< اَلتَّكْوِينُ 41 >

وَحَدَثَ مِنْ بَعْدِ سَنَتَيْنِ مِنَ ٱلزَّمَانِ أَنَّ فِرْعَوْنَ رَأَى حُلْمًا: وَإِذَا هُوَ وَاقِفٌ عِنْدَ ٱلنَّهْرِ، ١ 1
ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
وَهُوَذَا سَبْعُ بَقَرَاتٍ طَالِعَةٍ مِنَ ٱلنَّهْرِ حَسَنَةِ ٱلْمَنْظَرِ وَسَمِينَةِ ٱللَّحْمِ، فَٱرْتَعَتْ فِي رَوْضَةٍ. ٢ 2
ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
ثُمَّ هُوَذَا سَبْعُ بَقَرَاتٍ أُخْرَى طَالِعَةٍ وَرَاءَهَا مِنَ ٱلنَّهْرِ قَبِيحَةِ ٱلْمَنْظَرِ وَرَقِيقَةِ ٱللَّحْمِ، فَوَقَفَتْ بِجَانِبِ ٱلْبَقَرَاتِ ٱلْأُولَى عَلَى شَاطِئِ ٱلنَّهْرِ، ٣ 3
ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.
فَأَكَلَتِ ٱلْبَقَرَاتُ ٱلْقَبِيحَةُ ٱلْمَنْظَرِ وَٱلرَّقِيقَةُ ٱللَّحْمِ ٱلْبَقَرَاتِ ٱلسَّبْعَ ٱلْحَسَنَةَ ٱلْمَنْظَرِ وَٱلسَّمِينَةَ. وَٱسْتَيْقَظَ فِرْعَوْنُ. ٤ 4
ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
ثُمَّ نَامَ فَحَلُمَ ثَانِيَةً: وَهُوَذَا سَبْعُ سَنَابِلَ طَالِعَةٍ فِي سَاقٍ وَاحِدٍ سَمِينَةٍ وَحَسَنَةٍ. ٥ 5
ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.
ثُمَّ هُوَذَا سَبْعُ سَنَابِلَ رَقِيقَةٍ وَمَلْفُوحَةٍ بِٱلرِّيحِ ٱلشَّرْقِيَّةِ نَابِتَةٍ وَرَاءَهَا. ٦ 6
ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
فَٱبْتَلَعَتِ ٱلسَّنَابِلُ ٱلرَّقِيقَةُ ٱلسَّنَابِلَ ٱلسَّبْعَ ٱلسَّمِينَةَ ٱلْمُمْتَلِئَةَ. وَٱسْتَيْقَظَ فِرْعَوْنُ، وَإِذَا هُوَ حُلْمٌ. ٧ 7
ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.
وَكَانَ فِي ٱلصَّبَاحِ أَنَّ نَفْسَهُ ٱنْزَعَجَتْ، فَأَرْسَلَ وَدَعَا جَمِيعَ سَحَرَةِ مِصْرَ وَجَمِيعَ حُكَمَائِهَا. وَقَصَّ عَلَيْهِمْ فِرْعَوْنُ حُلْمَهُ، فَلَمْ يَكُنْ مَنْ يُعَبِّرُهُ لِفِرْعَوْنَ. ٨ 8
ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.
ثُمَّ كَلَّمَ رَئِيسُ ٱلسُّقَاةِ فِرْعَوْنَ قَائِلًا: «أَنَا أَتَذَكَّرُ ٱلْيَوْمَ خَطَايَايَ. ٩ 9
ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.
