< إِشَعْيَاءَ 6 >

فِي سَنَةِ وَفَاةِ عُزِّيَّا ٱلْمَلِكِ، رَأَيْتُ ٱلسَّيِّدَ جَالِسًا عَلَى كُرْسِيٍّ عَالٍ وَمُرْتَفِعٍ، وَأَذْيَالُهُ تَمْلَأُ ٱلْهَيْكَلَ. ١ 1
ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
ٱلسَّرَافِيمُ وَاقِفُونَ فَوْقَهُ، لِكُلِّ وَاحِدٍ سِتَّةُ أَجْنِحَةٍ، بِٱثْنَيْنِ يُغَطِّي وَجْهَهُ، وَبِٱثْنَيْنِ يُغَطِّي رِجْلَيْهِ، وَبَٱثْنَيْنِ يَطِيرُ. ٢ 2
ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
وَهَذَا نَادَى ذَاكَ وَقَالَ: «قُدُّوسٌ، قُدُّوسٌ، قُدُّوسٌ رَبُّ ٱلْجُنُودِ. مَجْدُهُ مِلْءُ كُلِّ ٱلْأَرْضِ». ٣ 3
ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.
فَٱهْتَزَّتْ أَسَاسَاتُ ٱلْعَتَبِ مِنْ صَوْتِ ٱلصَّارِخِ، وَٱمْتَلَأَ ٱلْبَيْتُ دُخَانًا. ٤ 4
ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.
فَقُلْتُ: «وَيْلٌ لِي! إِنِّي هَلَكْتُ، لِأَنِّي إِنْسَانٌ نَجِسُ ٱلشَّفَتَيْنِ، وَأَنَا سَاكِنٌ بَيْنَ شَعْبٍ نَجِسِ ٱلشَّفَتَيْنِ، لِأَنَّ عَيْنَيَّ قَدْ رَأَتَا ٱلْمَلِكَ رَبَّ ٱلْجُنُودِ». ٥ 5
ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
فَطَارَ إِلَيَّ وَاحِدٌ مِنَ ٱلسَّرَافِيمِ وَبِيَدِهِ جَمْرَةٌ قَدْ أَخَذَهَا بِمِلْقَطٍ مِنْ عَلَى ٱلْمَذْبَحِ، ٦ 6
ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
وَمَسَّ بِهَا فَمِي وَقَالَ: «إِنَّ هَذِهِ قَدْ مَسَّتْ شَفَتَيْكَ، فَٱنْتُزِعَ إِثْمُكَ، وَكُفِّرَ عَنْ خَطِيَّتِكَ». ٧ 7
ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.
ثُمَّ سَمِعْتُ صَوْتَ ٱلسَّيِّدِ قَائِلًا: «مَنْ أُرْسِلُ؟ وَمَنْ يَذْهَبُ مِنْ أَجْلِنَا؟» فَقُلْتُ: «هَأَنَذَا أَرْسِلْنِي». ٨ 8
ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.
فَقَالَ: «ٱذْهَبْ وَقُلْ لِهَذَا ٱلشَّعْبِ: ٱسْمَعُوا سَمْعًا وَلَا تَفْهَمُوا، وَأَبْصِرُوا إِبْصَارًا وَلَا تَعْرِفُوا. ٩ 9
ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
غَلِّظْ قَلْبَ هَذَا ٱلشَّعْبِ وَثَقِّلْ أُذُنَيْهِ وَٱطْمُسْ عَيْنَيْهِ، لِئَلَّا يُبْصِرَ بِعَيْنَيْهِ وَيَسْمَعَ بِأُذُنَيْهِ وَيَفْهَمَ بِقَلْبِهِ، وَيَرْجِعَ فَيُشْفَى». ١٠ 10
೧೦ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
فَقُلْتُ: «إِلَى مَتَى أَيُّهَا ٱلسَّيِّدُ؟» فَقَالَ: «إِلَى أَنْ تَصِيرَ ٱلْمُدُنُ خَرِبَةً بِلَا سَاكِنٍ، وَٱلْبُيُوتُ بِلَا إِنْسَانٍ، وَتَخْرَبَ ٱلْأَرْضُ وَتُقْفِرَ، ١١ 11
೧೧ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
وَيُبْعِدَ ٱلرَّبُّ ٱلْإِنْسَانَ، وَيَكْثُرَ ٱلْخَرَابُ فِي وَسَطِ ٱلْأَرْضِ. ١٢ 12
೧೨ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.
وَإِنْ بَقِيَ فِيهَا عُشْرٌ بَعْدُ، فَيَعُودُ وَيَصِيرُ لِلْخَرَابِ، وَلَكِنْ كَٱلْبُطْمَةِ وَٱلْبَلُّوطَةِ، ٱلَّتِي وَإِنْ قُطِعَتْ فَلَهَا سَاقٌ، يَكُونُ سَاقُهُ زَرْعًا مُقَدَّسًا». ١٣ 13
೧೩ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.

< إِشَعْيَاءَ 6 >