< حِزْقِيَال 7 >

وَكَانَ إِلَيَّ كَلَامُ ٱلرَّبِّ قَائِلًا: ١ 1
ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
«وَأَنْتَ يَا ٱبْنَ آدَمَ، فَهَكَذَا قَالَ ٱلسَّيِّدُ ٱلرَّبُّ لِأَرْضِ إِسْرَائِيلَ: نِهَايَةٌ! قَدْ جَاءَتِ ٱلنِّهَايَةُ عَلَى زَوَايَا ٱلْأَرْضِ ٱلْأَرْبَعِ. ٢ 2
“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
اَلْآنَ ٱلنِّهَايَةُ عَلَيْكِ، وَأُرْسِلُ غَضَبِي عَلَيْكِ، وَأَحْكُمُ عَلَيْكِ كَطُرُقِكِ، وَأَجْلِبُ عَلَيْكِ كُلَّ رَجَاسَاتِكِ. ٣ 3
ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.
فَلَا تَشْفُقُ عَلَيْكِ عَيْنِي، وَلَا أَعْفُو، بَلْ أَجْلِبُ عَلَيْكِ طُرُقَكِ وَتَكُونُ رَجَاسَاتُكِ فِي وَسْطِكِ، فَتَعْلَمُونَ أَنِّي أَنَا ٱلرَّبُّ. ٤ 4
ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
«هَكَذَا قَالَ ٱلسَّيِّدُ ٱلرَّبُّ: شَرٌّ! شَرٌّ وَحِيدٌ هُوَذَا قَدْ أَتَى. ٥ 5
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
نِهَايَةٌ قَدْ جَاءَتْ. جَاءَتِ ٱلنِّهَايَةُ. ٱنْتَبَهَتْ إِلَيْكِ. هَا هِيَ قَدْ جَاءَتْ. ٦ 6
ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
ٱنْتَهَى ٱلدَّوْرُ إِلَيْكَ أَيُّهَا ٱلسَّاكِنُ فِي ٱلْأَرْضِ. بَلَغَ ٱلْوَقْتُ. ٱقْتَرَبَ يَوْمُ ٱضْطِرَابٍ، لَا هُتَافُ ٱلْجِبَالِ. ٧ 7
ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.
اَلْآنَ عَنْ قَرِيبٍ أَصُبُّ رِجْزِي عَلَيْكِ، وَأُتَمِّمُ سَخَطِي عَلَيْكِ، وَأَحْكُمُ عَلَيْكِ كَطُرُقِكِ، وَأَجْلِبُ عَلَيْكِ كُلَّ رَجَاسَاتِكِ. ٨ 8
ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
فَلَا تَشْفُقُ عَيْنِي، وَلَا أَعْفُو، بَلْ أَجْلِبُ عَلَيْكِ كَطُرُقِكِ، وَرَجَاسَاتُكِ تَكُونُ فِي وَسْطِكِ، فَتَعْلَمُونَ أَنِّي أَنَا ٱلرَّبُّ ٱلضَّارِبُ. ٩ 9
ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
«هَا هُوَذَا ٱلْيَوْمُ، هَا هُوَذَا قَدْ جَاءَ! دَارَتِ ٱلدَّائِرَةُ. أَزْهَرَتِ ٱلْعَصَا. أَفْرَخَتِ ٱلْكِبْرِيَاءُ. ١٠ 10
೧೦“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
قَامَ ٱلظُّلْمُ إِلَى عَصَا ٱلشَّرِّ. لَا يَبْقَى مِنْهُمْ وَلَا مِنْ ثَرْوَتِهِمْ وَلَا مِنْ ضَجِيجِهِمْ، وَلَا نَوْحٌ عَلَيْهِمْ. ١١ 11
೧೧ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
قَدْ جَاءَ ٱلْوَقْتُ. بَلَغَ ٱلْيَوْمُ. فَلَا يَفْرَحَنَّ ٱلشَّارِي، وَلَا يَحْزَنَنَّ ٱلْبَائِعُ، لِأَنَّ ٱلْغَضَبَ عَلَى كُلِّ جُمْهُورِهِمْ. ١٢ 12
೧೨ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
لِأَنَّ ٱلْبَائِعَ لَنْ يَعُودَ إِلَى ٱلْمَبِيعِ، وَإِنْ كَانُوا بَعْدُ بَيْنَ ٱلْأَحْيَاءِ. لِأَنَّ ٱلرُّؤْيَا عَلَى كُلِّ جُمْهُورِهَا فَلَا يَعُودُ، وَٱلْإِنْسَانُ بِإِثْمِهِ لَا يُشَدِّدُ حَيَاتَهُ. ١٣ 13
೧೩ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
قَدْ نَفَخُوا فِي ٱلْبُوقِ وَأَعَدُّوا ٱلْكُلَّ، وَلَا ذَاهِبَ إِلَى ٱلْقِتَالِ، لِأَنَّ غَضَبِي عَلَى كُلِّ جُمْهُورِهِمْ. ١٤ 14
೧೪ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
