< إِشَعْيَاءَ 21 >

وَحْيٌ مِنْ جِهَةِ بَرِّيَّةِ ٱلْبَحْرِ: كَزَوَابِعَ فِي ٱلْجَنُوبِ عَاصِفَةٍ، يَأْتِي مِنَ ٱلْبَرِّيَّةِ مِنْ أَرْضٍ مَخُوفَةٍ. ١ 1
ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.
قَدْ أُعْلِنَتْ لِي رُؤْيَا قَاسِيَةٌ: ٱلنَّاهِبُ نَاهِبًا وَٱلْمُخْرِبُ مُخْرِبًا. اِصْعَدِي يَا عِيلَامُ. حَاصِرِي يَا مَادِي. قَدْ أَبْطَلْتُ كُلَّ أَنِينِهَا. ٢ 2
ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
لِذَلِكَ ٱمْتَلَأَتْ حَقْوَايَ وَجَعًا، وَأَخَذَنِي مَخَاضٌ كَمَخَاضِ ٱلْوَالِدَةِ. تَلَوَّيْتُ حَتَّى لَا أَسْمَعُ. اَنْدَهَشْتُ حَتَّى لَا أَنْظُرُ. ٣ 3
ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ.
تَاهَ قَلْبِي. بَغَتَنِي رُعْبٌ. لَيْلَةُ لَذَّتِي جَعَلَهَا لِي رِعْدَةً. ٤ 4
ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
يُرَتِّبُونَ ٱلْمَائِدَةَ، يَحْرُسُونَ ٱلْحِرَاسَةَ، يَأْكُلُونَ. يَشْرَبُونَ. قُومُوا أَيُّهَا ٱلرُّؤَسَاءُ ٱمْسَحُوا ٱلْمِجَنَّ! ٥ 5
ಔತಣ ಸಿದ್ಧವಾಗಿದೆ. ಬುರುಜಿನ ಮೇಲೆ ಕಾವಲಿರು. ಉಣ್ಣು, ಕುಡಿ, ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿರಿ.
لِأَنَّهُ هَكَذَا قَالَ لِي ٱلسَّيِّدُ: «ٱذْهَبْ أَقِمِ ٱلْحَارِسَ. لِيُخْبِرْ بِمَا يَرَى». ٦ 6
ಕರ್ತರು ನನಗೆ ಹೇಳಿದ್ದೇನೆಂದರೆ, “ಹೋಗು, ಕಾವಲುಗಾರರನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.
فَرَأَى رُكَّابًا أَزْوَاجَ فُرْسَانٍ. رُكَّابَ حَمِيرٍ. رُكَّابَ جِمَالٍ. فَأَصْغَى إِصْغَاءً شَدِيدًا، ٧ 7
ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥ ಸಾಲುಗಳನ್ನು ನೋಡಿದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ.”
ثُمَّ صَرَخَ كَأَسَدٍ: «أَيُّهَا ٱلسَّيِّدُ، أَنَا قَائِمٌ عَلَى ٱلْمَرْصَدِ دَائِمًا فِي ٱلنَّهَارِ، وَأَنَا وَاقِفٌ عَلَى ٱلْمَحْرَسِ كُلَّ ٱللَّيَالِي. ٨ 8
ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
وَهُوَذَا رُكَّابٌ مِنَ ٱلرِّجَالِ. أَزْوَاجٌ مِنَ ٱلْفُرْسَانِ». فَأَجَابَ وَقَالَ: «سَقَطَتْ، سَقَطَتْ بَابِلُ، وَجَمِيعُ تَمَاثِيلِ آلِهَتِهَا ٱلْمَنْحُوتَةِ كَسَّرَهَا إِلَى ٱلْأَرْضِ». ٩ 9
ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”
يَا دِيَاسَتِي وَبَنِي بَيْدَرِي. مَا سَمِعْتُهُ مِنْ رَبِّ ٱلْجُنُودِ إِلَهِ إِسْرَائِيلَ أَخْبَرْتُكُمْ بِهِ. ١٠ 10
ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
وَحْيٌ مِنْ جِهَةِ دُومَةَ: صَرَخَ إِلَيَّ صَارِخٌ مِنْ سَعِيرَ: «يَا حَارِسُ، مَا مِنَ ٱللَّيْلِ؟ يَا حَارِسُ، مَا مِنَ ٱللَّيْلِ؟» ١١ 11
ದೂಮ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”
قَالَ ٱلْحَارِسُ: «أَتَى صَبَاحٌ وَأَيْضًا لَيْلٌ. إِنْ كُنْتُمْ تَطْلُبُونَ فَٱطْلُبُوا. ٱرْجِعُوا، تَعَالَوْا». ١٢ 12
ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”
وَحْيٌ مِنْ جِهَةِ بِلَادِ ٱلْعَرَبِ: فِي ٱلْوَعْرِ فِي بِلَادِ ٱلْعَرَبِ تَبِيتِينَ، يَا قَوَافِلَ ٱلدَّدَانِيِّينَ. ١٣ 13
ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
هَاتُوا مَاءً لِمُلَاقَاةِ ٱلْعَطْشَانِ، يَا سُكَّانَ أَرْضِ تَيْمَاءَ. وَافُوا ٱلْهَارِبَ بِخُبْزِهِ. ١٤ 14
ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸುತ್ತಾರೆ.
فَإِنَّهُمْ مِنْ أَمَامِ ٱلسُّيُوفِ قَدْ هَرَبُوا. مِنْ أَمَامِ ٱلسَّيْفِ ٱلْمَسْلُولِ، وَمِنْ أَمَامِ ٱلْقَوْسِ ٱلْمَشْدُودَةِ، وَمِنْ أَمَامِ شِدَّةِ ٱلْحَرْبِ. ١٥ 15
ಏಕೆಂದರೆ ಹಿರಿದ ಖಡ್ಗ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರಷ್ಟೆ.
فَإِنَّهُ هَكَذَا قَالَ لِيَ ٱلسَّيِّدُ: «فِي مُدَّةِ سَنَةٍ كَسَنَةِ ٱلْأَجِيرِ يَفْنَى كُلُّ مَجْدِ قِيدَارَ، ١٦ 16
ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.
وَبَقِيَّةُ عَدَدِ قِسِيِّ أَبْطَالِ بَنِي قِيدَارَ تَقِلُّ، لِأَنَّ ٱلرَّبَّ إِلَهَ إِسْرَائِيلَ قَدْ تَكَلَّمَ». ١٧ 17
ಬಿಲ್ಲುಗಾರರಲ್ಲಿ ಕೆಲವರೂ, ಕೇದಾರಿನ ಬಲಿಷ್ಠರಲ್ಲಿ ಕೆಲವರು ಮಾತ್ರ ಉಳಿಯುವರು,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ನುಡಿದಿದ್ದಾರೆ.

< إِشَعْيَاءَ 21 >