< اَلتَّكْوِينُ 18 >

وَظَهَرَ لَهُ ٱلرَّبُّ عِنْدَ بَلُّوطَاتِ مَمْرَا وَهُوَ جَالِسٌ فِي بَابِ ٱلْخَيْمَةِ وَقْتَ حَرِّ ٱلنَّهَارِ، ١ 1
ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.
فَرَفَعَ عَيْنَيْهِ وَنَظَرَ وَإِذَا ثَلَاثَةُ رِجَالٍ وَاقِفُونَ لَدَيْهِ. فَلَمَّا نَظَرَ رَكَضَ لِٱسْتِقْبَالِهِمْ مِنْ بَابِ ٱلْخَيْمَةِ وَسَجَدَ إِلَى ٱلْأَرْضِ، ٢ 2
ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.
وَقَالَ: «يَا سَيِّدُ، إِنْ كُنْتُ قَدْ وَجَدْتُ نِعْمَةً فِي عَيْنَيْكَ فَلَا تَتَجَاوَزْ عَبْدَكَ. ٣ 3
“ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.
لِيُؤْخَذْ قَلِيلُ مَاءٍ وَٱغْسِلُوا أَرْجُلَكُمْ وَٱتَّكِئُوا تَحْتَ ٱلشَّجَرَةِ، ٤ 4
ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.
فَآخُذَ كِسْرَةَ خُبْزٍ، فَتُسْنِدُونَ قُلُوبَكُمْ ثُمَّ تَجْتَازُونَ، لِأَنَّكُمْ قَدْ مَرَرْتُمْ عَلَى عَبْدِكُمْ». فَقَالُوا: «هَكَذَا تَفْعَلُ كَمَا تَكَلَّمْتَ». ٥ 5
ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.
فَأَسْرَعَ إِبْرَاهِيمُ إِلَى ٱلْخَيْمَةِ إِلَى سَارَةَ، وَقَالَ: «أَسْرِعِي بِثَلَاثِ كَيْلَاتٍ دَقِيقًا سَمِيذًا. ٱعْجِنِي وَٱصْنَعِي خُبْزَ مَلَّةٍ». ٦ 6
ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.
ثُمَّ رَكَضَ إِبْرَاهِيمُ إِلَى ٱلْبَقَرِ وَأَخَذَ عِجْلًا رَخْصًا وَجَيِّدًا وَأَعْطَاهُ لِلْغُلَامِ فَأَسْرَعَ لِيَعْمَلَهُ. ٧ 7
ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.
ثُمَّ أَخَذَ زُبْدًا وَلَبَنًا، وَٱلْعِجْلَ ٱلَّذِي عَمِلَهُ، وَوَضَعَهَا قُدَّامَهُمْ. وَإِذْ كَانَ هُوَ وَاقِفًا لَدَيْهِمْ تَحْتَ ٱلشَّجَرَةِ أَكَلُوا. ٨ 8
ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
وَقَالُوا لَهُ: «أَيْنَ سَارَةُ ٱمْرَأَتُكَ؟» فَقَالَ: «هَا هِيَ فِي ٱلْخَيْمَةِ». ٩ 9
ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.
فَقَالَ: «إِنِّي أَرْجِعُ إِلَيْكَ نَحْوَ زَمَانِ ٱلْحَيَاةِ وَيَكُونُ لِسَارَةَ ٱمْرَأَتِكَ ٱبْنٌ». وَكَانَتْ سَارَةُ سَامِعَةً فِي بَابِ ٱلْخَيْمَةِ وَهُوَ وَرَاءَهُ. ١٠ 10
೧೦ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
وَكَانَ إِبْرَاهِيمُ وَسَارَةُ شَيْخَيْنِ مُتَقَدِّمَيْنِ فِي ٱلْأَيَّامِ، وَقَدِ ٱنْقَطَعَ أَنْ يَكُونَ لِسَارَةَ عَادَةٌ كَٱلنِّسَاءِ. ١١ 11
೧೧ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.
