< اَلتَّكْوِينُ 47 >

فَأَتَى يُوسُفُ وَأَخبَرَ فِرْعَوْنَ وَقَالَ: «أَبِي وَإِخْوَتِي وَغَنَمُهُمْ وَبَقَرُهُمْ وَكُلُّ مَا لَهُمْ جَاءُوا مِنْ أَرْضِ كَنْعَانَ، وَهُوَذَا هُمْ فِي أَرْضِ جَاسَانَ». ١ 1
ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್‌ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.
وَأَخَذَ مِنْ جُمْلَةِ إِخْوَتِهِ خَمْسَةَ رِجَالٍ وَأَوْقَفَهُمْ أَمَامَ فِرْعَوْنَ. ٢ 2
ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.
فَقَالَ فِرْعَوْنُ لِإِخْوَتِهِ: «مَا صِنَاعَتُكُمْ؟» فَقَالُوا لِفِرْعَوْنَ: «عَبِيدُكَ رُعَاةُ غَنَمٍ نَحْنُ وَآبَاؤُنَا جَمِيعًا». ٣ 3
ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.
وَقَالُوا لِفِرْعَوْنَ: «جِئْنَا لِنَتَغَرَّبَ فِي ٱلْأَرْضِ، إِذْ لَيْسَ لِغَنَمِ عَبِيدِكَ مَرْعًى، لِأَنَّ ٱلْجُوعَ شَدِيدٌ فِي أَرْضِ كَنْعَانَ. فَٱلْآنَ لِيَسْكُنْ عَبِيدُكَ فِي أَرْضِ جَاسَانَ». ٤ 4
ಅದಲ್ಲದೆ ಅವರು ಫರೋಹನಿಗೆ, “ಕಾನಾನ್‌ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.
فَكَلَّمَ فِرْعَوْنُ يُوسُفَ قَائِلًا: «أَبُوكَ وَإِخْوَتُكَ جَاءُوا إِلَيْكَ. ٥ 5
ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರೆ;
أَرْضُ مِصْرَ قُدَّامَكَ. فِي أَفْضَلِ ٱلْأَرْضِ أَسْكِنْ أَبَاكَ وَإِخْوَتَكَ، لِيَسْكُنُوا فِي أَرْضِ جَاسَانَ. وَإِنْ عَلِمْتَ أَنَّهُ يُوجَدُ بَيْنَهُمْ ذَوُو قُدْرَةٍ، فَٱجْعَلْهُمْ رُؤَسَاءَ مَوَاشٍ عَلَى ٱلَّتِي لِي». ٦ 6
ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.
ثُمَّ أَدْخَلَ يُوسُفُ يَعْقُوبَ أَبَاهُ وَأَوْقَفَهُ أَمَامَ فِرْعَوْنَ. وَبَارَكَ يَعْقُوبُ فِرْعَوْنَ. ٧ 7
ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.
فَقَالَ فِرْعَوْنُ لِيَعْقُوبَ: «كَمْ هِيَ أَيَّامُ سِنِي حَيَاتِكَ؟» ٨ 8
ಫರೋಹನು, “ನಿನಗೆ ಈಗ ಎಷ್ಟು ವರ್ಷ?” ಎಂದು ಕೇಳಿದನು.
فَقَالَ يَعْقُوبُ لِفِرْعَوْنَ: «أَيَّامُ سِنِي غُرْبَتِي مِئَةٌ وَثَلَاثُونَ سَنَةً. قَلِيلَةً وَ رَدِيَّةً كَانَتْ أَيَّامُ سِنِي حَيَاتِي، وَلَمْ تَبْلُغْ إِلَى أَيَّامِ سِنِي حَيَاةِ آبَائِي فِي أَيَّامِ غُرْبَتِهِمْ». ٩ 9
ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.
وَبَارَكَ يَعْقُوبُ فِرْعَوْنَ وَخَرَجَ مِنْ لَدُنْ فِرْعَوْنَ. ١٠ 10
೧೦ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
فَأَسْكَنَ يُوسُفُ أَبَاهُ وَإِخْوَتَهُ وَأَعْطَاهُمْ مُلْكًا فِي أَرْضِ مِصْرَ، فِي أَفْضَلِ ٱلْأَرْضِ، فِي أَرْضِ رَعَمْسِيسَ كَمَا أَمَرَ فِرْعَوْنُ. ١١ 11
೧೧ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.
