< إِرْمِيَا 26 >

فِي ٱبْتِدَاءِ مُلْكِ يَهُويَاقِيمَ بْنِ يُوشِيَّا مَلِكِ يَهُوذَا، صَارَ هَذَا ٱلْكَلَامُ مِنْ قِبَلِ ٱلرَّبِّ قَائِلًا: ١ 1
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು.
«هَكَذَا قَالَ ٱلرَّبُّ: قِفْ فِي دَارِ بَيْتِ ٱلرَّبِّ، وَتَكَلَّمْ عَلَى كُلِّ مُدُنِ يَهُوذَا ٱلْقَادِمَةِ لِلسُّجُودِ فِي بَيْتِ ٱلرَّبِّ بِكُلِّ ٱلْكَلَامِ ٱلَّذِي أَوْصَيْتُكَ أَنْ تَتَكَلَّمَ بِهِ إِلَيْهِمْ. لَا تُنَقِّصْ كَلِمَةً. ٢ 2
“ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.
لَعَلَّهُمْ يَسْمَعُونَ وَيَرْجِعُونَ كُلُّ وَاحِدٍ عَنْ طَرِيقِهِ ٱلشِّرِّيرِ، فَأَنْدَمَ عَنِ ٱلشَّرِّ ٱلَّذِي قَصَدْتُ أَنْ أَصْنَعَهُ بِهِمْ، مِنْ أَجْلِ شَرِّ أَعْمَالِهِمْ. ٣ 3
ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.
وَتَقُولُ لَهُمْ هَكَذَا قَالَ ٱلرَّبُّ: إِنْ لَمْ تَسْمَعُوا لِي لِتَسْلُكُوا فِي شَرِيعَتِي ٱلَّتِي جَعَلْتُهَا أَمَامَكُمْ، ٤ 4
ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,
لِتَسْمَعُوا لِكَلَامِ عَبِيدِي ٱلْأَنْبِيَاءِ ٱلَّذِينَ أَرْسَلْتُهُمْ أَنَا إِلَيْكُمْ مُبَكِّرًا وَمُرْسِلًا إِيَّاهُمْ، فَلَمْ تَسْمَعُوا. ٥ 5
ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,
أَجْعَلُ هَذَا ٱلْبَيْتَ كَشِيلُوهَ، وَهَذِهِ ٱلْمَدِينَةُ أَجْعَلُهَا لَعْنَةً لِكُلِّ شُعُوبِ ٱلْأَرْضِ». ٦ 6
ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’”
وَسَمِعَ ٱلْكَهَنَةُ وَٱلْأَنْبِيَاءُ وَكُلُّ ٱلشَّعْبِ إِرْمِيَا يَتَكَلَّمُ بِهَذَا ٱلْكَلَامِ فِي بَيْتِ ٱلرَّبِّ. ٧ 7
ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು.
وَكَانَ لَمَّا فَرَغَ إِرْمِيَا مِنَ ٱلتَّكَلُّمِ بِكُلِّ مَا أَوْصَاهُ ٱلرَّبُّ أَنْ يُكَلِّمَ كُلَّ ٱلشَّعْبِ بِهِ، أَنَّ ٱلْكَهَنَةَ وَٱلْأَنْبِيَاءَ وَكُلَّ ٱلشَّعْبِ أَمْسَكُوهُ قَائِلِينَ: «تَمُوتُ مَوْتًا! ٨ 8
ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.
لِمَاذَا تَنَبَّأْتَ بِٱسْمِ ٱلرَّبِّ قَائِلًا: مِثْلَ شِيلُوهَ يَكُونُ هَذَا ٱلْبَيْتُ، وَهَذِهِ ٱلْمَدِينَةُ تَكُونُ خَرِبَةً بِلَا سَاكِنٍ؟». وَٱجْتَمَعَ كُلُّ ٱلشَّعْبِ عَلَى إِرْمِيَا فِي بَيْتِ ٱلرَّبِّ. ٩ 9
ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.
فَلَمَّا سَمِعَ رُؤَسَاءُ يَهُوذَا بِهَذِهِ ٱلْأُمُورِ، صَعِدُوا مِنْ بَيْتِ ٱلْمَلِكِ إِلَى بَيْتِ ٱلرَّبِّ وَجَلَسُوا فِي مَدْخَلِ بَابِ ٱلرَّبِّ ٱلْجَدِيدِ. ١٠ 10
ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.
فَتَكَلَّمَ ٱلْكَهَنَةُ وَٱلْأَنْبِيَاءُ مَعَ ٱلرُّؤَسَاءِ وَكُلِّ ٱلشَّعْبِ قَائِلِينَ: «حَقُّ ٱلْمَوْتِ عَلَى هَذَا ٱلرَّجُلِ لِأَنَّهُ قَدْ تَنَبَّأَ عَلَى هَذِهِ ٱلْمَدِينَةِ كَمَا سَمِعْتُمْ بِآذَانِكُمْ». ١١ 11
ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.
فَكَلَّمَ إِرْمِيَا كُلَّ ٱلرُّؤَسَاءِ وَكُلَّ ٱلشَّعْبِ قَائِلًا: «ٱلرَّبُّ أَرْسَلَنِي لِأَتَنَبَّأَ عَلَى هَذَا ٱلْبَيْتِ وَعَلَى هَذِهِ ٱلْمَدِينَةِ بِكُلِّ ٱلْكَلَامِ ٱلَّذِي سَمِعْتُمُوهُ. ١٢ 12
ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.
