< اَلتَّكْوِينُ 42 >

فَلَمَّا رَأَى يَعْقُوبُ أَنَّهُ يُوجَدُ قَمْحٌ فِي مِصْرَ، قَالَ يَعْقُوبُ لِبَنِيهِ: «لِمَاذَا تَنْظُرُونَ بَعْضُكُمْ إِلَى بَعْضٍ؟» ١ 1
ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”
وَقَالَ «إِنِّي قَدْ سَمِعْتُ أَنَّهُ يُوجَدُ قَمْحٌ فِي مِصْرَ. ٱنْزِلُوا إِلَى هُنَاكَ وَٱشْتَرُوا لَنَا مِنْ هُنَاكَ لِنَحْيَا وَلَا نَمُوتَ». ٢ 2
“ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.
فَنَزَلَ عَشْرَةٌ مِنْ إِخْوَةِ يُوسُفَ لِيَشْتَرُوا قَمْحًا مِنْ مِصْرَ. ٣ 3
ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.
وَأَمَّا بَنْيَامِينُ أَخُو يُوسُفَ فَلَمْ يُرْسِلْهُ يَعْقُوبُ مَعَ إِخْوَتِهِ، لِأَنَّهُ قَالَ: «لَعَلَّهُ تُصِيبُهُ أَذِيَّةٌ». ٤ 4
ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.
فَأَتَى بَنُو إِسْرَائِيلَ لِيَشْتَرُوا بَيْنَ ٱلَّذِينَ أَتَوْا، لِأَنَّ ٱلْجُوعَ كَانَ فِي أَرْضِ كَنْعَانَ. ٥ 5
ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
وَكَانَ يُوسُفُ هُوَ ٱلْمُسَلَّطَ عَلَى ٱلْأَرْضِ، وَهُوَ ٱلْبَائِعَ لِكُلِّ شَعْبِ ٱلْأَرْضِ. فَأَتَى إِخْوَةُ يُوسُفَ وَسَجَدُوا لَهُ بِوُجُوهِهِمْ إِلَى ٱلْأَرْضِ. ٦ 6
ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
وَلَمَّا نَظَرَ يُوسُفُ إِخْوَتَهُ عَرَفَهُمْ، فَتَنَكَّرَ لَهُمْ وَتَكَلَّمَ مَعَهُمْ بِجَفَاءٍ، وَقَالَ لَهُمْ: «مِنْ أَيْنَ جِئْتُمْ؟» فَقَالُوا: «مِنْ أَرْضِ كَنْعَانَ لِنَشْتَرِيَ طَعَامًا». ٧ 7
ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.
وَعَرَفَ يُوسُفُ إِخْوَتَهُ، وَأَمَّا هُمْ فَلَمْ يَعْرِفُوهُ. ٨ 8
ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.
فَتَذَكَّرَ يُوسُفُ ٱلْأَحْلَامَ ٱلَّتِي حَلُمَ عَنْهُمْ، وَقَالَ لَهُمْ: «جَوَاسِيسُ أَنْتُمْ! لِتَرَوْا عَوْرَةَ ٱلْأَرْضِ جِئْتُمْ» ٩ 9
ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.
فَقَالُوا لَهُ: «لَا يَا سَيِّدِي، بَلْ عَبِيدُكَ جَاءُوا لِيَشْتَرُوا طَعَامًا. ١٠ 10
೧೦ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.
نَحْنُ جَمِيعُنَا بَنُو رَجُلٍ وَاحِدٍ. نَحْنُ أُمَنَاءُ، لَيْسَ عَبِيدُكَ جَوَاسِيسَ». ١١ 11
೧೧ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.
فَقَالَ لَهُمْ: «كَلَّا! بَلْ لِتَرَوْا عَوْرَةَ ٱلْأَرْضِ جِئْتُمْ». ١٢ 12
೧೨ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.
فَقَالُوا: «عَبِيدُكَ ٱثْنَا عَشَرَ أَخًا. نَحْنُ بَنُو رَجُلٍ وَاحِدٍ فِي أَرْضِ كَنْعَانَ. وَهُوَذَا ٱلصَّغِيرُ عِنْدَ أَبِينَا ٱلْيَوْمَ، وَٱلْوَاحِدُ مَفْقُودٌ». ١٣ 13
೧೩ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.
فَقَالَ لَهُمْ يُوسُفُ: «ذَلِكَ مَا كَلَّمْتُكُمْ بِهِ قَائِلًا: جَوَاسِيسُ أَنْتُمْ! ١٤ 14
೧೪ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ.
