< إِرْمِيَا 33 >

ثُمَّ صَارَتْ كَلِمَةُ ٱلرَّبِّ إِلَى إِرْمِيَا ثَانِيَةً وَهُوَ مَحْبُوسٌ بَعْدُ فِي دَارِ ٱلسِّجْنِ قَائِلَةً: ١ 1
ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.
«هَكَذَا قَالَ ٱلرَّبُّ صَانِعُهَا، ٱلرَّبُّ مُصَوِّرُهَا لِيُثَبِّتَهَا، يَهْوَهُ ٱسْمُهُ: ٢ 2
“ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ,
اُدْعُنِي فَأُجِيبَكَ وَأُخْبِرَكَ بِعَظَائِمَ وَعَوَائِصَ لَمْ تَعْرِفْهَا. ٣ 3
‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’
لِأَنَّهُ هَكَذَا قَالَ ٱلرَّبُّ إِلَهُ إِسْرَائِيلَ عَنْ بُيُوتِ هَذِهِ ٱلْمَدِينَةِ وَعَنْ بُيُوتِ مُلُوكِ يَهُوذَا ٱلَّتِي هُدِمَتْ لِلْمَتَارِيسِ وَٱلْمَجَانِيقِ: ٤ 4
ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.
يَأْتُونَ لِيُحَارِبُوا ٱلْكَلْدَانِيِّينَ وَيَمْلَأُوهَا مِنْ جِيَفِ ٱلنَّاسِ ٱلَّذِينَ ضَرَبْتُهُمْ بِغَضَبِي وَغَيْظِي، وَٱلَّذِينَ سَتَرْتُ وَجْهِي عَنْ هَذِهِ ٱلْمَدِينَةِ لِأَجْلِ كُلِّ شَرِّهِمْ. ٥ 5
ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
هَأَنَذَا أَضَعُ عَلَيْهَا رِفَادَةً وَعِلَاجًا، وَأَشْفِيهِمْ وَأُعْلِنُ لَهُمْ كَثْرَةَ ٱلسَّلَامِ وَٱلْأَمَانَةِ. ٦ 6
“‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
وَأَرُدُّ سَبْيَ يَهُوذَا وَسَبْيَ إِسْرَائِيلَ وَأَبْنِيهِمْ كَٱلْأَوَّلِ. ٧ 7
ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.
وَأُطَهِّرُهُمْ مِنْ كُلِّ إِثْمِهِمِ ٱلَّذِي أَخْطَأُوا بِهِ إِلَيَّ، وَأَغْفِرُ كُلَّ ذُنُوبِهِمِ ٱلَّتِي أَخْطَأُوا بِهَا إِلَيَّ، وَٱلَّتِي عَصَوْا بِهَا عَلَيَّ. ٨ 8
ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.
فَتَكُونُ لِيَ ٱسْمَ فَرَحٍ لِلتَّسْبِيحِ وَلِلزِّينَةِ لَدَى كُلِّ أُمَمِ ٱلْأَرْضِ، ٱلَّذِينَ يَسْمَعُونَ بِكُلِّ ٱلْخَيْرِ ٱلَّذِي أَصْنَعُهُ مَعَهُمْ، فَيَخَافُونَ وَيَرْتَعِدُونَ مِنْ أَجْلِ كُلِّ ٱلْخَيْرِ وَمِنْ أَجْلِ كُلِّ ٱلسَّلَامِ ٱلَّذِي أَصْنَعُهُ لَهَا. ٩ 9
ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’
هَكَذَا قَالَ ٱلرَّبُّ: سَيُسْمَعُ بَعْدُ فِي هَذَا ٱلْمَوْضِعِ ٱلَّذِي تَقُولُونَ إِنَّهُ خَرِبٌ بِلَا إِنْسَانٍ وَبِلَا حَيَوَانٍ، فِي مُدُنِ يَهُوذَا، وَفِي شَوَارِعِ أُورُشَلِيمَ ٱلْخَرِبَةِ بِلَا إِنْسَانٍ وَلَا سَاكِنٍ وَلَا بَهِيمَةٍ، ١٠ 10
“ಯೆಹೋವ ದೇವರು ಹೇಳುವುದೇನೆಂದರೆ: ‘“ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ
صَوْتُ ٱلطَّرَبِ وَصَوْتُ ٱلْفَرَحِ، صَوْتُ ٱلْعَرِيسِ وَصَوْتُ ٱلْعَرُوسِ، صَوْتُ ٱلْقَائِلِينَ: ٱحْمَدُوا رَبَّ ٱلْجُنُودِ لِأَنَّ ٱلرَّبَّ صَالِحٌ، لِأَنَّ إِلَى ٱلْأَبَدِ رَحْمَتَهُ. صَوْتُ ٱلَّذِينَ يَأْتُونَ بِذَبِيحَةِ ٱلشُّكْرِ إِلَى بَيْتِ ٱلرَّبِّ، لِأَنِّي أَرُدُّ سَبْيَ ٱلْأَرْضِ كَٱلْأَوَّلِ، يَقُولُ ٱلرَّبُّ. ١١ 11
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “‘“ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
هَكَذَا قَالَ رَبُّ ٱلْجُنُودِ: سَيَكُونُ بَعْدُ فِي هَذَا ٱلْمَوْضِعِ ٱلْخَرِبِ بِلَا إِنْسَانٍ وَلَا بَهِيمَةٍ وَفِي كُلِّ مُدُنِهِ، مَسْكَنُ ٱلرُّعَاةِ ٱلْمُرْبِضِينَ ٱلْغَنَمَ. ١٢ 12
“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ.
