< إِرْمِيَا 40 >

اَلْكَلِمَةُ ٱلَّتِي صَارَتْ إِلَى إِرْمِيَا مِنْ قِبَلِ ٱلرَّبِّ، بَعْدَ مَا أَرْسَلَهُ نَبُوزَرَادَانُ رَئِيسُ ٱلشُّرَطِ مِنَ ٱلرَّامَةِ، إِذْ أَخَذَهُ وَهُوَ مُقَيَّدٌ بِٱلسَّلَاسِلِ فِي وَسْطِ كُلِّ سَبْيِ أُورُشَلِيمَ وَيَهُوذَا ٱلَّذِينَ سُبُوا إِلَى بَابِلَ. ١ 1
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.
فَأَخَذَ رَئِيسُ ٱلشُّرَطِ إِرْمِيَا وَقَالَ لَهُ: «إِنَّ ٱلرَّبَّ إِلَهَكَ قَدْ تَكَلَّمَ بِهَذَا ٱلشَّرِّ عَلَى هَذَا ٱلْمَوْضِعِ. ٢ 2
ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.
فَجَلَبَ ٱلرَّبُّ وَفَعَلَ كَمَا تَكَلَّمَ، لِأَنَّكُمْ قَدْ أَخْطَأْتُمْ إِلَى ٱلرَّبِّ وَلَمْ تَسْمَعُوا لِصَوْتِهِ، فَحَدَثَ لَكُمْ هَذَا ٱلْأَمْرُ. ٣ 3
ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.
فَٱلْآنَ هَأَنَذَا أَحُلُّكَ ٱلْيَوْمَ مِنَ ٱلْقُيُودِ ٱلَّتِي عَلَى يَدِكَ. فَإِنْ حَسُنَ فِي عَيْنَيْكَ أَنْ تَأْتِيَ مَعِي إِلَى بَابِلَ فَتَعَالَ، فَأَجْعَلُ عَيْنَيَّ عَلَيْكَ. وَإِنْ قَبُحَ فِي عَيْنَيْكَ أَنْ تَأْتِيَ مَعِي إِلَى بَابِلَ فَٱمْتَنِعْ. اُنْظُرْ. كُلُّ ٱلْأَرْضِ هِيَ أَمَامَكَ، فَحَيْثُمَا حَسُنَ وَكَانَ مُسْتَقِيمًا فِي عَيْنَيْكَ أَنْ تَنْطَلِقَ فَٱنْطَلِقْ إِلَى هُنَاكَ». ٤ 4
ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.
وَإِذْ كَانَ لَمْ يَرْجِعْ بَعْدُ، قَالَ: «ٱرْجِعْ إِلَى جَدَلْيَا بْنِ أَخِيقَامَ بْنِ شَافَانَ ٱلَّذِي أَقَامَهُ مَلِكُ بَابِلَ عَلَى مُدُنِ يَهُوذَا، وَأَقِمْ عِنْدَهُ فِي وَسْطِ ٱلشَّعْبِ، وَٱنْطَلِقْ إِلَى حَيْثُ كَانَ مُسْتَقِيمًا فِي عَيْنَيْكَ أَنْ تَنْطَلِقَ». وَأَعْطَاهُ رَئِيسُ ٱلشُّرَطِ زَادًا وَهَدِيَّةً وَأَطْلَقَهُ. ٥ 5
ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
فَجَاءَ إِرْمِيَا إِلَى جَدَلْيَا بْنِ أَخِيقَامَ إِلَى ٱلْمِصْفَاةِ وَأَقَامَ عِنْدَهُ فِي وَسْطِ ٱلشَّعْبِ ٱلْبَاقِينَ فِي ٱلْأَرْضِ. ٦ 6
ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
فَلَمَّا سَمِعَ كُلُّ رُؤَسَاءِ ٱلْجُيُوشِ ٱلَّذِينَ فِي ٱلْحَقْلِ هُمْ وَرِجَالُهُمْ أَنَّ مَلِكَ بَابِلَ قَدْ أَقَامَ جَدَلْيَا بْنَ أَخِيقَامَ عَلَى ٱلْأَرْضِ، وَأَنَّهُ وَكَّلَهُ عَلَى ٱلرِّجَالِ وَٱلنِّسَاءِ وَٱلْأَطْفَالِ وَعَلَى فُقَرَاءِ ٱلْأَرْضِ ٱلَّذِينَ لَمْ يُسْبَوْا إِلَى بَابِلَ، ٧ 7
ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,
أَتَى إِلَى جَدَلْيَا إِلَى ٱلْمِصْفَاةِ: إِسْمَاعِيلُ بْنُ نَثَنْيَا، وَيُوحَانَانُ وَيُونَاثَانُ ٱبْنَا قَارِيحَ، وَسَرَايَا بْنُ تَنْحُومَثَ، وَبَنُو عِيفَايَ ٱلنَّطُوفَاتِيُّ، وَيَزَنْيَا ٱبْنُ ٱلْمَعْكِيِّ، هُمْ وَرِجَالُهُمْ. ٨ 8
ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
فَحَلَفَ لَهُمْ جَدَلْيَا بْنُ أَخِيقَامَ بْنِ شَافَانَ وَلِرِجَالِهِمْ قَائِلًا: «لَا تَخَافُوا مِنْ أَنْ تَخْدِمُوا ٱلْكَلْدَانِيِّينَ. اُسْكُنُوا فِي ٱلْأَرْضِ، وَٱخْدِمُوا مَلِكَ بَابِلَ فَيُحْسَنَ إِلَيْكُمْ. ٩ 9
ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.
