< حِزْقِيَال 21 >

وَكَانَ إِلَيَّ كَلَامُ ٱلرَّبِّ قَائِلًا: ١ 1
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
«يَا ٱبْنَ آدَمَ، ٱجْعَلْ وَجْهَكَ نَحْوَ أُورُشَلِيمَ، وَتَكَلَّمْ عَلَى ٱلْمَقَادِسِ، وَتَنَبَّأْ عَلَى أَرْضِ إِسْرَائِيلَ، ٢ 2
“ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,
وَقُلْ لِأَرْضِ إِسْرَائِيلَ: هَكَذَا قَالَ ٱلرَّبُّ: هَأَنَذَا عَلَيْكِ، وَأَسْتَلُّ سَيْفِي مِنْ غِمْدِهِ فَأَقْطَعُ مِنْكِ ٱلصِّدِّيقَ وَٱلشِّرِّيرَ. ٣ 3
‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.
مِنْ حَيْثُ أَنِّي أَقْطَعُ مِنْكِ ٱلصِّدِّيقَ وَٱلشِّرِّيرَ، فَلِذَلِكَ يَخْرُجُ سَيْفِي مِنْ غِمْدِهِ عَلَى كُلِّ بَشَرٍ مِنَ ٱلْجَنُوبِ إِلَى ٱلشِّمَالِ. ٤ 4
ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು.
فَيَعْلَمُ كُلُّ بَشَرٍ أَنِّي أَنَا ٱلرَّبُّ، سَلَلْتُ سَيْفِي مِنْ غِمْدِهِ. لَا يَرْجِعُ أَيْضًا. ٥ 5
ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’
أَمَّا أَنْتَ يَا ٱبْنَ آدَمَ، فَتَنَهَّدْ بِٱنْكِسَارِ ٱلْحَقَوَيْنِ، وَبِمَرَارَةٍ تَنَهَّدْ أَمَامَ عُيُونِهِمْ. ٦ 6
“ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.
وَيَكُونُ إِذَا قَالُوا لَكَ: عَلَى مَ تَتَنَهَّدُ؟ أَنَّكَ تَقُولُ: عَلَى ٱلْخَبَرِ، لِأَنَّهُ جَاءٍ فَيَذُوبُ كُلُّ قَلْبٍ، وَتَرْتَخِي كُلُّ ٱلْأَيْدِي، وَتَيْأَسُ كُلُّ رُوحٍ، وَكُلُّ ٱلرُّكَبِ تَصِيرُ كَٱلْمَاءِ، هَا هِيَ آتِيَةٌ وَتَكُونُ، يَقُولُ ٱلسَّيِّدُ ٱلرَّبُّ». ٧ 7
‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
وَكَانَ إِلَيَّ كَلَامُ ٱلرَّبِّ قَائِلًا: ٨ 8
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
«يَا ٱبْنَ آدَمَ، تَنَبَّأْ وَقُلْ: هَكَذَا قَالَ ٱلرَّبُّ: قُلْ: سَيْفٌ سَيْفٌ حُدِّدَ وَصُقِلَ أَيْضًا. ٩ 9
“ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು: “‘ಆ ಒಂದು ಖಡ್ಗವು ಹದಮಾಡಲಾಗಿದೆ; ಮೆರುಗೂ ಸಹ ಮಾಡಲಾಗಿದೆ.
قَدْ حُدِّدَ لِيَذْبَحَ ذَبْحًا. قَدْ صُقِلَ لِكَيْ يَبْرُقَ. فَهَلْ نَبْتَهِجُ؟ عَصَا ٱبْنِي تَزْدَرِي بِكُلِّ عُودٍ. ١٠ 10
ಸಂಹರಿಸಲು ಸಾಣೆಹಿಡಿದಿದೆ; ಮಿಂಚುವಂತೆ ಮಸೆಯಲಾಗಿದೆ. “‘ಹಾಗಾದರೆ ನನ್ನ ಮಗ ಯೆಹೂದದ ರಾಜದಂಡದಲ್ಲಿ ನಾವು ಸಂತೋಷ ಪಡಬಹುದೋ? ಅಂಥ ಪ್ರತಿಯೊಂದು ಬೆತ್ತವನ್ನೂ ಖಡ್ಗವು ತಿರಸ್ಕರಿಸುತ್ತದೆ.
وَقَدْ أَعْطَاهُ لِيُصْقَلَ لِكَيْ يُمْسَكَ بِٱلْكَفِّ. هَذَا ٱلسَّيْفُ قَدْ حُدِّدَ وَهُوَ مَصْقُولٌ لِكَيْ يُسَلَّمَ لِيَدِ ٱلْقَاتِلِ. ١١ 11
“‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ.
