< إِرْمِيَا 23 >

«وَيْلٌ لِلرُّعَاةِ ٱلَّذِينَ يُهْلِكُونَ وَيُبَدِّدُونَ غَنَمَ رَعِيَّتِي، يَقُولُ ٱلرَّبُّ. ١ 1
“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.
لِذَلِكَ هَكَذَا قَالَ ٱلرَّبُّ إِلَهُ إِسْرَائِيلَ عَنِ ٱلرُّعَاةِ ٱلَّذِينَ يَرْعَوْنَ شَعْبِي: أَنْتُمْ بَدَّدْتُمْ غَنَمِي وَطَرَدْتُمُوهَا وَلَمْ تَتَعَهَّدُوهَا. هَأَنَذَا أُعَاقِبُكُمْ عَلَى شَرِّ أَعْمَالِكُمْ، يَقُولُ ٱلرَّبُّ. ٢ 2
ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
وَأَنَا أَجْمَعُ بَقِيَّةَ غَنَمِي مِنْ جَمِيعِ ٱلْأَرَاضِي ٱلَّتِي طَرَدْتُهَا إِلَيْهَا، وَأَرُدُّهَا إِلَى مَرَابِضِهَا فَتُثْمِرُ وَتَكْثُرُ. ٣ 3
“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.
وَأُقِيمُ عَلَيْهَا رُعَاةً يَرْعَوْنَهَا فَلَا تَخَافُ بَعْدُ وَلَا تَرْتَعِدُ وَلَا تُفْقَدُ، يَقُولُ ٱلرَّبُّ. ٤ 4
ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
«هَا أَيَّامٌ تَأْتِي، يَقُولُ ٱلرَّبُّ، وَأُقِيمُ لِدَاوُدَ غُصْنَ بِرٍّ، فَيَمْلِكُ مَلِكٌ وَيَنْجَحُ، وَيُجْرِي حَقًّا وَعَدْلًا فِي ٱلْأَرْضِ. ٥ 5
“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
فِي أَيَّامِهِ يُخَلَّصُ يَهُوذَا، وَيَسْكُنُ إِسْرَائِيلُ آمِنًا، وَهَذَا هُوَ ٱسْمُهُ ٱلَّذِي يَدْعُونَهُ بِهِ: ٱلرَّبُّ بِرُّنَا. ٦ 6
ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.
لِذَلِكَ هَا أَيَّامٌ تَأْتِي، يَقُولُ ٱلرَّبُّ، وَلَا يَقُولُونَ بَعْدُ: حَيٌّ هُوَ ٱلرَّبُّ ٱلَّذِي أَصْعَدَ بَنِي إِسْرَائِيلَ مِنْ أَرْضِ مِصْرَ، ٧ 7
“ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.
بَلْ: حَيٌّ هُوَ ٱلرَّبُّ ٱلَّذِي أَصْعَدَ وَأَتَى بِنَسْلِ بَيْتِ إِسْرَائِيلَ مِنْ أَرْضِ ٱلشِّمَالِ وَمِنْ جَمِيعِ ٱلْأَرَاضِي ٱلَّتِي طَرَدْتُهُمْ إِلَيْهَا فَيَسْكُنُونَ فِي أَرْضِهِمْ». ٨ 8
ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”
فِي ٱلْأَنْبِيَاءِ: اِنْسَحَقَ قَلْبِي فِي وَسَطِي. ٱرْتَخَتْ كُلُّ عِظَامِي. صِرْتُ كَإِنْسَانٍ سَكْرَانَ وَمِثْلَ رَجُلٍ غَلَبَتْهُ ٱلْخَمْرُ، مِنْ أَجْلِ ٱلرَّبِّ وَمِنْ أَجْلِ كَلَامِ قُدْسِهِ. ٩ 9
ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
لِأَنَّ ٱلْأَرْضَ ٱمْتَلَأَتْ مِنَ ٱلْفَاسِقِينَ. لِأَنَّهُ مِنْ أَجْلِ ٱللَّعْنِ نَاحَتِ ٱلْأَرْضُ. جَفَّتْ مَرَاعِي ٱلْبَرِّيَّةِ، وَصَارَ سَعْيُهُمْ لِلشَّرِّ، وَجَبَرُوتُهُمْ لِلْبَاطِلِ. ١٠ 10
ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.