فِرْعَوْنُ سَخَطَ عَلَى عَبْدَيْهِ، فَجَعَلَنِي فِي حَبْسِ بَيْتِ رَئِيسِ ٱلشُّرَطِ أَنَا وَرَئِيسَ ٱلْخَبَّازِينَ. ١٠ 10
೧೦ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,
فَحَلُمْنَا حُلْمًا فِي لَيْلَةٍ وَاحِدَةٍ أَنَا وَهُوَ. حَلُمْنَا كُلُّ وَاحِدٍ بِحَسَبِ تَعْبِيرِ حُلْمِهِ. ١١ 11
೧೧ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
وَكَانَ هُنَاكَ مَعَنَا غُلَامٌ عِبْرَانِيٌّ عَبْدٌ لِرَئِيسِ ٱلشُّرَطِ، فَقَصَصْنَا عَلَيْهِ، فَعَبَّرَ لَنَا حُلْمَيْنَا. عَبَّرَ لِكُلِّ وَاحِدٍ بِحَسَبِ حُلْمِهِ. ١٢ 12
೧೨ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
وَكَمَا عَبَّرَ لَنَا هَكَذَا حَدَثَ. رَدَّنِي أَنَا إِلَى مَقَامِي، وَأَمَّا هُوَ فَعَلَّقَهُ». ١٣ 13
೧೩ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು.
فَأَرْسَلَ فِرْعَوْنُ وَدَعَا يُوسُفَ، فَأَسْرَعُوا بِهِ مِنَ ٱلسِّجْنِ. فَحَلَقَ وَأَبْدَلَ ثِيَابَهُ وَدَخَلَ عَلَى فِرْعَوْنَ. ١٤ 14
೧೪ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
فَقَالَ فِرْعَوْنُ لِيُوسُفَ: «حَلُمْتُ حُلْمًا وَلَيْسَ مَنْ يُعَبِّرُهُ. وَأَنَا سَمِعْتُ عَنْكَ قَوْلًا، إِنَّكَ تَسْمَعُ أَحْلَامًا لِتُعَبِّرَهَا». ١٥ 15
೧೫ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
فَأَجَابَ يُوسُفُ فِرْعَوْنَ قَائِلًا: «لَيْسَ لِي. ٱللهُ يُجِيبُ بِسَلَامَةٍ فِرْعَوْنَ». ١٦ 16
೧೬ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.
فَقَالَ فِرْعَوْنُ لِيُوسُفَ: «إِنِّي كُنْتُ فيِ حُلْمِي وَاقِفًا عَلَى شَاطِئِ ٱلنَّهْرِ، ١٧ 17
೧೭ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.”
وَهُوَذَا سَبْعُ بَقَرَاتٍ طَالِعَةٍ مِنَ ٱلنَّهْرِ سَمِينَةِ ٱللَّحْمِ وَحَسَنَةَ ٱلصُّورَةِ، فَٱرْتَعَتْ فِي رَوْضَةٍ. ١٨ 18
೧೮ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
ثُمَّ هُوَذَا سَبْعُ بَقَرَاتٍ أُخْرَى طَالِعَةٍ وَرَاءَهَا مَهْزُولَةً وَقَبِيحَةَ ٱلصُّورَةِ جِدًّا وَرَقِيقَةَ ٱللَّحْمِ. لَمْ أَنْظُرْ فِي كُلِّ أَرْضِ مِصْرَ مِثْلَهَا فِي ٱلْقَبَاحَةِ. ١٩ 19
೧೯ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.
فَأَكَلَتِ ٱلْبَقَرَاتُ ٱلرَّقِيقَةُ وَٱلْقَبِيحَةُ ٱلْبَقَرَاتِ ٱلسَّبْعَ ٱلْأُولَى ٱلسَّمِينَةَ. ٢٠ 20
೨೦ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.
فَدَخَلَتْ أَجْوَافَهَا، وَلَمْ يَعْلَمْ أَنَّهَا دَخَلَتْ فِي أَجْوَافِهَا، فَكَانَ مَنْظَرُهَا قَبِيحًا كَمَا فِي ٱلْأَوَّلِ. وَٱسْتَيْقَظْتُ. ٢١ 21
೨೧ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು.
ثُمَّ رَأَيْتُ فِي حُلْمِي وَهُوَذَا سَبْعُ سَنَابِلَ طَالِعَةٌ فِي سَاقٍ وَاحِدٍ مُمْتَلِئَةً وَحَسَنَةً. ٢٢ 22
೨೨“ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು.
