< إِرْمِيَا 38 >
وَسَمِعَ شَفَطْيَا بْنُ مَتَّانَ، وَجَدَلْيَا بْنُ فَشْحُورَ، وَيُوخَلُ بْنُ شَلَمْيَا، وَفَشْحُورُ بْنُ مَلْكِيَّا، ٱلْكَلَامَ ٱلَّذِي كَانَ إِرْمِيَا يُكَلِّمُ بِهِ كُلَّ ٱلشَّعْبِ قَائِلًا: | ١ 1 |
೧ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.
«هَكَذَا قَالَ ٱلرَّبُّ: ٱلَّذِي يُقِيمُ فِي هَذِهِ ٱلْمَدِينَةِ يَمُوتُ بِٱلسَّيْفِ وَٱلْجُوعِ وَٱلْوَبَإِ. أَمَّا ٱلَّذِي يَخْرُجُ إِلَى ٱلْكَلْدَانِيِّينَ فَإِنَّهُ يَحْيَا وَتَكُونُ لَهُ نَفْسُهُ غَنِيمَةً فَيَحْيَا. | ٢ 2 |
೨ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.
هَكَذَا قَالَ ٱلرَّبُّ: هَذِهِ ٱلْمَدِينَةُ سَتُدْفَعُ دَفْعًا لِيَدِ جَيْشِ مَلِكِ بَابِلَ فَيَأْخُذُهَا». | ٣ 3 |
೩ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.
فَقَالَ ٱلرُّؤَسَاءُ لِلْمَلِكِ: «لِيُقْتَلْ هَذَا ٱلرَّجُلُ، لِأَنَّهُ بِذَلِكَ يُضْعِفُ أَيَادِيَ رِجَالِ ٱلْحَرْبِ ٱلْبَاقِينَ فِي هَذِهِ ٱلْمَدِينَةِ، وَأَيَادِيَ كُلِّ ٱلشَّعْبِ، إِذْ يُكَلِّمُهُمْ بِمِثْلِ هَذَا ٱلْكَلَامِ. لِأَنَّ هَذَا ٱلرَّجُلَ لَا يَطْلُبُ ٱلسَّلَامَ لِهَذَا ٱلشَّعْبِ بَلِ ٱلشَّرَّ». | ٤ 4 |
೪ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
فَقَالَ ٱلْمَلِكُ صِدْقِيَّا: «هَا هُوَ بِيَدِكُمْ، لِأَنَّ ٱلْمَلِكَ لَا يَقْدِرُ عَلَيْكُمْ فِي شَيْءٍ». | ٥ 5 |
೫ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.
فَأَخَذُوا إِرْمِيَا وَأَلْقُوْهُ فِي جُبِّ مَلْكِيَّا ٱبْنِ ٱلْمَلِكِ، ٱلَّذِي فِي دَارِ ٱلسِّجْنِ، وَدَلُّوا إِرْمِيَا بِحِبَالٍ. وَلَمْ يَكُنْ فِي ٱلْجُبِّ مَاءٌ بَلْ وَحْلٌ، فَغَاصَ إِرْمِيَا فِي ٱلْوَحْلِ. | ٦ 6 |
೬ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
فَلَمَّا سَمِعَ عَبْدَ مَلِكُ ٱلْكُوشِيُّ، رَجُلٌ خَصِيٌّ، وَهُوَ فِي بَيْتِ ٱلْمَلِكِ، أَنَّهُمْ جَعَلُوا إِرْمِيَا فِي ٱلْجُبِّ، وَٱلْمَلِكُ جَالِسٌ فِي بَابِ بَنْيَامِينَ، | ٧ 7 |
೭ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.
خَرَجَ عَبْدَ مَلِكُ مِنْ بَيْتِ ٱلْمَلِكِ وَكَلَّمَ ٱلْمَلِكَ قَائِلًا: | ٨ 8 |
೮ಆಗ ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಹೋಗಿ,
«يَا سَيِّدِي ٱلْمَلِكَ، قَدْ أَسَاءَ هَؤُلَاءِ ٱلرِّجَالُ فِي كُلِّ مَا فَعَلُوا بِإِرْمِيَا ٱلنَّبِيِّ، ٱلَّذِي طَرَحُوهُ فِي ٱلْجُبِّ، فَإِنَّهُ يَمُوتُ فِي مَكَانِهِ بِسَبَبِ ٱلْجُوعِ، لِأَنَّهُ لَيْسَ بَعْدُ خُبْزٌ فِي ٱلْمَدِينَةِ». | ٩ 9 |
೯“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.