«لِأَنَّ ٱلْأَنْبِيَاءَ وَٱلْكَهَنَةَ تَنَجَّسُوا جَمِيعًا، بَلْ فِي بَيْتِي وَجَدْتُ شَرَّهُمْ يَقُولُ ٱلرَّبُّ. ١١ 11
“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
لِذَلِكَ يَكُونُ طَرِيقُهُمْ لَهُمْ كَمَزَالِقَ فِي ظَلَامٍ دَامِسٍ، فَيُطْرَدُونَ وَيَسْقُطُونَ فِيهَا، لِأَنِّي أَجْلِبُ عَلَيْهِمْ شَرًّا سَنَةَ عِقَابِهِمْ، يَقُولُ ٱلرَّبُّ. ١٢ 12
“ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
وَقَدْ رَأَيْتُ فِي أَنْبِيَاءِ ٱلسَّامِرَةِ حَمَاقَةً. تَنَبَّأُوا بِٱلْبَعْلِ وَأَضَلُّوا شَعْبِي إِسْرَائِيلَ. ١٣ 13
“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.
وَفِي أَنْبِيَاءِ أُورُشَلِيمَ رَأَيْتُ مَا يُقْشَعَرُّ مِنْهُ. يَفْسِقُونَ وَيَسْلُكُونَ بِٱلْكَذِبِ، وَيُشَدِّدُونَ أَيَادِيَ فَاعِلِي ٱلشَّرِّ حَتَّى لَا يَرْجِعُوا ٱلْوَاحِدُ عَنْ شَرِّهِ. صَارُوا لِي كُلُّهُمْ كَسَدُومَ، وَسُكَّانُهَا كَعَمُورَةَ. ١٤ 14
ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”
لِذَلِكَ هَكَذَا قَالَ رَبُّ ٱلْجُنُودِ عَنِ ٱلْأَنْبِيَاءِ: هَأَنَذَا أُطْعِمُهُمْ أَفْسَنْتِينًا وَأَسْقِيهِمْ مَاءَ ٱلْعَلْقَمِ، لِأَنَّهُ مِنْ عِنْدِ أَنْبِيَاءِ أُورُشَلِيمَ خَرَجَ نِفَاقٌ فِي كُلِّ ٱلْأَرْضِ. ١٥ 15
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”
هَكَذَا قَالَ رَبُّ ٱلْجُنُودِ: لَا تَسْمَعُوا لِكَلَامِ ٱلْأَنْبِيَاءِ ٱلَّذِينَ يَتَنَبَّأُونَ لَكُمْ، فَإِنَّهُمْ يَجْعَلُونَكُمْ بَاطِلًا. يَتَكَلَّمُونَ بِرُؤْيَا قَلْبِهِمْ لَا عَنْ فَمِ ٱلرَّبِّ. ١٦ 16
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.
قَائِلِينَ قَوْلًا لِمُحْتَقِرِيَّ: قَالَ ٱلرَّبُّ: يَكُونُ لَكُمْ سَلَامٌ! وَيَقُولُونَ لِكُلِّ مَنْ يَسِيرُ فِي عِنَادِ قَلْبِهِ: لَا يَأْتِي عَلَيْكُمْ شَرٌّ. ١٧ 17
ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.
لِأَنَّهُ مَنْ وَقَفَ فِي مَجْلِسِ ٱلرَّبِّ وَرَأَى وَسَمِعَ كَلِمَتَهُ؟ مَنْ أَصْغَى لِكَلِمَتِهِ وَسَمِعَ؟». ١٨ 18
ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?
