< عَزْرَا 3 >

وَلَمَّا ٱسْتُهِلَّ ٱلشَّهْرُ ٱلسَّابِعُ وَبَنُو إِسْرَائِيلَ فِي مُدُنِهِمُ، ٱجْتَمَعَ ٱلشَّعْبُ كَرَجُلٍ وَاحِدٍ إِلَى أُورُشَلِيمَ. ١ 1
ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.
وَقَامَ يَشُوعُ بْنُ يُوصَادَاقَ وَإِخْوَتُهُ ٱلْكَهَنَةُ، وَزَرُبَّابِلُ بْنُ شَأَلْتِئِيلَ وَإِخْوَتُهُ، وَبَنَوْا مَذْبَحَ إِلَهِ إِسْرَائِيلَ لِيُصْعِدُوا عَلَيْهِ مُحْرَقَاتٍ كَمَا هُوَ مَكْتُوبٌ فِي شَرِيعَةِ مُوسَى رَجُلِ ٱللهِ. ٢ 2
ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.
وَأَقَامُوا ٱلْمَذْبَحَ فِي مَكَانِهِ، لِأَنَّهُ كَانَ عَلَيْهِمْ رُعْبٌ مِنْ شُعُوبِ ٱلْأَرَاضِي، وَأَصْعَدُوا عَلَيْهِ مُحْرَقَاتٍ لِلرَّبِّ، مُحْرَقَاتِ ٱلصَّبَاحِ وَٱلْمَسَاءِ. ٣ 3
ಅವರು ಸುತ್ತಣ ಪ್ರಾಂತ್ಯಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ, ಅದರ ಮೇಲೆ ಯೆಹೋವನಿಗೋಸ್ಕರ ಮುಂಜಾನೆಯ ಹಾಗು ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.
وَحَفِظُوا عِيدَ ٱلْمَظَالِّ كَمَا هُوَ مَكْتُوبٌ، وَمُحْرَقَةَ يَوْمٍ فَيَوْمٍ بِٱلْعَدَدِ كَٱلْمَرْسُومِ، أَمْرَ ٱلْيَوْمِ بِيَوْمِهِ. ٤ 4
ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.
وَبَعْدَ ذَلِكَ ٱلْمُحْرَقَةُ ٱلدَّائِمَةُ، وَلِلْأَهِلَّةِ وَلِجَمِيعِ مَوَاسِمِ ٱلرّبِّ ٱلْمُقَدَّسَةِ، وَلِكُلِّ مَن تبرَّعَ بِمُتَبَرَّعٍ لِلرَّبِّ. ٥ 5
ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.
ٱبْتَدَأُوا مِنَ ٱلْيَوْمِ ٱلْأَوَّلِ مِنَ ٱلشَّهْرِ ٱلسَّابِعِ يُصْعِدُونَ مُحْرَقَاتٍ لِلرَّبِّ، وَهَيْكَلُ ٱلرَّبِّ لَمْ يَكُنْ قَدْ تَأَسَّسَ. ٦ 6
ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
وَأَعْطَوْا فِضَّةً لِلنَّحَّاتِينَ وَٱلنَّجَّارِينَ، وَمَأْكَلًا وَمَشْرَبًا وَزَيْتًا لِلصِّيدُونِيِّينَ وَٱلصُّورِيِّينَ لِيَأْتُوا بِخَشَبِ أَرْزٍ مِنْ لُبْنَانَ إِلَى بَحْرِ يَافَا، حَسَبَ إِذْنِ كُورَشَ مَلِكِ فَارِسَ لَهُمْ. ٧ 7
ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.
وَفِي ٱلسَّنَةِ ٱلثَّانِيَةِ مِنْ مَجِيئِهِمْ إِلَى بَيْتِ ٱللهِ إِلَى أُورُشَلِيمَ، فِي ٱلشَّهْرِ ٱلثَّانِي، شَرَعَ زَرُبَّابِلُ بْنُ شَأَلْتِئِيلَ وَيَشُوعُ بْنُ يُوصَادَاقَ وَبَقِيَّةُ إِخْوَتِهِمِ ٱلْكَهَنَةِ وَٱللَّاوِيِّينَ وَجَمِيعُ ٱلْقَادِمِينَ مِنَ ٱلسَّبْيِ إِلَى أُورُشَلِيمَ، وَأَقَامُوا ٱللَّاوِيِّينَ مِنِ ٱبْنِ عِشْرِينَ سَنَةً فَمَا فَوْقُ لِلْمُنَاظَرَةِ عَلَى عَمَلِ بَيْتِ ٱلرَّبِّ. ٨ 8
ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.
وَوَقَفَ يَشُوعُ مَعَ بَنِيهِ وَإِخْوَتِهِ، قَدْمِيئِيلَ وَبَنِيهِ بَنِي يَهُوذَا مَعًا لِلْمُنَاظَرَةِ عَلَى عَامِلِي ٱلشُّغْلِ فِي بَيْتِ ٱللهِ، وَبَنِي حِينَادَادَ مَعَ بَنِيهِمْ وَإِخْوَتِهِمِ ٱللَّاوِيِّينَ. ٩ 9
ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.
وَلَمَّا أَسَّسَ ٱلْبَانُونَ هَيْكَلَ ٱلرَّبِّ، أَقَامُوا ٱلْكَهَنَةَ بِمَلَابِسِهِمْ بِأَبْوَاقٍ، وَٱللَّاوِيِّينَ بَنِي آسَافَ بِٱلصُّنُوجِ، لِتَسْبِيحِ ٱلرَّبِّ عَلَى تَرْتِيبِ دَاوُدَ مَلِكِ إِسْرَائِيلَ. ١٠ 10
೧೦ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.
وَغَنَّوْا بِٱلتَّسْبِيحِ وَٱلْحَمْدِ لِلرَّبِّ، لِأَنَّهُ صَالِحٌ لِأَنَّ إِلَى ٱلْأَبَدِ رَحْمَتَهُ عَلَى إِسْرَائِيلَ. وَكُلُّ ٱلشَّعْبِ هَتَفُوا هُتَافًا عَظِيمًا بِٱلتَّسْبِيحِ لِلرَّبِّ لِأَجْلِ تَأْسِيسِ بَيْتِ ٱلرَّبِّ. ١١ 11
೧೧ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.
وَكَثِيرُونَ مِنَ ٱلْكَهَنَةِ وَٱللَّاوِيِّينَ وَرُؤُوسِ ٱلْآبَاءِ ٱلشُّيُوخِ، ٱلَّذِينَ رَأَوْا ٱلْبَيْتَ ٱلْأَوَّلَ، بَكَوْا بِصَوْتٍ عَظِيمٍ عِنْدَ تَأْسِيسِ هَذَا ٱلْبَيْتِ أَمَامَ أَعْيُنِهِمْ. وَكَثِيرُونَ كَانُوا يَرْفَعُونَ أَصْوَاتَهُمْ بِٱلْهُتَافِ بِفَرَحٍ. ١٢ 12
೧೨ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.
وَلَمْ يَكُنِ ٱلشَّعْبُ يُمَيِّزُ هُتَافَ ٱلْفَرَحِ مِنْ صَوْتِ بُكَاءِ ٱلشَّعْبِ، لِأَنَّ ٱلشَّعْبَ كَانَ يَهْتِفُ هُتَافًا عَظِيمًا حَتَّى أَنَّ ٱلصَّوْتَ سُمِعَ مِنْ بُعْدٍ. ١٣ 13
೧೩ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.

< عَزْرَا 3 >