فَأَمَرَ ٱلْمَلِكُ عَبْدَ مَلِكَ ٱلْكُوشِيَّ قَائِلًا: «خُذْ مَعَكَ مِنْ هُنَا ثَلَاثِينَ رَجُلًا، وَأَطْلِعْ إِرْمِيَا مِنَ ٱلْجُبِّ قَبْلَمَا يَمُوتُ». | ١٠ 10 |
೧೦ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.
فَأَخَذَ عَبْدَ مَلِكُ ٱلرِّجَالَ مَعَهُ، وَدَخَلَ إِلَى بَيْتِ ٱلْمَلِكِ، إِلَى أَسْفَلِ ٱلْمَخْزَنِ، وَأَخَذَ مِنْ هُنَاكَ ثِيَابًا رِثَّةً وَمَلَابِسَ بَالِيَةً وَدَلَّاهَا إِلَى إِرْمِيَا إِلَى ٱلْجُبِّ بِحِبَالٍ. | ١١ 11 |
೧೧ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,
وَقَالَ عَبْدَ مَلِكُ ٱلْكُوشِيُّ لِإِرْمِيَا: «ضَعِ ٱلثِّيَابَ ٱلرِّثَّةَ وَٱلْمَلَابِسَ ٱلْبَالِيَةَ تَحْتَ إِبْطَيْكَ تَحْتَ ٱلْحِبَالِ». فَفَعَلَ إِرْمِيَا كَذَلِكَ. | ١٢ 12 |
೧೨“ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.
فَجَذَبُوا إِرْمِيَا بِٱلْحِبَالِ وَأَطْلَعُوهُ مِنَ ٱلْجُبِّ. فَأَقَامَ إِرْمِيَا فِي دَارِ ٱلسِّجْنِ. | ١٣ 13 |
೧೩ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.
فَأَرْسَلَ ٱلْمَلِكُ صِدْقِيَّا وَأَخَذَ إِرْمِيَا ٱلنَّبِيَّ إِلَيْهِ، إِلَى ٱلْمَدْخَلِ ٱلثَّالِثِ ٱلَّذِي فِي بَيْتِ ٱلرَّبِّ، وَقَالَ ٱلْمَلِكُ لِإِرْمِيَا: «أَنَا أَسْأَلُكَ عَنْ أَمْرٍ. لَا تُخْفِ عَنِّي شَيْئًا». | ١٤ 14 |
೧೪ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”
فَقَالَ إِرْمِيَا لِصِدْقِيَّا: «إِذَا أَخْبَرْتُكَ أَفَمَا تَقْتُلُنِي قَتْلًا؟ وَإِذَا أَشَرْتُ عَلَيْكَ فَلَا تَسْمَعُ لِي!» | ١٥ 15 |
೧೫ಎನ್ನಲು ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು.
فَحَلَفَ ٱلْمَلِكُ صِدْقِيَّا لِإِرْمِيَا سِرًّا قَائِلًا: «حَيٌّ هُوَ ٱلرَّبُّ ٱلَّذِي صَنَعَ لَنَا هَذِهِ ٱلنَّفْسَ، إِنِّي لَا أَقْتُلُكَ وَلَا أَدْفَعُكَ لِيَدِ هَؤُلَاءِ ٱلرِّجَالِ ٱلَّذِينَ يَطْلُبُونَ نَفْسَكَ». | ١٦ 16 |
೧೬ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.
فَقَالَ إِرْمِيَا لِصِدْقِيَّا: «هَكَذَا قَالَ ٱلرَّبُّ إِلَهُ ٱلْجُنُودِ إِلَهُ إِسْرَائِيلَ: إِنْ كُنْتَ تَخْرُجُ خُرُوجًا إِلَى رُؤَسَاءِ مَلِكِ بَابِلَ، تَحْيَا نَفْسُكَ وَلَا تُحْرَقُ هَذِهِ ٱلْمَدِينَةُ بِٱلنَّارِ، بَلْ تَحْيَا أَنْتَ وَبَيْتُكَ. | ١٧ 17 |
೧೭ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.
وَلَكِنْ إِنْ كُنْتَ لَا تَخْرُجُ إِلَى رُؤَسَاءِ مَلِكِ بَابِلَ، تُدْفَعُ هَذِهِ ٱلْمَدِينَةُ لِيَدِ ٱلْكَلْدَانِيِّينَ فَيُحْرِقُونَهَا بِٱلنَّارِ، وَأَنْتَ لَا تُفْلِتُ مِنْ يَدِهِمْ». | ١٨ 18 |
೧೮ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.
