَأْسَ خَرَاعِيبِهِ، وَجَاءَ بِهِ إِلَى أَرْضِ كَنْعَانَ، وَجَعَلَهُ فِي مَدِينَةِ ٱلتُّجَّارِ. ٤ 4
ಅದರ ಚಿಗುರುಗಳ ಕೊನೆಯನ್ನು ಕಿತ್ತು, ವ್ಯಾಪಾರದ ದೇಶಕ್ಕೆ ತೆಗೆದುಕೊಂಡುಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.
وَأَخَذَ مِنْ زَرْعِ ٱلْأَرْضِ وَأَلْقَاهُ فِي حَقْلِ ٱلزَّرْعِ، وَجَعَلَهُ عَلَى مِيَاهٍ كَثِيرَةٍ. أَقَامَهُ كَٱلصَّفْصَافِ، ٥ 5
“‘ಅದು ದೇಶದ ಬೀಜವನ್ನೂ ಸಹ ತೆಗೆದುಕೊಂಡುಹೋಗಿ ಫಲವತ್ತಾದ ಭೂಮಿಯಲ್ಲಿ ಇರಿಸಿತು. ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿತು.
فَنَبَتَ وَصَارَ كَرْمَةً مُنْتَشِرَةً قَصِيرَةَ ٱلسَّاقِ. ٱنْعَطَفَتْ عَلَيْهِ زَرَاجِينُهَا وَكَانَتْ أُصُولُهَا تَحْتَهُ، فَصَارَتْ كَرْمَةً وَأَنْبَتَتْ فُرُوعًا وَأَفْرَخَتْ أَغْصَانًا. ٦ 6
ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.
وَكَانَ نَسْرٌ آخَرُ عَظِيمٌ كَبِيرُ ٱلْجَنَاحَيْنِ وَاسِعُ ٱلْمَنْكَبِ، فَإِذَا بِهَذِهِ ٱلْكَرْمَةِ عَطَفَتْ عَلَيْهِ أُصُولَهَا وَأَنْبَتَتْ نَحْوَهُ زَرَاجِينَهَا لِيَسْقِيَهَا فِي خَمَائِلِ غَرْسِهَا. ٧ 7
“‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.
فِي حَقْلٍ جَيِّدٍ عَلَى مِيَاهٍ كَثِيرَةٍ هِيَ مَغْرُوسَةٌ لِتُنْبِتَ أَغْصَانَهَا وَتَحْمِلَ ثَمَرًا، فَتَكُونَ كَرْمَةً وَاسِعَةً. ٨ 8
ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’
قُلْ: هَكَذَا قَالَ ٱلسَّيِّدُ ٱلرَّبُّ: هَلْ تَنْجَحُ؟ أَفَلَا يَقْلَعُ أُصُولَهَا وَيَقْطَعُ ثَمَرَهَا فَتَيْبَسَ؟ كُلٌّ مِنْ أَوْرَاقِ أَغْصَانِهَا تَيْبَسُ، وَلَيْسَ بِذِرَاعٍ عَظِيمَةٍ أَوْ بِشَعْبٍ كَثِيرٍ لِيَقْلَعُوهَا مِنْ أُصُولِهَا. ٩ 9
“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.
هَا هِيَ ٱلْمَغْرُوسَةُ، فَهَلْ تَنْجَحُ؟ أَلَا تَيْبَسُ يَبْسًا كَأَنَّ رِيحًا شَرْقِيَّةً أَصَابَتْهَا؟ فِي خَمَائِلِ نَبْتِهَا تَيْبَسُ». ١٠ 10
ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’”
وَكَانَ إِلَيَّ كَلَامُ ٱلرَّبِّ قَائِلًا: ١١ 11
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
«قُلْ لِلْبَيْتِ ٱلْمُتَمَرِّدِ: أَمَا عَلِمْتُمْ مَا هَذِهِ؟ قُلْ: هُوَذَا مَلِكُ بَابِلَ قَدْ جَاءَ إِلَى أُورُشَلِيمَ وَأَخَذَ مَلِكَهَا وَرُؤَسَاءَهَا وَجَاءَ بِهِمْ إِلَيْهِ إِلَى بَابِلَ. ١٢ 12
“‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.
وَأَخَذَ مِنَ ٱلزَّرْعِ ٱلْمَلِكِيِّ وَقَطَعَ مَعَهُ عَهْدًا وَأَدْخَلَهُ فِي قَسَمٍ، وَأَخَذَ أَقْوِيَاءَ ٱلْأَرْضِ، ١٣ 13
ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
لِتَكُونَ ٱلْمَمْلَكَةُ حَقِيرَةً وَلَا تَرْتَفِعَ، لِتَحْفَظَ ٱلْعَهْدَ فَتَثْبُتَ. ١٤ 14
ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.