وَعَالَ يُوسُفُ أَبَاهُ وَإِخْوَتَهُ وَكُلَّ بَيْتِ أَبِيهِ بِطَعَامٍ عَلَى حَسَبِ ٱلْأَوْلَادِ. ١٢ 12
೧೨ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
وَلَمْ يَكُنْ خُبْزٌ فِي كُلِّ ٱلْأَرْضِ، لِأَنَّ ٱلْجُوعَ كَانَ شَدِيدًا جِدًّا. فَخَوَّرَتْ أَرْضُ مِصْرَ وَأَرْضُ كَنْعَانَ مِنْ أَجْلِ ٱلْجُوعِ. ١٣ 13
೧೩ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.
فَجَمَعَ يُوسُفُ كُلَّ ٱلْفِضَّةِ ٱلْمَوْجُودَةِ فِي أَرْضِ مِصْرَ وَفِي أَرْضِ كَنْعَانَ بِٱلْقَمْحِ ٱلَّذِي ٱشْتَرُوا، وَجَاءَ يُوسُفُ بِٱلْفِضَّةِ إِلَى بَيْتِ فِرْعَوْنَ. ١٤ 14
೧೪ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
فَلَمَّا فَرَغَتِ ٱلْفِضَّةُ مِنْ أَرْضِ مِصْرَ وَمِنْ أَرْضِ كَنْعَانَ أَتَى جَمِيعُ ٱلْمِصْرِيِّينَ إِلَى يُوسُفَ قَائِلِينَ: «أَعْطِنَا خُبْزًا، فَلِمَاذَا نَمُوتُ قُدَّامَكَ؟ لِأَنْ لَيْسَ فِضَّةٌ أَيْضًا». ١٥ 15
೧೫ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.
فَقَالَ يُوسُفُ: «هَاتُوا مَوَاشِيَكُمْ فَأُعْطِيَكُمْ بِمَوَاشِيكُمْ، إِنْ لَمْ يَكُنْ فِضَّةٌ أَيْضًا». ١٦ 16
೧೬ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು.
فَجَاءُوا بِمَوَاشِيهِمْ إِلَى يُوسُفَ، فَأَعْطَاهُمْ يُوسُفُ خُبْزًا بِٱلْخَيْلِ وَبِمَوَاشِي ٱلْغَنَمِ وَٱلْبَقَرِ وَبِٱلْحَمِيرِ. فَقَاتَهُمْ بِٱلْخُبْزِ تِلْكَ ٱلسَّنَةَ بَدَلَ جَمِيعِ مَوَاشِيهِمْ. ١٧ 17
೧೭ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
وَلَمَّا تَمَّتْ تِلْكَ ٱلسَّنَةُ أَتَوْا إِلَيْهِ فِي ٱلسَّنَةِ ٱلْثَّانِيَةِ وَقَالُوا لَهُ: «لَا نُخْفِي عَنْ سَيِّدِي أَنَّهُ إِذْ قَدْ فَرَغَتِ ٱلْفِضَّةُ، وَمَوَاشِي ٱلْبَهَائِمِ عِنْدَ سَيِّدِي، لَمْ يَبْقَ قُدَّامَ سَيِّدِي إِلَا أَجْسَادُنَا وَأَرْضُنَا. ١٨ 18
೧೮ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.
لِمَاذَا نَمُوتُ أَمَامَ عَيْنَيْكَ نَحْنُ وَأَرْضُنَا جَمِيعًا؟ اِشْتَرِنَا وَأَرْضَنَا بِٱلْخُبْزِ، فَنَصِيرَ نَحْنُ وَأَرْضُنَا عَبِيدًا لِفِرْعَوْنَ، وَأَعْطِ بِذَارًا لِنَحْيَا وَلَا نَمُوتَ وَلَا تَصِيرَ أَرْضُنَا قَفْرًا». ١٩ 19
೧೯“ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.
فَٱشْتَرَى يُوسُفُ كُلَّ أَرْضِ مِصْرَ لِفِرْعَوْنَ، إِذْ بَاعَ ٱلْمِصْرِيُّونَ كُلُّ وَاحِدٍ حَقْلَهُ، لِأَنَّ ٱلْجُوعَ ٱشْتَدَّ عَلَيْهِمْ. فَصَارَتِ ٱلْأَرْضُ لِفِرْعَوْنَ. ٢٠ 20
೨೦ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.