بِهَذَا تُمْتَحَنُونَ. وَحَيَاةِ فِرْعَوْنَ لَا تَخْرُجُونَ مِنْ هُنَا إِلَا بِمَجِيءِ أَخِيكُمُ ٱلصَّغِيرِ إِلَى هُنَا. ١٥ 15
೧೫ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.
أَرْسِلُوا مِنْكُمْ وَاحِدًا لِيَجِيءَ بِأَخِيكُمْ، وَأَنْتُمْ تُحْبَسُونَ، فَيُمْتَحَنَ كَلَامُكُمْ هَلْ عِنْدَكُمْ صِدْقٌ. وَإِلَا فَوَحَيَاةِ فِرْعَوْنَ إِنَّكُمْ لَجَوَاسِيسُ!». ١٦ 16
೧೬ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.
فَجَمَعَهُمْ إِلَى حَبْسٍ ثَلَاثَةَ أَيَّامٍ. ١٧ 17
೧೭ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.
ثُمَّ قَالَ لَهُمْ يُوسُفُ فِي ٱلْيَوْمِ ٱلثَّالِثِ: «ٱفْعَلُوا هَذَا وَٱحْيَوْا. أَنَا خَائِفُ ٱللهِ. ١٨ 18
೧೮ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
إِنْ كُنْتُمْ أُمَنَاءَ فَلْيُحْبَسْ أَخٌ وَاحِدٌ مِنْكُمْ فِي بَيْتِ حَبْسِكُمْ، وَٱنْطَلِقُوا أَنْتُمْ وَخُذُوا قَمْحًا لِمَجَاعَةِ بُيُوتِكُمْ. ١٩ 19
೧೯ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.
وَأَحْضِرُوا أَخَاكُمُ ٱلصَّغِيرَ إِلَيَّ، فَيَتَحَقَّقَ كَلَامُكُمْ وَلَا تَمُوتُوا». فَفَعَلُوا هَكَذَا. ٢٠ 20
೨೦ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.
وَقَالُوا بَعْضُهُمْ لِبَعْضٍ: «حَقًّا إِنَّنَا مُذْنِبُونَ إِلَى أَخِينَا ٱلَّذِي رَأَيْنَا ضِيقَةَ نَفْسِهِ لَمَّا ٱسْتَرْحَمَنَا وَلَمْ نَسْمَعْ. لِذَلِكَ جَاءَتْ عَلَيْنَا هَذِهِ ٱلضِّيقَةُ». ٢١ 21
೨೧ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
فَأَجَابَهُمْ رَأُوبَيْنُ قَائِلًا: «أَلَمْ أُكَلِّمْكُمْ قَائِلًا: لَا تَأْثَمُوا بِٱلْوَلَدِ، وَأَنْتُمْ لَمْ تَسْمَعُوا؟ فَهُوَذَا دَمُهُ يُطْلَبُ». ٢٢ 22
೨೨ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.
وَهُمْ لَمْ يَعْلَمُوا أَنَّ يُوسُفَ فَاهِمٌ، لِأَنَّ ٱلتُّرْجُمَانَ كَانَ بَيْنَهُمْ. ٢٣ 23
೨೩ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.
فَتَحَوَّلَ عَنْهُمْ وَبَكَى، ثُمَّ رَجَعَ إِلَيْهِمْ وَكَلَّمَهُمْ، وَأَخَذَ مِنْهُمْ شِمْعُونَ وَقَيَّدَهُ أَمَامَ عُيُونِهِمْ. ٢٤ 24
೨೪ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.
ثُمَّ أَمَرَ يُوسُفُ أَنْ تُمْلَأَ أَوْعِيَتُهُمْ قَمْحًا، وَتُرَدَّ فِضَّةُ كُلِّ وَاحِدٍ إِلَى عِدْلِهِ، وَأَنْ يُعْطَوْا زَادًا لِلطَّرِيقِ. فَفُعِلَ لَهُمْ هَكَذَا. ٢٥ 25
೨೫ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.
فَحَمَلُوا قَمْحَهُمْ عَلَى حَمِيرِهِمْ وَمَضَوْا مِنْ هُنَاكَ. ٢٦ 26
೨೬ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.
