< عَزْرَا 4 >

وَلَمَّا سَمِعَ أَعْدَاءُ يَهُوذَا وَبَنْيَامِينَ أَنَّ بَنِي ٱلسَّبْيِ يَبْنُونَ هَيْكَلًا لِلرَّبِّ إِلَهِ إِسْرَائِيلَ، ١ 1
ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.
تَقَدَّمُوا إِلَى زَرُبَّابِلَ وَرُؤُوسِ ٱلْآبَاءِ وَقَالُوا لَهُمْ: «نَبْنِي مَعَكُمْ لِأَنَّنَا نَظِيرَكُمْ نَطْلُبُ إِلَهَكُمْ، وَلَهُ قَدْ ذَبَحْنَا مِنْ أَيَّامِ أَسَرْحَدُّونَ مَلِكِ أَشُّورَ ٱلَّذِي أَصْعَدَنَا إِلَى هُنَا». ٢ 2
ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.
فَقَالَ لَهُمْ زَرُبَّابِلُ وَيَشُوعُ وَبَقِيَّةُ رُؤُوسِ آبَاءِ إِسْرَائِيلَ: «لَيْسَ لَكُمْ وَلَنَا أَنْ نَبْنِيَ بَيْتًا لِإِلَهِنَا، وَلَكِنَّنَا نَحْنُ وَحْدَنَا نَبْنِي لِلرَّبِّ إِلَهِ إِسْرَائِيلَ كَمَا أَمَرَنَا ٱلْمَلِكُ كُورَشُ مَلِكُ فَارِسَ». ٣ 3
ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
وَكَانَ شَعْبُ ٱلْأَرْضِ يُرْخُونَ أَيْدِيَ شَعْبِ يَهُوذَا وَيُذْعِرُونَهُمْ عَنِ ٱلْبِنَاءِ. ٤ 4
ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
وَٱسْتَأْجَرُوا ضِدَّهُمْ مُشِيرِينَ لِيُبْطِلُوا مَشُورَتَهُمْ كُلَّ أَيَّامِ كُورَشَ مَلِكِ فَارِسَ وَحَتَّى مُلْكِ دَارِيُوسَ مَلِكِ فَارِسَ. ٥ 5
ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
وَفِي مُلْكِ أَحَشْوِيرُوشَ، فِي ٱبْتِدَاءِ مُلْكِهِ، كَتَبُوا شَكْوَى عَلَى سُكَّانِ يَهُوذَا وَأُورُشَلِيمَ. ٦ 6
ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.
وَفِي أَيَّامِ أَرْتَحْشَشْتَا كَتَبَ بِشْلَامُ وَمِثْرَدَاثُ وَطَبْئِيلُ وَسَائِرُ رُفَقَائِهِمْ إِلَى أَرْتَحْشَشْتَا مَلِكِ فَارِسَ. وَكِتَابَةُ ٱلرِّسَالَةِ مَكْتُوبَةٌ بِٱلْأَرَامِيَّةِ وَمُتَرْجَمَةٌ بِٱلْأَرَامِيَّةِ. ٧ 7
ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.
رَحُومُ صَاحِبُ ٱلْقَضَاءِ وَشِمْشَايُ ٱلْكَاتِبُ كَتَبَا رِسَالَةً ضِدَّ أُورُشَلِيمَ إِلَى أَرْتَحْشَشْتَا ٱلْمَلِكِ هَكَذَا: ٨ 8
ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
كَتَبَ حِينَئِذٍ رَحُومُ صَاحِبُ ٱلْقَضَاءِ وَشِمْشَايُ ٱلْكَاتِبُ وَسَائِرُ رُفَقَائِهِمَا ٱلدِّينِيِّينَ وَٱلْأَفَرَسْتِكِيِّينَ وَٱلطَّرْفِلِيِّينَ وَٱلْأَفْرَسِيِّينَ وَٱلْأَرَكْوِيِّينَ وَٱلْبَابِلِيِّينَ وَٱلشُّوشَنِيِّينَ وَٱلدَّهْوِيِّينَ وَٱلْعِيلَامِيِّينَ، ٩ 9
ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.
وَسَائِرِ ٱلْأُمَمِ ٱلَّذِينَ سَبَاهُمْ أُسْنَفَّرُ ٱلْعَظِيمُ ٱلشَّرِيفُ وَأَسْكَنَهُمْ مُدُنَ ٱلسَّامِرَةِ، وَسَائِرِ ٱلَّذِينَ فِي عَبْرِ ٱلنَّهْرِ وَإِلَى آخِرِهِ. ١٠ 10
೧೦ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.
هَذِهِ صُورَةُ ٱلرِّسَالَةِ ٱلَّتِي أَرْسَلُوهَا إِلَيْهِ، إِلَى أَرْتَحْشَشْتَا ٱلْمَلِكِ: «عَبِيدُكَ ٱلْقَوْمُ ٱلَّذِينَ فِي عَبْرِ ٱلنَّهْرِ إِلَى آخِرِهِ. ١١ 11
೧೧ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
لِيُعْلَمِ ٱلْمَلِكُ أَنَّ ٱلْيَهُودَ ٱلَّذِينَ صَعِدُوا مِنْ عِنْدِكَ إِلَيْنَا قَدْ أَتَوْا إِلَى أُورُشَلِيمَ وَيَبْنُونَ ٱلْمَدِينَةَ ٱلْعَاصِيَةَ ٱلرَّدِيَّةَ، وَقَدْ أَكْمَلُوا أَسْوَارَهَا وَرَمَّمُوا أُسُسَهَا. ١٢ 12
೧೨ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
لِيَكُنِ ٱلْآنَ مَعْلُومًا لَدَى ٱلْمَلِكِ أَنَّهُ إِذَا بُنِيَتْ هَذِهِ ٱلْمَدِينَةُ وَأُكْمِلَتْ أَسْوَارُهَا لَا يُؤَدُّونَ جِزْيَةً وَلَا خَرَاجًا وَلَا خِفَارَةً، فَأَخِيرًا تَضُرُّ ٱلْمُلُوكَ. ١٣ 13
೧೩ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
وَٱلْآنَ بِمَا إِنَّنَا نَأْكُلُ مِلْحَ دَارِ ٱلْمَلِكِ، وَلَا يَلِيقُ بِنَا أَنْ نَرَى ضَرَرَ ٱلْمَلِكِ، لِذَلِكَ أَرْسَلْنَا فَأَعْلَمْنَا ٱلْمَلِكَ، ١٤ 14
೧೪ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.