وَأَمَّا ٱلشَّعْبُ فَنَقَلَهُمْ إِلَى ٱلْمُدُنِ مِنْ أَقْصَى حَدِّ مِصْرَ إِلَى أَقْصَاهُ. ٢١ 21
೨೧ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.
إِلَا إِنَّ أَرْضَ ٱلْكَهَنَةِ لَمْ يَشْتَرِهَا، إِذْ كَانَتْ لِلْكَهَنَةِ فَرِيضَةٌ مِنْ قِبَلِ فِرْعَوْنَ، فَأَكَلُوا فَرِيضَتَهُمُ ٱلَّتِي أَعْطَاهُمْ فِرْعَوْنُ، لِذَلِكَ لَمْ يَبِيعُوا أَرْضَهُمْ. ٢٢ 22
೨೨ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.
فَقَالَ يُوسُفُ لِلشَّعْبِ: «إِنِّي قَدِ ٱشْتَرَيْتُكُمُ ٱلْيَوْمَ وَأَرْضَكُمْ لِفِرْعَوْنَ. هُوَذَا لَكُمْ بِذَارٌ فَتَزْرَعُونَ ٱلْأَرْضَ. ٢٣ 23
೨೩ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.
وَيَكُونُ عِنْدَ ٱلْغَلَّةِ أَنَّكُمْ تُعْطُونَ خُمْسًا لِفِرْعَوْنَ، وَٱلْأَرْبَعَةُ ٱلْأَجْزَاءُ تَكُونُ لَكُمْ بِذَارًا لِلْحَقْلِ، وَطَعَامًا لَكُمْ وَلِمَنْ فِي بْيُوتِكُمْ، وَطَعَامًا لِأَوْلَادِكُمْ». ٢٤ 24
೨೪ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.
فَقَالُوا: «أَحْيَيْتَنَا. لَيْتَنَا نَجِدُ نِعْمَةً فِي عَيْنَيْ سَيِّدِي فَنَكُونَ عَبِيدًا لِفِرْعَوْنَ». ٢٥ 25
೨೫ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.
فَجَعَلَهَا يُوسُفُ فَرْضًا عَلَى أَرْضِ مِصْرَ إِلَى هَذَا ٱلْيَوْمِ: لِفِرْعَوْنَ ٱلْخُمْسُ. إِلَا إِنَّ أَرْضَ ٱلْكَهَنَةِ وَحْدَهُمْ لَمْ تَصِرْ لِفِرْعَوْنَ. ٢٦ 26
೨೬ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
وَسَكَنَ إِسْرَائِيلُ فِي أَرْضِ مِصْرَ، فِي أَرْضِ جَاسَانَ، وَتَمَلَّكُوا فِيهَا وَأَثْمَرُوا وَكَثُرُوا جِدًّا. ٢٧ 27
೨೭ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.
وَعَاشَ يَعْقُوبُ فِي أَرْضِ مِصْرَ سَبْعَ عَشَرَةَ سَنَةً. فَكَانَتْ أَيَّامُ يَعْقُوبَ، سِنُو حَيَاتِهِ مِئَةً وَسَبْعًا وَأَرْبَعِينَ سَنَةً. ٢٨ 28
೨೮ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು.
وَلَمَّا قَرُبَتْ أَيَّامُ إِسْرَائِيلَ أَنْ يَمُوتَ دَعَا ٱبْنَهُ يُوسُفَ وَقَالَ لَهُ: «إِنْ كُنْتُ قَدْ وَجَدْتُ نِعْمَةً فِي عَيْنَيْكَ فَضَعْ يَدَكَ تَحْتَ فَخْذِي وَٱصْنَعْ مَعِي مَعْرُوفًا وَأَمَانَةً: لَا تَدْفِنِّي فِي مِصْرَ، ٢٩ 29
೨೯ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.
بَلْ أَضْطَجِعُ مَعَ آبَائِي، فَتَحْمِلُنِي مِنْ مِصْرَ وَتَدْفِنُنِي فِي مَقْبَرَتِهِمْ». فَقَالَ: «أَنَا أَفْعَلُ بِحَسَبِ قَوْلِكَ». ٣٠ 30
೩೦ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.
فَقَالَ: «ٱحْلِفْ لِي». فَحَلَفَ لَهُ. فَسَجَدَ إِسْرَائِيلُ عَلَى رَأْسِ ٱلسَّرِيرِ. ٣١ 31
೩೧ಇಸ್ರಾಯೇಲನು, “ಪ್ರಮಾಣಮಾಡು” ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.

< اَلتَّكْوِينُ 47 >