< إِشَعْيَاءَ 23 >

وَحْيٌ مِنْ جِهَةِ صُورَ: وَلْوِلِي يَاسُفُنَ تَرْشِيشَ، لِأَنَّهَا خَرِبَتْ حَتَّى لَيْسَ بَيْتٌ حَتَّى لَيْسَ مَدْخَلٌ. مِنْ أَرْضِ كِتِّيمَ أُعْلِنَ لَهُمْ. ١ 1
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
اِنْدَهِشُوا يَا سُكَّانَ ٱلسَّاحِلِ. تُجَّارُ صِيدُونُ ٱلْعَابِرُونَ ٱلْبَحْرَ مَلَأُوكِ. ٢ 2
ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ, ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ!
وَغَلَّتُهَا، زَرْعُ شِيحُورَ، حَصَادُ ٱلنِّيلِ، عَلَى مِيَاهٍ كَثِيرَةٍ فَصَارَتْ مَتْجَرَةً لِأُمَمٍ. ٣ 3
ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
اِخْجَلِي يَا صِيدُونُ لِأَنَّ ٱلْبَحْرَ، حِصْنَ ٱلْبَحْرِ، نَطَقَ قَائِلًا: «لَمْ أَتَمَخَّضْ وَلَا وَلَدْتُ وَلَا رَبَّيْتُ شَبَابًا وَلَا نَشَّأْتُ عَذَارَى». ٤ 4
ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ.
عِنْدَ وُصُولِ ٱلْخَبَرِ إِلَى مِصْرَ، يَتَوَجَّعُونَ، عِنْدَ وُصُولِ خَبَرِ صُورَ. ٥ 5
ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು.
اُعْبُرُوا إِلَى تَرْشِيشَ. وَلْوِلُوا يَا سُكَّانَ ٱلسَّاحِلِ. ٦ 6
ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!
أَهَذِهِ لَكُمُ ٱلْمُفْتَخِرَةُ ٱلَّتِي مُنْذُ ٱلْأَيَّامِ ٱلْقَدِيمَةِ قِدَمُهَا؟ تَنْقُلُهَا رِجْلَاهَا بَعِيدًا لِلتَّغَرُّبِ. ٧ 7
ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.
مَنْ قَضَى بِهَذَا عَلَى صُورَ ٱلْمُتَوِّجَةِ ٱلَّتِي تُجَّارُهَا رُؤَسَاءُ؟ مُتَسَبِّبُوهَا مُوَقَّرُو ٱلْأَرْضِ. ٨ 8
ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?
رَبُّ ٱلْجُنُودِ قَضَى بِهِ لِيُدَنِّسَ كِبْرِيَاءَ كُلِّ مَجْدٍ، وَيَهِينَ كُلَّ مُوَقَّرِي ٱلْأَرْضِ. ٩ 9
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.
اِجْتَازِي أَرْضَكِ كَٱلنِّيلِ يَابِنْتَ تَرْشِيشَ. لَيْسَ حَصْرٌ فِي مَا بَعْدُ. ١٠ 10
೧೦ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.
مَدَّ يَدَهُ عَلَى ٱلْبَحْرِ. أَرْعَدَ مَمَالِكَ. أَمَرَ ٱلرَّبُّ مِنْ جِهَةِ كَنْعَانَ أَنْ تُخْرَبَ حُصُونُهَا. ١١ 11
೧೧ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.
وَقَالَ: «لَا تَعُودِينَ تَفْتَخِرِينَ أَيْضًا أَيَّتُهَا ٱلْمُنْهَتِكَةُ، ٱلْعَذْرَاءُ بِنْتُ صِيْدُونَ. قُومِي إِلَى كِتِّيمَ. ٱعْبُرِي. هُنَاكَ أَيْضًا لَا رَاحَةَ لَكِ». ١٢ 12
೧೨ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.
هُوَذَا أَرْضُ ٱلْكَلْدَانِيِّينَ. هَذَا ٱلشَّعْبُ لَمْ يَكُنْ. أَسَّسَهَا أَشُّورُ لِأَهْلِ ٱلْبَرِّيَّةِ. قَدْ أَقَامُوا أَبْرَاجَهُمْ. دَمَّرُوا قُصُورَهَا. جَعَلَهَا رَدْمًا. ١٣ 13
೧೩ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.
وَلْوِلِي يَا سُفُنَ تَرْشِيشَ لِأَنَّ حِصْنَكِ قَدْ أُخْرِبَ. ١٤ 14
೧೪ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು.
وَيَكُونُ فِي ذَلِكَ ٱلْيَوْمِ أَنَّ صُورَ تُنْسَى سَبْعِينَ سَنَةً كَأَيَّامِ مَلِكٍ وَاحِدٍ. مِنْ بَعْدِ سَبْعِينَ سَنَةً يَكُونُ لِصُورَ كَأُغْنِيَّةِ ٱلزَّانِيَةِ: ١٥ 15
೧೫ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.
«خُذِي عُودًا. طُوفِي فِي ٱلْمَدِينَةِ أَيَّتُهَا ٱلزَّانِيَةُ ٱلْمَنْسِيَّةُ. أَحْسِنِي ٱلْعَزْفَ، أَكْثِرِي ٱلْغِنَاءَ لِكَيْ تُذْكَرِي». ١٦ 16
೧೬ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ.
وَيَكُونُ مِنْ بَعْدِ سَبْعِينَ سَنَةً أَنَّ ٱلرَّبَّ يَتَعَهَّدُ صُورَ فَتَعُودُ إِلَى أُجْرَتِهَا، وَتَزْنِي مَعَ كُلِّ مَمَالِكِ ٱلْبِلَادِ عَلَى وَجْهِ ٱلْأَرْضِ. ١٧ 17
೧೭ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.
وَتَكُونُ تِجَارَتُهَا وَأُجْرَتُهَا قُدْسًا لِلرَّبِّ. لَا تُخْزَنُ وَلَا تُكْنَزُ، بَلْ تَكُونُ تِجَارَتُهَا لِلْمُقِيمِينَ أَمَامَ ٱلرَّبِّ، لِأَكْلٍ إِلَى ٱلشِبَعِ وَلِلِبَاسٍ فَاخِرٍ. ١٨ 18
೧೮ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.

< إِشَعْيَاءَ 23 >