ثُمَّ هُوَذَا سَبْعُ سَنَابِلَ يَابِسَةً رَقِيقَةً مَلْفُوحَةً بِٱلرِّيحِ ٱلشَّرْقِيَّةِ نَابِتَةٌ وَرَاءَهَا. ٢٣ 23
೨೩ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
فَٱبْتَلَعَتِ ٱلسَّنَابِلُ ٱلرَّقِيقَةُ ٱلسَّنَابِلَ ٱلسَّبْعَ ٱلْحَسَنَةَ. فَقُلْتُ لِلسَّحَرَةِ، وَلَمْ يَكُنْ مَنْ يُخْبِرُنِي». ٢٤ 24
೨೪ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.
فَقَالَ يُوسُفُ لِفِرْعَوْنَ: «حُلْمُ فِرْعَوْنَ وَاحِدٌ. قَدْ أَخْبَرَ ٱللهُ فِرْعَوْنَ بِمَا هُوَ صَانِعٌ. ٢٥ 25
೨೫ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.
اَلْبَقَرَاتُ ٱلسَّبْعُ ٱلْحَسَنَةُ هِيَ سَبْعُ سِنِينَ، وَٱلسَّنَابِلُ ٱلسَّبْعُ ٱلْحَسَنَةُ هِيَ سَبْعُ سِنِينَ. هُوَ حُلْمٌ وَاحِدٌ. ٢٦ 26
೨೬ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.
وَٱلْبَقَرَاتُ ٱلسَّبْعُ ٱلرَّقِيقَةُ ٱلْقَبِيحَةُ ٱلَّتِي طَلَعَتْ وَرَاءَهَا هِيَ سَبْعُ سِنِينَ، وَٱلسَّنَابِلُ ٱلسَّبْعُ ٱلْفَارِغَةُ ٱلْمَلْفُوحَةُ بِٱلرِّيحِ ٱلشَّرْقِيَّةِ تَكُونُ سَبْعَ سِنِينَ جُوعًا. ٢٧ 27
೨೭ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
هُوَ ٱلْأَمْرُ ٱلَّذِي كَلَّمْتُ بِهِ فِرْعَوْنَ. قَدْ أَظْهَرَ ٱللهُ لِفِرْعَوْنَ مَا هُوَ صَانِعٌ. ٢٨ 28
೨೮ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.
هُوَذَا سَبْعُ سِنِينَ قَادِمَةٌ شِبَعًا عَظِيمًا فِي كُلِّ أَرْضِ مِصْرَ. ٢٩ 29
೨೯ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು.
ثُمَّ تَقُومُ بَعْدَهَا سَبْعُ سِنِينَ جُوعًا، فَيُنْسَى كُلُّ ٱلشِّبَعِ فِي أَرْضِ مِصْرَ وَيُتْلِفُ ٱلْجُوعُ ٱلْأَرْضَ. ٣٠ 30
೩೦ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
وَلَا يُعْرَفُ ٱلشِّبَعُ فِي ٱلْأَرْضِ مِنْ أَجْلِ ذَلِكَ ٱلْجُوعِ بَعْدَهُ، لِأَنَّهُ يَكُونُ شَدِيدًا جِدًّا. ٣١ 31
೩೧ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.
وَأَمَّا عَنْ تَكْرَارِ ٱلْحُلْمِ عَلَى فِرْعَوْنَ مَرَّتَيْنِ، فَلِأَنَّ ٱلْأَمْرَ مُقَرَّرٌ مِنْ قِبَلِ ٱللهِ، وَٱللهُ مُسْرِعٌ لِيَصْنَعَهُ. ٣٢ 32
೩೨ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
«فَٱلْآنَ لِيَنْظُرْ فِرْعَوْنُ رَجُلًا بَصِيرًا وَحَكِيمًا وَيَجْعَلْهُ عَلَى أَرْضِ مِصْرَ. ٣٣ 33
೩೩“ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
يَفْعَلْ فِرْعَوْنُ فَيُوَكِّلْ نُظَّارًا عَلَى ٱلْأَرْضِ، وَيَأْخُذْ خُمْسَ غَلَّةِ أَرْضِ مِصْرَ فِي سَبْعِ سِنِي ٱلشِّبَعِ، ٣٤ 34
೩೪ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.
