< اَلتَّكْوِينُ 9 >
وَبَارَكَ ٱللهُ نُوحًا وَبَنِيهِ وَقَالَ لَهُمْ: «أَثْمِرُوا وَٱكْثُرُوا وَٱمْلَأُوا ٱلْأَرْضَ. | ١ 1 |
೧ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
وَلْتَكُنْ خَشْيَتُكُمْ وَرَهْبَتُكُمْ عَلَى كُلِّ حَيَوَانَاتِ ٱلْأَرْضِ وَكُلِّ طُيُورِ ٱلسَّمَاءِ، مَعَ كُلِّ مَا يَدِبُّ عَلَى ٱلْأَرْضِ، وَكُلِّ أَسْمَاكِ ٱلْبَحْرِ. قَدْ دُفِعَتْ إِلَى أَيْدِيكُمْ. | ٢ 2 |
೨ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
كُلُّ دَابَّةٍ حَيَّةٍ تَكُونُ لَكُمْ طَعَامًا. كَٱلْعُشْبِ ٱلْأَخْضَرِ دَفَعْتُ إِلَيْكُمُ ٱلْجَمِيعَ. | ٣ 3 |
೩ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
غَيْرَ أَنَّ لَحْمًا بِحَيَاتِهِ، دَمِهِ، لَا تَأْكُلُوهُ. | ٤ 4 |
೪ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.
وَأَطْلُبُ أَنَا دَمَكُمْ لِأَنْفُسِكُمْ فَقَطْ. مِنْ يَدِ كُلِّ حَيَوَانٍ أَطْلُبُهُ. وَمِنْ يَدِ ٱلْإِنْسَانِ أَطْلُبُ نَفْسَ ٱلْإِنْسَانِ، مِنْ يَدِ ٱلْإِنْسَانِ أَخِيهِ. | ٥ 5 |
೫ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
سَافِكُ دَمِ ٱلْإِنْسَانِ بِٱلْإِنْسَانِ يُسْفَكُ دَمُهُ. لِأَنَّ ٱللهَ عَلَى صُورَتِهِ عَمِلَ ٱلْإِنْسَانَ. | ٦ 6 |
೬ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
فَأَثْمِرُوا أَنْتُمْ وَٱكْثُرُوا وَتَوَالَدُوا فِي ٱلْأَرْضِ وَتَكَاثَرُوا فِيهَا». | ٧ 7 |
೭ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.
وَكَلَّمَ ٱللهُ نُوحًا وَبَنِيهِ مَعهُ قَائِلًا: | ٨ 8 |
೮ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,
«وَهَا أَنَا مُقِيمٌ مِيثَاقِي مَعَكُمْ وَمَعَ نَسْلِكُمْ مِنْ بَعْدِكُمْ، | ٩ 9 |
೯“ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.
وَمَعَ كُلِّ ذَوَاتِ ٱلْأَنْفُسِ ٱلْحَيَّةِ ٱلَّتِي مَعَكُمْ: ٱلطُّيُورِ وَٱلْبَهَائِمِ وَكُلِّ وُحُوشِ ٱلْأَرْضِ ٱلَّتِي مَعَكُمْ، مِنْ جَمِيعِ ٱلْخَارِجِينَ مِنَ ٱلْفُلْكِ حَتَّى كُلُّ حَيَوَانِ ٱلْأَرْضِ. | ١٠ 10 |
೧೦ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.
أُقِيمُ مِيثَاقِي مَعَكُمْ فَلَا يَنْقَرِضُ كُلُّ ذِي جَسَدٍ أَيْضًا بِمِيَاهِ ٱلطُّوفَانِ. وَلَا يَكُونُ أَيْضًا طُوفَانٌ لِيُخْرِبَ ٱلْأَرْضَ». | ١١ 11 |
೧೧ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.
وَقَالَ ٱللهُ: «هَذِهِ عَلَامَةُ ٱلْمِيثَاقِ ٱلَّذِي أَنَا وَاضِعُهُ بَيْنِي وَبَيْنَكُمْ، وَبَيْنَ كُلِّ ذَوَاتِ ٱلْأَنْفُسِ ٱلْحَيَّةِ ٱلَّتِي مَعَكُمْ إِلَى أَجْيَالِ ٱلدَّهْرِ: | ١٢ 12 |
೧೨ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.
وَضَعْتُ قَوْسِي فِي ٱلسَّحَابِ فَتَكُونُ عَلَامَةَ مِيثَاقٍ بَيْنِي وَبَيْنَ ٱلْأَرْضِ. | ١٣ 13 |
೧೩ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
فَيَكُونُ مَتَى أَنْشُرْ سَحَابًا عَلَى ٱلْأَرْضِ، وَتَظْهَرِ ٱلْقَوْسُ فِي ٱلسَّحَابِ، | ١٤ 14 |
೧೪ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು.