فِي مُدُنِ ٱلْجَبَلِ وَمُدُنِ ٱلسَّهْلِ وَمُدُنِ ٱلْجَنُوبِ، وَفِي أَرْضِ بِنْيَامِينَ وَحَوَالَيْ أُورُشَلِيمَ، وَفِي مُدُنِ يَهُوذَا، تَمُرُّ أَيْضًا ٱلْغَنَمُ تَحْتَ يَدَيِ ٱلْمُحْصِي، يَقُولُ ٱلرَّبُّ. ١٣ 13
ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.
«هَا أَيَّامٌ تَأْتِي، يَقُولُ ٱلرَّبُّ، وَأُقِيمُ ٱلْكَلِمَةَ ٱلصَّالِحَةَ ٱلَّتِي تَكَلَّمْتُ بِهَا إِلَى بَيْتِ إِسْرَائِيلَ وَإِلَى بَيْتِ يَهُوذَا. ١٤ 14
“‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.
فِي تِلْكَ ٱلْأَيَّامِ وَفِي ذَلِكَ ٱلزَّمَانِ أُنْبِتُ لِدَاوُدَ غُصْنَ ٱلْبِرِّ، فَيُجْرِي عَدْلًا وَبِرًّا فِي ٱلْأَرْضِ. ١٥ 15
“‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
فِي تِلْكَ ٱلْأَيَّامِ يَخْلُصُ يَهُوذَا، وَتَسْكُنُ أُورُشَلِيمُ آمِنَةً، وَهَذَا مَا تَتَسَمَّى بِهِ: ٱلرَّبُّ بِرُّنَا. ١٦ 16
ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’
لِأَنَّهُ هَكَذَا قَالَ ٱلرَّبُّ: لَا يَنْقَطِعُ لِدَاوُدَ إِنْسَانٌ يَجْلِسُ عَلَى كُرْسِيِّ بَيْتِ إِسْرَائِيلَ، ١٧ 17
ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ
وَلَا يَنْقَطِعُ لِلْكَهَنَةِ ٱللَّاوِيِّينَ إِنْسَانٌ مِنْ أَمَامِي يُصْعِدُ مُحْرَقَةً، وَيُحْرِقُ تَقْدِمَةً، وَيُهَيِّيءُ ذَبِيحَةً كُلَّ ٱلْأَيَّامِ». ١٨ 18
ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’”
ثُمَّ صَارَتْ كَلِمَةُ ٱلرَّبِّ إِلَى إِرْمِيَا قَائِلَةً: ١٩ 19
ಯೆಹೋವ ದೇವರು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:
«هَكَذَا قَالَ ٱلرَّبُّ: إِنْ نَقَضْتُمْ عَهْدِي مَعَ ٱلنَّهَارِ، وَعَهْدِي مَعَ ٱللَّيْلِ حَتَّى لَا يَكُونَ نَهَارٌ وَلَا لَيْلٌ فِي وَقْتِهِمَا، ٢٠ 20
“ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ?
فَإِنَّ عَهْدِي أَيْضًا مَعَ دَاوُدَ عَبْدِي يُنْقَضُ، فَلَا يَكُونُ لَهُ ٱبْنٌ مَالِكًا عَلَى كُرْسِيِّهِ، وَمَعَ ٱللَّاوِيِّينَ ٱلْكَهَنَةِ خَادِمِيَّ. ٢١ 21
ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.
كَمَا أَنَّ جُنْدَ ٱلسَّمَاوَاتِ لَا يُعَدُّ، وَرَمْلَ ٱلْبَحْرِ لَا يُحْصَى، هَكَذَا أُكَثِّرُ نَسْلَ دَاوُدَ عَبْدِي وَٱللَّاوِيِّينَ خَادِمِيَّ». ٢٢ 22
ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’”
ثُمَّ صَارَتْ كَلِمَةُ ٱلرَّبِّ إِلَى إِرْمِيَا قَائِلَةً: ٢٣ 23
ಇದಲ್ಲದೆ ಯೆಹೋವ ದೇವರು ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:
«أَمَا تَرَى مَا تَكَلَّمَ بِهِ هَذَا ٱلشَّعْبُ قَائِلًا: إِنَّ ٱلْعَشِيرَتَيْنِ ٱللَّتَيْنِ ٱخْتَارَهُمَا ٱلرَّبُّ قَدْ رَفَضَهُمَا. فَقَدِ ٱحْتَقَرُوا شَعْبِي حَتَّى لَا يَكُونُوا بَعْدُ أُمَّةً أَمَامَهُمْ. ٢٤ 24
“‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?
هَكَذَا قَالَ ٱلرَّبُّ: إِنْ كُنْتُ لَمْ أَجْعَلْ عَهْدِي مَعَ ٱلنَّهَارِ وَٱللَّيْلِ، فَرَائِضَ ٱلسَّمَاوَاتِ وَٱلْأَرْضِ، ٢٥ 25
ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ,
فَإِنِّي أَيْضًا أَرْفُضُ نَسْلَ يَعْقُوبَ وَدَاوُدَ عَبْدِي، فَلَا آخُذُ مِنْ نَسْلِهِ حُكَّامًا لِنَسْلِ إِبْرَاهِيمَ وَإِسْحَاقَ وَيَعْقُوبَ، لِأَنِّي أَرُدُّ سَبْيَهُمْ وَأَرْحَمُهُمْ». ٢٦ 26
ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’”

< إِرْمِيَا 33 >