ٱصْرُخْ وَوَلْوِلْ يَا ٱبْنَ آدَمَ، لِأَنَّهُ يَكُونُ عَلَى شَعْبِي وَعَلَى كُلِّ رُؤَسَاءِ إِسْرَائِيلَ. أَهْوَالٌ بِسَبَبِ ٱلسَّيْفِ تَكُونُ عَلَى شَعْبِي. لِذَلِكَ ٱصْفِقْ عَلَى فَخْذِكَ. ١٢ 12
ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.
لِأَنَّهُ ٱمْتِحَانٌ. وَمَاذَا إِنْ لَمْ تَكُنْ أَيْضًا ٱلْعَصَا ٱلْمُزْدَرِيَةُ؟ يَقُولُ ٱلسَّيِّدُ ٱلرَّبُّ. ١٣ 13
“‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’
فَتَنَبَّأْ أَنْتَ يَا ٱبْنَ آدَمَ وَٱصْفِقْ كَفًّا عَلَى كَفٍّ، وَلْيُعَدِ ٱلسَّيْفُ ثَالِثَةً. هُوَ سَيْفُ ٱلْقَتْلَى، سَيْفُ ٱلْقَتْلِ ٱلْعَظِيمِ ٱلْمُحِيقُ بِهِمْ. ١٤ 14
“ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.
لِذَوَبَانِ ٱلْقَلْبِ وَتَكْثِيرِ ٱلْمَهَالِكِ، لِذَلِكَ جَعَلْتُ عَلَى كُلِّ ٱلْأَبْوَابِ سَيْفًا مُتَقَلِّبًا. آهِ! قَدْ جُعِلَ بَرَّاقًا. هُوَ مَصْقُولٌ لِلذَّبْحِ. ١٥ 15
ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.
ٱنْضَمَّ يَمِّنِ، ٱنْتَصِبْ شَمِّلْ، حَيْثُمَا تَوَجَّهَ حَدُّكَ. ١٦ 16
ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ.
وَأَنَا أَيْضًا أُصَفِّقُ كَفِّي عَلَى كَفِّي وَأُسَكِّنُ غَضَبِي. أَنَا ٱلرَّبُّ تَكَلَّمْتُ». ١٧ 17
ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”
وَكَانَ إِلَيَّ كَلَامُ ٱلرَّبِّ قَائِلًا: ١٨ 18
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
«وَأَنْتَ يَاٱبْنَ آدَمَ، عَيِّنْ لِنَفْسِكَ طَرِيقَيْنِ لِمَجِيءِ سَيْفِ مَلِكِ بَابِلَ. مِنْ أَرْضٍ وَاحِدَةٍ تَخْرُجُ ٱلِٱثْنَتَانِ. وَٱصْنَعْ صُوَّةً، عَلَى رَأْسِ طَرِيقِ ٱلْمَدِينَةِ ٱصْنَعْهَا. ١٩ 19
“ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.
عَيِّنْ طَرِيقًا لِيَأْتِيَ ٱلسَّيْفُ عَلَى رَبَّةِ بَنِي عَمُّونَ، وَعَلَى يَهُوذَا فِي أُورُشَلِيمَ ٱلْمَنِيعَةِ. ٢٠ 20
ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
لِأَنَّ مَلِكَ بَابِلَ قَدْ وَقَفَ عَلَى أُمِّ ٱلطَّرِيقِ، عَلَى رَأْسِ ٱلطَّرِيقَيْنِ لِيَعْرِفَ عِرَافَةً. صَقَلَ ٱلسِّهَامَ، سَأَلَ بِٱلتَّرَافِيمِ، نَظَرَ إِلَى ٱلْكَبِدِ. ٢١ 21
ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.
عَنْ يَمِينِهِ كَانَتِ ٱلْعِرَافَةُ عَلَى أُورُشَلِيمَ لِوَضْعِ ٱلْمَجَانِقِ، لِفَتْحِ ٱلْفَمِ فِي ٱلْقَتْلِ، وَلِرَفْعِ ٱلصَّوْتِ بِٱلْهُتَافِ، لِوَضْعِ ٱلْمَجَانِقِ عَلَى ٱلْأَبْوَابِ، لِإِقَامَةِ مِتْرَسَةٍ لِبِنَاءِ بُرْجٍ. ٢٢ 22
ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.
