< إِرْمِيَا 10 >
اِسْمَعُوا ٱلْكَلِمَةَ ٱلَّتِي تَكَلَّمَ بِهَا ٱلرَّبُّ عَلَيْكُمْ يَا بَيْتَ إِسْرَائِيلَ. | ١ 1 |
ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ.
هَكَذَا قَالَ ٱلرَّبُّ: «لَا تَتَعَلَّمُوا طَرِيقَ ٱلْأُمَمِ، وَمِنْ آيَاتِ ٱلسَّمَاوَاتِ لَا تَرْتَعِبُوا، لِأَنَّ ٱلْأُمَمَ تَرْتَعِبُ مِنْهَا. | ٢ 2 |
ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.
لِأَنَّ فَرَائِضَ ٱلْأُمَمِ بَاطِلَةٌ. لِأَنَّهَا شَجَرَةٌ يَقْطَعُونَهَا مِنَ ٱلْوَعْرِ. صَنْعَةُ يَدَيْ نَجَّارٍ بِٱلْقَدُومِ. | ٣ 3 |
ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.
بِٱلْفِضَّةِ وَٱلذَّهَبِ يُزَيِّنُونَهَا، وَبِٱلْمَسَامِيرِ وَٱلْمَطَارِقِ يُشَدِّدُونَهَا فَلَا تَتَحَرَّكُ. | ٤ 4 |
ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
هِيَ كَٱللَّعِينِ فِي مَقْثَأَةٍ فَلَا تَتَكَلَّمُ! تُحْمَلُ حَمْلًا لِأَنَّهَا لَا تَمْشِي! لَا تَخَافُوهَا لِأَنَّهَا لَا تَضُرُّ، وَلَا فِيهَا أَنْ تَصْنَعَ خَيْرًا». | ٥ 5 |
ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.
لَا مِثْلَ لَكَ يَارَبُّ! عَظِيمٌ أَنْتَ، وَعَظِيمٌ ٱسْمُكَ فِي ٱلْجَبَرُوتِ. | ٦ 6 |
ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.
مَنْ لَا يَخَافُكَ يَا مَلِكَ ٱلشُّعُوبِ؟ لِأَنَّهُ بِكَ يَلِيقُ. لِأَنَّهُ فِي جَمِيعِ حُكَمَاءِ ٱلشُّعُوبِ وَفِي كُلِّ مَمَالِكِهِمْ لَيْسَ مِثْلَكَ. | ٧ 7 |
ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.
بَلُدُوا وَحَمِقُوا مَعًا. أَدَبُ أَبَاطِيلَ هُوَ ٱلْخَشَبُ. | ٨ 8 |
ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.
فِضَّةٌ مُطَرَّقَةٌ تُجْلَبُ مِنْ تَرْشِيشَ، وَذَهَبٌ مِنْ أُوفَازَ، صَنْعَةُ صَانِعٍ وَيَدَيْ صَائِغٍ. أَسْمَانْجُونِيٌّ وَأُرْجُوَانٌ لِبَاسُهَا. كُلُّهَا صَنْعَةُ حُكَمَاءَ. | ٩ 9 |
ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.
أَمَّا ٱلرَّبُّ ٱلْإِلَهُ فَحَقٌّ. هُوَ إِلَهٌ حَيٌّ وَمَلِكٌ أَبَدِيٌّ. مِنْ سُخْطِهِ تَرْتَعِدُ ٱلْأَرْضُ، وَلَا تَطِيقُ ٱلْأُمَمُ غَضَبَهُ. | ١٠ 10 |
ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.
هَكَذَا تَقُولُونَ لَهُمْ: «ٱلْآلِهَةُ ٱلَّتِي لَمْ تَصْنَعِ ٱلسَّمَاوَاتِ وَٱلْأَرْضَ تَبِيدُ مِنَ ٱلْأَرْضِ وَمِنْ تَحْتِ هَذِهِ ٱلسَّمَاوَاتِ» | ١١ 11 |
“ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’”
صَانِعُ ٱلْأَرْضِ بِقُوَّتِهِ، مُؤَسِّسُ ٱلْمَسْكُونَةِ بِحِكْمَتِهِ، وَبِفَهْمِهِ بَسَطَ ٱلسَّمَاوَاتِ. | ١٢ 12 |
ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.