فَلَمَّا فَتَحَ أَحَدُهُمْ عِدْلَهُ لِيُعْطِيَ عَلِيقًا لِحِمَارِهِ فِي ٱلْمَنْزِلِ، رَأَى فِضَّتَهُ وَإِذَا هِيَ فِي فَمِ عِدْلِهِ. ٢٧ 27
೨೭ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
فَقَالَ لِإِخْوَتِهِ: «رُدَّتْ فِضَّتِي وَهَا هِيَ فِي عِدْلِي». فَطَارَتْ قُلُوبُهُمْ وَٱرْتَعَدُوا بَعْضُهُمْ فِي بَعْضٍ قَائِلِينَ: «مَا هَذَا ٱلَّذِي صَنَعَهُ ٱللهُ بِنَا؟». ٢٨ 28
೨೮ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.
فَجَاءُوا إِلَى يَعْقُوبَ أَبِيهِمْ إِلَى أَرْضِ كَنْعَانَ، وَأَخْبَرُوهُ بِكُلِّ مَا أَصَابَهُمْ قَائِلِينَ: ٢٩ 29
೨೯ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.
«تَكَلَّمَ مَعَنَا ٱلرَّجُلُ سَيِّدُ ٱلْأَرْضِ بِجَفَاءٍ، وَحَسِبَنَا جَوَاسِيسَ ٱلْأَرْضِ. ٣٠ 30
೩೦ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.
فَقُلْنَا لَهُ: نَحْنُ أُمَنَاءُ، لَسْنَا جَوَاسِيسَ. ٣١ 31
೩೧ನಾವು ಅವನಿಗೆ, “ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ.
نَحْنُ ٱثْنَا عَشَرَ أَخًا بَنُو أَبِينَا. ٱلْوَاحِدُ مَفْقُودٌ وَٱلصَّغِيرُ ٱلْيَوْمَ عِنْدَ أَبِينَا فِي أَرْضِ كَنْعَانَ. ٣٢ 32
೩೨ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.
فَقَالَ لَنَا ٱلرَّجُلُ سَيِّدُ ٱلْأَرْضِ: بِهَذَا أَعْرِفُ أَنَّكُمْ أُمَنَاءُ. دَعُوا أَخًا وَاحِدًا مِنْكُمْ عِنْدِي، وَخُذُوا لِمَجَاعَةِ بُيُوتِكُمْ وَٱنْطَلِقُوا. ٣٣ 33
೩೩ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
وَأَحْضِرُوا أَخَاكُمُ ٱلصَّغِيرَ إِلَيَّ فَأَعْرِفَ أَنَّكُمْ لَسْتُمْ جَوَاسِيسَ، بَلْ أَنَّكُمْ أُمَنَاءُ، فَأُعْطِيَكُمْ أَخَاكُمْ وَتَتَّجِرُونَ فِي ٱلْأَرْضِ». ٣٤ 34
೩೪ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.
وَإِذْ كَانُوا يُفَرِّغُونَ عِدَالَهُمْ إِذَا صُرَّةُ فِضَّةِ كُلِّ وَاحِدٍ فِي عِدْلِهِ. فَلَمَّا رَأَوْا صُرَرَ فِضَّتِهِمْ هُمْ وَأَبُوهُمْ خَافُوا. ٣٥ 35
೩೫ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
فَقَالَ لَهُمْ يَعْقُوبُ: «أَعْدَمْتُمُونِي ٱلْأَوْلَادَ. يُوسُفُ مَفْقُودٌ، وَشِمْعُونُ مَفْقُودٌ، وَبَنْيَامِينُ تَأْخُذُونَهُ. صَارَ كُلُّ هَذَا عَلَيَّ». ٣٦ 36
೩೬ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.
وَكَلَّمَ رَأُوبَيْنُ أَبَاهُ قَائِلًا: «ٱقْتُلِ ٱبْنَيَّ إِنْ لَمْ أَجِئْ بِهِ إِلَيْكَ. سَلِّمْهُ بِيَدِي وَأَنَا أَرُدُّهُ إِلَيْكَ». ٣٧ 37
೩೭ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.
فَقَالَ: «لَا يَنْزِلُ ٱبْنِي مَعَكُمْ، لِأَنَّ أَخَاهُ قَدْ مَاتَ، وَهُوَ وَحْدَهُ بَاقٍ. فَإِنْ أَصَابَتْهُ أَذِيَّةٌ فِي ٱلطَّرِيقِ ٱلَّتِي تَذْهَبُونَ فِيهَا تُنْزِلُونَ شَيْبَتِي بِحُزْنٍ إِلَى ٱلْهَاوِيَةِ». (Sheol h7585) ٣٨ 38
೩೮ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. (Sheol h7585)

< اَلتَّكْوِينُ 42 >