لِكَيْ يُفَتَّشَ فِي سِفْرِ أَخْبَارِ آبَائِكَ، فَتَجِدَ فِي سِفْرِ ٱلْأَخْبَارِ وَتَعْلَمَ أَنَّ هَذِهِ ٱلْمَدِينَةَ مَدِينَةٌ عَاصِيَةٌ وَمُضِرَّةٌ لِلْمُلُوكِ وَٱلْبِلَادِ، وَقَدْ عَمِلُوا عِصْيَانًا فِي وَسَطِهَا مُنْذُ ٱلْأَيَّامِ ٱلْقَدِيمَةِ، لِذَلِكَ أُخْرِبَتْ هَذِهِ ٱلْمَدِينَةُ. ١٥ 15
೧೫ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.
وَنَحْنُ نُعْلِمُ ٱلْمَلِكَ أَنَّهُ إِذَا بُنِيَتْ هَذِهِ ٱلْمَدِينَةُ وَأُكْمِلَتْ أَسْوَارُهَا لَا يَكُونُ لَكَ عِنْدَ ذَلِكَ نَصِيبٌ فِي عَبْرِ ٱلنَّهْرِ». ١٦ 16
೧೬ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”
فَأَرْسَلَ ٱلْمَلِكُ جَوَابًا: «إِلَى رَحُومَ صَاحِبِ ٱلْقَضَاءِ وَشَمْشَايَ ٱلْكَاتِبِ وَسَائِرِ رُفَقَائِهِمَا ٱلسَّاكِنِينَ فِي ٱلسَّامِرَةِ وَبَاقِي ٱلَّذِينَ فِي عَبْرِ ٱلنَّهْرِ. سَلَامٌ إِلَى آخِرِهِ. ١٧ 17
೧೭ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.
ٱلرِّسَالَةُ ٱلَّتِي أَرْسَلْتُمُوهَا إِلَيْنَا قَدْ قُرِئَتْ بِوُضُوحٍ أَمَامِي. ١٨ 18
೧೮ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.
وَقَدْ خَرَجَ مِنْ عِنْدِي أَمْرٌ فَفَتَّشُوا وَوُجِدَ أَنَّ هَذِهِ ٱلْمَدِينَةَ مُنْذُ ٱلْأَيَّامِ ٱلْقَدِيمَةِ تَقُومُ عَلَى ٱلْمُلُوكِ، وَقَدْ جَرَى فِيهَا تَمَرُّدٌ وَعِصْيَانٌ. ١٩ 19
೧೯ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
وَقَدْ كَانَ مُلُوكٌ مُقْتَدِرُونَ عَلَى أُورُشَلِيمَ وَتَسَلَّطُوا عَلَى جَمِيعِ عَبْرِ ٱلنَّهْرِ، وَقَدْ أُعْطُوا جِزْيَةً وَخَرَاجًا وَخِفَارَةً. ٢٠ 20
೨೦ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
فَٱلْآنَ أَخْرِجُوا أَمْرًا بِتَوْقِيفِ أُولَئِكَ ٱلرِّجَالِ فَلَا تُبْنَى هَذِهِ ٱلْمَدِينَةُ حَتَّى يَصْدُرَ مِنِّي أَمْرٌ. ٢١ 21
೨೧ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
فَٱحْذَرُوا مِنْ أَنْ تَقْصُرُوا عَنْ عَمَلِ ذَلِكَ. لِمَاذَا يَكْثُرُ ٱلضَّرَرُ لِخَسَارَةِ ٱلْمُلُوكِ؟». ٢٢ 22
೨೨ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
حِينَئِذٍ لَمَّا قُرِئَتْ رِسَالَةُ أَرْتَحْشَشْتَا ٱلْمَلِكِ أَمَامَ رَحُومَ وَشِمْشَايَ ٱلْكَاتِبِ وَرُفَقَائِهِمَا ذَهَبُوا بِسُرْعَةٍ إِلَى أُورُشَلِيمَ، إِلَى ٱلْيَهُودِ، وَأَوْقَفُوهُمْ بِذِرَاعٍ وَقُوَّةٍ. ٢٣ 23
೨೩ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
حِينَئِذٍ تَوَقَّفَ عَمَلُ بَيْتِ ٱللهِ ٱلَّذِي فِي أُورُشَلِيمَ، وَكَانَ مُتَوَقِّفًا إِلَى ٱلسَّنَةِ ٱلثَّانِيَةِ مِنْ مُلْكِ دَارِيُوسَ مَلِكِ فَارِسَ. ٢٤ 24
೨೪ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.

< عَزْرَا 4 >