فَيَجْمَعُونَ جَمِيعَ طَعَامِ هَذِهِ ٱلسِّنِينَ ٱلْجَيِّدَةِ ٱلْقَادِمَةِ، وَيَخْزِنُونَ قَمْحًا تَحْتَ يَدِ فِرْعَوْنَ طَعَامًا فِي ٱلْمُدُنِ وَيَحْفَظُونَهُ. ٣٥ 35
೩೫ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
فَيَكُونُ ٱلطَّعَامُ ذَخِيرَةً لِلْأَرْضِ لِسَبْعِ سِنِي ٱلْجُوعِ ٱلَّتِي تَكُونُ فِي أَرْضِ مِصْرَ، فَلَا تَنْقَرِضُ ٱلْأَرْضُ بِٱلْجُوعِ». ٣٦ 36
೩೬ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು.
فَحَسُنَ ٱلْكَلَامُ فِي عَيْنَيْ فِرْعَوْنَ وَفِي عُيُونِ جَمِيعِ عَبِيدِهِ. ٣٧ 37
೩೭ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.
فَقَالَ فِرْعَوْنُ لِعَبِيدِهِ: «هَلْ نَجِدُ مِثْلَ هَذَا رَجُلًا فِيهِ رُوحُ ٱللهِ؟» ٣٨ 38
೩೮ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.
ثُمَّ قَالَ فِرْعَوْنُ لِيُوسُفَ: «بَعْدَ مَا أَعْلَمَكَ ٱللهُ كُلَّ هَذَا، لَيْسَ بَصِيرٌ وَحَكِيمٌ مِثْلَكَ. ٣٩ 39
೩೯ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.
أَنْتَ تَكُونُ عَلَى بَيْتِي، وَعَلَى فَمِكَ يُقَبِّلُ جَمِيعُ شَعْبِي إِلَا إِنَّ ٱلْكُرْسِيَّ أَكُونُ فِيهِ أَعْظَمَ مِنْكَ». ٤٠ 40
೪೦ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
ثُمَّ قَالَ فِرْعَوْنُ لِيُوسُفَ: «ٱنْظُرْ، قَدْ جَعَلْتُكَ عَلَى كُلِّ أَرْضِ مِصْرَ». ٤١ 41
೪೧ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,
وَخَلَعَ فِرْعَوْنُ خَاتِمَهُ مِنْ يَدِهِ وَجَعَلَهُ فِي يَدِ يُوسُفَ، وَأَلْبَسَهُ ثِيَابَ بُوصٍ، وَوَضَعَ طَوْقَ ذَهَبٍ فِي عُنُقِهِ، ٤٢ 42
೪೨ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
وَأَرْكَبَهُ فِي مَرْكَبَتِهِ ٱلْثَّانِيَةِ، وَنَادَوْا أَمَامَهُ «ٱرْكَعُوا». وَجَعَلَهُ عَلَى كُلِّ أَرْضِ مِصْرَ. ٤٣ 43
೪೩ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
وَقَالَ فِرْعَوْنُ لِيُوسُفَ: «أَنَا فِرْعَوْنُ. فَبِدُونِكَ لَا يَرْفَعُ إِنْسَانٌ يَدَهُ وَلَا رِجْلَهُ فِي كُلِّ أَرْضِ مِصْرَ». ٤٤ 44
೪೪ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.
وَدَعَا فِرْعَوْنُ ٱسْمَ يُوسُفَ «صَفْنَاتَ فَعْنِيحَ»، وَأَعْطَاهُ أَسْنَاتَ بِنْتَ فُوطِي فَارَعَ كَاهِنِ أُونَ زَوْجَةً. فَخَرَجَ يُوسُفُ عَلَى أَرْضِ مِصْرَ. ٤٥ 45
೪೫ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
وَكَانَ يُوسُفُ ٱبْنَ ثَلَاثِينَ سَنَةً لَمَّا وَقَفَ قُدَّامَ فِرْعَوْنَ مَلِكِ مِصْرَ. فَخَرَجَ يُوسُفُ مِنْ لَدُنْ فِرْعَوْنَ وَٱجْتَازَ فِي كُلِّ أَرْضِ مِصْرَ. ٤٦ 46
೪೬ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
وَأَثْمَرَتِ ٱلْأَرْضُ فِي سَبْعِ سِنِي ٱلشِّبَعِ بِحُزَمٍ. ٤٧ 47
೪೭ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.