هَا زَوْبَعَةُ ٱلرَّبِّ. غَيْظٌ يَخْرُجُ، وَنَوْءٌ هَائِجٌ. عَلَى رُؤُوسِ ٱلْأَشْرَارِ يَثُورُ. ١٩ 19
ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು
لَا يَرْتَدُّ غَضَبُ ٱلرَّبِّ حَتَّى يُجْرِيَ وَيُقِيمَ مَقَاصِدَ قَلْبِهِ. فِي آخِرِ ٱلْأَيَّامِ تَفْهَمُونَ فَهْمًا. ٢٠ 20
ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.
«لَمْ أُرْسِلِ ٱلْأَنْبِيَاءَ بَلْ هُمْ جَرَوْا. لَمْ أَتَكَلَّمْ مَعَهُمْ بَلْ هُمْ تَنَبَّأُوا. ٢١ 21
ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.
وَلَوْ وَقَفُوا فِي مَجْلِسِي لَأَخْبَرُوا شَعْبِي بِكَلَامِي وَرَدُّوهُمْ عَنْ طَرِيقِهِمِ ٱلرَّدِيءِ وَعَنْ شَرِّ أَعْمَالِهِمْ. ٢٢ 22
ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”
أَلَعَلِّي إِلَهٌ مِنْ قَرِيبٍ، يَقُولُ ٱلرَّبُّ، وَلَسْتُ إِلَهًا مِنْ بَعِيدٍ. ٢٣ 23
ಯೆಹೋವ ದೇವರು ಹೀಗೆನ್ನುತ್ತಾರೆ, “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ?”
إِذَا ٱخْتَبَأَ إِنْسَانٌ فِي أَمَاكِنَ مُسْتَتِرَةٍ أَفَمَا أَرَاهُ أَنَا، يَقُولُ ٱلرَّبُّ؟ أَمَا أَمْلَأُ أَنَا ٱلسَّمَاوَاتِ وَٱلْأَرْضَ، يَقُولُ ٱلرَّبُّ؟ ٢٤ 24
ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.
قَدْ سَمِعْتُ مَا قَالَهُ ٱلْأَنْبِيَاءُ ٱلَّذِينَ تَنَبَّأُوا بِٱسْمِي بِٱلْكَذِبِ قَائِلِينَ: حَلِمْتُ، حَلِمْتُ. ٢٥ 25
“‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
حَتَّى مَتَى يُوجَدُ فِي قَلْبِ ٱلْأَنْبِيَاءِ ٱلْمُتَنَبِّئِينَ بِٱلْكَذِبِ؟ بَلْ هُمْ أَنْبِيَاءُ خِدَاعِ قَلْبِهِمِ! ٢٦ 26
ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.
ٱلَّذِينَ يُفَكِّرُونَ أَنْ يُنَسُّوا شَعْبِي ٱسْمِي بِأَحْلَامِهِمِ ٱلَّتِي يَقُصُّونَهَا ٱلرَّجُلُ عَلَى صَاحِبِهِ، كَمَا نَسِيَ آبَاؤُهُمُ ٱسْمِي لِأَجْلِ ٱلْبَعْلِ. ٢٧ 27
ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.
اَلنَّبِيُّ ٱلَّذِي مَعَهُ حُلْمٌ فَلْيَقُصَّ حُلْمًا، وَٱلَّذِي مَعَهُ كَلِمَتِي فَلْيَتَكَلَّمْ بِكَلِمَتِي بِٱلْحَقِّ. مَا لِلتِّبْنِ مَعَ ٱلْحِنْطَةِ، يَقُولُ ٱلرَّبُّ. ٢٨ 28
ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.
«أَلَيْسَتْ هَكَذَا كَلِمَتِي كَنَارٍ، يَقُولُ ٱلرَّبُّ، وَكَمِطْرَقَةٍ تُحَطِّمُ ٱلصَّخْرَ؟ ٢٩ 29
“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.
لِذَلِكَ هَأَنَذَا عَلَى ٱلْأَنْبِيَاءِ، يَقُولُ ٱلرَّبُّ، ٱلَّذِينَ يَسْرِقُونَ كَلِمَتِي بَعْضُهُمْ مِنْ بَعْضٍ. ٣٠ 30
ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
هَأَنَذَا عَلَى ٱلْأَنْبِيَاءِ، يَقُولُ ٱلرَّبُّ، ٱلَّذِينَ يَأْخُذُونَ لِسَانَهُمْ وَيَقُولُونَ: قَالَ. ٣١ 31
“ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ.
