< حَجَّي 2 >

فِي ٱلشَّهْرِ ٱلسَّابِعِ فِي ٱلْحَادِي وَٱلْعِشْرِينَ مِنَ ٱلشَّهْرِ، كَانَتْ كَلِمَةُ ٱلرَّبِّ عَنْ يَدِ حَجَّي ٱلنَّبِيِّ قَائِلًا: ١ 1
ಏಳನೆಯ ತಿಂಗಳಿನ, ಇಪ್ಪತ್ತೊಂದನೆಯ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:
«كَلِّمْ زَرُبَّابِلَ بْنَ شَأَلْتِيئِيلَ وَالِيَ يَهُوذَا، وَيَهُوشَعَ بْنِ يَهُوصَادِقَ ٱلْكَاهِنِ ٱلْعَظِيمِ وَبَقِيَّةِ ٱلشَّعْبِ قَائِلًا: ٢ 2
“ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು.
مَنِ ٱلْبَاقِي فِيكُمُ ٱلَّذِي رَأَى هَذَا ٱلْبَيْتَ فِي مَجْدِهِ ٱلْأَوَّلِ؟ وَكَيْفَ تَنْظُرُونَهُ ٱلْآنَ؟ أَمَا هُوَ فِي أَعْيُنِكُمْ كَلَا شَيْءٍ! ٣ 3
ಈ ಆಲಯದ ಅದರ ಪೂರ್ವದ ಮಹಿಮೆಯನ್ನು ನೋಡಿದವರೊಳಗೆ ಉಳಿದವನು ನಿಮ್ಮಲ್ಲಿ ಯಾರು ಇದ್ದಾರೆ? ಈಗ ಅದು ಹೇಗೆ ಕಾಣುತ್ತದೆ? ಇದು ನಿಮ್ಮ ದೃಷ್ಟಿಗೆ ಏನೂ ಇಲ್ಲದ ಹಾಗೆ ತೋರುತ್ತದಲ್ಲವೋ?
فَٱلْآنَ تَشَدَّدْ يَا زَرُبَّابِلُ، يَقُولُ ٱلرَّبُّ. وَتَشَدَّدْ يَا يَهُوشَعُ بْنُ يَهُوصَادِقَ ٱلْكَاهِنُ ٱلْعَظِيمُ، وَتَشَدَّدُوا يَا جَمِيعَ شَعْبِ ٱلْأَرْضِ، يَقُولُ ٱلرَّبُّ. وَٱعْمَلُوا فَإِنِّي مَعَكُمْ، يَقُولُ رَبُّ ٱلْجُنُودِ. ٤ 4
ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
حَسَبَ ٱلْكَلَامِ ٱلَّذِي عَاهَدْتُكُمْ بِهِ عِنْدَ خُرُوجِكُمْ مِنْ مِصْرَ، وَرُوحِي قَائِمٌ فِي وَسَطِكُمْ. لَا تَخَافُوا. ٥ 5
ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.
لِأَنَّهُ هَكَذَا قَالَ رَبُّ ٱلْجُنُودِ: هِيَ مَرَّةٌ، بَعْدَ قَلِيلٍ، فَأُزَلْزِلُ ٱلسَّمَاوَاتِ وَٱلْأَرْضَ وَٱلْبَحْرَ وَٱلْيَابِسَةَ، ٦ 6
“ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.
