< يَعقُوب 3 >

لَا تَكُونُوا مُعَلِّمِينَ كَثِيرِينَ يَا إِخْوَتِي، عَالِمِينَ أَنَّنَا نَأْخُذُ دَيْنُونَةً أَعْظَمَ! ١ 1
ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.
لِأَنَّنَا فِي أَشْيَاءَ كَثِيرَةٍ نَعْثُرُ جَمِيعُنَا. إِنْ كَانَ أَحَدٌ لَا يَعْثُرُ فِي ٱلْكَلَامِ فَذَاكَ رَجُلٌ كَامِلٌ، قَادِرٌ أَنْ يُلْجِمَ كُلَّ ٱلْجَسَدِ أَيْضًا. ٢ 2
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
هُوَذَا ٱلْخَيْلُ، نَضَعُ ٱللُّجُمَ فِي أَفْوَاهِهَا لِكَيْ تُطَاوِعَنَا، فَنُدِيرَ جِسْمَهَا كُلَّهُ. ٣ 3
ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ.
هُوَذَا ٱلسُّفُنُ أَيْضًا، وَهِيَ عَظِيمَةٌ بِهَذَا ٱلْمِقْدَارِ، وَتَسُوقُهَا رِيَاحٌ عَاصِفَةٌ، تُدِيرُهَا دَفَّةٌ صَغِيرَةٌ جِدًّا إِلَى حَيْثُمَا شَاءَ قَصْدُ ٱلْمُدِيرِ. ٤ 4
ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
هَكَذَا ٱللِّسَانُ أَيْضًا، هُوَ عُضْوٌ صَغِيرٌ وَيَفْتَخِرُ مُتَعَظِّمًا. هُوَذَا نَارٌ قَلِيلَةٌ، أَيَّ وُقُودٍ تُحْرِقُ! ٥ 5
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.
فَٱللِّسَانُ نَارٌ! عَالَمُ ٱلْإِثْمِ. هَكَذَا جُعِلَ فِي أَعْضَائِنَا ٱللِّسَانُ، ٱلَّذِي يُدَنِّسُ ٱلْجِسْمَ كُلَّهُ، وَيُضْرِمُ دَائِرَةَ ٱلْكَوْنِ، وَيُضْرَمُ مِنْ جَهَنَّمَ. (Geenna g1067) ٦ 6
ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. (Geenna g1067)
لِأَنَّ كُلَّ طَبْعٍ لِلْوُحُوشِ وَٱلطُّيُورِ وَٱلزَّحَّافَاتِ وَٱلْبَحْرِيَّاتِ يُذَلَّلُ، وَقَدْ تَذَلَّلَ لِلطَّبْعِ ٱلْبَشَرِيِّ. ٧ 7
ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
وَأَمَّا ٱللِّسَانُ، فَلَا يَسْتَطِيعُ أَحَدٌ مِنَ ٱلنَّاسِ أَنْ يُذَلِّلَهُ. هُوَ شَرٌّ لَا يُضْبَطُ، مَمْلُوٌّ سُمًّا مُمِيتًا. ٨ 8
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.
بِهِ نُبَارِكُ ٱللهَ ٱلْآبَ، وَبِهِ نَلْعَنُ ٱلنَّاسَ ٱلَّذِينَ قَدْ تَكَوَّنُوا عَلَى شِبْهِ ٱللهِ. ٩ 9
ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
مِنَ ٱلْفَمِ ٱلْوَاحِدِ تَخْرُجُ بَرَكَةٌ وَلَعْنَةٌ! لَا يَصْلُحُ يَا إِخْوَتِي أَنْ تَكُونَ هَذِهِ ٱلْأُمُورُ هَكَذَا! ١٠ 10
೧೦ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
أَلَعَلَّ يَنْبُوعًا يُنْبِعُ مِنْ نَفْسِ عَيْنٍ وَاحِدَةٍ ٱلْعَذْبَ وَٱلْمُرَّ؟ ١١ 11
೧೧ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ?
هَلْ تَقْدِرُ يَا إِخْوَتِي تِينَةٌ أَنْ تَصْنَعَ زَيْتُونًا، أَوْ كَرْمَةٌ تِينًا؟ وَلَا كَذَلِكَ يَنْبُوعٌ يَصْنَعُ مَاءً مَالِحًا وَعَذْبًا! ١٢ 12
೧೨ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.
مَنْ هُوَ حَكِيمٌ وَعَالِمٌ بَيْنَكُمْ، فَلْيُرِ أَعْمَالَهُ بِٱلتَّصَرُّفِ ٱلْحَسَنِ فِي وَدَاعَةِ ٱلْحِكْمَةِ. ١٣ 13
೧೩ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
وَلَكِنْ إِنْ كَانَ لَكُمْ غَيْرَةٌ مُرَّةٌ وَتَحَزُّبٌ فِي قُلُوبِكُمْ، فَلَا تَفْتَخِرُوا وَتَكْذِبُوا عَلَى ٱلْحَقِّ. ١٤ 14
೧೪ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
لَيْسَتْ هَذِهِ ٱلْحِكْمَةُ نَازِلَةً مِنْ فَوْقُ، بَلْ هِيَ أَرْضِيَّةٌ نَفْسَانِيَّةٌ شَيْطَانِيَّةٌ. ١٥ 15
೧೫ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.
لِأَنَّهُ حَيْثُ ٱلْغَيْرَةُ وَٱلتَّحَزُّبُ، هُنَاكَ ٱلتَّشْوِيشُ وَكُلُّ أَمْرٍ رَدِيءٍ. ١٦ 16
೧೬ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.
وَأَمَّا ٱلْحِكْمَةُ ٱلَّتِي مِنْ فَوْقُ فَهِيَ أَوَّلًا طَاهِرَةٌ، ثُمَّ مُسَالِمَةٌ، مُتَرَفِّقَةٌ، مُذْعِنَةٌ، مَمْلُوَّةٌ رَحْمَةً وَأَثْمَارًا صَالِحَةً، عَدِيمَةُ ٱلرَّيْبِ وَٱلرِّيَاءِ. ١٧ 17
೧೭ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
وَثَمَرُ ٱلْبِرِّ يُزْرَعُ فِي ٱلسَّلَامِ مِنَ ٱلَّذِينَ يَفْعَلُونَ ٱلسَّلَامَ. ١٨ 18
೧೮ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

< يَعقُوب 3 >