< إِرْمِيَا 42 >

فَتَقَدَّمَ كُلُّ رُؤَسَاءِ ٱلْجُيُوشِ وَيُوحَانَانُ بْنُ قَارِيحَ، وَيَزَنْيَا بْنُ هُوشَعْيَا، وَكُلُّ ٱلشَّعْبِ مِنَ ٱلصَّغِيرِ إِلَى ٱلْكَبِيرِ، ١ 1
ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.
وَقَالُوا لِإِرْمِيَا ٱلنَّبِيِّ: «لَيْتَ تَضَرُّعَنَا يَقَعُ أَمَامَكَ، فَتُصَلِّيَ لِأَجْلِنَا إِلَى ٱلرَّبِّ إِلَهِكَ لِأَجْلِ كُلِّ هَذِهِ ٱلْبَقِيَّةِ. لِأَنَّنَا قَدْ بَقِينَا قَلِيلِينَ مِنْ كَثِيرِينَ كَمَا تَرَانَا عَيْنَاكَ. ٢ 2
ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
فَيُخْبِرُنَا ٱلرَّبُّ إِلَهُكَ عَنِ ٱلطَّرِيقِ ٱلَّذِي نَسِيرُ فِيهِ، وَٱلْأَمْرِ ٱلَّذِي نَفْعَلُهُ». ٣ 3
ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ವಿಜ್ಞಾಪಿಸಿದರು.
فَقَالَ لَهُمْ إِرْمِيَا ٱلنَّبِيُّ: «قَدْ سَمِعْتُ. هَأَنَذَا أُصَلِّي إِلَى ٱلرَّبِّ إِلَهِكُمْ كَقَوْلِكُمْ، وَيَكُونُ أَنَّ كُلَّ ٱلْكَلَامِ ٱلَّذِي يُجِيبُكُمُ ٱلرَّبُّ أُخْبِرُكُمْ بِهِ. لَا أَمْنَعُ عَنْكُمْ شَيْئًا». ٤ 4
ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.
فَقَالُوا هُمْ لِإِرْمِيَا: «لِيَكُنِ ٱلرَّبُّ بَيْنَنَا شَاهِدًا صَادِقًا وَأَمِينًا إِنَّنَا نَفْعَلُ حَسَبَ كُلِّ أَمْرٍ يُرْسِلُكَ بِهِ ٱلرَّبُّ إِلَهُكَ إِلَيْنَا، ٥ 5
ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!
إِنْ خَيْرًا وَإِنْ شَرًّا. فَإِنَّنَا نَسْمَعُ لِصَوْتِ ٱلرَّبِّ إِلَهِكَ ٱلَّذِي نَحْنُ مُرْسِلُوكَ إِلَيْهِ لِيُحْسَنَ إِلَيْنَا إِذَا سَمِعْنَا لِصَوْتِ ٱلرَّبِّ إِلَهِنَا». ٦ 6
ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.
وَكَانَ بَعْدَ عَشَرَةِ أَيَّامٍ أَنَّ كَلِمَةَ ٱلرَّبِّ صَارَتْ إِلَى إِرْمِيَا. ٧ 7
ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು.
فَدَعَا يُوحَانَانَ بْنَ قَارِيحَ وَكُلَّ رُؤَسَاءِ ٱلْجُيُوشِ ٱلَّذِينَ مَعَهُ، وَكُلَّ ٱلشَّعْبِ مِنَ ٱلصَّغِيرِ إِلَى ٱلْكَبِيرِ، ٨ 8
ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,
وَقَالَ لَهُمْ: «هَكَذَا قَالَ ٱلرَّبُّ إِلَهُ إِسْرَائِيلَ ٱلَّذِي أَرْسَلْتُمُونِي إِلَيْهِ لِكَيْ أُلْقِيَ تَضَرُّعَكُمْ أَمَامَهُ: ٩ 9
“ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,
إِنْ كُنْتُمْ تَسْكُنُونَ فِي هَذِهِ ٱلْأَرْضِ، فَإِنِّي أَبْنِيكُمْ وَلَا أَنْقُضُكُمْ، وَأَغْرِسُكُمْ وَلَا أَقْتَلِعُكُمْ. لِأَنِّي نَدِمْتُ عَنِ ٱلشَّرِّ ٱلَّذِي صَنَعْتُهُ بِكُمْ. ١٠ 10
೧೦‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.
لَا تَخَافُوا مَلِكَ بَابِلَ ٱلَّذِي أَنْتُمْ خَائِفُوهُ. لَا تَخَافُوهُ، يَقُولُ ٱلرَّبُّ، لِأَنِّي أَنَا مَعَكُمْ لِأُخَلِّصَكُمْ وَأُنْقِذَكُمْ مِنْ يَدِهِ. ١١ 11
೧೧ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.
وَأُعْطِيَكُمْ نِعْمَةً، فَيَرْحَمُكُمْ وَيَرُدُّكُمْ إِلَى أَرْضِكُمْ. ١٢ 12
೧೨ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು’ ಎಂದೆನು.
«وَإِنْ قُلْتُمْ: لَا نَسْكُنُ فِي هَذِهِ ٱلْأَرْضِ. وَلَمْ تَسْمَعُوا لِصَوْتِ ٱلرَّبِّ إِلَهِكُمْ، ١٣ 13
೧೩ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ ‘ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ;
قَائِلِينَ: لَا بَلْ إِلَى أَرْضِ مِصْرَ نَذْهَبُ، حَيْثُ لَا نَرَى حَرْبًا، وَلَا نَسْمَعُ صَوْتَ بُوقٍ، وَلَا نَجُوعُ لِلْخُبْزِ، وَهُنَاكَ نَسْكُنُ. ١٤ 14
೧೪ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,
فَٱلْآنَ لِذَلِكَ ٱسْمَعُوا كَلِمَةَ ٱلرَّبِّ يَابَقِيَّةَ يَهُوذَا، هَكَذَا قَالَ رَبُّ ٱلْجُنُودِ إِلَهُ إِسْرَائِيلَ: إِنْ كُنْتُمْ تَجْعَلُونَ وُجُوهَكُمْ لِلدُّخُولِ إِلَى مِصْرَ، وَتَذْهَبُونَ لِتَتَغَرَّبُوا هُنَاكَ، ١٥ 15
೧೫ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,
يَحْدُثُ أَنَّ ٱلسَّيْفَ ٱلَّذِي أَنْتُمْ خَائِفُونَ مِنْهُ يُدْرِكُكُمْ هُنَاكَ فِي أَرْضِ مِصْرَ، وَٱلْجُوعَ ٱلَّذِي أَنْتُمْ خَائِفُونَ مِنْهُ يَلْحَقُكُمْ هُنَاكَ فِي مِصْرَ، فَتَمُوتُونَ هُنَاكَ. ١٦ 16
೧೬ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.
وَيَكُونُ أَنَّ كُلَّ ٱلرِّجَالِ ٱلَّذِينَ جَعَلُوا وُجُوهَهُمْ لِلدُّخُولِ إِلَى مِصْرَ لِيَتَغَرَّبُوا هُنَاكَ، يَمُوتُونَ بِٱلسَّيْفِ وَٱلْجُوعِ وَٱلْوَبَإِ، وَلَا يَكُونُ مِنْهُمْ بَاقٍ وَلَا نَاجٍ مِنَ ٱلشَّرِّ ٱلَّذِي أَجْلِبُهُ أَنَا عَلَيْهِمْ. ١٧ 17
೧೭ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.
لِأَنَّهُ هَكَذَا قَالَ رَبُّ ٱلْجُنُودِ إِلَهُ إِسْرَائِيلَ: كَمَا ٱنْسَكَبَ غَضَبِي وَغَيْظِي عَلَى سُكَّانِ أُورُشَلِيمَ، هَكَذَا يَنْسَكِبُ غَيْظِي عَلَيْكُمْ عِنْدَ دُخُولِكُمْ إِلَى مِصْرَ، فَتَصِيرُونَ حَلَفًا وَدَهَشًا وَلَعْنَةً وَعَارًا، وَلَا تَرَوْنَ بَعْدُ هَذَا ٱلْمَوْضِعَ». ١٨ 18
೧೮ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”
«قَدْ تَكَلَّمَ ٱلرَّبُّ عَلَيْكُمْ يَا بَقِيَّةَ يَهُوذَا: لَا تَدْخُلُوا مِصْرَ. ٱعْلَمُوا عِلْمًا أَنِّي قَدْ أَنْذَرْتُكُمُ ٱلْيَوْمَ. ١٩ 19
೧೯“ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.
لِأَنَّكُمْ قَدْ خَدَعْتُمْ أَنْفُسَكُمْ إِذْ أَرْسَلْتُمُونِي إِلَى ٱلرَّبِّ إِلَهِكُمْ قَائِلِينَ: صَلِّ لِأَجْلِنَا إِلَى ٱلرَّبِّ إِلَهِنَا، وَحَسَبَ كُلِّ مَا يَقُولُهُ ٱلرَّبُّ إِلَهُنَا هَكَذَا أَخْبِرْنَا فَنَفْعَلَ. ٢٠ 20
೨೦ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
فَقَدْ أَخْبَرْتُكُمُ ٱلْيَوْمَ فَلَمْ تَسْمَعُوا لِصَوْتِ ٱلرَّبِّ إِلَهِكُمْ، وَلَا لِشَيْءٍ مِمَّا أَرْسَلَنِي بِهِ إِلَيْكُمْ. ٢١ 21
೨೧ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.
فَٱلْآنَ ٱعْلَمُوا عِلْمًا أَنَّكُمْ تَمُوتُونَ بِٱلسَّيْفِ وَٱلْجُوعِ وَٱلْوَبَإِ فِي ٱلْمَوْضِعِ ٱلَّذِي ٱبْتَغَيْتُمْ أَنْ تَدْخُلُوهُ لِتَتَغَرَّبُوا فِيهِ». ٢٢ 22
೨೨ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.

< إِرْمِيَا 42 >