أَمَّا أَنَا فَهَأَنَذَا سَاكِنٌ فِي ٱلْمِصْفَاةِ لِأَقِفَ أَمَامَ ٱلْكَلْدَانِيِّينَ ٱلَّذِينَ يَأْتُونَ إِلَيْنَا. أَمَّا أَنْتُمْ فَٱجْمَعُوا خَمْرًا وَتِينًا وَزَيْتًا وَضَعُوا فِي أَوْعِيَتِكُمْ، وَٱسْكُنُوا فِي مُدُنِكُمُ ٱلَّتِي أَخَذْتُمُوهَا». ١٠ 10
ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.
وَكَذَلِكَ كُلُّ ٱلْيَهُودِ ٱلَّذِينَ فِي مُوآبَ، وَبَيْنَ بَنِي عَمُّونَ، وَفِي أَدُومَ، وَٱلَّذِينَ فِي كُلِّ ٱلْأَرَاضِي، سَمِعُوا أَنَّ مَلِكَ بَابِلَ قَدْ جَعَلَ بَقِيَّةً لِيَهُوذَا، وَقَدْ أَقَامَ عَلَيْهِمْ جَدَلْيَا بْنَ أَخِيقَامَ بْنِ شَافَانَ، ١١ 11
ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ
فَرَجَعَ كُلُّ ٱلْيَهُودِ مِنْ كُلِّ ٱلْمَوَاضِعِ ٱلَّتِي طُوِّحُوا إِلَيْهَا وَأَتَوْا إِلَى أَرْضِ يَهُوذَا، إِلَى جَدَلْيَا، إِلَى ٱلْمِصْفَاةِ، وَجَمَعُوا خَمْرًا وَتِينًا كَثِيرًا جِدًّا. ١٢ 12
ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು.
ثُمَّ إِنَّ يُوحَانَانَ بْنَ قَارِيحَ وَكُلَّ رُؤَسَاءِ ٱلْجُيُوشِ ٱلَّذِينَ فِي ٱلْحَقْلِ أَتَوْا إِلَى جَدَلْيَا إِلَى ٱلْمِصْفَاةِ، ١٣ 13
ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,
وَقَالُوا لَهُ: «أَتَعْلَمُ عِلْمًا أَنَّ بَعْلِيسَ مَلِكَ بَنِي عَمُّونَ قَدْ أَرْسَلَ إِسْمَاعِيلَ بْنَ نَثَنْيَا لِيَقْتُلَكَ؟» فَلَمْ يُصَدِّقْهُمْ جَدَلْيَا بْنُ أَخِيقَامَ. ١٤ 14
“ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
فَكَلَّمَ يُوحَانَانُ بْنُ قَارِيحَ جَدَلْيَا سِرًّا فِي ٱلْمِصْفَاةِ قَائِلًا: «دَعْنِي أَنْطَلِقْ وَأَضْرِبْ إِسْمَاعِيلَ بْنَ نَثَنْيَا وَلَا يَعْلَمُ إِنْسَانٌ. لِمَاذَا يَقْتُلُكَ فَيَتَبَدَّدَ كُلُّ يَهُوذَا ٱلْمُجْتَمِعُ إِلَيْكَ، وَتَهْلِكَ بَقِيَّةُ يَهُوذَا؟». ١٥ 15
ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.
فَقَالَ جَدَلْيَا بْنُ أَخِيقَامَ لِيُوحَانَانَ بْنِ قَارِيحَ: «لَا تَفْعَلْ هَذَا ٱلْأَمْرَ، لِأَنَّكَ إِنَّمَا تَتَكَلَّمُ بِٱلْكَذِبِ عَنْ إِسْمَاعِيلَ». ١٦ 16
ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು.

< إِرْمِيَا 40 >