فَقَالَ صِدْقِيَّا ٱلْمَلِكُ لِإِرْمِيَا: «إِنِّي أَخَافُ مِنَ ٱلْيَهُودِ ٱلَّذِينَ قَدْ سَقَطُوا لِلْكَلْدَانِيِّينَ لِئَلَّا يَدْفَعُونِي لِيَدِهِمْ فَيَزْدَرُوا بِي». | ١٩ 19 |
೧೯ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.
فَقَالَ إِرْمِيَا: «لَا يَدْفَعُونَكَ. ٱسْمَعْ لِصَوْتِ ٱلرَّبِّ فِي مَا أُكَلِّمُكَ أَنَا بِهِ، فَيُحْسَنَ إِلَيْكَ وَتَحْيَا نَفْسُكَ. | ٢٠ 20 |
೨೦ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.
وَإِنْ كُنْتَ تَأْبَى ٱلْخُرُوجَ، فَهَذِهِ هِيَ ٱلْكَلِمَةُ ٱلَّتِي أَرَانِي ٱلرَّبُّ إِيَّاهَا: | ٢١ 21 |
೨೧ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.
هَا كُلُّ ٱلنِّسَاءِ ٱللَّوَاتِي بَقِينَ فِي بَيْتِ مَلِكِ يَهُوذَا، يُخْرَجْنَ إِلَى رُؤَسَاءِ مَلِكِ بَابِلَ وَهُنَّ يَقُلْنَ: قَدْ خَدَعَكَ وَقَدِرَ عَلَيْكَ مُسَالِمُوكَ. غَاصَتْ فِي ٱلْحَمْأَةِ رِجْلَاكَ وَٱرْتَدَّتَا إِلَى ٱلْوَرَاءِ. | ٢٢ 22 |
೨೨ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.
وَيُخْرِجُونَ كُلَّ نِسَائِكَ وَبَنِيكَ إِلَى ٱلْكَلْدَانِيِّينَ، وَأَنْتَ لَا تُفْلِتُ مِنْ يَدِهِمْ، لِأَنَّكَ أَنْتَ تُمْسَكُ بِيَدِ مَلِكِ بَابِلَ، وَهَذِهِ ٱلْمَدِينَةُ تُحْرَقُ بِٱلنَّارِ». | ٢٣ 23 |
೨೩ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.
فَقَالَ صِدْقِيَّا لِإِرْمِيَا: «لَا يَعْلَمْ أَحَدٌ بِهَذَا ٱلْكَلَامِ، فَلَا تَمُوتَ. | ٢٤ 24 |
೨೪ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ.
وَإِذَا سَمِعَ ٱلرُّؤَسَاءُ أَنِّي كَلَّمْتُكَ، وَأَتَوْا إِلَيْكَ وَقَالُوا لَكَ: أَخْبِرْنَا بِمَاذَا كَلَّمْتَ ٱلْمَلِكَ، لَا تُخْفِ عَنَّا فَلَا نَقْتُلَكَ، وَمَاذَا قَالَ لَكَ ٱلْمَلِكُ. | ٢٥ 25 |
೨೫ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನೆಮಾಡಬಹುದು.
فَقُلْ لَهُمْ: إِنِّي أَلْقَيْتُ تَضَرُّعِي أَمَامَ ٱلْمَلِكِ حَتَّى لَا يَرُدَّنِي إِلَى بَيْتِ يُونَاثَانَ لِأَمُوتَ هُنَاكَ». | ٢٦ 26 |
೨೬ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.
فَأَتَى كُلُّ ٱلرُّؤَسَاءِ إِلَى إِرْمِيَا وَسَأَلُوهُ، فَأَخْبَرَهُمْ حَسَبَ كُلِّ هَذَا ٱلْكَلَامِ ٱلَّذِي أَوْصَاهُ بِهِ ٱلْمَلِكُ. فَسَكَتُوا عَنْهُ لِأَنَّ ٱلْأَمْرَ لَمْ يُسْمَعْ. | ٢٧ 27 |
೨೭ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.
فَأَقَامَ إِرْمِيَا فِي دَارِ ٱلسِّجْنِ إِلَى ٱلْيَوْمِ ٱلَّذِي أُخِذَتْ فِيهِ أُورُشَلِيمَ. | ٢٨ 28 |
೨೮ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.