فَٱلْآنَ أَصْلِحُوا طُرُقَكُمْ وَأَعْمَالَكُمْ، وَٱسْمَعُوا لِصَوْتِ ٱلرَّبِّ إِلَهِكُمْ، فَيَنْدَمَ ٱلرَّبُّ عَنِ ٱلشَّرِّ ٱلَّذِي تَكَلَّمَ بِهِ عَلَيْكُمْ. ١٣ 13
ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.
أَمَّا أَنَا فَهَأَنَذَا بِيَدِكُمُ. ٱصْنَعُوا بِي كَمَا هُوَ حَسَنٌ وَمُسْتَقِيمٌ فِي أَعْيُنِكُمْ. ١٤ 14
ನಾನಾದರೋ ನಿಮ್ಮ ಕೈಯಲ್ಲಿ ಇದ್ದೇನೆ. ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
لَكِنِ ٱعْلَمُوا عِلْمًا أَنَّكُمْ إِنْ قَتَلْتُمُونِي، تَجْعَلُونَ دَمًا زَكِيًّا عَلَى أَنْفُسِكُمْ وَعَلَى هَذِهِ ٱلْمَدِينَةِ وَعَلَى سُكَّانِهَا، لِأَنَّهُ حَقًّا قَدْ أَرْسَلَنِي ٱلرَّبُّ إِلَيْكُمْ لِأَتَكَلَّمَ فِي آذَانِكُمْ بِكُلِّ هَذَا ٱلْكَلَامِ». ١٥ 15
ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.
فَقَالَ ٱلرُّؤَسَاءُ وَكُلُّ ٱلشَّعْبِ لِلْكَهَنَةِ وَٱلْأَنْبِيَاءِ: «لَيْسَ عَلَى هَذَا ٱلرَّجُلِ حَقُّ ٱلْمَوْتِ، لِأَنَّهُ إِنَّمَا كَلَّمَنَا بِٱسْمِ ٱلرَّبِّ إِلَهِنَا». ١٦ 16
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.
فَقَامَ أُنَاسٌ مِنْ شُيُوخِ ٱلْأَرْضِ وَكَلَّمُوا كُلَّ جَمَاعَةِ ٱلشَّعْبِ قَائِلِينَ: ١٧ 17
ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ:
«إِنَّ مِيخَا ٱلْمُورَشْتِيَّ تَنَبَّأَ فِي أَيَّامِ حَزَقِيَّا مَلِكِ يَهُوذَا، وَكَلَّمَ كُلِّ شَعْبِ يَهُوذَا قَائِلًا: هَكَذَا قَالَ رَبُّ ٱلْجُنُودِ: إِنَّ صِهْيَوْنَ تُفْلَحُ كَحَقْلٍ وَتَصِيرُ أُورُشَلِيمُ خِرَبًا وَجَبَلُ ٱلْبَيْتِ شَوَامِخَ وَعْرٍ. ١٨ 18
“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’
هَلْ قَتْلًا قَتَلَهُ حَزَقِيَّا مَلِكُ يَهُوذَا وَكُلُّ يَهُوذَا؟ أَلَمْ يَخَفِ ٱلرَّبَّ وَطَلَبَ وَجْهَ ٱلرَّبِّ، فَنَدِمَ ٱلرَّبُّ عَنِ ٱلشَّرِّ ٱلَّذِي تَكَلَّمَ بِهِ عَلَيْهِمْ؟ فَنَحْنُ عَامِلُونَ شَرًّا عَظِيمًا ضِدَّ أَنْفُسِنَا». ١٩ 19
ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.
وَقَدْ كَانَ رَجُلٌ أَيْضًا يَتَنَبَّأُ بِٱسْمِ ٱلرَّبِّ، أُورِيَّا بْنُ شِمْعِيَا مِن قَرْيَةِ يَعَارِيمَ، فَتَنَبَّأَ عَلَى هَذِهِ ٱلْمَدِينَةِ وَعَلَى هَذِهِ ٱلْأَرْضِ بِكُلِّ كَلَامِ إِرْمِيَا. ٢٠ 20
ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
وَلَمَّا سَمِعَ ٱلْمَلِكُ يَهُويَاقِيمُ وَكُلُّ أَبْطَالِهِ وَكُلُّ ٱلرُّؤَسَاءِ كَلَامَهُ، طَلَبَ ٱلْمَلِكُ أَنْ يَقْتُلَهُ. فَلَمَّا سَمِعَ أُورِيَّا خَافَ وَهَرَبَ وَأَتَى إِلَى مِصْرَ. ٢١ 21
ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.
فَأَرْسَلَ ٱلْمَلِكُ يَهُويَاقِيمُ أُنَاسًا إِلَى مِصْرَ، أَلْنَاثَانَ بْنَ عَكْبُورَ وَرِجَالًا مَعَهُ إِلَى مِصْرَ، ٢٢ 22
ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.
فَأَخْرَجُوا أُورِيَّا مِنْ مِصْرَ وَأَتَوْا بِهِ إِلَى ٱلْمَلِكِ يَهُويَاقِيمَ، فَضَرَبَهُ بِٱلسَّيْفِ وَطَرَحَ جُثَّتَهُ فِي قُبُورِ بَنِي ٱلشَّعْبِ. ٢٣ 23
ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
وَلَكِنَّ يَدَ أَخِيقَامَ بْنِ شَافَانَ كَانَتْ مَعَ إِرْمِيَا حَتَّى لَا يُدْفَعَ لِيَدِ ٱلشَّعْبِ لِيَقْتُلُوهُ. ٢٤ 24
ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.

< إِرْمِيَا 26 >