فَتَمَرَّدَ عَلَيْهِ بِإِرْسَالِهِ رُسُلَهُ إِلَى مِصْرَ لِيُعْطُوهُ خَيْلًا وَشَعْبًا كَثِيرِينَ. فَهَلْ يَنْجَحُ؟ هَلْ يُفْلِتُ فَاعِلُ هَذَا؟ أَوْ يَنْقُضُ عَهْدًا وَيُفْلِتُ؟ ١٥ 15
ಆದರೆ ಅರಸನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು, ತನ್ನ ರಾಯಭಾರಿಗಳನ್ನು ಈಜಿಪ್ಟಿಗೆ ಕಳುಹಿಸಿ, ತನಗೆ ಕುದುರೆಗಳನ್ನೂ, ಬಹಳ ಜನರನ್ನೂ ಕೊಡಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿಯಾಗುವನೋ? ಇಂತಹ ಸಂಗತಿಗಳನ್ನು ಮಾಡುವವನು ತಪ್ಪಿಸಿಕೊಳ್ಳುವನೋ ಅಥವಾ ಒಡಂಬಡಿಕೆಯನ್ನು ಮುರಿದು ತಪ್ಪಿಸಿಕೊಳ್ಳಲಾಗುವುದೋ?
حَيٌّ أَنَا، يَقُولُ ٱلسَّيِّدُ ٱلرَّبُّ، إِنَّ فِي مَوْضِعِ ٱلْمَلِكِ ٱلَّذِي مَلَّكَهُ، ٱلَّذِي ٱزْدَرَى قَسَمَهُ وَنَقَضَ عَهْدَهُ، فَعِنْدَهُ فِي وَسْطِ بَابِلَ يَمُوتُ. ١٦ 16
“‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
وَلَا بِجَيْشٍ عَظِيمٍ وَجَمْعٍ غَفِيرٍ يُعِينُهُ فِرْعَوْنُ فِي ٱلْحَرْبِ، بِإِقَامَةِ مِتْرَسَةٍ وَبِبِنَاءِ بُرْجٍ لِقَطْعِ نُفُوسٍ كَثِيرَةٍ. ١٧ 17
ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ.
إِذِ ٱزْدَرَى ٱلْقَسَمَ لِنَقْضِ ٱلْعَهْدِ، وَهُوَذَا قَدْ أَعْطَى يَدَهُ وَفَعَلَ هَذَا كُلَّهُ فَلَا يُفْلِتُ. ١٨ 18
ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.
لِأَجْلِ ذَلِكَ هَكَذَا قَالَ ٱلسَّيِّدُ ٱلرَّبُّ: حَيٌّ أَنَا، إِنَّ قَسَمِي ٱلَّذِي ٱزْدَرَاهُ، وَعَهْدِي ٱلَّذِي نَقَضَهُ، أَرُدُّهُمَا عَلَى رَأْسِهِ. ١٩ 19
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.
وَأَبْسُطُ شَبَكَتِي عَلَيْهِ فَيُؤْخَذُ فِي شَرَكِي، وَآتِي بِهِ إِلَى بَابِلَ وَأُحَاكِمُهُ هُنَاكَ عَلَى خِيَانَتِهِ ٱلَّتِي خَانَنِي بِهَا. ٢٠ 20
ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.
وَكُلُّ هَارِبِيهِ وَكُلُّ جُيُوشِهِ يَسْقُطُونَ بِٱلسَّيْفِ، وَٱلْبَاقُونَ يُذَرُّونَ فِي كُلِّ رِيحٍ، فَتَعْلَمُونَ أَنِّي أَنَا ٱلرَّبُّ تَكَلَّمْتُ. ٢١ 21
ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.
«هَكَذَا قَالَ ٱلسَّيِّدُ ٱلرَّبُّ: وَآخُذُ أَنَا مِنْ فَرْعِ ٱلْأَرْزِ ٱلْعَالِي وَأَغْرِسُهُ، وَأَقْطِفُ مِنْ رَأْسِ خَرَاعِيبِهِ غُصْنًا وَأَغْرِسُهُ عَلَى جَبَلٍ عَالٍ وَشَامِخٍ. ٢٢ 22
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.
فِي جَبَلِ إِسْرَائِيلَ ٱلْعَالِي أَغْرِسُهُ، فَيُنْبِتُ أَغْصَانًا وَيَحْمِلُ ثَمَرًا وَيَكُونُ أَرْزًا وَاسِعًا، فَيَسْكُنُ تَحْتَهُ كُلَّ طَائِرٍ، كُلُّ ذِي جَنَاحٍ يَسْكُنُ فِي ظِلِّ أَغْصَانِهِ. ٢٣ 23
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.
فَتَعْلَمُ جَمِيعُ أَشْجَارِ ٱلْحَقْلِ أَنِّي أَنَا ٱلرَّبُّ، وَضَعْتُ ٱلشَّجَرَةَ ٱلرَّفِيعَةَ، وَرَفَعْتُ ٱلشَّجَرَةَ ٱلْوَضِيعَةَ، وَيَبَّسْتُ ٱلشَّجَرَةَ ٱلْخَضْرَاءَ، وَأَفْرَخْتُ ٱلشَّجَرَةَ ٱلْيَابِسَةَ. أَنَا ٱلرَّبَّ تَكَلَّمْتُ وَفَعَلْتُ». ٢٤ 24
ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’”

< حِزْقِيَال 17 >