< حَجَّي 1 >

فِي ٱلسَّنَةِ ٱلثَّانِيَةِ لِدَارِيُوسَ ٱلْمَلِكِ، فِي ٱلشَّهْرِ ٱلسَّادِسِ فِي أَوَّلِ يَوْمٍ مِنَ ٱلشَّهْرِ، كَانَتْ كَلِمَةُ ٱلرَّبِّ عَنْ يَدِ حَجَّي ٱلنَّبِيِّ إِلَى زَرُبَّابِلَ بْنِ شَأَلْتِيئِيلَ وَالِي يَهُوذَا، وَإِلَى يَهُوشَعَ بْنِ يَهُوصَادِقَ ٱلْكَاهِنِ ٱلْعَظِيمِ قَائِلًا: ١ 1
ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:
«هَكَذَا قَالَ رَبُّ ٱلْجُنُودِ قَائِلًا: هَذَا ٱلشَّعْبُ قَالَ إِنَّ ٱلْوَقْتَ لَمْ يَبْلُغْ وَقْتَ بِنَاءِ بَيْتِ ٱلرَّبِّ». ٢ 2
“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”
فَكَانَتْ كَلِمَةُ ٱلرَّبِّ عَنْ يَدِ حَجَّي ٱلنَّبِيِّ قَائِلًا: ٣ 3
ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:
«هَلِ ٱلْوَقْتُ لَكُمْ أَنْتُمْ أَنْ تَسْكُنُوا فِي بُيُوتِكُمُ ٱلْمُغَشَّاةِ، وَهَذَا ٱلْبَيْتُ خَرَابٌ؟ ٤ 4
“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”
وَٱلْآنَ فَهَكَذَا قَالَ رَبُّ ٱلْجُنُودِ: ٱجْعَلُوا قَلْبَكُمْ عَلَى طُرُقِكُمْ. ٥ 5
ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.
زَرَعْتُمْ كَثِيرًا وَدَخَّلْتُمْ قَلِيلًا. تَأْكُلُونَ وَلَيْسَ إِلَى ٱلشَّبَعِ. تَشْرَبُونَ وَلَا تَرْوُونَ. تَكْتَسُونَ وَلَا تَدْفَأُونَ. وَٱلْآخِذُ أُجْرَةً يَأْخُذُ أُجْرَةً لِكِيسٍ مَنْقُوبٍ. ٦ 6
ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”
«هَكَذَا قَالَ رَبُّ ٱلْجُنُودِ: ٱجْعَلُوا قَلْبَكُمْ عَلَى طُرُقِكُمْ. ٧ 7
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.
اِصْعَدُوا إِلَى ٱلْجَبَلِ وَأْتُوا بِخَشَبٍ وَٱبْنُوا ٱلْبَيْتَ، فَأَرْضَى عَلَيْهِ وَأَتَمَجَّدَ، قَالَ ٱلرَّبُّ. ٨ 8
ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ.
ٱنْتَظَرْتُمْ كَثِيرًا وَإِذَا هُوَ قَلِيلٌ. وَلَمَّا أَدْخَلْتُمُوهُ ٱلْبَيْتَ نَفَخْتُ عَلَيْهِ. لِمَاذَا؟ يَقُولُ رَبُّ ٱلْجُنُودِ. لِأَجْلِ بَيْتِي ٱلَّذِي هُوَ خَرَابٌ، وَأَنْتُمْ رَاكِضُونَ كُلُّ إِنْسَانٍ إِلَى بَيْتِهِ. ٩ 9
ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.
لِذَلِكَ مَنَعَتِ ٱلسَّمَاوَاتُ مِنْ فَوْقِكُمُ ٱلنَّدَى، وَمَنَعَتِ ٱلْأَرْضُ غَلَّتَهَا. ١٠ 10
ಆದ್ದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.
وَدَعَوْتُ بِٱلْحَرِّ عَلَى ٱلْأَرْضِ وَعَلَى ٱلْجِبَالِ وَعَلَى ٱلْحِنْطَةِ وَعَلَى ٱلْمِسْطَارِ وَعَلَى ٱلزَّيْتِ وَعَلَى مَا تُنْبِتُهُ ٱلْأَرْضُ، وَعَلَى ٱلنَّاسِ وَعَلَى ٱلْبَهَائِمِ، وَعَلَى كُلِّ أَتْعَابِ ٱلْيَدَيْنِ». ١١ 11
ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”
حِينَئِذٍ سَمِعَ زَرُبَّابِلُ بْنُ شَأَلْتِيئِيلَ وَيَهُوشَعُ بْنُ يَهُوصَادِقَ ٱلْكَاهِنِ ٱلْعَظِيمِ، وَكُلُّ بَقِيَّةِ ٱلشَّعْبِ صَوْتَ ٱلرَّبِّ إِلَهِهِمْ وَكَلَامَ حَجَّي ٱلنَّبِيِّ كَمَا أَرْسَلَهُ ٱلرَّبُّ إِلَهُهُمْ. وَخَافَ ٱلشَّعْبُ أَمَامَ وَجْهِ ٱلرَّبِّ. ١٢ 12
ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.
فَقَالَ حَجَّي رَسُولُ ٱلرَّبِّ بِرِسَالَةِ ٱلرَّبِّ لِجَمِيعِ ٱلشَّعْبِ قَائِلًا: «أَنَا مَعَكُمْ، يَقُولُ ٱلرَّبُّ». ١٣ 13
ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.
وَنَبَّهَ ٱلرَّبُّ رُوحَ زَرُبَّابِلَ بْنِ شَأَلْتِيئِيلَ وَالِي يَهُوذَا، وَرُوحَ يَهُوشَعَ بْنِ يَهُوصَادِقَ ٱلْكَاهِنِ ٱلْعَظِيمِ، وَرُوحَ كُلِّ بَقِيَّةِ ٱلشَّعْبِ. فَجَاءُوا وَعَمِلُوا ٱلشُّغْلَ فِي بَيْتِ رَبِّ ٱلْجُنُودِ إِلَهِهِمْ، ١٤ 14
ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,
فِي ٱلْيَوْمِ ٱلرَّابِعِ وَٱلْعِشْرِينَ مِنَ ٱلشَّهْرِ ٱلسَّادِسِ، فِي ٱلسَّنَةِ ٱلثَّانِيَةِ لِدَارِيُوسَ ٱلْمَلِكِ. ١٥ 15

< حَجَّي 1 >