فَجَمَعَ كُلَّ طَعَامِ ٱلسَّبْعِ سِنِينَ ٱلَّتِي كَانَتْ فِي أَرْضِ مِصْرَ، وَجَعَلَ طَعَامًا فِي ٱلْمُدُنِ. طَعَامَ حَقْلِ ٱلْمَدِينَةِ ٱلَّذِي حَوَالَيْهَا جَعَلَهُ فِيهَا. ٤٨ 48
೪೮ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.
وَخَزَنَ يُوسُفُ قَمْحًا كَرَمْلِ ٱلْبَحْرِ، كَثِيرًا جِدًّا حَتَّى تَرَكَ ٱلْعَدَدَ، إِذْ لَمْ يَكُنْ لَهُ عَدَدٌ. ٤٩ 49
೪೯ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.
وَوُلِدَ لِيُوسُفَ ٱبْنَانِ قَبْلَ أَنْ تَأْتِيَ سَنَةُ ٱلْجُوعِ، وَلَدَتْهُمَا لَهُ أَسْنَاتُ بِنْتُ فُوطِي فَارَعَ كَاهِنِ أُونَ. ٥٠ 50
೫೦ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.
وَدَعَا يُوسُفُ ٱسْمَ ٱلْبِكْرِ «مَنَسَّى» قَائِلًا: «لِأَنَّ ٱللهَ أَنْسَانِي كُلَّ تَعَبِي وَكُلَّ بَيْتِ أَبِي». ٥١ 51
೫೧ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.
وَدَعَا ٱسْمَ ٱلثَّانِى «أَفْرَايِمَ» قَائِلًا: «لِأَنَّ ٱللهَ جَعَلَنِي مُثْمِرًا فِي أَرْضِ مَذَلَّتِي». ٥٢ 52
೫೨ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು.
ثُمَّ كَمِلَتْ سَبْعُ سِنِي ٱلشِّبَعِ ٱلَّذِي كَانَ فِي أَرْضِ مِصْرَ. ٥٣ 53
೫೩ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ
وَٱبْتَدَأَتْ سَبْعُ سِنِي ٱلْجُوعِ تَأْتِي كَمَا قَالَ يُوسُفُ، فَكَانَ جُوعٌ فِي جَمِيعِ ٱلْبُلْدَانِ. وَأَمَّا جَمِيعُ أَرْضِ مِصْرَ فَكَانَ فِيهَا خُبْزٌ. ٥٤ 54
೫೪ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
وَلَمَّا جَاعَتْ جَمِيعُ أَرْضِ مِصْرَ وَصَرَخَ ٱلشَّعْبُ إِلَى فِرْعَوْنَ لِأَجْلِ ٱلْخُبْزِ، قَالَ فِرْعَوْنُ لِكُلِّ ٱلْمِصْرِيِّينَ: «ٱذْهَبُوا إِلَى يُوسُفَ، وَٱلَّذِي يَقُولُ لَكُمُ ٱفْعَلُوا». ٥٥ 55
೫೫ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
وَكَانَ ٱلْجُوعُ عَلَى كُلِّ وَجْهِ ٱلْأَرْضِ، وَفَتَحَ يُوسُفُ جَمِيعَ مَا فِيهِ طَعَامٌ وَبَاعَ لِلْمِصْرِيِّينَ. وَٱشْتَدَّ ٱلْجُوعُ فِي أَرْضِ مِصْرَ. ٥٦ 56
೫೬ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
وَجَاءَتْ كُلُّ ٱلْأَرْضِ إِلَى مِصْرَ إِلَى يُوسُفَ لِتَشْتَرِيَ قَمْحًا، لِأَنَّ ٱلْجُوعَ كَانَ شَدِيدًا فِي كُلِّ ٱلْأَرْضِ. ٥٧ 57
೫೭ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.

< اَلتَّكْوِينُ 41 >