وَتَكُونُ لَهُمْ مِثْلَ عِرَافَةٍ كَاذِبَةٍ فِي عُيُونِهِمِ ٱلْحَالِفِينَ لَهُمْ حَلْفًا. لَكِنَّهُ يَذْكُرُ ٱلْإِثْمَ حَتَّى يُؤْخَذُوا. ٢٣ 23
ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.
لِذَلِكَ هَكَذَا قَالَ ٱلسَّيِّدُ ٱلرَّبُّ: مِنْ أَجْلِ أَنَّكُمْ ذَكَّرْتُمْ بِإِثْمِكُمْ عِنْدَ ٱنْكِشَافِ مَعَاصِيكُمْ لِإِظْهَارِ خَطَايَاكُمْ فِي جَمِيعِ أَعْمَالِكُمْ، فَمِنْ تَذْكِيرِكُمْ تُؤْخَذُونَ بِٱلْيَدِ. ٢٤ 24
“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ.
«وَأَنْتَ أَيُّهَا ٱلنَّجِسُ ٱلشِّرِّيرُ، رَئِيسُ إِسْرَائِيلَ، ٱلَّذِي قَدْ جَاءَ يَوْمُهُ فِي زَمَانِ إِثْمِ ٱلنِّهَايَةِ، ٢٥ 25
“‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
هَكَذَا قَالَ ٱلسَّيِّدُ ٱلرَّبُّ: ٱنْزِعِ ٱلْعَمَامَةَ. ٱرْفَعِ ٱلتَّاجَ. هَذِهِ لَا تِلْكَ. ٱرْفَعِ ٱلْوَضِيعَ، وَضَعِ ٱلرَّفِيعَ. ٢٦ 26
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು.
مُنْقَلِبًا، مُنْقَلِبًا، مُنْقَلِبًا أَجْعَلُهُ! هَذَا أَيْضًا لَا يَكُونُ حَتَّى يَأْتِيَ ٱلَّذِي لَهُ ٱلْحُكْمُ فَأُعْطِيَهُ إِيَّاهُ. ٢٧ 27
ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’
«وَأَنْتَ يَا ٱبْنَ آدَمَ، فَتَنَبَّأْ وَقُلْ: هَكَذَا قَالَ ٱلسَّيِّدُ ٱلرَّبُّ، فِي بَنِي عَمُّونَ وَفِي تَعْيِيرِهِمْ، فَقُلْ: سَيْفٌ، سَيْفٌ مَسْلُولٌ لِلذَّبْحِ! مَصْقُولٌ لِلْغَايَةِ لِلْبَرِيقِ. ٢٨ 28
“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.
إِذْ يَرَوْنَ لَكَ بَاطِلًا، إِذْ يَعْرِفُونَ لَكَ كَذِبًا، لِيَجْعَلُوكَ عَلَى أَعْنَاقِ ٱلْقَتْلَى ٱلْأَشْرَارِ ٱلَّذِينَ جَاءَ يَوْمُهُمْ فِي زَمَانِ إِثْمِ ٱلنِّهَايَةِ. ٢٩ 29
ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
فَهَلْ أُعِيدُهُ إِلَى غِمْدِهِ؟ أَلَا فِي ٱلْمَوْضِعِ ٱلَّذِي خُلِقْتِ فِيهِ فِي مَوْلِدِكِ أُحَاكِمُكِ! ٣٠ 30
“‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು.
وَأَسْكُبُ عَلَيْكِ غَضَبِي، وَأَنْفُخُ عَلَيْكِ بِنَارِ غَيْظِي، وَأُسَلِّمُكِ لِيَدِ رِجَالٍ مُتَحَرِّقِينَ مَاهِرِينَ لِلْإِهْلَاكِ. ٣١ 31
ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.
تَكُونِينَ أُكْلَةً لِلنَّارِ. دَمُكِ يَكُونُ فِي وَسْطِ ٱلْأَرْضِ. لَا تُذْكَرِينَ، لِأَنِّي أَنَا ٱلرَّبُّ تَكَلَّمْتُ». ٣٢ 32
ನೀನು ಅಗ್ನಿಗೆ ಆಹುತಿಯಾಗುವೆ. ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು. ಇನ್ನು ಮೇಲೆ ನೀನು ಜ್ಞಾಪಕಕ್ಕೆ ಬರುವುದಿಲ್ಲವೆಂದು, ಯೆಹೋವ ದೇವರಾದ ನಾನೇ ಹೇಳಿದ್ದೇನೆ.’”

< حِزْقِيَال 21 >