هَأَنَذَا عَلَى ٱلَّذِينَ يَتَنَبَّأُونَ بِأَحْلَامٍ كَاذِبَةٍ، يَقُولُ ٱلرَّبُّ، ٱلَّذِينَ يَقُصُّونَهَا وَيُضِلُّونَ شَعْبِي بِأَكَاذِيبِهِمْ وَمُفَاخَرَاتِهِمْ وَأَنَا لَمْ أُرْسِلْهُمْ وَلَا أَمَرْتُهُمْ. فَلَمْ يُفِيدُوا هَذَا ٱلشَّعْبَ فَائِدَةً، يَقُولُ ٱلرَّبُّ. ٣٢ 32
ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.
«وَإِذَا سَأَلَكَ هَذَا ٱلشَّعْبُ أَوْ نَبِيٌّ أَوْ كَاهِنٌ قَائِلًا: مَا وَحْيُ ٱلرَّبِّ؟ فَقُلْ لَهُمْ: أَيُّ وَحْيٍ؟ إِنِّي أَرْفُضُكُمْ، هُوَ قَوْلُ ٱلرَّبِّ. ٣٣ 33
“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’
فَٱلنَّبِيُّ أَوِ ٱلْكَاهِنُ أَوِ ٱلشَّعْبُ ٱلَّذِي يَقُولُ: وَحْيُ ٱلرَّبِّ، أُعَاقِبُ ذَلِكَ ٱلرَّجُلَ وَبَيْتَهُ. ٣٤ 34
ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು.
هَكَذَا تَقُولُونَ ٱلرَّجُلُ لِصَاحِبِهِ وَٱلرَّجُلُ لِأَخِيهِ: بِمَاذَا أَجَابَ ٱلرَّبُّ؟ وَمَاذَا تَكَلَّمَ بِهِ ٱلرَّبُّ؟ ٣٥ 35
‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು,
أَمَّا وَحْيُ ٱلرَّبِّ فَلَا تَذْكُرُوهُ بَعْدُ، لِأَنَّ كَلِمَةَ كُلِّ إِنْسَانٍ تَكُونُ وَحْيَهُ، إِذْ قَدْ حَرَّفْتُمْ كَلَامَ ٱلْإِلَهِ ٱلْحَيِّ رَبِّ ٱلْجُنُودِ إِلَهِنَا. ٣٦ 36
‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.
هَكَذَا تَقُولُ لِلنَّبِيِّ: بِمَاذَا أَجَابَكَ ٱلرَّبُّ؟ وَمَاذَا تَكَلَّمَ بِهِ ٱلرَّبُّ؟ ٣٧ 37
‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ.
وَإِذَا كُنْتُمْ تَقُولُونَ: وَحْيُ ٱلرَّبِّ، فَلِذَلِكَ هَكَذَا قَالَ ٱلرَّبُّ: مِنْ أَجْلِ قَوْلِكُمْ هَذِهِ ٱلْكَلِمَةَ: وَحْيُ ٱلرَّبِّ، وَقَدْ أَرْسَلْتُ إِلَيْكُمْ قَائِلًا لَا تَقُولُوا: وَحْيُ ٱلرَّبِّ، ٣٨ 38
‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ.
لِذَلِكَ هَأَنَذَا أَنْسَاكُمْ نِسْيَانًا، وَأَرْفُضُكُمْ مِنْ أَمَامِ وَجْهِي، أَنْتُمْ وَٱلْمَدِينَةَ ٱلَّتِي أَعْطَيْتُكُمْ وَآبَاءَكُمْ إِيَّاهَا. ٣٩ 39
ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.
وَأَجْعَلُ عَلَيْكُمْ عَارًا أَبَدِيًّا وَخِزْيًا أَبَدِيًّا لَا يُنْسَى». ٤٠ 40
ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”

< إِرْمِيَا 23 >