< إِشَعْيَاءَ 19 >

وَحْيٌ مِنْ جِهَةِ مِصْرَ: هُوَذَا ٱلرَّبُّ رَاكِبٌ عَلَى سَحَابَةٍ سَرِيعَةٍ وَقَادِمٌ إِلَى مِصْرَ، فَتَرْتَجِفُ أَوْثَانُ مِصْرَ مِنْ وَجْهِهِ، وَيَذُوبُ قَلْبُ مِصْرَ دَاخِلَهَا. ١ 1
ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.
وَأُهَيِّجُ مِصْرِيِّينَ عَلَى مِصْرِيِّينَ، فَيُحَارِبُونَ كُلُّ وَاحِدٍ أَخَاهُ وَكُلُّ وَاحِدٍ صَاحِبَهُ: مَدِينَةٌ مَدِينَةً، وَمَمْلَكَةٌ مَمْلَكَةً. ٢ 2
“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.
وَتُهْرَاقُ رُوحُ مِصْرَ دَاخِلَهَا، وَأُفْنِي مَشُورَتَهَا، فَيَسْأَلُونَ ٱلْأَوْثَانَ وَٱلْعَازِفِينَ وَأَصْحَابَ ٱلتَّوَابِعِ وَٱلْعَرَّافِينَ. ٣ 3
ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
وَأُغْلِقُ عَلَى ٱلْمِصْرِيِّينَ فِي يَدِ مَوْلًى قَاسٍ، فَيَتَسَلَّطُ عَلَيْهِمْ مَلِكٌ عَزِيزٌ، يَقُولُ ٱلسَّيِّدُ رَبُّ ٱلْجُنُودِ. ٤ 4
ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.
وَتُنَشَّفُ ٱلْمِيَاهُ مِنَ ٱلْبَحْرِ، وَيَجِفُّ ٱلنَّهْرُ وَيَيْبَسُ. ٥ 5
ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.
وَتُنْتِنُ ٱلْأَنْهَارُ، وَتَضْعُفُ وَتَجِفُّ سَوَاقِي مِصْرَ، وَيَتْلَفُ ٱلْقَصَبُ وَٱلْأَسَلُ. ٦ 6
ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.
وَٱلرِّيَاضُ عَلَى ٱلنِّيلِ عَلَى حَافَةِ ٱلنِّيلِ، وَكُلُّ مَزْرَعَةٍ عَلَى ٱلنِّيلِ تَيْبَسُ وَتَتَبَدَّدُ وَلَا تَكُونُ. ٧ 7
ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು, ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು.
وَٱلصَّيَّادُونَ يَئِنُّونَ، وَكُلُّ ٱلَّذِينَ يُلْقُونَ شِصًّا فِي ٱلنِّيلِ يَنُوحُونَ. وَٱلَّذِينَ يَبْسُطُونَ شَبَكَةً عَلَى وَجْهِ ٱلْمِيَاهِ يَحْزَنُونَ، ٨ 8
ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.
وَيَخْزَى ٱلَّذِينَ يَعْمَلُونَ ٱلْكَتَّانَ ٱلْمُمَشَّطَ، وَٱلَّذِينَ يَحِيكُونَ ٱلْأَنْسِجَةَ ٱلْبَيْضَاءَ. ٩ 9
ನಯವಾದ ಸೆಣಬಿನ ಕೆಲಸದವರೂ, ಬಿಳಿ ಬಟ್ಟೆಯನ್ನು ನೇಯುವವರೂ ಹತಾಶರಾಗುವರು.
وَتَكُونُ عُمُدُهَا مَسْحُوقَةً، وَكُلُّ ٱلْعَامِلِينَ بِٱلْأُجْرَةِ مُكْتَئِبِي ٱلنَّفْسِ. ١٠ 10
೧೦ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.
إِنَّ رُؤَسَاءَ صُوعَنَ أَغْبِيَاءُ! حُكَمَاءُ مُشِيرِي فِرْعَوْنَ مَشُورَتُهُمْ بَهِيمِيَّةٌ! كَيْفَ تَقُولُونَ لِفِرْعَوْنَ: «أَنَا ٱبْنُ حُكَمَاءَ، ٱبْنُ مُلُوكٍ قُدَمَاءَ»؟ ١١ 11
೧೧ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
فَأَيْنَ هُمْ حُكَمَاؤُكَ؟ فَلْيُخْبِرُوكَ. لِيَعْرِفُوا مَاذَا قَضَى بِهِ رَبُّ ٱلْجُنُودِ عَلَى مِصْرَ. ١٢ 12
೧೨ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.
رُؤَسَاءُ صُوعَنَ صَارُوا أَغْبِيَاءَ. رُؤَسَاءُ نُوفَ ٱنْخَدَعُوا. وَأَضَلَّ مِصْرَ وُجُوهُ أَسْبَاطِهَا. ١٣ 13
೧೩ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.