أَنِّي أَذْكُرُ مِيثَاقِي ٱلَّذِي بَيْنِي وَبَيْنَكُمْ وَبَيْنَ كُلِّ نَفْسٍ حَيَّةٍ فِي كُلِّ جَسَدٍ. فَلَا تَكُونُ أَيْضًا ٱلْمِيَاهُ طُوفَانًا لِتُهْلِكَ كُلَّ ذِي جَسَدٍ. | ١٥ 15 |
೧೫ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
فَمَتَى كَانَتِ ٱلْقَوْسُ فِي ٱلسَّحَابِ، أُبْصِرُهَا لِأَذْكُرَ مِيثَاقًا أَبَدِيًّا بَيْنَ ٱللهِ وَبَيْنَ كُلِّ نَفْسٍ حَيَّةٍ فِي كُلِّ جَسَدٍ عَلَى ٱلْأَرْضِ». | ١٦ 16 |
೧೬ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.
وَقَالَ ٱللهُ لِنُوحٍ: «هَذِهِ عَلَامَةُ ٱلْمِيثَاقِ ٱلَّذِي أَنَا أَقَمْتُهُ بَيْنِي وَبَيْنَ كُلِّ ذِي جَسَدٍ عَلَى ٱلْأَرْضِ». | ١٧ 17 |
೧೭ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.
وَكَانَ بَنُو نُوحٍ ٱلَّذِينَ خَرَجُوا مِنَ ٱلْفُلْكِ سَامًا وَحَامًا وَيَافَثَ. وَحَامٌ هُوَ أَبُو كَنْعَانَ. | ١٨ 18 |
೧೮ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.
هَؤُلَاءِ ٱلثَّلَاثَةُ هُمْ بَنُو نُوحٍ. وَمِنْ هَؤُلَاءِ تَشَعَّبَتْ كُلُّ ٱلْأَرْضِ. | ١٩ 19 |
೧೯ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.
وَٱبْتَدَأَ نُوحٌ يَكُونُ فَلَّاحًا وَغَرَسَ كَرْمًا. | ٢٠ 20 |
೨೦ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.
وَشَرِبَ مِنَ ٱلْخَمْرِ فَسَكِرَ وَتَعَرَّى دَاخِلَ خِبَائِهِ. | ٢١ 21 |
೨೧ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
فَأَبْصَرَ حَامٌ أَبُو كَنْعَانَ عَوْرَةَ أَبِيهِ، وَأَخْبَرَ أَخَوَيْهِ خَارِجًا. | ٢٢ 22 |
೨೨ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.
فَأَخَذَ سَامٌ وَيَافَثُ ٱلرِّدَاءَ وَوَضَعَاهُ عَلَى أَكْتَافِهِمَا وَمَشَيَا إِلَى ٱلْوَرَاءِ، وَسَتَرَا عَوْرَةَ أَبِيهِمَا وَوَجْهَاهُمَا إِلَى ٱلْوَرَاءِ. فَلَمْ يُبْصِرَا عَوْرَةَ أَبِيهِمَا. | ٢٣ 23 |
೨೩ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.
فَلَمَّا ٱسْتَيْقَظَ نُوحٌ مِنْ خَمْرِهِ، عَلِمَ مَا فَعَلَ بِهِ ٱبْنُهُ ٱلصَّغِيرُ، | ٢٤ 24 |
೨೪ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು,
فَقَالَ: «مَلْعُونٌ كَنْعَانُ! عَبْدَ ٱلْعَبِيدِ يَكُونُ لإِخْوَتِهِ». | ٢٥ 25 |
೨೫“ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು.
وَقَالَ: «مُبَارَكٌ ٱلرَّبُّ إِلَهُ سَامٍ. وَلْيَكُنْ كَنْعَانُ عَبْدًا لَهُمْ. | ٢٦ 26 |
೨೬ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.
لِيَفْتَحِ ٱللهُ لِيَافَثَ فَيَسْكُنَ فِي مَسَاكِنِ سَامٍ، وَلْيَكُنْ كَنْعَانُ عَبْدًا لَهُمْ». | ٢٧ 27 |
೨೭ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು.
وَعَاشَ نُوحٌ بَعْدَ ٱلطُّوفَانِ ثَلَاثَ مِئَةٍ وَخَمْسِينَ سَنَةً. | ٢٨ 28 |
೨೮ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರ್ಷ ಬದುಕಿದನು.
فَكَانَتْ كُلُّ أَيَّامِ نُوحٍ تِسْعَ مِئَةٍ وَخَمْسِينَ سَنَةً، وَمَاتَ. | ٢٩ 29 |
೨೯ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು.