< إِرْمِيَا 38 >

وَسَمِعَ شَفَطْيَا بْنُ مَتَّانَ، وَجَدَلْيَا بْنُ فَشْحُورَ، وَيُوخَلُ بْنُ شَلَمْيَا، وَفَشْحُورُ بْنُ مَلْكِيَّا، ٱلْكَلَامَ ٱلَّذِي كَانَ إِرْمِيَا يُكَلِّمُ بِهِ كُلَّ ٱلشَّعْبِ قَائِلًا: ١ 1
ಮತ್ತಾನನ ಮಗ ಶೆಫಟ್ಯ, ಪಷ್ಹೂರನ ಮಗ ಗೆದಲ್ಯ, ಶೆಲೆಮ್ಯನ ಮಗ ಯೂಕಲ ಹಾಗೂ ಮಲ್ಕೀಯನ ಮಗ ಪಷ್ಹೂರ, ಇವರು ಯೆರೆಮೀಯನು ಜನರೆಲ್ಲರಿಗೆ ಹೇಳುತ್ತಿದ್ದುದನ್ನು ಕೇಳುತ್ತಿದ್ದರು.
«هَكَذَا قَالَ ٱلرَّبُّ: ٱلَّذِي يُقِيمُ فِي هَذِهِ ٱلْمَدِينَةِ يَمُوتُ بِٱلسَّيْفِ وَٱلْجُوعِ وَٱلْوَبَإِ. أَمَّا ٱلَّذِي يَخْرُجُ إِلَى ٱلْكَلْدَانِيِّينَ فَإِنَّهُ يَحْيَا وَتَكُونُ لَهُ نَفْسُهُ غَنِيمَةً فَيَحْيَا. ٢ 2
“ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು.
هَكَذَا قَالَ ٱلرَّبُّ: هَذِهِ ٱلْمَدِينَةُ سَتُدْفَعُ دَفْعًا لِيَدِ جَيْشِ مَلِكِ بَابِلَ فَيَأْخُذُهَا». ٣ 3
ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ,’ ಎಂದು ಯೆಹೋವ ದೇವರು ಸಾರುತ್ತಿದ್ದಾರೆ.”
فَقَالَ ٱلرُّؤَسَاءُ لِلْمَلِكِ: «لِيُقْتَلْ هَذَا ٱلرَّجُلُ، لِأَنَّهُ بِذَلِكَ يُضْعِفُ أَيَادِيَ رِجَالِ ٱلْحَرْبِ ٱلْبَاقِينَ فِي هَذِهِ ٱلْمَدِينَةِ، وَأَيَادِيَ كُلِّ ٱلشَّعْبِ، إِذْ يُكَلِّمُهُمْ بِمِثْلِ هَذَا ٱلْكَلَامِ. لِأَنَّ هَذَا ٱلرَّجُلَ لَا يَطْلُبُ ٱلسَّلَامَ لِهَذَا ٱلشَّعْبِ بَلِ ٱلشَّرَّ». ٤ 4
ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.
فَقَالَ ٱلْمَلِكُ صِدْقِيَّا: «هَا هُوَ بِيَدِكُمْ، لِأَنَّ ٱلْمَلِكَ لَا يَقْدِرُ عَلَيْكُمْ فِي شَيْءٍ». ٥ 5
ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು.
فَأَخَذُوا إِرْمِيَا وَأَلْقُوْهُ فِي جُبِّ مَلْكِيَّا ٱبْنِ ٱلْمَلِكِ، ٱلَّذِي فِي دَارِ ٱلسِّجْنِ، وَدَلُّوا إِرْمِيَا بِحِبَالٍ. وَلَمْ يَكُنْ فِي ٱلْجُبِّ مَاءٌ بَلْ وَحْلٌ، فَغَاصَ إِرْمِيَا فِي ٱلْوَحْلِ. ٦ 6
ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.