مَزَجَ ٱلرَّبُّ فِي وَسَطِهَا رُوحَ غَيٍّ، فَأَضَلُّوا مِصْرَ فِي كُلِّ عَمَلِهَا، كَتَرَنُّحِ ٱلسَّكْرَانِ فِي قَيْئِهِ. ١٤ 14
೧೪ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.
فَلَا يَكُونُ لِمِصْرَ عَمَلٌ يَعْمَلُهُ رَأْسٌ أَوْذَنَبٌ، نَخْلَةٌ أَوْ أَسَلَةٌ. ١٥ 15
೧೫ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.
فِي ذَلِكَ ٱلْيَوْمِ تَكُونُ مِصْرُ كَٱلنِّسَاءِ، فَتَرْتَعِدُ وَتَرْجُفُ مِنْ هَزَّةِ يَدِ رَبِّ ٱلْجُنُودِ ٱلَّتِي يَهُزُّهَا عَلَيْهَا. ١٦ 16
೧೬ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.
وَتَكُونُ أَرْضُ يَهُوذَا رُعْبًا لِمِصْرَ. كُلُّ مَنْ تَذَكَّرَهَا يَرْتَعِبُ مِنْ أَمَامِ قَضَاءِ رَبِّ ٱلْجُنُودِ ٱلَّذِي يَقْضِي بِهِ عَلَيْهَا. ١٧ 17
೧೭ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.
فِي ذَلِكَ ٱلْيَوْمِ يَكُونُ فِي أَرْضِ مِصْرَ خَمْسُ مُدُنٍ تَتَكَلَّمُ بِلُغَةِ كَنْعَانَ وَتَحْلِفُ لِرَبِّ ٱلْجُنُودِ، يُقَالُ لِإِحْدَاهَا «مَدِينَةُ ٱلشَّمْسِ». ١٨ 18
೧೮ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”
فِي ذَلِكَ ٱلْيَوْمِ يَكُونُ مَذْبَحٌ لِلرَّبِّ فِي وَسَطِ أَرْضِ مِصْرَ، وَعَمُودٌ لِلرَّبِّ عِنْدَ تُخْمِهَا. ١٩ 19
೧೯ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.
فَيَكُونُ عَلَامَةً وَشَهَادَةً لِرَبِّ ٱلْجُنُودِ فِي أَرْضِ مِصْرَ. لِأَنَّهُمْ يَصْرُخُونَ إِلَى ٱلرَّبِّ بِسَبَبِ ٱلْمُضَايِقِينَ، فَيُرْسِلُ لَهُمْ مُخَلِّصًا وَمُحَامِيًا وَيُنْقِذُهُمْ. ٢٠ 20
೨೦ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
فَيُعْرَفُ ٱلرَّبُّ فِي مِصْرَ، وَيَعْرِفُ ٱلْمِصْرِيُّونَ ٱلرَّبَّ فِي ذَلِكَ ٱلْيَوْمِ، وَيُقَدِّمُونَ ذَبِيحَةً وَتَقْدِمَةً، وَيَنْذُرُونَ لِلرَّبِّ نَذْرًا وَيُوفُونَ بِهِ. ٢١ 21
೨೧ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.
وَيَضْرِبُ ٱلرَّبُّ مِصْرَ ضَارِبًا فَشَافِيًا، فَيَرْجِعُونَ إِلَى ٱلرَّبِّ فَيَسْتَجِيبُ لَهُمْ وَيَشْفِيهِمْ. ٢٢ 22
೨೨ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.
فِي ذَلِكَ ٱلْيَوْمِ تَكُونُ سِكَّةٌ مِنْ مِصْرَ إِلَى أَشُّورَ، فَيَجِيءُ ٱلْأَشُّورِيُّونَ إِلَى مِصْرَ وَٱلْمِصْرِيُّونَ إِلَى أَشُّورَ، وَيَعْبُدُ ٱلْمِصْرِيُّونَ مَعَ ٱلْأَشُّورِيِّينَ. ٢٣ 23
೨೩ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.
فِي ذَلِكَ ٱلْيَوْمِ يَكُونُ إِسْرَائِيلُ ثُلُثًا لِمِصْرَ وَلِأَشُّورَ، بَرَكَةً فِي ٱلْأَرْضِ، ٢٤ 24
೨೪ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.
بِهَا يُبَارِكُ رَبُّ ٱلْجُنُودِ قَائِلًا: «مُبَارَكٌ شَعْبِي مِصْرُ، وَعَمَلُ يَدَيَّ أَشُّورُ، وَمِيرَاثِي إِسْرَائِيلُ». ٢٥ 25
೨೫“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.

< إِشَعْيَاءَ 19 >