فَضَحِكَتْ سَارَةُ فِي بَاطِنِهَا قَائِلَةً: «أَبَعْدَ فَنَائِي يَكُونُ لِي تَنَعُّمٌ، وَسَيِّدِي قَدْ شَاخَ؟». ١٢ 12
೧೨ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
فَقَالَ ٱلرَّبُّ لِإِبْرَاهِيمَ: «لِمَاذَا ضَحِكَتْ سَارَةُ قَائِلَةً: أَفَبِٱلْحَقِيقَةِ أَلِدُ وَأَنَا قَدْ شِخْتُ؟ ١٣ 13
೧೩ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?
هَلْ يَسْتَحِيلُ عَلَى ٱلرَّبِّ شَيْءٌ؟ فِي ٱلْمِيعَادِ أَرْجِعُ إِلَيْكَ نَحْوَ زَمَانِ ٱلْحَيَاةِ وَيَكُونُ لِسَارَةَ ٱبْنٌ». ١٤ 14
೧೪ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
فَأَنْكَرَتْ سَارَةُ قَائِلَةً: «لَمْ أَضْحَكْ». لِأَنَّهَا خَافَتْ. فَقَالَ: «لَا! بَلْ ضَحِكْتِ». ١٥ 15
೧೫ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.
ثُمَّ قَامَ ٱلرِّجَالُ مِنْ هُنَاكَ وَتَطَلَّعُوا نَحْوَ سَدُومَ. وَكَانَ إِبْرَاهِيمُ مَاشِيًا مَعَهُمْ لِيُشَيِّعَهُمْ. ١٦ 16
೧೬ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.
فَقَالَ ٱلرَّبُّ: «هَلْ أُخْفِي عَنْ إِبْرَاهِيمَ مَا أَنَا فَاعِلُهُ، ١٧ 17
೧೭ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?
وَإِبْرَاهِيمُ يَكُونُ أُمَّةً كَبِيرَةً وَقَوِيَّةً، وَيَتَبَارَكُ بِهِ جَمِيعُ أُمَمِ ٱلْأَرْضِ؟ ١٨ 18
೧೮ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;
لِأَنِّي عَرَفْتُهُ لِكَيْ يُوصِيَ بَنِيهِ وَبَيْتَهُ مِنْ بَعْدِهِ أَنْ يَحْفَظُوا طَرِيقَ ٱلرَّبِّ، لِيَعْمَلُوا بِرًّا وَعَدْلًا، لِكَيْ يَأْتِيَ ٱلرَّبُّ لِإِبْرَاهِيمَ بِمَا تَكَلَّمَ بِهِ». ١٩ 19
೧೯ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
وَقَالَ ٱلرَّبُّ: «إِنَّ صُرَاخَ سَدُومَ وَعَمُورَةَ قَدْ كَثُرَ، وَخَطِيَّتُهُمْ قَدْ عَظُمَتْ جِدًّا. ٢٠ 20
೨೦ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
أَنْزِلُ وَأَرَى هَلْ فَعَلُوا بِٱلتَّمَامِ حَسَبَ صُرَاخِهَا ٱلْآتِي إِلَيَّ، وَإِلَا فَأَعْلَمُ». ٢١ 21
೨೧ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.
وَٱنْصَرَفَ ٱلرِّجَالُ مِنْ هُنَاكَ وَذَهَبُوا نَحْوَ سَدُومَ، وَأَمَّا إِبْرَاهِيمُ فَكَانَ لَمْ يَزَلْ قَائِمًا أَمَامَ ٱلرَّبِّ. ٢٢ 22
೨೨ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.
فَتَقَدَّمَ إِبْرَاهِيمُ وَقَالَ: «أَفَتُهْلِكُ ٱلْبَارَّ مَعَ ٱلْأَثِيمِ؟ ٢٣ 23
೨೩ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?