فَلَمَّا سَمِعَ عَبْدَ مَلِكُ ٱلْكُوشِيُّ، رَجُلٌ خَصِيٌّ، وَهُوَ فِي بَيْتِ ٱلْمَلِكِ، أَنَّهُمْ جَعَلُوا إِرْمِيَا فِي ٱلْجُبِّ، وَٱلْمَلِكُ جَالِسٌ فِي بَابِ بَنْيَامِينَ، ٧ 7
ಆಗ ಅರಸನು ಮನೆಯಲ್ಲಿರುವ ಕಂಚುಕಿಯಾದ ಕೂಷ್ಯನಾದ ಎಬೆದ್ಮೆಲೆಕನು ಅವರು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದರೆಂದು ಕೇಳಿದಾಗ, ಅರಸನು ಬೆನ್ಯಾಮೀನನ ಬಾಗಿಲಲ್ಲಿ ಕೂತಿರಲಾಗಿ,
خَرَجَ عَبْدَ مَلِكُ مِنْ بَيْتِ ٱلْمَلِكِ وَكَلَّمَ ٱلْمَلِكَ قَائِلًا: ٨ 8
ಎಬೆದ್ಮೆಲೆಕನು ಅರಸನ ಅರಮನೆಯನ್ನು ಬಿಟ್ಟು, ಹೊರಟು ಅರಸನ ಸಂಗಡ ಮಾತನಾಡಿ,
«يَا سَيِّدِي ٱلْمَلِكَ، قَدْ أَسَاءَ هَؤُلَاءِ ٱلرِّجَالُ فِي كُلِّ مَا فَعَلُوا بِإِرْمِيَا ٱلنَّبِيِّ، ٱلَّذِي طَرَحُوهُ فِي ٱلْجُبِّ، فَإِنَّهُ يَمُوتُ فِي مَكَانِهِ بِسَبَبِ ٱلْجُوعِ، لِأَنَّهُ لَيْسَ بَعْدُ خُبْزٌ فِي ٱلْمَدِينَةِ». ٩ 9
“ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು.
فَأَمَرَ ٱلْمَلِكُ عَبْدَ مَلِكَ ٱلْكُوشِيَّ قَائِلًا: «خُذْ مَعَكَ مِنْ هُنَا ثَلَاثِينَ رَجُلًا، وَأَطْلِعْ إِرْمِيَا مِنَ ٱلْجُبِّ قَبْلَمَا يَمُوتُ». ١٠ 10
ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಪ್ರವಾದಿಯಾದ ಯೆರೆಮೀಯನನ್ನು ಅವನು ಸಾಯುವುದಕ್ಕಿಂತ ಮುಂಚೆ ಬಾವಿಯೊಳಗಿಂದ ಮೇಲಕ್ಕೆತ್ತು,” ಎಂದು ಆಜ್ಞಾಪಿಸಿದನು.
فَأَخَذَ عَبْدَ مَلِكُ ٱلرِّجَالَ مَعَهُ، وَدَخَلَ إِلَى بَيْتِ ٱلْمَلِكِ، إِلَى أَسْفَلِ ٱلْمَخْزَنِ، وَأَخَذَ مِنْ هُنَاكَ ثِيَابًا رِثَّةً وَمَلَابِسَ بَالِيَةً وَدَلَّاهَا إِلَى إِرْمِيَا إِلَى ٱلْجُبِّ بِحِبَالٍ. ١١ 11
ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರೆದುಕೊಂಡು, ಖಜಾನೆ ಕೆಳಗಿರುವ ಅರಮನೆಗೆ ಹೋಗಿ, ಅಲ್ಲಿಂದ ಹರಿದುಹೋದ ಹಳೆಯ ಬಟ್ಟೆಗಳನ್ನೂ, ಸವೆದು ಹೋದ ಹಳೆಯ ವಸ್ತ್ರಗಳನ್ನೂ ತೆಗೆದುಕೊಂಡು, ಅವುಗಳನ್ನು ಹಗ್ಗಗಳಂತೆ ಯೆರೆಮೀಯನ ಬಳಿಗೆ ಬಾವಿಯೊಳಗೆ ಇಳಿಸಿದನು.
وَقَالَ عَبْدَ مَلِكُ ٱلْكُوشِيُّ لِإِرْمِيَا: «ضَعِ ٱلثِّيَابَ ٱلرِّثَّةَ وَٱلْمَلَابِسَ ٱلْبَالِيَةَ تَحْتَ إِبْطَيْكَ تَحْتَ ٱلْحِبَالِ». فَفَعَلَ إِرْمِيَا كَذَلِكَ. ١٢ 12
ಕೂಷ್ಯನಾದ ಎಬೆದ್ಮೆಲೆಕನು ಯೆರೆಮೀಯನಿಗೆ, “ಈ ಹರಿದು ಸವೆದು ಹೋದ ಹಳೆಯ ಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ,” ಎಂದನು. ಯೆರೆಮೀಯನು ಹಾಗೆ ಮಾಡಿದನು.
فَجَذَبُوا إِرْمِيَا بِٱلْحِبَالِ وَأَطْلَعُوهُ مِنَ ٱلْجُبِّ. فَأَقَامَ إِرْمِيَا فِي دَارِ ٱلسِّجْنِ. ١٣ 13
ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
فَأَرْسَلَ ٱلْمَلِكُ صِدْقِيَّا وَأَخَذَ إِرْمِيَا ٱلنَّبِيَّ إِلَيْهِ، إِلَى ٱلْمَدْخَلِ ٱلثَّالِثِ ٱلَّذِي فِي بَيْتِ ٱلرَّبِّ، وَقَالَ ٱلْمَلِكُ لِإِرْمِيَا: «أَنَا أَسْأَلُكَ عَنْ أَمْرٍ. لَا تُخْفِ عَنِّي شَيْئًا». ١٤ 14
ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ತನ್ನ ಬಳಿಗೆ ಕರೆಯಿಸಿ, ಯೆಹೋವ ದೇವರ ಆಲಯದಲ್ಲಿರುವ ಮೂರನೆಯ ದ್ವಾರಕ್ಕೆ ಕರೆದುಕೊಂಡು ಹೋದನು. ಆಗ ಅರಸನು ಯೆರೆಮೀಯನಿಗೆ, “ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವುದನ್ನಾದರೂ ಬಚ್ಚಿಡಬೇಡ,” ಎಂದನು.
فَقَالَ إِرْمِيَا لِصِدْقِيَّا: «إِذَا أَخْبَرْتُكَ أَفَمَا تَقْتُلُنِي قَتْلًا؟ وَإِذَا أَشَرْتُ عَلَيْكَ فَلَا تَسْمَعُ لِي!» ١٥ 15
ಆಗ ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ, ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವುದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ, ನೀನು ನನ್ನನ್ನು ಕೇಳುವುದಿಲ್ಲ,” ಎಂದು ಹೇಳಿದನು.
فَحَلَفَ ٱلْمَلِكُ صِدْقِيَّا لِإِرْمِيَا سِرًّا قَائِلًا: «حَيٌّ هُوَ ٱلرَّبُّ ٱلَّذِي صَنَعَ لَنَا هَذِهِ ٱلنَّفْسَ، إِنِّي لَا أَقْتُلُكَ وَلَا أَدْفَعُكَ لِيَدِ هَؤُلَاءِ ٱلرِّجَالِ ٱلَّذِينَ يَطْلُبُونَ نَفْسَكَ». ١٦ 16
ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು.
فَقَالَ إِرْمِيَا لِصِدْقِيَّا: «هَكَذَا قَالَ ٱلرَّبُّ إِلَهُ ٱلْجُنُودِ إِلَهُ إِسْرَائِيلَ: إِنْ كُنْتَ تَخْرُجُ خُرُوجًا إِلَى رُؤَسَاءِ مَلِكِ بَابِلَ، تَحْيَا نَفْسُكَ وَلَا تُحْرَقُ هَذِهِ ٱلْمَدِينَةُ بِٱلنَّارِ، بَلْ تَحْيَا أَنْتَ وَبَيْتُكَ. ١٧ 17
ಆಗ ಯೆರೆಮೀಯನು ಚಿದ್ಕೀಯನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿಶ್ಚಯವಾಗಿ ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ, ನಿನ್ನ ಪ್ರಾಣವು ಬದುಕುವುದು. ಈ ಪಟ್ಟಣವು ಬೆಂಕಿಯಿಂದ ಸುಡಲಾಗುವುದಿಲ್ಲ. ನೀನೂ, ನಿನ್ನ ಮನೆಯವರೂ ಬದುಕುವಿರಿ.