وَأُزَلْزِلُ كُلَّ ٱلْأُمَمِ. وَيَأْتِي مُشْتَهَى كُلِّ ٱلْأُمَمِ، فَأَمْلَأُ هَذَا ٱلْبَيْتَ مَجْدًا، قَالَ رَبُّ ٱلْجُنُودِ. ٧ 7
ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
لِي ٱلْفِضَّةُ وَلِي ٱلذَّهَبُ، يَقُولُ رَبُّ ٱلْجُنُودِ. ٨ 8
‘ಬೆಳ್ಳಿ ನನ್ನದು, ಚಿನ್ನವು ನನ್ನದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
مَجْدُ هَذَا ٱلْبَيْتِ ٱلْأَخِيرِ يَكُونُ أَعْظَمَ مِنْ مَجْدِ ٱلْأَوَّلِ، قَالَ رَبُّ ٱلْجُنُودِ. وَفِي هَذَا ٱلْمَكَانِ أُعْطِي ٱلسَّلَامَ، يَقُولُ رَبُّ ٱلْجُنُودِ». ٩ 9
‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”
فِي ٱلرَّابِعِ وَٱلْعِشْرِينَ مِنَ ٱلشَّهْرِ ٱلتَّاسِعِ، فِي ٱلسَّنَةِ ٱلثَّانِيَةِ لِدَارِيُوسَ، كَانَتْ كَلِمَةُ ٱلرَّبِّ عَنْ يَدِ حَجَّي ٱلنَّبِيِّ قَائِلًا: ١٠ 10
ದಾರ್ಯಾವೆಷನ ಎರಡನೆಯ ವರ್ಷದ, ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು:
«هَكَذَا قَالَ رَبُّ ٱلْجُنُودِ: اِسْأَلِ ٱلْكَهَنَةَ عَنِ ٱلشَّرِيعَةِ قَائِلًا: ١١ 11
“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮೋಶೆಯ ನಿಯಮದ ಪ್ರಕಾರವಾಗಿ ಯಾಜಕರಿಗೆ,
إِنْ حَمَلَ إِنْسَانٌ لَحْمًا مُقَدَّسًا فِي طَرَفِ ثَوْبِهِ وَمَسَّ بِطَرَفِهِ خُبْزًا أَوْ طَبِيخًا أَوْ خَمْرًا أَوْ زَيْتًا أَوْ طَعَامًا مَّا، فَهَلْ يَتَقَدَّسُ؟» فَأَجَابَ ٱلْكَهَنَةُ وَقَالُوا: «لَا». ١٢ 12
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು.
فَقَالَ حَجَّي: «إِنْ كَانَ ٱلْمُنَجَّسُ بِمَيْتٍ يَمَسُّ شَيْئًا مِنْ هَذِهِ، فَهَلْ يَتَنَجَّسُ؟» فَأَجَابَ ٱلْكَهَنَةُ وَقَالُوا: «يَتَنَجَّسُ». ١٣ 13
ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.
فَأَجَابَ حَجَّي وَقَالَ: «هَكَذَا هَذَا ٱلشَّعْبُ، وَهَكَذَا هَذِهِ ٱلْأُمَّةُ قُدَّامِي، يَقُولُ ٱلرَّبُّ، وَهَكَذَا كُلُّ عَمَلِ أَيْدِيهِمْ وَمَا يُقَرِّبُونَهُ هُنَاكَ. هُوَ نَجِسٌ. ١٤ 14
ಆಗ ಹಗ್ಗಾಯನು ಮುಂದುವರಿಸಿ ಹೇಳಿದ್ದೇನೆಂದರೆ, “ಈ ಜನರೂ, ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಅರ್ಪಿಸುವಂಥಾದ್ದು ಅಶುದ್ಧವೇ.
وَٱلْآنَ فَٱجْعَلُوا قَلْبَكُمْ مِنْ هَذَا ٱلْيَوْمِ فَرَاجِعًا، قَبْلَ وَضْعِ حَجَرٍ عَلَى حَجَرٍ فِي هَيْكَلِ ٱلرَّبِّ. ١٥ 15
“ಈಗ ಚೆನ್ನಾಗಿ ಯೋಚಿಸಿಕೊಳ್ಳಿರಿ. ಯೆಹೋವ ದೇವರ ಆಲಯ ನಿವೇಶನದಲ್ಲಿ, ಕಲ್ಲಿನ ಮೇಲೆ ಕಲ್ಲು ಇಡುವ, ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.