عَسَى أَنْ يَكُونَ خَمْسُونَ بَارًّا فِي ٱلْمَدِينَةِ. أَفَتُهْلِكُ ٱلْمَكَانَ وَلَا تَصْفَحُ عَنْهُ مِنْ أَجْلِ ٱلْخَمْسِينَ بَارًّا ٱلَّذِينَ فِيهِ؟ ٢٤ 24
೨೪ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
حَاشَا لَكَ أَنْ تَفْعَلَ مِثْلَ هَذَا ٱلْأَمْرِ، أَنْ تُمِيتَ ٱلْبَارَّ مَعَ ٱلْأَثِيمِ، فَيَكُونُ ٱلْبَارُّ كَٱلْأَثِيمِ. حَاشَا لَكَ! أَدَيَّانُ كُلِّ ٱلْأَرْضِ لَا يَصْنَعُ عَدْلًا؟» ٢٥ 25
೨೫ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
فَقَالَ ٱلرَّبُّ: «إِنْ وَجَدْتُ فِي سَدُومَ خَمْسِينَ بَارًّا فِي ٱلْمَدِينَةِ، فَإِنِّي أَصْفَحُ عَنِ ٱلْمَكَانِ كُلِّهِ مِنْ أَجْلِهِمْ». ٢٦ 26
೨೬ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.
فَأَجَابَ إِبْرَاهِيمُ وَقَالَ: «إِنِّي قَدْ شَرَعْتُ أُكَلِّمُ ٱلْمَوْلَى وَأَنَا تُرَابٌ وَرَمَادٌ. ٢٧ 27
೨೭ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;
رُبَّمَا نَقَصَ ٱلْخَمْسُونَ بَارًّا خَمْسَةً. أَتُهْلِكُ كُلَّ ٱلْمَدِينَةِ بِٱلْخَمْسَةِ؟» فَقَالَ: «لَا أُهْلِكُ إِنْ وَجَدْتُ هُنَاكَ خَمْسَةً وَأَرْبَعِينَ». ٢٨ 28
೨೮ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
فَعَادَ يُكَلِّمُهُ أَيْضًا وَقَالَ: «عَسَى أَنْ يُوجَدَ هُنَاكَ أَرْبَعُونَ». فَقَالَ: «لَا أَفْعَلُ مِنْ أَجْلِ ٱلْأَرْبَعِينَ». ٢٩ 29
೨೯ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.
فَقَالَ: «لَا يَسْخَطِ ٱلْمَوْلَى فَأَتَكَلَّمَ. عَسَى أَنْ يُوجَدَ هُنَاكَ ثَلَاثُونَ». فَقَالَ: «لَا أَفْعَلُ إِنْ وَجَدْتُ هُنَاكَ ثَلَاثِينَ». ٣٠ 30
೩೦ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
فَقَالَ: «إِنِّي قَدْ شَرَعْتُ أُكَلِّمُ ٱلْمَوْلَى. عَسَى أَنْ يُوجَدَ هُنَاكَ عِشْرُونَ». فَقَالَ: «لَا أُهْلِكُ مِنْ أَجْلِ ٱلْعِشْرِينَ». ٣١ 31
೩೧ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.
فَقَالَ: «لَا يَسْخَطِ ٱلْمَوْلَى فَأَتَكَلَّمَ هَذِهِ ٱلْمَرَّةَ فَقَطْ. عَسَى أَنْ يُوجَدَ هُنَاكَ عَشْرَةٌ». فَقَالَ: «لَا أُهْلِكُ مِنْ أَجْلِ ٱلْعَشْرَةِ». ٣٢ 32
೩೨ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
وَذَهَبَ ٱلرَّبُّ عِنْدَمَا فَرَغَ مِنَ ٱلْكَلَامِ مَعَ إِبْرَاهِيمَ، وَرَجَعَ إِبْرَاهِيمُ إِلَى مَكَانِهِ. ٣٣ 33
೩೩ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

< اَلتَّكْوِينُ 18 >