وَلَكِنْ إِنْ كُنْتَ لَا تَخْرُجُ إِلَى رُؤَسَاءِ مَلِكِ بَابِلَ، تُدْفَعُ هَذِهِ ٱلْمَدِينَةُ لِيَدِ ٱلْكَلْدَانِيِّينَ فَيُحْرِقُونَهَا بِٱلنَّارِ، وَأَنْتَ لَا تُفْلِتُ مِنْ يَدِهِمْ». ١٨ 18
ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’” ಎಂದನು.
فَقَالَ صِدْقِيَّا ٱلْمَلِكُ لِإِرْمِيَا: «إِنِّي أَخَافُ مِنَ ٱلْيَهُودِ ٱلَّذِينَ قَدْ سَقَطُوا لِلْكَلْدَانِيِّينَ لِئَلَّا يَدْفَعُونِي لِيَدِهِمْ فَيَزْدَرُوا بِي». ١٩ 19
ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.
فَقَالَ إِرْمِيَا: «لَا يَدْفَعُونَكَ. ٱسْمَعْ لِصَوْتِ ٱلرَّبِّ فِي مَا أُكَلِّمُكَ أَنَا بِهِ، فَيُحْسَنَ إِلَيْكَ وَتَحْيَا نَفْسُكَ. ٢٠ 20
ಆದರೆ ಯೆರೆಮೀಯನು, “ಅವರು ನಿನ್ನನ್ನು ಒಪ್ಪಿಸುವುದಿಲ್ಲ” ನಾನು ನಿನಗೆ ಹೇಳುವ ಯೆಹೋವ ದೇವರ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೆಯದಾಗುವುದು. ನಿನ್ನ ಪ್ರಾಣ ಬದುಕುವುದು.
وَإِنْ كُنْتَ تَأْبَى ٱلْخُرُوجَ، فَهَذِهِ هِيَ ٱلْكَلِمَةُ ٱلَّتِي أَرَانِي ٱلرَّبُّ إِيَّاهَا: ٢١ 21
ಆದರೆ ನೀನು ಶರಣಾಗತಿಯನ್ನು ನಿರಾಕರಿಸಿದರೆ, ಯೆಹೋವ ದೇವರು ನನಗೆ ತೋರಿಸಿದ ಮಾತು ಇದೇ:
هَا كُلُّ ٱلنِّسَاءِ ٱللَّوَاتِي بَقِينَ فِي بَيْتِ مَلِكِ يَهُوذَا، يُخْرَجْنَ إِلَى رُؤَسَاءِ مَلِكِ بَابِلَ وَهُنَّ يَقُلْنَ: قَدْ خَدَعَكَ وَقَدِرَ عَلَيْكَ مُسَالِمُوكَ. غَاصَتْ فِي ٱلْحَمْأَةِ رِجْلَاكَ وَٱرْتَدَّتَا إِلَى ٱلْوَرَاءِ. ٢٢ 22
ಇಗೋ, ಯೆಹೂದದ ಅರಸನ ಅರಮನೆಯಲ್ಲಿ ಉಳಿದ ಹೆಂಗಸರೆಲ್ಲರು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಕರೆತರಲಾಗಿ ಹೇಳುವುದೇನೆಂದರೆ, “ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ. ನಿನ್ನ ಕಾಲುಗಳು ಕೆಸರಿನಲ್ಲಿ ಹೂತಿರುವುದನ್ನು ನೋಡಿ, ಹಿಂದಿರುಗಿದ್ದಾರೆಂದು ನಿಂದಿಸುವರು.