«اَلسَّيْفُ مِنْ خَارِجٍ، وَٱلْوَبَأُ وَٱلْجُوعُ مِنْ دَاخِلٍ. ٱلَّذِي هُوَ فِي ٱلْحَقْلِ يَمُوتُ بِٱلسَّيْفِ، وَٱلَّذِي هُوَ فِي ٱلْمَدِينَةِ يَأْكُلُهُ ٱلْجُوعُ وَٱلْوَبَأُ. ١٥ 15
೧೫ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
وَيَنْفَلِتُ مِنْهُمْ مُنْفَلِتُونَ وَيَكُونُونَ عَلَى ٱلْجِبَالِ كَحَمَامِ ٱلْأَوْطِئَةِ. كُلُّهُمْ يَهْدِرُونَ كُلُّ وَاحِدٍ عَلَى إِثْمِهِ. ١٦ 16
೧೬ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
كُلُّ ٱلْأَيْدِي تَرْتَخِي، وَكُلُّ ٱلرُّكَبِ تَصِيرُ مَاءً. ١٧ 17
೧೭ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
وَيَتَنَطَّقُونَ بِٱلْمَسْحِ وَيَغْشَاهُمْ رُعْبٌ، وَعَلَى جَمِيعِ ٱلْوُجُوهِ خِزْيٌ، وَعَلَى جَمِيعِ رُؤُوسِهِمْ قَرَعٌ. ١٨ 18
೧೮ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
يُلْقُونَ فِضَّتَهُمْ فِي ٱلشَّوَارِعِ، وَذَهَبُهُمْ يَكُونُ لِنَجَاسَةٍ. لَا تَسْتَطِيعُ فِضَّتُهُمْ وَذَهَبُهُمْ إِنْقَاذَهُمْ فِي يَوْمِ غَضَبِ ٱلرَّبِّ. لَا يُشْبِعُونَ مِنْهُمَا أَنْفُسَهُمْ، وَلَا يَمْلَأُونَ جَوْفَهُمْ، لِأَنَّهُمَا صَارَا مَعْثَرَةَ إِثْمِهِمْ. ١٩ 19
೧೯ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
أَمَّا بَهْجَةُ زِينَتِهِ فَجَعَلَهَا لِلْكِبْرِيَاءِ. جَعَلُوا فِيهَا أَصْنَامَ مَكْرُهَاتِهِمْ، رَجَاسَاتِهِمْ، لِأَجْلِ ذَلِكَ جَعَلْتُهَا لَهُمْ نَجَاسَةً. ٢٠ 20
೨೦ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
أُسْلِمُهَا إِلَى أَيْدِي ٱلْغُرَبَاءِ لِلنَّهْبِ، وَإِلَى أَشْرَارِ ٱلْأَرْضِ سَلْبًا فَيُنَجِّسُونَهَا. ٢١ 21
೨೧ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.
وَأُحَوِّلُ وَجْهِي عَنْهُمْ فَيُنَجِّسُونَ سِرِّي، وَيَدْخُلُهُ ٱلْمُعْتَنِفُونَ وَيُنَجِّسُونَهُ. ٢٢ 22
೨೨ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
«اِصْنَعِ ٱلسِّلْسِلَةَ لِأَنَّ ٱلْأَرْضَ قَدِ ٱمْتَلَأَتْ مِنْ أَحْكَامِ ٱلدَّمِ، وَٱلْمَدِينَةُ ٱمْتَلَأَتْ مِنَ ٱلظُّلْمِ. ٢٣ 23
೨೩ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.
فَآتِي بِأَشَرِّ ٱلْأُمَمِ فَيَرِثُونَ بُيُوتَهُمْ، وَأُبِيدُ كِبْرِيَاءَ ٱلْأَشِدَّاءِ فَتَتَنَجَّسُ مَقَادِسُهُمْ. ٢٤ 24
೨೪ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
اَلرُّعْبُ آتٍ فَيَطْلُبُونَ ٱلسَّلَامَ وَلَا يَكُونُ. ٢٥ 25
೨೫ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.
سَتَأْتِي مُصِيبَةٌ عَلَى مُصِيبَةٍ، وَيَكُونُ خَبَرٌ عَلَى خَبَرٍ، فَيَطْلُبُونَ رُؤْيَا مِنَ ٱلنَّبِيِّ، وَٱلشَّرِيعَةُ تُبَادُ عَنِ ٱلْكَاهِنِ، وَٱلْمَشُورَةُ عَنِ ٱلشُّيُوخِ. ٢٦ 26
೨೬ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
ٱلْمَلِكُ يَنُوحُ وَٱلرَّئِيسُ يَلْبَسُ حَيْرَةً، وَأَيْدِي شَعْبِ ٱلْأَرْضِ تَرْجُفُ. كَطَرِيقِهِمْ أَصْنَعُ بِهِمْ، وَكَأَحْكَامِهِمْ أَحْكُمُ عَلَيْهِمْ، فَيَعْلَمُونَ أَنِّي أَنَا ٱلرَّبُّ». ٢٧ 27
೨೭ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

< حِزْقِيَال 7 >