إِذَا أَعْطَى قَوْلًا تَكُونُ كَثْرَةُ مِيَاهٍ فِي ٱلسَّمَاوَاتِ، وَيُصْعِدُ ٱلسَّحَابَ مِنْ أَقَاصِي ٱلْأَرْضِ. صَنَعَ بُرُوقًا لِلْمَطَرِ، وَأَخْرَجَ ٱلرِّيحَ مِنْ خَزَائِنِهِ. | ١٣ 13 |
ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.
بَلُدَ كُلُّ إِنْسَانٍ مِنْ مَعْرِفَتِهِ. خَزِيَ كُلُّ صَائِغٍ مِنَ ٱلتِّمْثَالِ، لِأَنَّ مَسْبُوكَهُ كَذِبٌ وَلَا رُوحَ فِيهِ. | ١٤ 14 |
ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.
هِيَ بَاطِلَةٌ صَنْعَةُ ٱلْأَضَالِيلِ. فِي وَقْتِ عِقَابِهَا تَبِيدُ. | ١٥ 15 |
ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.
لَيْسَ كَهَذِهِ نَصِيبُ يَعْقُوبَ، لِأَنَّهُ مُصَوِّرُ ٱلْجَمِيعِ، وَإِسْرَائِيلُ قَضِيبُ مِيرَاثِهِ. رَبُّ ٱلْجُنُودِ ٱسْمُهُ. | ١٦ 16 |
ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.
اِجْمَعِي مِنَ ٱلْأَرْضِ حُزَمَكِ أَيَّتُهَا ٱلسَّاكِنَةُ فِي ٱلْحِصَارِ. | ١٧ 17 |
ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ.
لِأَنَّهُ هَكَذَا قَالَ ٱلرَّبُّ: «هَأَنَذَا رَامٍ مِنْ مِقْلَاعٍ سُكَّانَ ٱلْأَرْضِ هَذِهِ ٱلْمَرَّةَ، وَأُضَيِّقُ عَلَيْهِمْ لِكَيْ يَشْعُرُوا». | ١٨ 18 |
ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.”
وَيْلٌ لِي مِنْ أَجْلِ سَحْقِي! ضَرْبَتِي عَدِيمَةُ ٱلشِّفَاءِ! فَقُلْتُ: «إِنَّمَا هَذِهِ مُصِيبَةٌ فَأَحْتَمِلُهَا». | ١٩ 19 |
ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು.
خَيْمَتِي خَرِبَتْ، وَكُلُّ أَطْنَابِي قُطِعَتْ. بَنِيَّ خَرَجُوا عَنِّي وَلَيْسُوا. لَيْسَ مَنْ يَبْسُطُ بَعْدُ خَيْمَتِي وَيُقِيمُ شُقَقِي. | ٢٠ 20 |
ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ.
لِأَنَّ ٱلرُّعَاةَ بَلُدُوا وَٱلرَّبَّ لَمْ يَطْلُبُوا. مِنْ أَجْلِ ذَلِكَ لَمْ يَنْجَحُوا، وَكُلُّ رَعِيَّتِهِمْ تَبَدَّدَتْ. | ٢١ 21 |
ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.
هُوَذَا صَوْتُ خَبَرٍ جَاءَ، وَٱضْطِرَابٌ عَظِيمٌ مِنْ أَرْضِ ٱلشِّمَالِ لِجَعْلِ مُدُنِ يَهُوذَا خَرَابًا، مَأْوَى بَنَاتِ آوَى. | ٢٢ 22 |
ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
عَرَفْتُ يَارَبُّ أَنَّهُ لَيْسَ لِلْإِنْسَانِ طَرِيقُهُ. لَيْسَ لِإِنْسَانٍ يَمْشِي أَنْ يَهْدِيَ خَطَوَاتِهِ. | ٢٣ 23 |
ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.
أَدِّبْنِي يَارَبُّ وَلَكِنْ بِٱلْحَقِّ، لَا بِغَضَبِكَ لِئَلَّا تُفْنِيَنِي. | ٢٤ 24 |
ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.
اُسْكُبْ غَضَبَكَ عَلَى ٱلْأُمَمِ ٱلَّتِي لَمْ تَعْرِفْكَ، وَعَلَى ٱلْعَشَائِرِ ٱلَّتِي لَمْ تَدْعُ بِٱسْمِكَ. لِأَنَّهُمْ أَكَلُوا يَعْقُوبَ. أَكَلُوهُ وَأَفْنَوْهُ وَأَخْرَبُوا مَسْكَنَهُ. | ٢٥ 25 |
ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.