مُذْ تِلْكَ ٱلْأَيَّامِ كَانَ أَحَدُكُمْ يَأْتِي إِلَى عَرَمَةِ عِشْرِينَ فَكَانَتْ عَشَرَةً. أَتَى إِلَى حَوْضِ ٱلْمِعْصَرَةِ لِيَغْرُفَ خَمْسِينَ فُورَةً فَكَانَتْ عِشْرِينَ. ١٦ 16
ಆ ದಿನಗಳು ಇದ್ದದ್ದು ಮೊದಲುಗೊಂಡು, ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ, ಹತ್ತು ಸೇರು ಮಾತ್ರ ಸಿಕ್ಕುತ್ತಿತ್ತು. ಒಬ್ಬನು ಐವತ್ತು ಪಾತ್ರೆ ದ್ರಾಕ್ಷಾರಸವನ್ನು ತುಂಬಿಸುವುದಕ್ಕೆ ತೊಟ್ಟಿಗೆ ಬಂದಾಗ, ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.
قَدْ ضَرَبْتُكُمْ بِٱللَّفْحِ وَبِالْيَرَقَانِ وَبِالْبَرَدِ فِي كُلِّ عَمَلِ أَيْدِيكُمْ، وَمَا رَجَعْتُمْ إِلَيَّ، يَقُولُ ٱلرَّبُّ. ١٧ 17
ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.
فَٱجْعَلُوا قَلْبَكُمْ مِنْ هَذَا ٱلْيَوْمِ فَصَاعِدًا، مِنَ ٱلْيَوْمِ ٱلرَّابِعِ وَٱلْعِشْرِينَ مِنَ ٱلشَّهْرِ ٱلتَّاسِعِ، مِنَ ٱلْيَوْمِ ٱلَّذِي فِيهِ تَأَسَّسَ هَيْكَلُ ٱلرَّبِّ، ٱجْعَلُوا قَلْبَكُمْ. ١٨ 18
ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.
هَلِ ٱلْبَذْرُ فِي ٱلْأَهْرَاءِ بَعْدُ؟ وَٱلْكَرْمُ وَٱلتِّينُ وَٱلرُّمَّانُ وَٱلزَّيْتُونُ لَمْ يَحْمِلْ بَعْدُ. فَمِنْ هَذَا ٱلْيَوْمِ أُبَارِكُ». ١٩ 19
ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.
وَصَارَتْ كَلِمَةُ ٱلرَّبِّ ثَانِيَةً إِلَى حَجَّي، فِي ٱلرَّابِعِ وَٱلْعِشْرِينَ مِنَ ٱلشَّهْرِ قَائِلًا: ٢٠ 20
ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು, ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ, ಹಗ್ಗಾಯನಿಗೆ ಬಂದಿತು.
«كَلِّمْ زَرُبَّابِلَ وَالِيَ يَهُوذَا قَائِلًا: إِنِّي أُزَلْزِلُ ٱلسَّمَاوَاتِ وَٱلْأَرْضَ، ٢١ 21
ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು.
وَأَقْلِبُ كُرْسِيَّ ٱلْمَمَالِكِ، وَأُبِيدُ قُوَّةَ مَمَالِكِ ٱلْأُمَمِ، وَأَقْلِبُ ٱلْمَرْكَبَاتِ وَٱلرَّاكِبِينَ فِيهَا، وَيَنْحَطُّ ٱلْخَيْلُ وَرَاكِبُوهَا، كُلٌّ مِنْهَا بِسَيْفِ أَخِيهِ. ٢٢ 22
ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.
فِي ذَلِكَ ٱلْيَوْمِ، يَقُولُ رَبُّ ٱلْجُنُودِ، آخُذُكَ يَا زَرُبَّابِلُ عَبْدِي ٱبْنُ شَأَلْتِيئِيلَ، يَقُولُ ٱلرَّبُّ، وَأَجْعَلُكَ كَخَاتِمٍ، لِأَنِّي قَدِ ٱخْتَرْتُكَ، يَقُولُ رَبُّ ٱلْجُنُودِ». ٢٣ 23
“ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”

< حَجَّي 2 >