وَيُخْرِجُونَ كُلَّ نِسَائِكَ وَبَنِيكَ إِلَى ٱلْكَلْدَانِيِّينَ، وَأَنْتَ لَا تُفْلِتُ مِنْ يَدِهِمْ، لِأَنَّكَ أَنْتَ تُمْسَكُ بِيَدِ مَلِكِ بَابِلَ، وَهَذِهِ ٱلْمَدِينَةُ تُحْرَقُ بِٱلنَّارِ». ٢٣ 23
“ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.
فَقَالَ صِدْقِيَّا لِإِرْمِيَا: «لَا يَعْلَمْ أَحَدٌ بِهَذَا ٱلْكَلَامِ، فَلَا تَمُوتَ. ٢٤ 24
ಆಗ ಚಿದ್ಕೀಯನು ಯೆರೆಮೀಯನಿಗೆ, “ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.
وَإِذَا سَمِعَ ٱلرُّؤَسَاءُ أَنِّي كَلَّمْتُكَ، وَأَتَوْا إِلَيْكَ وَقَالُوا لَكَ: أَخْبِرْنَا بِمَاذَا كَلَّمْتَ ٱلْمَلِكَ، لَا تُخْفِ عَنَّا فَلَا نَقْتُلَكَ، وَمَاذَا قَالَ لَكَ ٱلْمَلِكُ. ٢٥ 25
ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿದ್ದೇನೆಂದು ಕೇಳಿ, ‘ನಿನ್ನ ಬಳಿಗೆ ಬಂದು, ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು. ನಾವು ನಿನ್ನನ್ನು ಕೊಂದುಹಾಕುವುದಿಲ್ಲ. ಅರಸನು ನಿನ್ನ ಸಂಗಡ ಮಾತಾಡಿದ್ದನ್ನು ಸಹ ತಿಳಿಸು,’ ಎಂದು ಹೇಳಿದರೆ,
فَقُلْ لَهُمْ: إِنِّي أَلْقَيْتُ تَضَرُّعِي أَمَامَ ٱلْمَلِكِ حَتَّى لَا يَرُدَّنِي إِلَى بَيْتِ يُونَاثَانَ لِأَمُوتَ هُنَاكَ». ٢٦ 26
ನೀನು ಅವರಿಗೆ, ‘ನನ್ನನ್ನು ತಿರುಗಿ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯುವ ಹಾಗೆ ತೆಗೆದುಕೊಂಡು ಹೋಗಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು,’ ಎಂದು ಹೇಳಿದನು.”
فَأَتَى كُلُّ ٱلرُّؤَسَاءِ إِلَى إِرْمِيَا وَسَأَلُوهُ، فَأَخْبَرَهُمْ حَسَبَ كُلِّ هَذَا ٱلْكَلَامِ ٱلَّذِي أَوْصَاهُ بِهِ ٱلْمَلِكُ. فَسَكَتُوا عَنْهُ لِأَنَّ ٱلْأَمْرَ لَمْ يُسْمَعْ. ٢٧ 27
ಆಗ ಪ್ರಧಾನರೆಲ್ಲರೂ ಯೆರೆಮೀಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆಗ ಅವರು ಸುಮ್ಮನಾದರು. ಏಕೆಂದರೆ ಆ ಕಾರ್ಯದ ವಿಷಯವನ್ನು ಅವರು ಗ್ರಹಿಸಲಿಲ್ಲ.
فَأَقَامَ إِرْمِيَا فِي دَارِ ٱلسِّجْنِ إِلَى ٱلْيَوْمِ ٱلَّذِي أُخِذَتْ فِيهِ أُورُشَلِيمَ. ٢٨ 28
ಈ ಪ್ರಕಾರ ಯೆರೂಸಲೇಮು ಸೆರೆಯಾಗುವ ದಿವಸದವರೆಗೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ವಾಸವಾಗಿದ್ದನು. ಯೆರೂಸಲೇಮು ಹಿಡಿಯಲಾಗುವಾಗ ಅಲ್ಲೇ ಇದ್ದನು.

< إِرْمِيَا 38 >